Homeಕರ್ನಾಟಕಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

- Advertisement -
- Advertisement -

ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚನೆಯಲ್ಲಿ ಎನ್.ಮಹೇಶ್ ರವರಿಗೆ ಜೆಡಿಎಸ್-ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕೆಂದು ಬಿಎಸ್‍ಪಿಯ ನಾಯಕರು ಆದೇಶಿಸಿದ್ದರು. ಆದರೆ ಬಿಜೆಪಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಎನ್ ಮಹೇಶ್‍ರವರು ಸದನಕ್ಕೆ ಹಾಜರಾಗದೆ ಪಕ್ಷದಿಂದಲೇ ಈಗ ಅಮಾನತಾಗಿದ್ದಾರೆ. ದಲಿತ ವಲಯದಲ್ಲಿ ಭರವಸೆ ಮೂಡಿಸಿದ್ದ ಎನ್.ಮಹೇಶ್ ಹೀಗೇಕೆ ಮಾಡಿದರು? ಅನ್ನೋದು ಈಗ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ.

ಕೊಳ್ಳೇಗಾಲದ ಎನ್.ಮಹೇಶ್‍ರವರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯಾಗಿದ್ದವರು. ಬಹುಜನ ಸಿದ್ದಾಂತಕ್ಕೆ ಮಾರುಹೋಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಚಳವಳಿಗೆ ಧುಮುಕಿದವರು. ತನ್ನ ಸ್ನೇಹಿತ ಗೋಪಿನಾಥ್ ಜೊತೆ ಸೇರಿ ರಾಜ್ಯದಲ್ಲಿ ಬಿಎಸ್‍ಪಿ ಮತ್ತು ಬಿವಿಎಸ್ ಕಟ್ಟುವುದರಲ್ಲಿ ಮಹತ್ವದ ಮುಖ್ಯ ಪಾತ್ರ ಇವರದು. ಕರ್ನಾಟಕದಲ್ಲಿ ಅಕ್ಷರಶಃ ಸಾವಿರಾರು ಜನ ಇವರನ್ನು ಇಂದಿಗೂ ತಮ್ಮ ಗುರುಗಳೆಂದು ಭಾವಿಸಿದ್ದಾರೆ. ಅಷ್ಟರಮಟ್ಟಿಗೆ ‘ಮಹೇಶಣ್ಣ’ ಆಗಿ ಅವರು ಬಿಎಸ್‍ಪಿಯಲ್ಲಿ ತೊಡಗಿಸಿಕೊಂಡಿದ್ದರು.

ಅಂತ ಎನ್.ಮಹೇಶ್‍ರವರು ಸತತ ಮೂರು ಸಲ ಕೊಳ್ಳೆಗಾಲದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲುಂಡವರು. ಗೆಲ್ಲಲೇಬೇಕೆಂಬ ಶತಾಯಗತಾಯ ಪ್ರಯತ್ನದಿಂದ, ಎಲ್ಲಕ್ಕಿಂತ ಹೆಚ್ಚು ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕೊನೆಗೂ ಈ ಬಾರಿ ಗೆದ್ದರು ಮಾತ್ರವಲ್ಲ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸಹ ಆದರು. ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುತ್ತಾರೆ ಎಂದು ಹಲವಾರು ಜನ ನಂಬಿದ್ದರು. ಆದರೆ ಆದುದ್ದೇ ಬೇರೆ.

