Homeಕರ್ನಾಟಕಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

- Advertisement -
- Advertisement -

ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚನೆಯಲ್ಲಿ ಎನ್.ಮಹೇಶ್ ರವರಿಗೆ ಜೆಡಿಎಸ್-ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕೆಂದು ಬಿಎಸ್‍ಪಿಯ ನಾಯಕರು ಆದೇಶಿಸಿದ್ದರು. ಆದರೆ ಬಿಜೆಪಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಎನ್ ಮಹೇಶ್‍ರವರು ಸದನಕ್ಕೆ ಹಾಜರಾಗದೆ ಪಕ್ಷದಿಂದಲೇ ಈಗ ಅಮಾನತಾಗಿದ್ದಾರೆ. ದಲಿತ ವಲಯದಲ್ಲಿ ಭರವಸೆ ಮೂಡಿಸಿದ್ದ ಎನ್.ಮಹೇಶ್ ಹೀಗೇಕೆ ಮಾಡಿದರು? ಅನ್ನೋದು ಈಗ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ.

ಕೊಳ್ಳೇಗಾಲದ ಎನ್.ಮಹೇಶ್‍ರವರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯಾಗಿದ್ದವರು. ಬಹುಜನ ಸಿದ್ದಾಂತಕ್ಕೆ ಮಾರುಹೋಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಚಳವಳಿಗೆ ಧುಮುಕಿದವರು. ತನ್ನ ಸ್ನೇಹಿತ ಗೋಪಿನಾಥ್ ಜೊತೆ ಸೇರಿ ರಾಜ್ಯದಲ್ಲಿ ಬಿಎಸ್‍ಪಿ ಮತ್ತು ಬಿವಿಎಸ್ ಕಟ್ಟುವುದರಲ್ಲಿ ಮಹತ್ವದ ಮುಖ್ಯ ಪಾತ್ರ ಇವರದು. ಕರ್ನಾಟಕದಲ್ಲಿ ಅಕ್ಷರಶಃ ಸಾವಿರಾರು ಜನ ಇವರನ್ನು ಇಂದಿಗೂ ತಮ್ಮ ಗುರುಗಳೆಂದು ಭಾವಿಸಿದ್ದಾರೆ. ಅಷ್ಟರಮಟ್ಟಿಗೆ ‘ಮಹೇಶಣ್ಣ’ ಆಗಿ ಅವರು ಬಿಎಸ್‍ಪಿಯಲ್ಲಿ ತೊಡಗಿಸಿಕೊಂಡಿದ್ದರು.

ಅಂತ ಎನ್.ಮಹೇಶ್‍ರವರು ಸತತ ಮೂರು ಸಲ ಕೊಳ್ಳೆಗಾಲದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲುಂಡವರು. ಗೆಲ್ಲಲೇಬೇಕೆಂಬ ಶತಾಯಗತಾಯ ಪ್ರಯತ್ನದಿಂದ, ಎಲ್ಲಕ್ಕಿಂತ ಹೆಚ್ಚು ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕೊನೆಗೂ ಈ ಬಾರಿ ಗೆದ್ದರು ಮಾತ್ರವಲ್ಲ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸಹ ಆದರು. ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುತ್ತಾರೆ ಎಂದು ಹಲವಾರು ಜನ ನಂಬಿದ್ದರು. ಆದರೆ ಆದುದ್ದೇ ಬೇರೆ.

