Homeಕರ್ನಾಟಕಸಿ.ಎಂ ಯಡ್ಡಿಗೇಕೆ ಉತ್ತರ ಕನ್ನಡವೆಂದರೆ ತಾತ್ಸಾರ?

ಸಿ.ಎಂ ಯಡ್ಡಿಗೇಕೆ ಉತ್ತರ ಕನ್ನಡವೆಂದರೆ ತಾತ್ಸಾರ?

- Advertisement -
- Advertisement -

ಕರ್ನಾಟಕ ನೆರೆಸಂತ್ರಸ್ತರ ಬಗ್ಗೆ ಪಿ.ಎಂ ಮೋದಿ ಮಾಹಾತ್ಮನಿಗೆಷ್ಟು ತಿರಸ್ಕಾರವೋ ಅಷ್ಟೇ ಅಸಡ್ಡೆ ಉತ್ತರ ಕನ್ನಡದ ಬದುಕು ನಲುಗಿದ ಮಂದಿಯ ಬಗ್ಗೆ ಯಡ್ಡಿಗಿದೆ. ಮೋದಿಗೆ ಯಡ್ಡಿಯ ಪಠಾಲಮ್ ಮೇಲೆ ಪೂರ್ವಾಗ್ರಹವಾದರೆ ಯಡ್ಡಿಗೆ ಉತ್ತರ ಕನ್ನಡದ ಸಂಸದಶಿಖಾಮಣಿ ಅನಂತಕುಮಾರ ಹೆಗಡೆ ಎಂದರೆ ನಿಗಿನಿಗಿ ಕೋಪ. ಒಟ್ಟಿನಲ್ಲಿ ನೊಂದವರಿಗೆ ಇನ್ನಷ್ಟೂ ನೋವು ಅಧಿಕಾರಸ್ಥರಿಗೆ ದ್ವೇಷಾಸೂಯೆಯ ಮೋಜು..

ಉತ್ತರಕನ್ನಡದಲ್ಲಿ ಅಗಸ್ಟ್ 5 ರಿಂದ 10 ರವರಗೆ ಪ್ರಳಯಾಂತಕ ಮಳೆಸುರಿದು ಹೆಚ್ಚು ಕಮ್ಮಿ 750 ಕೋಟಿ ರೂ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಸಮಿಕ್ಷೆ ನೆಡೆಸಿದೆ. ಮೂರ್ನಾಲ್ಕು ಜೀವ ಹರಣವಾಗಿವೆ. ನೂರಾರು ಜಾನುವಾರಗಳು ಸತ್ತು ಹೋಗಿವೆ. ಸಾವಿರಾರು ಎಕೆರೆ ತೋಟ-ಗದ್ದೆ ಕೊಚ್ಚಿಕೊಂಡು ಹೋಗಿವೆ. ಬರೋಬ್ಬರಿ 2,500 ಮನೆಗಳು ಮುರಿದು ಬಿದ್ದಿವೆ. ನೆರೆ ಹಾವಳಿ ಸಂತ್ರಸ್ತರಿಗೆ ಎರಡು ತಿಂಗಳಾದರೂ ಬದುಕು ಕಟ್ಟಿಕೊಳ್ಳಲಾಗದೆ ಒದ್ದಾಡುತ್ತಿದ್ದಾರೆ. ಸಿಎಂ ಸಾಹೇಬರು ಬಂದು ತಮ್ಮ ಕಣ್ಣಿರು ಒರೆಸುತ್ತಾರೆಂಬ ನಿರೀಕ್ಷೆಯಲ್ಲಿದ್ದ ನೆರೆಪಿಡಿತ ಜನತೆಗೆ ಮೂರು ಬಾರಿ ಯಡ್ಡಿ ಮೋಸಮಾಡಿದ್ದಾರೆ.

ವಾರದಲ್ಲಿ ಎರಡು ಮೂರು ಬಾರಿ ಸಿಎಂ ನೆರೆ ಪೀಡಿತ ಪ್ರದೇಶಗಳಿಗೆ ಬರುತ್ತಾರೆಂದು ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿತ್ತು. ಕಳೆದ ತಿಂಗಳು ಸಿಎಂ ಬರುವುದು ಗ್ಯಾರಂಟಿಯೆಂದು ನೆರೆ ಸಂತ್ರಸ್ತರು ಕಾದು ಕುಳಿತ್ತಿದ್ದರು. ಎಂಮ್ಮೆಲ್ಲೆಗಳು, ಸಂಸದರು ಯಡ್ಡಿ ಸ್ವಾಗತಿಸಲು ಅಲ್ಲಿ ನೆರದಿದ್ದರು. ಅಧಿಕಾರಿಗಳ ದಂಡಂತು ನಡುವತ್ತಿಗೆ ಬಂದಿತ್ತು. ಆದರೆ ಪಕ್ಕದ ಶಿವಮೊಗ್ಗದಲ್ಲಿದ ಯಡ್ಡಿ ಧಿಡೀರ್ ಉತ್ತರಕನ್ನಡಕ್ಕೆ ಬರಲಾರೇನೆಂದು ಸಂದೇಶ ಕಳುಹಿಸಿದರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ತನ್ನ ಹಿತಶತ್ರುವೂ ಆದ ಈಶ್ವರಪ್ಪ ಕರೆದಿದ್ದ ಅಧಿಕಾರಿಗಳ ಸಭೆಗೆ ನುಗ್ಗಿ ನಿಭಾಯಿಸಿದ್ದರು. ಶಿವಮೊಗ್ಗೆಯ ಚೆಡ್ಡಿ ರಾಜಕಾರಣದ ಮೇಲಾಟಕ್ಕೆ ಉತ್ತರಕನ್ನಡ ಕಡೆಗಣಿಸ ಬೇಕಾಯಿತು.

