Homeಕರ್ನಾಟಕಸಿ.ಎಂ ಯಡ್ಡಿಗೇಕೆ ಉತ್ತರ ಕನ್ನಡವೆಂದರೆ ತಾತ್ಸಾರ?

ಸಿ.ಎಂ ಯಡ್ಡಿಗೇಕೆ ಉತ್ತರ ಕನ್ನಡವೆಂದರೆ ತಾತ್ಸಾರ?

- Advertisement -
- Advertisement -

ಕರ್ನಾಟಕ ನೆರೆಸಂತ್ರಸ್ತರ ಬಗ್ಗೆ ಪಿ.ಎಂ ಮೋದಿ ಮಾಹಾತ್ಮನಿಗೆಷ್ಟು ತಿರಸ್ಕಾರವೋ ಅಷ್ಟೇ ಅಸಡ್ಡೆ ಉತ್ತರ ಕನ್ನಡದ ಬದುಕು ನಲುಗಿದ ಮಂದಿಯ ಬಗ್ಗೆ ಯಡ್ಡಿಗಿದೆ. ಮೋದಿಗೆ ಯಡ್ಡಿಯ ಪಠಾಲಮ್ ಮೇಲೆ ಪೂರ್ವಾಗ್ರಹವಾದರೆ ಯಡ್ಡಿಗೆ ಉತ್ತರ ಕನ್ನಡದ ಸಂಸದಶಿಖಾಮಣಿ ಅನಂತಕುಮಾರ ಹೆಗಡೆ ಎಂದರೆ ನಿಗಿನಿಗಿ ಕೋಪ. ಒಟ್ಟಿನಲ್ಲಿ ನೊಂದವರಿಗೆ ಇನ್ನಷ್ಟೂ ನೋವು ಅಧಿಕಾರಸ್ಥರಿಗೆ ದ್ವೇಷಾಸೂಯೆಯ ಮೋಜು..

ಉತ್ತರಕನ್ನಡದಲ್ಲಿ ಅಗಸ್ಟ್ 5 ರಿಂದ 10 ರವರಗೆ ಪ್ರಳಯಾಂತಕ ಮಳೆಸುರಿದು ಹೆಚ್ಚು ಕಮ್ಮಿ 750 ಕೋಟಿ ರೂ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಸಮಿಕ್ಷೆ ನೆಡೆಸಿದೆ. ಮೂರ್ನಾಲ್ಕು ಜೀವ ಹರಣವಾಗಿವೆ. ನೂರಾರು ಜಾನುವಾರಗಳು ಸತ್ತು ಹೋಗಿವೆ. ಸಾವಿರಾರು ಎಕೆರೆ ತೋಟ-ಗದ್ದೆ ಕೊಚ್ಚಿಕೊಂಡು ಹೋಗಿವೆ. ಬರೋಬ್ಬರಿ 2,500 ಮನೆಗಳು ಮುರಿದು ಬಿದ್ದಿವೆ. ನೆರೆ ಹಾವಳಿ ಸಂತ್ರಸ್ತರಿಗೆ ಎರಡು ತಿಂಗಳಾದರೂ ಬದುಕು ಕಟ್ಟಿಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ. ಸಿಎಂ ಸಾಹೇಬರು ಬಂದು ತಮ್ಮ ಕಣ್ಣಿರು ಒರೆಸುತ್ತಾರೆಂಬ ನಿರೀಕ್ಷೆಯಲ್ಲಿದ್ದ ನೆರೆಪಿಡಿತ ಜನತೆಗೆ ಮೂರು ಬಾರಿ ಯಡ್ಡಿ ಮೋಸಮಾಡಿದ್ದಾರೆ.

ವಾರದಲ್ಲಿ ಎರಡು ಮೂರು ಬಾರಿ ಸಿಎಂ ನೆರೆ ಪೀಡಿತ ಪ್ರದೇಶಗಳಿಗೆ ಬರುತ್ತಾರೆಂದು ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿತ್ತು. ಕಳೆದ ತಿಂಗಳು ಸಿಎಂ ಬರುವುದು ಗ್ಯಾರಂಟಿಯೆಂದು ನೆರೆ ಸಂತ್ರಸ್ತರು ಕಾದು ಕುಳಿತ್ತಿದ್ದರು. ಎಂಮ್ಮೆಲ್ಲೆಗಳು, ಸಂಸದರು ಯಡ್ಡಿ ಸ್ವಾಗತಿಸಲು ಅಲ್ಲಿ ನೆರದಿದ್ದರು. ಅಧಿಕಾರಿಗಳ ದಂಡಂತು ನಡುವತ್ತಿಗೆ ಬಂದಿತ್ತು. ಆದರೆ ಪಕ್ಕದ ಶಿವಮೊಗ್ಗದಲ್ಲಿದ ಯಡ್ಡಿ ಧಿಡೀರ್ ಉತ್ತರಕನ್ನಡಕ್ಕೆ ಬರಲಾರೇನೆಂದು ಸಂದೇಶ ಕಳುಹಿಸಿದರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ತನ್ನ ಹಿತಶತ್ರುವೂ ಆದ ಈಶ್ವರಪ್ಪ ಕರೆದಿದ್ದ ಅಧಿಕಾರಿಗಳ ಸಭೆಗೆ ನುಗ್ಗಿ ನಿಭಾಯಿಸಿದ್ದರು. ಶಿವಮೊಗ್ಗೆಯ ಚೆಡ್ಡಿ ರಾಜಕಾರಣದ ಮೇಲಾಟಕ್ಕೆ ಉತ್ತರಕನ್ನಡ ಕಡೆಗಣಿಸ ಬೇಕಾಯಿತು.