ಇದ್ದಕ್ಕಿದ್ದಂತೆ ಎನ್.ಮಹೇಶ್‍ರವರು ತಮ್ಮ ಅಮೂಲ್ಯ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾರಣ ಹುಡುಕುತ್ತಾ ಹೋದಾಗ ಗೊತ್ತಾಗಿದ್ದು ಬಿಎಸ್‍ಪಿಯ ನಾಯಕಿ ಮಾಯವತಿಯವರ ಗಮನಕ್ಕೆ ತಾರದೇ ರಾಜ್ಯದಲ್ಲಿ ದಶಕಗಳಿಗೂ ಹೆಚ್ಚು ಕಾಲ ಬಿವಿಎಸ್ ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿದ್ದರು ಮಾತ್ರವಲ್ಲ ಅದನ್ನು ಬಿಎಸ್‍ಪಿಯ ಚುನಾವಣಾ ರಾಜಕಾರಣಕ್ಕೂ ಬಳಸಿಕೊಂಡಿದ್ದರು. ಆ ತಪ್ಪಿಗೆ ಎನ್.ಮಹೇಶ್ ತಮ್ಮ ಸಚಿವ ಸ್ಥಾನವನ್ನೇ ಬಲಿಕೊಡಬೇಕಾಯಿತು. ಅಷ್ಟು ಮಾತ್ರವಲ್ಲ ಅಂದು ಮಾಯಾವತಿಯವರು “ಪ್ರೆಸ್ ಮೀಟ್ ಮಾಡಿ, ಬಹಿರಂಗವಾಗಿ ಕ್ಷಮೆ ಕೇಳಬೇಕು” ಎಂದು ಸಹ ಆದೇಶಿಸಿದ್ದರು. ಆದರೆ ಎನ್.ಮಹೇಶ್ ಹೇಗೊ ಮಾಡಿ ಅದರಿಂದ ನುಣಚಿಕೊಂಡಿದ್ದರು.

ಅಂತಹ ಎನ್.ಮಹೇಶ್‍ರವರು ರಾಜ್ಯ ರಾಜಕೀಯ ಅತ್ಯಂತ ಬಿಕ್ಕಟ್ಟಿನ ಸಂದರ್ಭದಲ್ಲಿದ್ದಾಗ ಸದನಕ್ಕೆ ಹಾಜರಾಗದೇ ದೊಡ್ಡ ಪ್ರಮಾದ ಮಾಡಿದರು. ಬಿಎಸ್‍ಪಿ ಪಕ್ಷ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಆದೇಶಿಸಿದ್ದನ್ನು ಬೇಕಂತಲೇ ಉಲ್ಲಂಘಿಸಿದರು. ಬಿಜೆಪಿಯ ಕುದುರೆ ವ್ಯಾಪಾರ, ಅಪಾಯದಲ್ಲಿರುವ ಪ್ರಜಾತಂತ್ರ ಇತ್ಯಾದಿಗಳ ಕುರಿತು ಅತ್ಯಂತ ಮಹತ್ವದ ಮೌಲ್ಯಯುತ ಚರ್ಚೆ ನಡೆಯುತ್ತಿರಬೇಕಾದರೆ ಎನ್.ಮಹೇಶ್‍ರವರು ಸದನದಿಂದ ದೂರ ಉಳಿದುದ್ದನ್ನು ಬಹಳಷ್ಟು ಪ್ರಜ್ಞಾವಂತರು ಟೀಕಿಸಿದರು.

ಸದನದಲ್ಲಿ ಅವರು ಯಾವೊಂದು ಪಕ್ಷದ ಪರವಹಿಸಬೇಕಾದ ಅಗತ್ಯವೇನಿರಲಿಲ್ಲ. ಬದಲಿಗೆ ಪ್ರಜಾತಂತ್ರ, ಅಂಬೇಡ್ಕರ್‍ರವರು ರಚಿಸಿದ ಸಂವಿಧಾನ, ದೇಶದ ಇಂದಿನ ಸ್ಥಿತಿ, ದಲಿತರ ಪರಿಸ್ಥಿತಿಯ ಕುರಿತಾಗಿ ಅದ್ಭುತವಾಗಿ ಮಾತನಾಡಿ ಇಡೀ ದೇಶದ ಗಮನ ಸೆಳೆಯಬಹುದಿತ್ತು. ಮಾಧ್ಯಮಗಳ ಮೂಲಕ ಕರ್ನಾಟಕದ ಮೂರು ರಾಜಕೀಯ ಪಕ್ಷಗಳಿಗೂ ಅವರ ತಪ್ಪುಗಳನ್ನು ಮುಖಕ್ಕೆ ಹೊಡೆದಂತೆ ಹೇಳಬಹುದಿತ್ತು. ಸದನದ ಘನತೆ, ಜನರಿಗಾಗಿ ಶಾಸಕರು ಮಾಡಬೇಕಾದುದ್ದೇನು ಎಂಬುದರ ಕುರಿತು ಇಡೀ ರಾಷ್ಟ್ರಕ್ಕೆ ಮನವರಿಕೆ ಮಾಡಿಕೊಡಬಹುದಿತ್ತು. ಅಂತಹ ವಿಫುಲ ಅವಕಾಶವನ್ನು ಎನ್.ಮಹೇಶ್ ಹಾಳು ಮಾಡಿಕೊಂಡರು.