ನೆರೆ ಹಾನಿಯ ಪರಿಶೀಲನೆಗೆಂದು ಪಕ್ಕದ ಧಾರವಾಡದ ಮಂತ್ರಿ ಜಗದೀಶ್ ಶೆಟ್ಟರ್ ಜಿಲ್ಲೆಗೊಮ್ಮೆ ಬಂದು ಹಾಗೆ ಹೋಗಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿ ಶಶಿಕಲಾ ಜೊಲ್ಲೆ ಮೊನ್ನೆ ಬಂದು ಬೈ ಹೇಳಿದ್ದಾರೆ. ಜಿಲ್ಲೆಯ ಭೌಗೋಳಿಕ, ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಒಂಚೂರು ಗೊತ್ತಿಲ್ಲದ ಈ ಮಂತ್ರಿ, ಅಧಿಕಾರಿ ಹೇಳಿದ್ದಕೆ ಗೋಣು ಆಡಿಸಿದ್ದಾರೆ. ತಾವು ಬಂದಿದ್ದು ಬರೀ ಮಾಹಿತಿಯನ್ನು ಬಾಯಲ್ಲಿ ಸಿಎಂಗೆ ತಲುಪಿಸುವ ಪೋಸ್ಟ್ ಮ್ಯಾನ್ ಚಾಕರಿಗಷ್ಟೇ ಎಂಬಂತೆ ಹೊಣಗೆಡಿ ಮಾತನಾಡಿದ್ದಾರೆ. ಸಿಎಂ ಜೊತೆ ಚರ್ಚಿಸುತೇನೆಂದು ಮಂತ್ರಿಗಳು ಹೇಳಿದ್ದಾರೆಯೇ ಹೊರತು ಇಂತಿಷ್ಟು ಪರಿಹಾರಕ್ಕೆ ಬೇಡಿಕೆ ಇಡುತ್ತೇವೆಂದಾಗಲಿ, ನೊಂದವರಿಗೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದಾಲಿ ಧೈರ್ಯದಿಂದ ಹೇಳಿಲ್ಲ. ಈ ಮಂತ್ರಿಗಳ ದಂಡಿನ “ದಂಡ” ಯಾತ್ರೆಗೆ ಮತ್ತು ಸಿಎಂ ಬರ್‍ತಾರೆಂದು ಮಾಡಿದ ಸಿದ್ದತೆಗೆ ಲಕ್ಷಾಂತರ ಹಾನಿಯಾಗಿದೆ ಹೊರತು ನೆರೆ ಪಿಡಿತರಿಗೆ ಪೈಸೆ ಫಾಯ್ದೆ ಆಗಿಲ್ಲ.

ಹನ್ನೊಂದು ಸಾವಿರಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಗಳನ್ನು ಸೇರಿದ್ದರು. ಇದಕ್ಕಿಂತಲು ಹೆಚ್ಚು ಮಂದಿ ನೆರೆಯಿಂದ ದಿಕ್ಕೆಟ್ಟು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಕೆಲವರಿಗೆ ಪಂಚಕಜ್ಜಾಯ ಕೊಟ್ಟಂತೆ ಹನಿ ಹನಿ ಹಣ ‘ಪರಿಹಾರ’ ಹಂಚಿದ್ದಾರೆ. ಇದು ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗಿಲ್ಲ. ರಸ್ತೆ, ಕಾಲು ಸುಂಕ, ಬ್ರಿಡ್ಜ್, ವಿದ್ಯುತ್ ಕಂಬ, ಡ್ಯಾಮು, ಕೆರೆ, ಬಾವಿ ಕೊಚ್ಚಿ ಹೋಗಿವೆ. ನೆರೆಬಂದ ಪ್ರದೇಶಗಳಂತೂ ನರಕವಾಗಿವೆ. ಜನರಿಗಾದ ಆಘಾತವನ್ನು ಆಳುವವರ ಎದುರು ಸಮರ್ಥವಾಗಿ ಮಂಡಿಸಿ ಪರಿಹಾರ ತರುವ ನಾಯಕತ್ವ ಉತ್ತರಕನ್ನಡದಲ್ಲಿ ಇಲ್ಲ. ಬಿಜೆಪಿಯಿಂದ ಆರರಲ್ಲಿ ನಾಲ್ಕುಜನ ಶಾಸಕರಾಗಿದ್ದಾರೆ. ಒಬ್ಬ ಅನರ್ಹನು ಬಿಜೆಪಿ ಪಾಲಾಗಿದ್ದಾನೆ. ತಾನು ಹುಟ್ಟಿದೇ ದೇಶಉದ್ದಾರಕೆಂದು ಎಂಬಂತೆ ನಾಲಿಗೆ ಹರಿಬಿಡುವ ಸಂಸದ ಆರನೇ ಭಾರಿ ಪಾರ್ಲಿಮೆಂಟಿನ ಕುರ್ಚಿ ಬಿಸಿ ಮಾಡಲು ಆಯ್ಕೆಯಾಗಿದ್ದಾನೆ.

