Homeಕರ್ನಾಟಕಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

- Advertisement -
- Advertisement -

ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚನೆಯಲ್ಲಿ ಎನ್.ಮಹೇಶ್ ರವರಿಗೆ ಜೆಡಿಎಸ್-ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕೆಂದು ಬಿಎಸ್‍ಪಿಯ ನಾಯಕರು ಆದೇಶಿಸಿದ್ದರು. ಆದರೆ ಬಿಜೆಪಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಎನ್ ಮಹೇಶ್‍ರವರು ಸದನಕ್ಕೆ ಹಾಜರಾಗದೆ ಪಕ್ಷದಿಂದಲೇ ಈಗ ಅಮಾನತಾಗಿದ್ದಾರೆ. ದಲಿತ ವಲಯದಲ್ಲಿ ಭರವಸೆ ಮೂಡಿಸಿದ್ದ ಎನ್.ಮಹೇಶ್ ಹೀಗೇಕೆ ಮಾಡಿದರು? ಅನ್ನೋದು ಈಗ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ.

ಕೊಳ್ಳೇಗಾಲದ ಎನ್.ಮಹೇಶ್‍ರವರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯಾಗಿದ್ದವರು. ಬಹುಜನ ಸಿದ್ದಾಂತಕ್ಕೆ ಮಾರುಹೋಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಚಳವಳಿಗೆ ಧುಮುಕಿದವರು. ತನ್ನ ಸ್ನೇಹಿತ ಗೋಪಿನಾಥ್ ಜೊತೆ ಸೇರಿ ರಾಜ್ಯದಲ್ಲಿ ಬಿಎಸ್‍ಪಿ ಮತ್ತು ಬಿವಿಎಸ್ ಕಟ್ಟುವುದರಲ್ಲಿ ಮಹತ್ವದ ಮುಖ್ಯ ಪಾತ್ರ ಇವರದು. ಕರ್ನಾಟಕದಲ್ಲಿ ಅಕ್ಷರಶಃ ಸಾವಿರಾರು ಜನ ಇವರನ್ನು ಇಂದಿಗೂ ತಮ್ಮ ಗುರುಗಳೆಂದು ಭಾವಿಸಿದ್ದಾರೆ. ಅಷ್ಟರಮಟ್ಟಿಗೆ ‘ಮಹೇಶಣ್ಣ’ ಆಗಿ ಅವರು ಬಿಎಸ್‍ಪಿಯಲ್ಲಿ ತೊಡಗಿಸಿಕೊಂಡಿದ್ದರು.

ಅಂತ ಎನ್.ಮಹೇಶ್‍ರವರು ಸತತ ಮೂರು ಸಲ ಕೊಳ್ಳೆಗಾಲದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲುಂಡವರು. ಗೆಲ್ಲಲೇಬೇಕೆಂಬ ಶತಾಯಗತಾಯ ಪ್ರಯತ್ನದಿಂದ, ಎಲ್ಲಕ್ಕಿಂತ ಹೆಚ್ಚು ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕೊನೆಗೂ ಈ ಬಾರಿ ಗೆದ್ದರು ಮಾತ್ರವಲ್ಲ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸಹ ಆದರು. ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುತ್ತಾರೆ ಎಂದು ಹಲವಾರು ಜನ ನಂಬಿದ್ದರು. ಆದರೆ ಆದುದ್ದೇ ಬೇರೆ.

