Homeಕರ್ನಾಟಕಸಿ.ಎಂ ಯಡ್ಡಿಗೇಕೆ ಉತ್ತರ ಕನ್ನಡವೆಂದರೆ ತಾತ್ಸಾರ?

ಸಿ.ಎಂ ಯಡ್ಡಿಗೇಕೆ ಉತ್ತರ ಕನ್ನಡವೆಂದರೆ ತಾತ್ಸಾರ?

- Advertisement -
- Advertisement -

ಕರ್ನಾಟಕ ನೆರೆಸಂತ್ರಸ್ತರ ಬಗ್ಗೆ ಪಿ.ಎಂ ಮೋದಿ ಮಾಹಾತ್ಮನಿಗೆಷ್ಟು ತಿರಸ್ಕಾರವೋ ಅಷ್ಟೇ ಅಸಡ್ಡೆ ಉತ್ತರ ಕನ್ನಡದ ಬದುಕು ನಲುಗಿದ ಮಂದಿಯ ಬಗ್ಗೆ ಯಡ್ಡಿಗಿದೆ. ಮೋದಿಗೆ ಯಡ್ಡಿಯ ಪಠಾಲಮ್ ಮೇಲೆ ಪೂರ್ವಾಗ್ರಹವಾದರೆ ಯಡ್ಡಿಗೆ ಉತ್ತರ ಕನ್ನಡದ ಸಂಸದಶಿಖಾಮಣಿ ಅನಂತಕುಮಾರ ಹೆಗಡೆ ಎಂದರೆ ನಿಗಿನಿಗಿ ಕೋಪ. ಒಟ್ಟಿನಲ್ಲಿ ನೊಂದವರಿಗೆ ಇನ್ನಷ್ಟೂ ನೋವು ಅಧಿಕಾರಸ್ಥರಿಗೆ ದ್ವೇಷಾಸೂಯೆಯ ಮೋಜು..

ಉತ್ತರಕನ್ನಡದಲ್ಲಿ ಅಗಸ್ಟ್ 5 ರಿಂದ 10 ರವರಗೆ ಪ್ರಳಯಾಂತಕ ಮಳೆಸುರಿದು ಹೆಚ್ಚು ಕಮ್ಮಿ 750 ಕೋಟಿ ರೂ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಸಮಿಕ್ಷೆ ನೆಡೆಸಿದೆ. ಮೂರ್ನಾಲ್ಕು ಜೀವ ಹರಣವಾಗಿವೆ. ನೂರಾರು ಜಾನುವಾರಗಳು ಸತ್ತು ಹೋಗಿವೆ. ಸಾವಿರಾರು ಎಕೆರೆ ತೋಟ-ಗದ್ದೆ ಕೊಚ್ಚಿಕೊಂಡು ಹೋಗಿವೆ. ಬರೋಬ್ಬರಿ 2,500 ಮನೆಗಳು ಮುರಿದು ಬಿದ್ದಿವೆ. ನೆರೆ ಹಾವಳಿ ಸಂತ್ರಸ್ತರಿಗೆ ಎರಡು ತಿಂಗಳಾದರೂ ಬದುಕು ಕಟ್ಟಿಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ. ಸಿಎಂ ಸಾಹೇಬರು ಬಂದು ತಮ್ಮ ಕಣ್ಣಿರು ಒರೆಸುತ್ತಾರೆಂಬ ನಿರೀಕ್ಷೆಯಲ್ಲಿದ್ದ ನೆರೆಪಿಡಿತ ಜನತೆಗೆ ಮೂರು ಬಾರಿ ಯಡ್ಡಿ ಮೋಸಮಾಡಿದ್ದಾರೆ.

ವಾರದಲ್ಲಿ ಎರಡು ಮೂರು ಬಾರಿ ಸಿಎಂ ನೆರೆ ಪೀಡಿತ ಪ್ರದೇಶಗಳಿಗೆ ಬರುತ್ತಾರೆಂದು ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿತ್ತು. ಕಳೆದ ತಿಂಗಳು ಸಿಎಂ ಬರುವುದು ಗ್ಯಾರಂಟಿಯೆಂದು ನೆರೆ ಸಂತ್ರಸ್ತರು ಕಾದು ಕುಳಿತ್ತಿದ್ದರು. ಎಂಮ್ಮೆಲ್ಲೆಗಳು, ಸಂಸದರು ಯಡ್ಡಿ ಸ್ವಾಗತಿಸಲು ಅಲ್ಲಿ ನೆರದಿದ್ದರು. ಅಧಿಕಾರಿಗಳ ದಂಡಂತು ನಡುವತ್ತಿಗೆ ಬಂದಿತ್ತು. ಆದರೆ ಪಕ್ಕದ ಶಿವಮೊಗ್ಗದಲ್ಲಿದ ಯಡ್ಡಿ ಧಿಡೀರ್ ಉತ್ತರಕನ್ನಡಕ್ಕೆ ಬರಲಾರೇನೆಂದು ಸಂದೇಶ ಕಳುಹಿಸಿದರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ತನ್ನ ಹಿತಶತ್ರುವೂ ಆದ ಈಶ್ವರಪ್ಪ ಕರೆದಿದ್ದ ಅಧಿಕಾರಿಗಳ ಸಭೆಗೆ ನುಗ್ಗಿ ನಿಭಾಯಿಸಿದ್ದರು. ಶಿವಮೊಗ್ಗೆಯ ಚೆಡ್ಡಿ ರಾಜಕಾರಣದ ಮೇಲಾಟಕ್ಕೆ ಉತ್ತರಕನ್ನಡ ಕಡೆಗಣಿಸ ಬೇಕಾಯಿತು.

