Homeಅಂಕಣಗಳುರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ಒಂದು ಕಾಲಕ್ಕೆ ಮೇಲ್ವರ್ಗದ ಜಮೀನುದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಮಂದಿಗೆ ಭೂಸುಧಾರಣೆ ಕಾನೂನು, ಭೂಮಿಯ ಹಕ್ಕು ನೀಡಿತು. ಆ ಮೂಲಕ ಜಿಲ್ಲೆಯ ಸಹಸ್ರಾರು ಭೂರಹಿತ ರೈತರು ಸ್ವಾಭಿಮಾನದ ಬದುಕು ಕಂಡುಕೊಂಡರು. ಅದೇ ಸಮುದಾಯದ ಮಂದಿ ಇಂದು ಬದುಕಿಗಿಂತ ಧರ್ಮವನ್ನು ಮುಖ್ಯವಾಗಿಸಿಕೊಂಡು ರೈತ ಹೋರಾಟದ ವಿರುದ್ಧ ನಿಂತಿರುವುದು ವಿಪರ್ಯಾಸ.

- Advertisement -
- Advertisement -

ಕೇಂದ್ರ ಸರಕಾರ ಜಾರಿಗೊಳಿಸಲು ಹೊರಟಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಅತ್ತ ದೆಹಲಿಯಲ್ಲಿ ಲಕ್ಷಾಂತರ ಮಂದಿ ಮೂರು ತಿಂಗಳುಗಳಿಂದ ತೀವ್ರ ಪ್ರತಿರೋಧವೊಡ್ಡುತ್ತಿರುವಾಗ, ಜಾಗತಿಕ ಮಟ್ಟದಲ್ಲಿಯೂ ಮೋದಿ ಸರಕಾರದ ವಿರುದ್ಧ ವಿವಿಧ ಕ್ಷೇತ್ರದ ಗಣ್ಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಮ್ಮ ದ.ಕ ಜಿಲ್ಲೆಯಲ್ಲಿ ಕೆಲ ಹೋರಾಟಗಾರರ ಪ್ರತಿಭಟನೆ ಮತ್ತು ಬೆರಳೆಣಿಕೆಯ ರೈತರ ತೆಳುವಾದ ಅಸಹನೆ ಬಿಟ್ಟರೆ ಬಹುತೇಕ ರೈತರು ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೆಂಬಂತಿದ್ದಾರೆ. ಒಂದು ಕಾಲಕ್ಕೆ ಹಲವು ಹೋರಾಟ ಮತ್ತು ಸುಧಾರಣೆಗಳಿಗೆ ಭೂಮಿಕೆಯೊದಗಿಸಿದ್ದ ನಮ್ಮ ಜಿಲ್ಲೆ ಇಂದು ಹೋರಾಟವನ್ನೇ ಗೇಲಿ ಮಾಡುವಲ್ಲಿಗೆ ಬಂದು ನಿಂತಿದೆ. ಹಿಂದೆ ಪ್ರಭುತ್ವದ ಜನವಿರೋಧಿ ನಿಲುವುಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ (ಕೆಕೆಎಸ್‌ವಿ) ಹೋರಾಟಗಳನ್ನು ಅಜ್ಜ ಮೊಮ್ಮಗನ ಹೋರಾಟವೆಂದು ಅಪಹಾಸ್ಯ ಮಾಡಿದ್ದಿದೆ. ಇಲ್ಲಿನ ಜನತೆಗೆ ಬೆರಳೆಣಿಕೆಯ ಜನ ಸೇರಿ ನಡೆಸುವ ಪ್ರತಿಭಟನೆಗಳು ಬರಿ ತಮಾಷೆಯಾಗಿ ಕಂಡಿತೇ ಹೊರತು ಉದ್ದೇಶ ಮನದಟ್ಟಾಗಲಿಲ್ಲವೇನೋ. ಈ ಕಾರಣದಿಂದಾಗಿ ಕೆಕೆಎಸ್‌ವಿ ಸಂಘಟನೆಯು ನಮ್ಮ ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿತು.