ಇದ್ದಕ್ಕಿದ್ದಂತೆ ಎನ್.ಮಹೇಶ್‍ರವರು ತಮ್ಮ ಅಮೂಲ್ಯ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾರಣ ಹುಡುಕುತ್ತಾ ಹೋದಾಗ ಗೊತ್ತಾಗಿದ್ದು ಬಿಎಸ್‍ಪಿಯ ನಾಯಕಿ ಮಾಯವತಿಯವರ ಗಮನಕ್ಕೆ ತಾರದೇ ರಾಜ್ಯದಲ್ಲಿ ದಶಕಗಳಿಗೂ ಹೆಚ್ಚು ಕಾಲ ಬಿವಿಎಸ್ ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿದ್ದರು ಮಾತ್ರವಲ್ಲ ಅದನ್ನು ಬಿಎಸ್‍ಪಿಯ ಚುನಾವಣಾ ರಾಜಕಾರಣಕ್ಕೂ ಬಳಸಿಕೊಂಡಿದ್ದರು. ಆ ತಪ್ಪಿಗೆ ಎನ್.ಮಹೇಶ್ ತಮ್ಮ ಸಚಿವ ಸ್ಥಾನವನ್ನೇ ಬಲಿಕೊಡಬೇಕಾಯಿತು. ಅಷ್ಟು ಮಾತ್ರವಲ್ಲ ಅಂದು ಮಾಯಾವತಿಯವರು “ಪ್ರೆಸ್ ಮೀಟ್ ಮಾಡಿ, ಬಹಿರಂಗವಾಗಿ ಕ್ಷಮೆ ಕೇಳಬೇಕು” ಎಂದು ಸಹ ಆದೇಶಿಸಿದ್ದರು. ಆದರೆ ಎನ್.ಮಹೇಶ್ ಹೇಗೊ ಮಾಡಿ ಅದರಿಂದ ನುಣಚಿಕೊಂಡಿದ್ದರು.

ಅಂತಹ ಎನ್.ಮಹೇಶ್‍ರವರು ರಾಜ್ಯ ರಾಜಕೀಯ ಅತ್ಯಂತ ಬಿಕ್ಕಟ್ಟಿನ ಸಂದರ್ಭದಲ್ಲಿದ್ದಾಗ ಸದನಕ್ಕೆ ಹಾಜರಾಗದೇ ದೊಡ್ಡ ಪ್ರಮಾದ ಮಾಡಿದರು. ಬಿಎಸ್‍ಪಿ ಪಕ್ಷ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಆದೇಶಿಸಿದ್ದನ್ನು ಬೇಕಂತಲೇ ಉಲ್ಲಂಘಿಸಿದರು. ಬಿಜೆಪಿಯ ಕುದುರೆ ವ್ಯಾಪಾರ, ಅಪಾಯದಲ್ಲಿರುವ ಪ್ರಜಾತಂತ್ರ ಇತ್ಯಾದಿಗಳ ಕುರಿತು ಅತ್ಯಂತ ಮಹತ್ವದ ಮೌಲ್ಯಯುತ ಚರ್ಚೆ ನಡೆಯುತ್ತಿರಬೇಕಾದರೆ ಎನ್.ಮಹೇಶ್‍ರವರು ಸದನದಿಂದ ದೂರ ಉಳಿದುದ್ದನ್ನು ಬಹಳಷ್ಟು ಪ್ರಜ್ಞಾವಂತರು ಟೀಕಿಸಿದರು.

ಸದನದಲ್ಲಿ ಅವರು ಯಾವೊಂದು ಪಕ್ಷದ ಪರವಹಿಸಬೇಕಾದ ಅಗತ್ಯವೇನಿರಲಿಲ್ಲ. ಬದಲಿಗೆ ಪ್ರಜಾತಂತ್ರ, ಅಂಬೇಡ್ಕರ್‍ರವರು ರಚಿಸಿದ ಸಂವಿಧಾನ, ದೇಶದ ಇಂದಿನ ಸ್ಥಿತಿ, ದಲಿತರ ಪರಿಸ್ಥಿತಿಯ ಕುರಿತಾಗಿ ಅದ್ಭುತವಾಗಿ ಮಾತನಾಡಿ ಇಡೀ ದೇಶದ ಗಮನ ಸೆಳೆಯಬಹುದಿತ್ತು. ಮಾಧ್ಯಮಗಳ ಮೂಲಕ ಕರ್ನಾಟಕದ ಮೂರು ರಾಜಕೀಯ ಪಕ್ಷಗಳಿಗೂ ಅವರ ತಪ್ಪುಗಳನ್ನು ಮುಖಕ್ಕೆ ಹೊಡೆದಂತೆ ಹೇಳಬಹುದಿತ್ತು. ಸದನದ ಘನತೆ, ಜನರಿಗಾಗಿ ಶಾಸಕರು ಮಾಡಬೇಕಾದುದ್ದೇನು ಎಂಬುದರ ಕುರಿತು ಇಡೀ ರಾಷ್ಟ್ರಕ್ಕೆ ಮನವರಿಕೆ ಮಾಡಿಕೊಡಬಹುದಿತ್ತು. ಅಂತಹ ವಿಫುಲ ಅವಕಾಶವನ್ನು ಎನ್.ಮಹೇಶ್ ಹಾಳು ಮಾಡಿಕೊಂಡರು.