ನೆರೆ ಹಾನಿಯ ಪರಿಶೀಲನೆಗೆಂದು ಪಕ್ಕದ ಧಾರವಾಡದ ಮಂತ್ರಿ ಜಗದೀಶ್ ಶೆಟ್ಟರ್ ಜಿಲ್ಲೆಗೊಮ್ಮೆ ಬಂದು ಹಾಗೆ ಹೋಗಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿ ಶಶಿಕಲಾ ಜೊಲ್ಲೆ ಮೊನ್ನೆ ಬಂದು ಬೈ ಹೇಳಿದ್ದಾರೆ. ಜಿಲ್ಲೆಯ ಭೌಗೋಳಿಕ, ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಒಂಚೂರು ಗೊತ್ತಿಲ್ಲದ ಈ ಮಂತ್ರಿ, ಅಧಿಕಾರಿ ಹೇಳಿದ್ದಕೆ ಗೋಣು ಆಡಿಸಿದ್ದಾರೆ. ತಾವು ಬಂದಿದ್ದು ಬರೀ ಮಾಹಿತಿಯನ್ನು ಬಾಯಲ್ಲಿ ಸಿಎಂಗೆ ತಲುಪಿಸುವ ಪೋಸ್ಟ್ ಮ್ಯಾನ್ ಚಾಕರಿಗಷ್ಟೇ ಎಂಬಂತೆ ಹೊಣಗೆಡಿ ಮಾತನಾಡಿದ್ದಾರೆ. ಸಿಎಂ ಜೊತೆ ಚರ್ಚಿಸುತೇನೆಂದು ಮಂತ್ರಿಗಳು ಹೇಳಿದ್ದಾರೆಯೇ ಹೊರತು ಇಂತಿಷ್ಟು ಪರಿಹಾರಕ್ಕೆ ಬೇಡಿಕೆ ಇಡುತ್ತೇವೆಂದಾಗಲಿ, ನೊಂದವರಿಗೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದಾಲಿ ಧೈರ್ಯದಿಂದ ಹೇಳಿಲ್ಲ. ಈ ಮಂತ್ರಿಗಳ ದಂಡಿನ “ದಂಡ” ಯಾತ್ರೆಗೆ ಮತ್ತು ಸಿಎಂ ಬರ್‍ತಾರೆಂದು ಮಾಡಿದ ಸಿದ್ದತೆಗೆ ಲಕ್ಷಾಂತರ ಹಾನಿಯಾಗಿದೆ ಹೊರತು ನೆರೆ ಪಿಡಿತರಿಗೆ ಪೈಸೆ ಫಾಯ್ದೆ ಆಗಿಲ್ಲ.

ಹನ್ನೊಂದು ಸಾವಿರಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಗಳನ್ನು ಸೇರಿದ್ದರು. ಇದಕ್ಕಿಂತಲು ಹೆಚ್ಚು ಮಂದಿ ನೆರೆಯಿಂದ ದಿಕ್ಕೆಟ್ಟು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಕೆಲವರಿಗೆ ಪಂಚಕಜ್ಜಾಯ ಕೊಟ್ಟಂತೆ ಹನಿ ಹನಿ ಹಣ ‘ಪರಿಹಾರ’ ಹಂಚಿದ್ದಾರೆ. ಇದು ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗಿಲ್ಲ. ರಸ್ತೆ, ಕಾಲು ಸುಂಕ, ಬ್ರಿಡ್ಜ್, ವಿದ್ಯುತ್ ಕಂಬ, ಡ್ಯಾಮು, ಕೆರೆ, ಬಾವಿ ಕೊಚ್ಚಿ ಹೋಗಿವೆ. ನೆರೆಬಂದ ಪ್ರದೇಶಗಳಂತೂ ನರಕವಾಗಿವೆ. ಜನರಿಗಾದ ಆಘಾತವನ್ನು ಆಳುವವರ ಎದುರು ಸಮರ್ಥವಾಗಿ ಮಂಡಿಸಿ ಪರಿಹಾರ ತರುವ ನಾಯಕತ್ವ ಉತ್ತರಕನ್ನಡದಲ್ಲಿ ಇಲ್ಲ. ಬಿಜೆಪಿಯಿಂದ ಆರರಲ್ಲಿ ನಾಲ್ಕುಜನ ಶಾಸಕರಾಗಿದ್ದಾರೆ. ಒಬ್ಬ ಅನರ್ಹನು ಬಿಜೆಪಿ ಪಾಲಾಗಿದ್ದಾನೆ. ತಾನು ಹುಟ್ಟಿದೇ ದೇಶಉದ್ದಾರಕೆಂದು ಎಂಬಂತೆ ನಾಲಿಗೆ ಹರಿಬಿಡುವ ಸಂಸದ ಆರನೇ ಭಾರಿ ಪಾರ್ಲಿಮೆಂಟಿನ ಕುರ್ಚಿ ಬಿಸಿ ಮಾಡಲು ಆಯ್ಕೆಯಾಗಿದ್ದಾನೆ.