ಇಲ್ಲಿನ ಹೋರಾಟವನ್ನು ದಮನಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆಯಾದರೂ ಇಲ್ಲಿನ ಸೋಕಾಲ್ಡ್ ಬುದ್ಧಿವಂತರ ಪ್ರತಿರೋಧ ಮನೋಭಾವ ಎಲ್ಲಿ ಹೋಯಿತು? ನಾವೇನೇ ಮಾಡಿದರೂ ಅವರು ಮಾಡಬೇಕಾಗಿರುವುದನ್ನು ವ್ಯವಸ್ಥಿತವಾಗಿ ಮಾಡಿ ಮುಗಿಸುತ್ತಾರೆ, ಆದ್ದರಿಂದ ಈ ಹೋರಾಟವೆಲ್ಲಾ ವ್ಯರ್ಥವೆಂದೂ, ಸುಮ್ಮನೆ ಪ್ರಾಣವನ್ನೇಕೆ ಕಳೆದುಕೊಳ್ಳಬೇಕು ಎಂದು ದೂರ ನಿಂತು ಅಭಿಪ್ರಾಯಪಡುತ್ತಿದ್ದ ಇಲ್ಲಿನ ಅಲ್ಪಸಂಖ್ಯಾತರು ಬೀದಿಗಿಳಿದದ್ದೇ ಎನ್‌ಆರ್‌ಸಿ, ಸಿಎಎ ಎಂಬ ಕರಾಳ ಕಾನೂನುಗಳು ತಮ್ಮ ಕಾಲಬುಡಕ್ಕೆ ಬಂದು ನಿಂತಾಗ. ಹೋರಾಟವನ್ನು ಹತ್ತಿಕ್ಕಲು, ಎರಡು ಅಮಾಯಕ ಜೀವಗಳನ್ನು ಕ್ರೂರ ವ್ಯವಸ್ಥೆಯು ಬಲಿ ತೆಗೆದುಕೊಂಡದ್ದನ್ನು ಮರೆಯುವಂತೆಯೂ ಇಲ್ಲ. ಸಮಸ್ಯೆಗಳು ನಮ್ಮ ಮನೆ ಬಾಗಿಲಿಗೆ ಬರುವವರೆಗೂ ಕಾಯದೆ ಸರಕಾರದ ಜನವಿರೋಧಿ ನೀತಿಗಳನ್ನು ಪ್ರತಿಯೊಬ್ಬರೂ ಪ್ರತಿರೋಧಿಸಿದರೆ ಆಳುವವರೆದೆಯಲ್ಲಿ ಅದು ನಡುಕ ಉಂಟುಮಾಡಬಹುದು. ಇದುವೇ ಪ್ರಜಾಪ್ರಭುತ್ವದ ಗೆಲುವು ಎಂಬುದನ್ನು ಮರೆಯಬಾರದು.

ತುಳುನಾಡಿನ ಓರ್ವ ರೈತನ ಮಗಳಾಗಿ ಇಲ್ಲಿನ ಕೃಷಿಕರು ಹೋರಾಟ ನಿರತ ರೈತರ ಜೊತೆ ದನಿಗೂಡಿಸದಿರಲು ಕಾರಣವೇನೆಂಬುದನ್ನು ನನ್ನ ಸೀಮಿತ ದೃಷ್ಟಿಕೋನದಲ್ಲಿ ಚರ್ಚಿಸುತ್ತೇನೆ.

ದ.ಕ ಜಿಲ್ಲೆಯ ಅಡಿಕೆ ಕೃಷಿಕರನ್ನು ರೈತರು ಎನ್ನುವುದಕ್ಕಿಂತ ತೋಟಗಾರಿಕೆ ಕಸುಬಿನವರೆನ್ನುವುದು ಹೆಚ್ಚು ಸೂಕ್ತ. ಒಂದು ಕಾಲಕ್ಕೆ ಮೇಲ್ವರ್ಗದ ಜಮೀನುದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಮಂದಿಗೆ ಭೂ ಸುಧಾರಣೆ ಕಾನೂನು, ಭೂಮಿಯ ಹಕ್ಕು ನೀಡಿತು. ಆ ಮೂಲಕ ಜಿಲ್ಲೆಯ ಸಹಸ್ರಾರು ಭೂರಹಿತ ರೈತರು ಸ್ವಾಭಿಮಾನದ ಬದುಕು ಕಂಡುಕೊಂಡರು. ಅದೇ ಸಮುದಾಯದ ಮಂದಿ ಇಂದು ಬದುಕಿಗಿಂತ ಧರ್ಮವನ್ನು ಮುಖ್ಯವಾಗಿಸಿಕೊಂಡು ರೈತ ಹೋರಾಟದ ವಿರುದ್ಧ ನಿಂತಿರುವುದು ವಿಪರ್ಯಾಸ.