ಎನ್ ಮಹೇಶ್ ಹೀಗೇಕೆ ಮಾಡಿದರು?
ಅವಕಾಶವಾದಿತನವೇ ಮಹೇಶ್‍ರವರು ಹೀಗೆ ಮಾಡಲು ಪ್ರಮುಖ ಕಾರಣವಾಗಿದೆ. ಇದು ಈಗ ಮಾತ್ರ ಗೋಚರಿಸುತ್ತಿರುವುದಲ್ಲ ಬದಲಿಗೆ ಇದರ ಲಕ್ಷಣಗಳು ಈ ಹಿಂದೆಯೇ ಕಾಣಿಸಿಕೊಂಡಿದ್ದವು. ಹಲವು ವರ್ಷಗಳ ಹಿಂದೆಯೇ ಎನ್.ಮಹೇಶ್‍ರವರು ಬಿಜೆಪಿ ಬಿ.ಶ್ರೀರಾಮುಲು ಜೊತೆ ಸಖ್ಯ ಹೊಂದಿದ್ದರು ಮಾತ್ರವಲ್ಲದೇ ಅವರೊಡನೆ ಕೂಡಿ ರೆಸಾರ್ಟ್‍ನಲ್ಲಿ ಹಲವು ಯೋಜನೆಗಳನ್ನು ಸಹ ರೂಪಿಸಿದ್ದರು ಎಂದು ಅವರ ಸಮೀಪವರ್ತಿಗಳೇ ಹೇಳುತ್ತಾರೆ.

ಮಾಯಾವತಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಯಾವಾಗ ಆದೇಶಿಸಿದ್ದರೋ ಅಂದಿನಿಂದಲೂ ಅವರ ವಿರುದ್ಧ ಎನ್.ಮಹೇಶ್ ತಿರುಗಿ ಬಿದ್ದಿದ್ದಾರೆ. ಅವಕಾಶ ಕಾಯುತ್ತಿದ್ದ ಅವರು ಈಗ ಬೇಕಂತಲೇ ಸದನಕ್ಕೆ ಹಾಜರಾಗಿಲ್ಲ. ಪಕ್ಷದಿಂದ ಉಚ್ಚಾಟಿಸುವುದು ಅವರು ಸಹ ಬೇಕಿದ್ದಂತೆ ತೋರುತ್ತದೆ. ಇದರಿಂದ ಅವರ ಶಾಸಕ ಸ್ಥಾನಕ್ಕೇನೂ ಚ್ಯುತಿಯಾಗುವುದಿಲ್ಲ. ಇನ್ನು ಮುಂದೆ ಅವರು ಬಿಜೆಪಿ ಜೊತೆ ಸೇರಿಯೂ ಸಚಿವರಾಗುವ ಅವಕಾಶವಿದೆ. ಅದನ್ನು ಅವರು ನಿರಾಕರಿಸುವುದಿಲ್ಲ ಎಂಬುದು ಸಹ ಸತ್ಯವೆ.

ಅತ್ಯಂತ ಘನತೆಯಿಂದ ಚಳವಳಿ ಆರಂಭಿಸಿದ್ದ ಅವರು ಇಂದು ಈ ಸ್ಥಿತಿ ತಲುಪಿರುವುದು ದುರಂತ ಮಾತ್ರವಲ್ಲ ದಲಿತ ರಾಜಕಾರಣಕ್ಕಾದ ನಷ್ಟವೂ ಹೌದು. ಅವರನ್ನೇ ನಂಬಿದ್ದ ಅವರ ಅನುಯಾಯಿಗಳಿಗೆ ಮಾಡಿದ ದ್ರೋಹವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮ್ ವಿಲಾಸ್ ಪಾಸ್ವಾನ್, ರಾಮದಾಸ್ ಅಠಾವಳೆ, ಉದಿತ್ ರಾಜ್ ಮತ್ತು ಈಗ ಎನ್.ಮಹೇಶ್ ಎಲ್ಲರೂ ಅಂಬೇಡ್ಕರ್ ಸಿದ್ದಾಂತಕ್ಕೆ ಹಾಡುಹಗಲೇ ಚೂರಿ ಹಾಕಿದವರು. ಇವರ ರಾಜಕೀಯ ಗುಲಾಮಗಿರಿಗೆ ದಿಕ್ಕಾರವಿರಲಿ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...