ಇದ್ದಕ್ಕಿದ್ದಂತೆ ಎನ್.ಮಹೇಶ್‍ರವರು ತಮ್ಮ ಅಮೂಲ್ಯ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾರಣ ಹುಡುಕುತ್ತಾ ಹೋದಾಗ ಗೊತ್ತಾಗಿದ್ದು ಬಿಎಸ್‍ಪಿಯ ನಾಯಕಿ ಮಾಯವತಿಯವರ ಗಮನಕ್ಕೆ ತಾರದೇ ರಾಜ್ಯದಲ್ಲಿ ದಶಕಗಳಿಗೂ ಹೆಚ್ಚು ಕಾಲ ಬಿವಿಎಸ್ ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿದ್ದರು ಮಾತ್ರವಲ್ಲ ಅದನ್ನು ಬಿಎಸ್‍ಪಿಯ ಚುನಾವಣಾ ರಾಜಕಾರಣಕ್ಕೂ ಬಳಸಿಕೊಂಡಿದ್ದರು. ಆ ತಪ್ಪಿಗೆ ಎನ್.ಮಹೇಶ್ ತಮ್ಮ ಸಚಿವ ಸ್ಥಾನವನ್ನೇ ಬಲಿಕೊಡಬೇಕಾಯಿತು. ಅಷ್ಟು ಮಾತ್ರವಲ್ಲ ಅಂದು ಮಾಯಾವತಿಯವರು “ಪ್ರೆಸ್ ಮೀಟ್ ಮಾಡಿ, ಬಹಿರಂಗವಾಗಿ ಕ್ಷಮೆ ಕೇಳಬೇಕು” ಎಂದು ಸಹ ಆದೇಶಿಸಿದ್ದರು. ಆದರೆ ಎನ್.ಮಹೇಶ್ ಹೇಗೊ ಮಾಡಿ ಅದರಿಂದ ನುಣಚಿಕೊಂಡಿದ್ದರು.

ಅಂತಹ ಎನ್.ಮಹೇಶ್‍ರವರು ರಾಜ್ಯ ರಾಜಕೀಯ ಅತ್ಯಂತ ಬಿಕ್ಕಟ್ಟಿನ ಸಂದರ್ಭದಲ್ಲಿದ್ದಾಗ ಸದನಕ್ಕೆ ಹಾಜರಾಗದೇ ದೊಡ್ಡ ಪ್ರಮಾದ ಮಾಡಿದರು. ಬಿಎಸ್‍ಪಿ ಪಕ್ಷ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಆದೇಶಿಸಿದ್ದನ್ನು ಬೇಕಂತಲೇ ಉಲ್ಲಂಘಿಸಿದರು. ಬಿಜೆಪಿಯ ಕುದುರೆ ವ್ಯಾಪಾರ, ಅಪಾಯದಲ್ಲಿರುವ ಪ್ರಜಾತಂತ್ರ ಇತ್ಯಾದಿಗಳ ಕುರಿತು ಅತ್ಯಂತ ಮಹತ್ವದ ಮೌಲ್ಯಯುತ ಚರ್ಚೆ ನಡೆಯುತ್ತಿರಬೇಕಾದರೆ ಎನ್.ಮಹೇಶ್‍ರವರು ಸದನದಿಂದ ದೂರ ಉಳಿದುದ್ದನ್ನು ಬಹಳಷ್ಟು ಪ್ರಜ್ಞಾವಂತರು ಟೀಕಿಸಿದರು.

ಸದನದಲ್ಲಿ ಅವರು ಯಾವೊಂದು ಪಕ್ಷದ ಪರವಹಿಸಬೇಕಾದ ಅಗತ್ಯವೇನಿರಲಿಲ್ಲ. ಬದಲಿಗೆ ಪ್ರಜಾತಂತ್ರ, ಅಂಬೇಡ್ಕರ್‍ರವರು ರಚಿಸಿದ ಸಂವಿಧಾನ, ದೇಶದ ಇಂದಿನ ಸ್ಥಿತಿ, ದಲಿತರ ಪರಿಸ್ಥಿತಿಯ ಕುರಿತಾಗಿ ಅದ್ಭುತವಾಗಿ ಮಾತನಾಡಿ ಇಡೀ ದೇಶದ ಗಮನ ಸೆಳೆಯಬಹುದಿತ್ತು. ಮಾಧ್ಯಮಗಳ ಮೂಲಕ ಕರ್ನಾಟಕದ ಮೂರು ರಾಜಕೀಯ ಪಕ್ಷಗಳಿಗೂ ಅವರ ತಪ್ಪುಗಳನ್ನು ಮುಖಕ್ಕೆ ಹೊಡೆದಂತೆ ಹೇಳಬಹುದಿತ್ತು. ಸದನದ ಘನತೆ, ಜನರಿಗಾಗಿ ಶಾಸಕರು ಮಾಡಬೇಕಾದುದ್ದೇನು ಎಂಬುದರ ಕುರಿತು ಇಡೀ ರಾಷ್ಟ್ರಕ್ಕೆ ಮನವರಿಕೆ ಮಾಡಿಕೊಡಬಹುದಿತ್ತು. ಅಂತಹ ವಿಫುಲ ಅವಕಾಶವನ್ನು ಎನ್.ಮಹೇಶ್ ಹಾಳು ಮಾಡಿಕೊಂಡರು.