ಅಂದು ಭೂಮಿಯ ಹಕ್ಕು ಪಡಕೊಂಡವರ ಭೂಮಿ ತಲೆಮಾರುಗಳು ದಾಟಿ ಹೋಗುವಾಗ ಮತ್ತಷ್ಟು ತುಂಡುಗಳಾಗಿ ಹರಿದು ಹಂಚಿ ಹೋಯಿತು. ತುಂಡು ಭೂಮಿಯಲ್ಲಿ ಆಹಾರ ಬೆಳೆ ಲಾಭದಾಯಕವಲ್ಲ ಎನ್ನುವ ವಾಸ್ತವ ಅವರನ್ನು ಆಹಾರದ ಕೃಷಿಯಿಂದ ವಿಮುಖಗೊಳಿಸಿತು. ಸಹಜವಾಗಿಯೇ ಅವರು ಅದರಲ್ಲಿ ಆಹಾರದ ಬೆಳೆಗಿಂತ ಕಡಿಮೆ ಶ್ರಮ ಬಯಸುವ ವಾಣಿಜ್ಯ ಬೆಳೆಗಳಾದ ಅಡಿಕೆ, ತೆಂಗುಗಳನ್ನು ಇಟ್ಟರು.

1998-2000ದ ಸುಮಾರಿಗೆ 40-50 ರೂಪಾಯಿಯ ಮಧ್ಯೆ ಅಡ್ಡಾಡುತ್ತಿದ್ದ ಅಡಿಕೆಯ ಬೆಲೆ ಏಕಾಏಕಿ ಏರುತ್ತಾ ರೂ. 280ರವರೆಗೂ ತಲುಪಿತು. ಆದರೆ ಈ ಬದಲಾವಣೆ ಹೆಚ್ಚು ಕಾಲ ಉಳಿಯಲಿಲ್ಲ. 280ರಿಂದ ಮತ್ತೆ ಕುಸಿಯುತ್ತಾ ಬಂದ ಬೆಲೆ ಮತ್ತೆ ನಲ್ವತ್ತು ರೂಪಾಯಿಯವರೆಗೂ ಇಳಿಯಿತು. ಬೆಲೆ ಕುಸಿದರೂ ಇಂದಲ್ಲ ನಾಳೆ ಮತ್ತೆ ಅಡಿಕೆಗೆ ಬೆಲೆ ಬರಬಹುದೆಂದು ಆಸೆಯಿಂದ ರೈತರು ಭತ್ತ ಬೆಳೆಯುತ್ತಿದ್ದ ಗದ್ದೆಗಳಲ್ಲೆಲ್ಲಾ ಅಡಿಕೆ ಇಟ್ಟರು. ಅಲ್ಲಿಗೆ ದ.ಕ ಜಿಲ್ಲೆಯ ಭತ್ತದ ಬೆಳೆ ನಿರ್ನಾಮದ ಹಂತ ತಲುಪಿತು. ಆ ಬಳಿಕ ಬಂದ ವಿಶೇಷ ಆರ್ಥಿಕ ವಲಯಕ್ಕೆ ಪ್ರಭುತ್ವವು ಇಲ್ಲಿನ ಫಲವತ್ತಾದ ಕೃಷಿ ಭೂಮಿಗಳನ್ನು ಧಾರೆಯೆರೆದು ಕೊಟ್ಟಿತು. ಆ ಮೂಲಕ ಅಳಿದುಳಿದ ಆಹಾರ ಕೃಷಿ ಸಂಪೂರ್ಣವಾಗಿ ಪತನದಂಚಿಗೆ ತಳ್ಳಲ್ಪಟ್ಟಿತು.