ನೆರೆ ಹಾನಿಯ ಪರಿಶೀಲನೆಗೆಂದು ಪಕ್ಕದ ಧಾರವಾಡದ ಮಂತ್ರಿ ಜಗದೀಶ್ ಶೆಟ್ಟರ್ ಜಿಲ್ಲೆಗೊಮ್ಮೆ ಬಂದು ಹಾಗೆ ಹೋಗಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿ ಶಶಿಕಲಾ ಜೊಲ್ಲೆ ಮೊನ್ನೆ ಬಂದು ಬೈ ಹೇಳಿದ್ದಾರೆ. ಜಿಲ್ಲೆಯ ಭೌಗೋಳಿಕ, ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಒಂಚೂರು ಗೊತ್ತಿಲ್ಲದ ಈ ಮಂತ್ರಿ, ಅಧಿಕಾರಿ ಹೇಳಿದ್ದಕೆ ಗೋಣು ಆಡಿಸಿದ್ದಾರೆ. ತಾವು ಬಂದಿದ್ದು ಬರೀ ಮಾಹಿತಿಯನ್ನು ಬಾಯಲ್ಲಿ ಸಿಎಂಗೆ ತಲುಪಿಸುವ ಪೋಸ್ಟ್ ಮ್ಯಾನ್ ಚಾಕರಿಗಷ್ಟೇ ಎಂಬಂತೆ ಹೊಣಗೆಡಿ ಮಾತನಾಡಿದ್ದಾರೆ. ಸಿಎಂ ಜೊತೆ ಚರ್ಚಿಸುತೇನೆಂದು ಮಂತ್ರಿಗಳು ಹೇಳಿದ್ದಾರೆಯೇ ಹೊರತು ಇಂತಿಷ್ಟು ಪರಿಹಾರಕ್ಕೆ ಬೇಡಿಕೆ ಇಡುತ್ತೇವೆಂದಾಗಲಿ, ನೊಂದವರಿಗೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದಾಲಿ ಧೈರ್ಯದಿಂದ ಹೇಳಿಲ್ಲ. ಈ ಮಂತ್ರಿಗಳ ದಂಡಿನ “ದಂಡ” ಯಾತ್ರೆಗೆ ಮತ್ತು ಸಿಎಂ ಬರ್‍ತಾರೆಂದು ಮಾಡಿದ ಸಿದ್ದತೆಗೆ ಲಕ್ಷಾಂತರ ಹಾನಿಯಾಗಿದೆ ಹೊರತು ನೆರೆ ಪಿಡಿತರಿಗೆ ಪೈಸೆ ಫಾಯ್ದೆ ಆಗಿಲ್ಲ.

ಹನ್ನೊಂದು ಸಾವಿರಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಗಳನ್ನು ಸೇರಿದ್ದರು. ಇದಕ್ಕಿಂತಲು ಹೆಚ್ಚು ಮಂದಿ ನೆರೆಯಿಂದ ದಿಕ್ಕೆಟ್ಟು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಕೆಲವರಿಗೆ ಪಂಚಕಜ್ಜಾಯ ಕೊಟ್ಟಂತೆ ಹನಿ ಹನಿ ಹಣ ‘ಪರಿಹಾರ’ ಹಂಚಿದ್ದಾರೆ. ಇದು ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗಿಲ್ಲ. ರಸ್ತೆ, ಕಾಲು ಸುಂಕ, ಬ್ರಿಡ್ಜ್, ವಿದ್ಯುತ್ ಕಂಬ, ಡ್ಯಾಮು, ಕೆರೆ, ಬಾವಿ ಕೊಚ್ಚಿ ಹೋಗಿವೆ. ನೆರೆಬಂದ ಪ್ರದೇಶಗಳಂತೂ ನರಕವಾಗಿವೆ. ಜನರಿಗಾದ ಆಘಾತವನ್ನು ಆಳುವವರ ಎದುರು ಸಮರ್ಥವಾಗಿ ಮಂಡಿಸಿ ಪರಿಹಾರ ತರುವ ನಾಯಕತ್ವ ಉತ್ತರಕನ್ನಡದಲ್ಲಿ ಇಲ್ಲ. ಬಿಜೆಪಿಯಿಂದ ಆರರಲ್ಲಿ ನಾಲ್ಕುಜನ ಶಾಸಕರಾಗಿದ್ದಾರೆ. ಒಬ್ಬ ಅನರ್ಹನು ಬಿಜೆಪಿ ಪಾಲಾಗಿದ್ದಾನೆ. ತಾನು ಹುಟ್ಟಿದೇ ದೇಶಉದ್ದಾರಕೆಂದು ಎಂಬಂತೆ ನಾಲಿಗೆ ಹರಿಬಿಡುವ ಸಂಸದ ಆರನೇ ಭಾರಿ ಪಾರ್ಲಿಮೆಂಟಿನ ಕುರ್ಚಿ ಬಿಸಿ ಮಾಡಲು ಆಯ್ಕೆಯಾಗಿದ್ದಾನೆ.

