Homeಮುಖಪುಟದೆಹಲಿಯಲ್ಲಿ ಮೀನುಗಾರರಿಗೇಕೆ ಸಚಿವಾಲಯವಿಲ್ಲ: ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯಲ್ಲಿ ಮೀನುಗಾರರಿಗೇಕೆ ಸಚಿವಾಲಯವಿಲ್ಲ: ರಾಹುಲ್ ಗಾಂಧಿ ಪ್ರಶ್ನೆ

'ನಾವು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಬಲಪಡಿಸಲು ಬಯಸುತ್ತೇವೆ. ಏಕೆಂದರೆ ಅದು ಈ ದೇಶದ ಶಕ್ತಿ ಎಂದು ನಾವು ನಂಬಿದ್ದೇವೆ'- ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು (ಫೆ.17) ಪುದುಚೇರಿ ಪ್ರವಾಸದಲ್ಲಿದ್ದು, ಮೀನುಗಾರರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರೊಂದಿಗೆ ಹಲವು ಕಾರ್ಯಕ್ರಮಗಳಲ್ಲಿ ಸಂವಾದ ನಡೆಸಲಿದ್ದಾರೆ.

ಪಪ್ಪಮಾಲ್ ಕೋವಿಲ್‌ನಲ್ಲಿ ಮೀನುಗಾರ ಸಮುದಾಯದೊಂದಿಗೆ ಸಂವಾದ ನಡೆಸಿದ ಅವರು ವಿವಾದಿತ ಕೃಷಿ ಕಾನೂನುಗಳು ಮೀನುಗಾರರ ಮೇಲೇಯೂ ಪರಿಣಾಮ ಬೀರಲಿವೆ ಎಂದು ತಿಳಿಸಿದ್ದಾರೆ.

’ರಾಷ್ಟ್ರದ ಬೆನ್ನೆಲುಬಾಗಿರುವ ರೈತರ ವಿರುದ್ಧ ಕೇಂದ್ರ ಸರ್ಕಾರ ಮೂರು ಮಸೂದೆಗಳನ್ನು ಅಂಗೀಕರಿಸಿತು. ಮೀನುಗಾರರ ಸಭೆಯಲ್ಲಿ ನಾನು ರೈತರ ಬಗ್ಗೆ ಏಕೆ ಮಾತನಾಡುತ್ತಿದ್ದೇನೆ ಎಂದು ನೀವು ಆಶ್ಚರ್ಯ ಪಡುತ್ತಿದ್ದೀರ. ನಾನು ನಿಮ್ಮನ್ನು ಸಮುದ್ರದ ರೈತರು ಎಂದು ಪರಿಗಣಿಸುತ್ತೇನೆ” ಎಂದಿದ್ದಾರೆ. ಭೂಮಿ ಹೊಂದಿರುವ ರೈತರು ದೆಹಲಿಯಲ್ಲಿ ಸಚಿವಾಲಯವನ್ನು ಹೊಂದಲು ಸಾಧ್ಯವಾದರೆ, ಸಮುದ್ರದ ರೈತರಿಗೆ ಏಕೆ ಸಾಧ್ಯವಿಲ್ಲ ಎಂದು ರಾಹುಲ್  ಗಾಂಧಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತು ಮಾಡುತ್ತಿರುವ RSS: ಕುಮಾರಸ್ವಾಮಿ ಆತಂಕ

“ಪ್ರಸ್ತುತ ಕೇಂದ್ರ ಸರ್ಕಾರವು ಸಣ್ಣ ಮತ್ತು ಮಧ್ಯಮ ವ್ಯವಹಾರಗಳ ಮೇಲೆ ಆಕ್ರಮಣ ಮಾಡುತ್ತಿದೆ. ಎಲ್ಲಾ ವ್ಯವಹಾರಗಳನ್ನು ದೊಡ್ಡ ದೊಡ್ಡ ಸಂಸ್ಥೆಗಳಿಂದ ನಿಯಂತ್ರಿಸಬೇಕೆಂದು ಸರ್ಕಾರ ಬಯಸುತ್ತಿದೆ. ಆದರೆ, ನಮ್ಮ ದೃಷ್ಟಿಕೋನ ವಿಭಿನ್ನವಾಗಿದೆ. ನಾವು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಬಲಪಡಿಸಲು ಬಯಸುತ್ತೇವೆ. ಏಕೆಂದರೆ ಅದು ಈ ದೇಶದ ಶಕ್ತಿ ಎಂದು ನಾವು ನಂಬಿದ್ದೇವೆ” ಎಂದು ರಾಹುಲ್ ಗಾಂಧಿ ಸಂವಾದದಲ್ಲಿ ಮಾತನಾಡಿದ್ದಾರೆ.

ಇನ್ನು ಕಾಲೇಜು ವಿದ್ಯಾರ್ಥಿಗಳೊಂದಿಗೆ, ಸಾರ್ವಜನಿಕರೊಂದಿಗೂ ಸಂವಾದ ನಡೆಸಲಿದ್ದಾರೆ. ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯಲ್ಲಿ ನಡೆಯಲಿದ್ದು, ರಾಹುಲ್ ಗಾಂಧಿ ಅವರ ಭೇಟಿ ಕೂಡ ಹೊಸ ಚುನಾವಣಾ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ.

Image
PC: Twitter@Congress

ಪುದುಚೇರಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟಿನ ನಡುವೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ಫೆ.16 ರಂದು ತೆಗೆದುಹಾಕಿದ್ದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಜನವರಿಯಲ್ಲಿ ಆರೋಪಿಸಿದ್ದರು. “ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು. ಪುದುಚೇರಿಯಲ್ಲಿ ಜಾತ್ಯತೀತ ಪಕ್ಷಗಳ ಜನರು, ಕೋಮುವಾದಿ ಅಂಶಗಳನ್ನು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮತ್ತೊಮ್ಮೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ: ಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...