ಒಂದು ಕಾಲಕ್ಕೆ ಜಿಲ್ಲೆಯ ನಗರ ಪ್ರದೇಶಗಳಲ್ಲೂ ಧಾರಾಳವಾಗಿ ಭತ್ತದ ಗದ್ದೆಗಳಿದ್ದವು. ಅಲ್ಲಿನ ಕೃಷಿಕರು ಅದರ ಜಾಗದಲ್ಲಿ ಇಂದು ಕಾಂಕ್ರೀಟ್ ಕಾಡು ಕಟ್ಟಿ ಕೂತಲ್ಲೇ ದುಡ್ಡು ಎಣಿಸುತ್ತಿದ್ದಾರೆ.

ಇನ್ನು ಜಿಲ್ಲೆಯ ತರಕಾರಿ ಬೆಳೆಗಾರರನ್ನು ತೆಗೆದುಕೊಂಡರೆ ಮನೆಯಂಗಳದ ಹತ್ತು ಸೆಂಟ್ಸ್ ಜಮೀನಿನಲ್ಲಿ ತರಕಾರಿ ಬೆಳೆಯುವ ಜನ ದಿನ- ದಿನ ಕೊಯ್ಲು ಮಾಡಿದ ತರಕಾರಿಗಳನ್ನು ಅಂದಂದು ಮಾರಿ ದಿನ ದೂಡುತ್ತಾರೆಯೇ ವಿನಾ ಮಂಡಿಗೆ ಹಾಕುವುದಿಲ್ಲ. ಈ ಜನಕ್ಕೆಲ್ಲಾ ಪ್ರಸ್ತುತ ರೈತ ಹೋರಾಟ ಪಂಜಾಬ್-ಹರಿಯಾಣದ ರೈತರ ಸಮಸ್ಯೆಯಷ್ಟೇ. ಪಂಜಾಬ್-ಹರಿಯಾಣದ ರೈತರು ಬೀದಿಗೆ ಬಿದ್ದರೆ ನಾವಿಲ್ಲಿ ಅಕ್ಕಿಗೆ ಕಿಲೋಗೆ ಐನೂರು ರೂಪಾಯಿ ಕೊಡುವ ಕಾಲ ಬಂದೀತೆಂಬ ಪ್ರಜ್ಞೆಯೂ ಇವರಿಗಿಲ್ಲ. ಇಲ್ಲಿನ ಜನಸಾಮಾನ್ಯರು ಹೆಚ್ಚು ನಕಲಿ ಸುದ್ದಿಗಳನ್ನು ಉಣಬಡಿಸುವ ಉದಯವಾಣಿ, ಹೊಸ ದಿಗಂತ, ವಿಜಯವಾಣಿ ಪತ್ರಿಕೆಗಳನ್ನು ಓದುವಾಗ, ಸದಾ ಸುಳ್ಳು ಬೊಗಳುತ್ತಲೇ ಜನರ ದಿಕ್ಕು ತಪ್ಪಿಸುವ ಕನ್ನಡದ ನ್ಯೂಸ್ ಚಾನೆಲ್‌ಗಳನ್ನು ವೀಕ್ಷಿಸುವಾಗ ಅಂತಹ ಪ್ರಜ್ಞೆ ಬೆಳೆಯುವುದಾದರೂ ಹೇಗೆ?

ಇಲ್ಲಿನ ಜನರ ಮನಸ್ಥಿತಿ ಹೇಗಿದೆ ಎಂಬುದಕ್ಕೆ ಒಂದು ಉದಾಹರಣೆಯನ್ನು ಕೊಡುತ್ತೇನೆ.

ಮೊನ್ನೆ ತುಳು ರಂಗಭೂಮಿ ಕಲಾವಿದ ಶೋಭರಾಜ್ ಪಾವೂರು ಇಂಧನ ಬೆಲೆಯೇರಿಕೆಯನ್ನು ಟೀಕಿಸಿ ಎಫ್‌ಬಿಯಲ್ಲಿ ಬರೆದಾಗ ಇಲ್ಲಿನ ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಮೇಲೆ ದಾಳಿ ನಡೆಸಿದರು. ಆ ಮಂದಿಗೆ ತಮ್ಮ ಬದುಕಿಗಿಂತ, ತಮ್ಮ ಧರ್ಮವೆಂದೇ ನಂಬಿರುವ ಬಿಜೆಪಿ ಪಕ್ಷದ ಹಿತಾಸಕ್ತಿಯೇ ಹೆಚ್ಚಾಯಿತು.