ಎನ್ ಮಹೇಶ್ ಹೀಗೇಕೆ ಮಾಡಿದರು?
ಅವಕಾಶವಾದಿತನವೇ ಮಹೇಶ್‍ರವರು ಹೀಗೆ ಮಾಡಲು ಪ್ರಮುಖ ಕಾರಣವಾಗಿದೆ. ಇದು ಈಗ ಮಾತ್ರ ಗೋಚರಿಸುತ್ತಿರುವುದಲ್ಲ ಬದಲಿಗೆ ಇದರ ಲಕ್ಷಣಗಳು ಈ ಹಿಂದೆಯೇ ಕಾಣಿಸಿಕೊಂಡಿದ್ದವು. ಹಲವು ವರ್ಷಗಳ ಹಿಂದೆಯೇ ಎನ್.ಮಹೇಶ್‍ರವರು ಬಿಜೆಪಿ ಬಿ.ಶ್ರೀರಾಮುಲು ಜೊತೆ ಸಖ್ಯ ಹೊಂದಿದ್ದರು ಮಾತ್ರವಲ್ಲದೇ ಅವರೊಡನೆ ಕೂಡಿ ರೆಸಾರ್ಟ್‍ನಲ್ಲಿ ಹಲವು ಯೋಜನೆಗಳನ್ನು ಸಹ ರೂಪಿಸಿದ್ದರು ಎಂದು ಅವರ ಸಮೀಪವರ್ತಿಗಳೇ ಹೇಳುತ್ತಾರೆ.

ಮಾಯಾವತಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಯಾವಾಗ ಆದೇಶಿಸಿದ್ದರೋ ಅಂದಿನಿಂದಲೂ ಅವರ ವಿರುದ್ಧ ಎನ್.ಮಹೇಶ್ ತಿರುಗಿ ಬಿದ್ದಿದ್ದಾರೆ. ಅವಕಾಶ ಕಾಯುತ್ತಿದ್ದ ಅವರು ಈಗ ಬೇಕಂತಲೇ ಸದನಕ್ಕೆ ಹಾಜರಾಗಿಲ್ಲ. ಪಕ್ಷದಿಂದ ಉಚ್ಚಾಟಿಸುವುದು ಅವರು ಸಹ ಬೇಕಿದ್ದಂತೆ ತೋರುತ್ತದೆ. ಇದರಿಂದ ಅವರ ಶಾಸಕ ಸ್ಥಾನಕ್ಕೇನೂ ಚ್ಯುತಿಯಾಗುವುದಿಲ್ಲ. ಇನ್ನು ಮುಂದೆ ಅವರು ಬಿಜೆಪಿ ಜೊತೆ ಸೇರಿಯೂ ಸಚಿವರಾಗುವ ಅವಕಾಶವಿದೆ. ಅದನ್ನು ಅವರು ನಿರಾಕರಿಸುವುದಿಲ್ಲ ಎಂಬುದು ಸಹ ಸತ್ಯವೆ.

ಅತ್ಯಂತ ಘನತೆಯಿಂದ ಚಳವಳಿ ಆರಂಭಿಸಿದ್ದ ಅವರು ಇಂದು ಈ ಸ್ಥಿತಿ ತಲುಪಿರುವುದು ದುರಂತ ಮಾತ್ರವಲ್ಲ ದಲಿತ ರಾಜಕಾರಣಕ್ಕಾದ ನಷ್ಟವೂ ಹೌದು. ಅವರನ್ನೇ ನಂಬಿದ್ದ ಅವರ ಅನುಯಾಯಿಗಳಿಗೆ ಮಾಡಿದ ದ್ರೋಹವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮ್ ವಿಲಾಸ್ ಪಾಸ್ವಾನ್, ರಾಮದಾಸ್ ಅಠಾವಳೆ, ಉದಿತ್ ರಾಜ್ ಮತ್ತು ಈಗ ಎನ್.ಮಹೇಶ್ ಎಲ್ಲರೂ ಅಂಬೇಡ್ಕರ್ ಸಿದ್ದಾಂತಕ್ಕೆ ಹಾಡುಹಗಲೇ ಚೂರಿ ಹಾಕಿದವರು. ಇವರ ರಾಜಕೀಯ ಗುಲಾಮಗಿರಿಗೆ ದಿಕ್ಕಾರವಿರಲಿ.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...