ಇವರ್‍ಯಾರಿಗೂ ಸಿಎಂ ಎದುರು ನಿಂತು ಸಮಸ್ಯ ವಿವರಿಸುವ ಧೈರ್ಯವಿಲ್ಲ. ಕಾರವಾರ ಶಾಸಕಿ ರೂಪಾಲಿ ನಾಯ್ಕಳಂತೂ ಹೆಜ್ಜೆ-ಹೆಜ್ಜೆಗೆ ಶೋ ಮಾಡುವುದೆ ಶಾಸಕಿಯ ಕರ್ತವ್ಯ ಎಂದುಕೊಂಡಿದ್ದಾಳೆ. ನೆರೆ ಬಂದಾಗ ಸಮ್ಮಿಶ್ರ ಸರ್ಕಾರ ಉರುಳಿಸುವ ಬಿಜೆಪಿ ರೆಸಾರ್ಟ್‌ ಸರ್ಕಸ್‍ನಲ್ಲಿದ ಈಕೆ ತಾನು ಅನಿವಾರ್ಯವಾಗಿ ರೆಸಾರ್ಟ್ ಸೇರಿದ್ಧೇನೆ… ನೊಂದ ನೆರೆ ಪೀಡಿತರ ಬಳಿ ಬರಲಾಗುತ್ತಿಲ್ಲವೆಂದು ಜಾಹಿರಾತು ಪತ್ರಿಕೆಗಳಿಗೆ ಕೊಟ್ಟು ತಾನೆಂತಹ ನಾಲಾಯಕ್ ಜನಪ್ರತಿನಿಧಿ ಎಂದು ತೋರಿಸಿಕೊಂಡಿದ್ದಾಳೆ. ಬಟ್ಕಳದ ಬಚ್ಚಾ ಶಾಸಕ ಸುನಿಲನಾಯ್ಕ್ ಸಿಎಂ ಇರಲಿ ಸಂಸರ ಮುಂದೆನಿಂತು ಮಾತನಾಡುವ ಧೈರ್ಯವಿಲ್ಲ. ಕುಮುಟೆಯ ಶಾಸಕ ದಿನಕರ್ ಶೆಟ್ಟಿಗೆ ಕಿಕ್‌ಬ್ಯಾಕ್‌ ಕಮಾಯಿಯೇ ನೆರೆ ಪೀಡಿತರ ಸೇವೆ ಎಂಬ ಭಾವನೆ.

ಈಗ ಎರಡನೆ ಸುತ್ತಿನ ನೆರೆ ವಿಕ್ಷಣೆಗೆ ಸಿಎಂ ಯಡ್ಡಿ ರೆಡಿಯಾಗಿದ್ದಾರೆ. ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತಿತರ ಕಡೆ ಸಿಎಂ ಸಂಚಾರ ಮಾಡುತ್ತಿದ್ದಾರೆ. ಆದರೆ ಆತನ ಟೂರ್ ಲಿಸ್ಟ್ ನಲ್ಲಿ ಉತ್ತರಕನ್ನಡ ಇಲ್ಲ.!! ಸಿಎಂ ಕಾಲರ್ ಹಿಡಿದು ಜಿಲ್ಲೆಗೆ ಕರೆತಬೇಕಿದ್ದ ಶಾಸಕರಿಗೆ ಆ ತಾಕತು ಇಲ್ಲ. ಸಿಎಂ ಕೆಂಗಣ್ಣಿಗೆ ಸಿಲುಕಿದರೆ ನಿಗಮ ಮಂಡಳಿ, ಗೂಟದ ಕಾರಿಗೆ ಸಂಚಕಾರ ಎಂಬ ಅಂಜಿಕೆ. ಸಿಎಂ ಮುಂದೆ ವಿರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗೆ ಜನರೆಂದರೆ ಯಾವಾಗಲೂ ಅಲರ್ಜಿ. ಅತನಿಗೆ ಹಿಂದುತ್ವ ಗೊಂದಲಗಳಿಗಷ್ಟೆ ಕಾಲಾಳುಗಳು ಬೇಕು.

ಒಟ್ಟಿನಲ್ಲಿ ಉತ್ತರಕನ್ನಡದ ಸಮಸ್ಯಗಂತೂ ಉತ್ತರವಿಲ್ಲ.!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...