ಉದ್ಯೋಗ ಸೃಷ್ಟಿಯ ನೆಪವೊಡ್ಡಿ ರೈತರಿಂದ ಕೃಷಿ ಭೂಮಿಯನ್ನು ಕಬಳಿಸಿಕೊಂಡ ಎಮ್‌ಆರ್‌ಪಿಎಲ್ (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಒಂದೆರಡು ವರ್ಷಗಳ ಹಿಂದೆ ಖಾಲಿ ಹುದ್ದೆಗಳನ್ನು ಭರ್ತಿಮಾಡುವಾಗ ಜಿಲ್ಲೆಯ ಒಳಗಿನವರಿಗೆ ಅವಕಾಶವನ್ನು ನೀಡಲಿಲ್ಲ. ನಮ್ಮದೇ ನೆಲ, ನಮ್ಮದೇ ಜಲ. ಆದರೆ ಇದರ ವಿರುದ್ಧ ಯಾವೊಬ್ಬನೂ ತಗಾದೆ ಎತ್ತಲಿಲ್ಲ. ಧರ್ಮ ರಕ್ಷಣೆಯ ದೊಡ್ಡ ಜವಾಬ್ದಾರಿ ಹೊತ್ತ ಬುದ್ಧಿವಂತರಿಗೆ ಇವೆಲ್ಲಾ ಅರ್ಥವಾಗುವುದೂ ಇಲ್ಲ. ಹೀಗಿರುವಾಗ ಅವರು ರೈತರ ಪರವಾಗಿ ನಿಲ್ಲಲು ಹೇಗೆ ಸಾಧ್ಯ?

2014ರ ಸಾರ್ವತ್ರಿಕ ಚುನಾವಣೆಯ ಪ್ರಚಾರಕ್ಕಾಗಿ ಮೋದಿ ಮಂಗಳೂರಿಗೆ ಬಂದಾಗ ನನ್ನ ಪುಟ್ಟ ಹಳ್ಳಿಯ ಅಡಿಕೆ ಕೃಷಿಕರು ಆಡಿಕೊಳ್ಳುತ್ತಿದ್ದ ಮಾತು ನನಗೆ ಸ್ಪಷ್ಟವಾಗಿ ನೆನಪಿದೆ. “ಯಾನ್ ನಿಕ್ಲೆನ ಕೈ ಬುಡ್ಪುಜಿ, ಬಜ್ಜಾಯಿಗ್ ಎಡ್ಡೆ ಕ್ರಯ ಕೊಪೆಂದ್ ಮೋದಿ ಪಂತೇರ್ (ನಾನು ನಿಮ್ಮ ಕೈ ಬಿಡುವುದಿಲ್ಲ, ಅಡಿಕೆಗೆ ಒಳ್ಳೆಯ ಬೆಲೆ ಕೊಡುತ್ತೇನೆಂದಿದ್ದಾರೆ). ಆ ಗುಂಗಿನಿಂದ ಹೊರಬರದ ನನ್ನ ಜಿಲ್ಲೆಯ ಜನತೆಗೆ ಇತ್ತ ಮೋದಿ ತಮ್ಮ ಅನ್ನದ ಬಟ್ಟಲನ್ನು ಕಿತ್ತು ಅದಾನಿಯ ಕೈಗಿಡುತ್ತಿರುವಾಗ ಅನ್ನಕ್ಕೆ ಪರ್ಯಾಯವಾಗಿ ಅಡಿಕೆ ತಿಂದು ಬದುಕಲಾಗದು ಎಂಬ ವಾಸ್ತವ ಅರ್ಥವಾಗಲೇ ಇಲ್ಲ.


ಇದನ್ನೂ ಓದಿ: ಹೋರಾಟನಿರತ ಕಿಸಾನ್‌ಗೆ ಆದ ಅವಮಾನ ಗಡಿಯಲ್ಲಿರುವ ಜವಾನ್‌ರಿಗೆ ನೋವು ತರಿಸುತ್ತದೆ: ಪ್ರತಿ ಸೈನಿಕನೂ ಸಮವಸ್ತ್ರದಲ್ಲಿರುವ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...