ಇವರ್‍ಯಾರಿಗೂ ಸಿಎಂ ಎದುರು ನಿಂತು ಸಮಸ್ಯ ವಿವರಿಸುವ ಧೈರ್ಯವಿಲ್ಲ. ಕಾರವಾರ ಶಾಸಕಿ ರೂಪಾಲಿ ನಾಯ್ಕಳಂತೂ ಹೆಜ್ಜೆ-ಹೆಜ್ಜೆಗೆ ಶೋ ಮಾಡುವುದೆ ಶಾಸಕಿಯ ಕರ್ತವ್ಯ ಎಂದುಕೊಂಡಿದ್ದಾಳೆ. ನೆರೆ ಬಂದಾಗ ಸಮ್ಮಿಶ್ರ ಸರ್ಕಾರ ಉರುಳಿಸುವ ಬಿಜೆಪಿ ರೆಸಾರ್ಟ್‌ ಸರ್ಕಸ್‍ನಲ್ಲಿದ ಈಕೆ ತಾನು ಅನಿವಾರ್ಯವಾಗಿ ರೆಸಾರ್ಟ್ ಸೇರಿದ್ಧೇನೆ… ನೊಂದ ನೆರೆ ಪೀಡಿತರ ಬಳಿ ಬರಲಾಗುತ್ತಿಲ್ಲವೆಂದು ಜಾಹಿರಾತು ಪತ್ರಿಕೆಗಳಿಗೆ ಕೊಟ್ಟು ತಾನೆಂತಹ ನಾಲಾಯಕ್ ಜನಪ್ರತಿನಿಧಿ ಎಂದು ತೋರಿಸಿಕೊಂಡಿದ್ದಾಳೆ. ಬಟ್ಕಳದ ಬಚ್ಚಾ ಶಾಸಕ ಸುನಿಲನಾಯ್ಕ್ ಸಿಎಂ ಇರಲಿ ಸಂಸರ ಮುಂದೆನಿಂತು ಮಾತನಾಡುವ ಧೈರ್ಯವಿಲ್ಲ. ಕುಮುಟೆಯ ಶಾಸಕ ದಿನಕರ್ ಶೆಟ್ಟಿಗೆ ಕಿಕ್‌ಬ್ಯಾಕ್‌ ಕಮಾಯಿಯೇ ನೆರೆ ಪೀಡಿತರ ಸೇವೆ ಎಂಬ ಭಾವನೆ.

ಈಗ ಎರಡನೆ ಸುತ್ತಿನ ನೆರೆ ವಿಕ್ಷಣೆಗೆ ಸಿಎಂ ಯಡ್ಡಿ ರೆಡಿಯಾಗಿದ್ದಾರೆ. ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತಿತರ ಕಡೆ ಸಿಎಂ ಸಂಚಾರ ಮಾಡುತ್ತಿದ್ದಾರೆ. ಆದರೆ ಆತನ ಟೂರ್ ಲಿಸ್ಟ್ ನಲ್ಲಿ ಉತ್ತರಕನ್ನಡ ಇಲ್ಲ.!! ಸಿಎಂ ಕಾಲರ್ ಹಿಡಿದು ಜಿಲ್ಲೆಗೆ ಕರೆತಬೇಕಿದ್ದ ಶಾಸಕರಿಗೆ ಆ ತಾಕತು ಇಲ್ಲ. ಸಿಎಂ ಕೆಂಗಣ್ಣಿಗೆ ಸಿಲುಕಿದರೆ ನಿಗಮ ಮಂಡಳಿ, ಗೂಟದ ಕಾರಿಗೆ ಸಂಚಕಾರ ಎಂಬ ಅಂಜಿಕೆ. ಸಿಎಂ ಮುಂದೆ ವಿರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗೆ ಜನರೆಂದರೆ ಯಾವಾಗಲೂ ಅಲರ್ಜಿ. ಅತನಿಗೆ ಹಿಂದುತ್ವ ಗೊಂದಲಗಳಿಗಷ್ಟೆ ಕಾಲಾಳುಗಳು ಬೇಕು.

ಒಟ್ಟಿನಲ್ಲಿ ಉತ್ತರಕನ್ನಡದ ಸಮಸ್ಯಗಂತೂ ಉತ್ತರವಿಲ್ಲ.!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....