ಎನ್ ಮಹೇಶ್ ಹೀಗೇಕೆ ಮಾಡಿದರು?
ಅವಕಾಶವಾದಿತನವೇ ಮಹೇಶ್‍ರವರು ಹೀಗೆ ಮಾಡಲು ಪ್ರಮುಖ ಕಾರಣವಾಗಿದೆ. ಇದು ಈಗ ಮಾತ್ರ ಗೋಚರಿಸುತ್ತಿರುವುದಲ್ಲ ಬದಲಿಗೆ ಇದರ ಲಕ್ಷಣಗಳು ಈ ಹಿಂದೆಯೇ ಕಾಣಿಸಿಕೊಂಡಿದ್ದವು. ಹಲವು ವರ್ಷಗಳ ಹಿಂದೆಯೇ ಎನ್.ಮಹೇಶ್‍ರವರು ಬಿಜೆಪಿ ಬಿ.ಶ್ರೀರಾಮುಲು ಜೊತೆ ಸಖ್ಯ ಹೊಂದಿದ್ದರು ಮಾತ್ರವಲ್ಲದೇ ಅವರೊಡನೆ ಕೂಡಿ ರೆಸಾರ್ಟ್‍ನಲ್ಲಿ ಹಲವು ಯೋಜನೆಗಳನ್ನು ಸಹ ರೂಪಿಸಿದ್ದರು ಎಂದು ಅವರ ಸಮೀಪವರ್ತಿಗಳೇ ಹೇಳುತ್ತಾರೆ.

ಮಾಯಾವತಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಯಾವಾಗ ಆದೇಶಿಸಿದ್ದರೋ ಅಂದಿನಿಂದಲೂ ಅವರ ವಿರುದ್ಧ ಎನ್.ಮಹೇಶ್ ತಿರುಗಿ ಬಿದ್ದಿದ್ದಾರೆ. ಅವಕಾಶ ಕಾಯುತ್ತಿದ್ದ ಅವರು ಈಗ ಬೇಕಂತಲೇ ಸದನಕ್ಕೆ ಹಾಜರಾಗಿಲ್ಲ. ಪಕ್ಷದಿಂದ ಉಚ್ಚಾಟಿಸುವುದು ಅವರು ಸಹ ಬೇಕಿದ್ದಂತೆ ತೋರುತ್ತದೆ. ಇದರಿಂದ ಅವರ ಶಾಸಕ ಸ್ಥಾನಕ್ಕೇನೂ ಚ್ಯುತಿಯಾಗುವುದಿಲ್ಲ. ಇನ್ನು ಮುಂದೆ ಅವರು ಬಿಜೆಪಿ ಜೊತೆ ಸೇರಿಯೂ ಸಚಿವರಾಗುವ ಅವಕಾಶವಿದೆ. ಅದನ್ನು ಅವರು ನಿರಾಕರಿಸುವುದಿಲ್ಲ ಎಂಬುದು ಸಹ ಸತ್ಯವೆ.

ಅತ್ಯಂತ ಘನತೆಯಿಂದ ಚಳವಳಿ ಆರಂಭಿಸಿದ್ದ ಅವರು ಇಂದು ಈ ಸ್ಥಿತಿ ತಲುಪಿರುವುದು ದುರಂತ ಮಾತ್ರವಲ್ಲ ದಲಿತ ರಾಜಕಾರಣಕ್ಕಾದ ನಷ್ಟವೂ ಹೌದು. ಅವರನ್ನೇ ನಂಬಿದ್ದ ಅವರ ಅನುಯಾಯಿಗಳಿಗೆ ಮಾಡಿದ ದ್ರೋಹವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮ್ ವಿಲಾಸ್ ಪಾಸ್ವಾನ್, ರಾಮದಾಸ್ ಅಠಾವಳೆ, ಉದಿತ್ ರಾಜ್ ಮತ್ತು ಈಗ ಎನ್.ಮಹೇಶ್ ಎಲ್ಲರೂ ಅಂಬೇಡ್ಕರ್ ಸಿದ್ದಾಂತಕ್ಕೆ ಹಾಡುಹಗಲೇ ಚೂರಿ ಹಾಕಿದವರು. ಇವರ ರಾಜಕೀಯ ಗುಲಾಮಗಿರಿಗೆ ದಿಕ್ಕಾರವಿರಲಿ.

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...