ಇವರ್‍ಯಾರಿಗೂ ಸಿಎಂ ಎದುರು ನಿಂತು ಸಮಸ್ಯ ವಿವರಿಸುವ ಧೈರ್ಯವಿಲ್ಲ. ಕಾರವಾರ ಶಾಸಕಿ ರೂಪಾಲಿ ನಾಯ್ಕಳಂತೂ ಹೆಜ್ಜೆ-ಹೆಜ್ಜೆಗೆ ಶೋ ಮಾಡುವುದೆ ಶಾಸಕಿಯ ಕರ್ತವ್ಯ ಎಂದುಕೊಂಡಿದ್ದಾಳೆ. ನೆರೆ ಬಂದಾಗ ಸಮ್ಮಿಶ್ರ ಸರ್ಕಾರ ಉರುಳಿಸುವ ಬಿಜೆಪಿ ರೆಸಾರ್ಟ್‌ ಸರ್ಕಸ್‍ನಲ್ಲಿದ ಈಕೆ ತಾನು ಅನಿವಾರ್ಯವಾಗಿ ರೆಸಾರ್ಟ್ ಸೇರಿದ್ಧೇನೆ… ನೊಂದ ನೆರೆ ಪೀಡಿತರ ಬಳಿ ಬರಲಾಗುತ್ತಿಲ್ಲವೆಂದು ಜಾಹಿರಾತು ಪತ್ರಿಕೆಗಳಿಗೆ ಕೊಟ್ಟು ತಾನೆಂತಹ ನಾಲಾಯಕ್ ಜನಪ್ರತಿನಿಧಿ ಎಂದು ತೋರಿಸಿಕೊಂಡಿದ್ದಾಳೆ. ಬಟ್ಕಳದ ಬಚ್ಚಾ ಶಾಸಕ ಸುನಿಲನಾಯ್ಕ್ ಸಿಎಂ ಇರಲಿ ಸಂಸರ ಮುಂದೆನಿಂತು ಮಾತನಾಡುವ ಧೈರ್ಯವಿಲ್ಲ. ಕುಮುಟೆಯ ಶಾಸಕ ದಿನಕರ್ ಶೆಟ್ಟಿಗೆ ಕಿಕ್‌ಬ್ಯಾಕ್‌ ಕಮಾಯಿಯೇ ನೆರೆ ಪೀಡಿತರ ಸೇವೆ ಎಂಬ ಭಾವನೆ.

ಈಗ ಎರಡನೆ ಸುತ್ತಿನ ನೆರೆ ವಿಕ್ಷಣೆಗೆ ಸಿಎಂ ಯಡ್ಡಿ ರೆಡಿಯಾಗಿದ್ದಾರೆ. ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತಿತರ ಕಡೆ ಸಿಎಂ ಸಂಚಾರ ಮಾಡುತ್ತಿದ್ದಾರೆ. ಆದರೆ ಆತನ ಟೂರ್ ಲಿಸ್ಟ್ ನಲ್ಲಿ ಉತ್ತರಕನ್ನಡ ಇಲ್ಲ.!! ಸಿಎಂ ಕಾಲರ್ ಹಿಡಿದು ಜಿಲ್ಲೆಗೆ ಕರೆತಬೇಕಿದ್ದ ಶಾಸಕರಿಗೆ ಆ ತಾಕತು ಇಲ್ಲ. ಸಿಎಂ ಕೆಂಗಣ್ಣಿಗೆ ಸಿಲುಕಿದರೆ ನಿಗಮ ಮಂಡಳಿ, ಗೂಟದ ಕಾರಿಗೆ ಸಂಚಕಾರ ಎಂಬ ಅಂಜಿಕೆ. ಸಿಎಂ ಮುಂದೆ ವಿರಾವೇಷದ ಮಾತಾಡುವ ಸಂಸದ ಅನಂತ್ಮಾಣಿಗೆ ಜನರೆಂದರೆ ಯಾವಾಗಲೂ ಅಲರ್ಜಿ. ಅತನಿಗೆ ಹಿಂದುತ್ವ ಗೊಂದಲಗಳಿಗಷ್ಟೆ ಕಾಲಾಳುಗಳು ಬೇಕು.

ಒಟ್ಟಿನಲ್ಲಿ ಉತ್ತರಕನ್ನಡದ ಸಮಸ್ಯಗಂತೂ ಉತ್ತರವಿಲ್ಲ.!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...