Homeಅಂಕಣಗಳುರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ಒಂದು ಕಾಲಕ್ಕೆ ಮೇಲ್ವರ್ಗದ ಜಮೀನುದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಮಂದಿಗೆ ಭೂಸುಧಾರಣೆ ಕಾನೂನು, ಭೂಮಿಯ ಹಕ್ಕು ನೀಡಿತು. ಆ ಮೂಲಕ ಜಿಲ್ಲೆಯ ಸಹಸ್ರಾರು ಭೂರಹಿತ ರೈತರು ಸ್ವಾಭಿಮಾನದ ಬದುಕು ಕಂಡುಕೊಂಡರು. ಅದೇ ಸಮುದಾಯದ ಮಂದಿ ಇಂದು ಬದುಕಿಗಿಂತ ಧರ್ಮವನ್ನು ಮುಖ್ಯವಾಗಿಸಿಕೊಂಡು ರೈತ ಹೋರಾಟದ ವಿರುದ್ಧ ನಿಂತಿರುವುದು ವಿಪರ್ಯಾಸ.

- Advertisement -
- Advertisement -

ಕೇಂದ್ರ ಸರಕಾರ ಜಾರಿಗೊಳಿಸಲು ಹೊರಟಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಅತ್ತ ದೆಹಲಿಯಲ್ಲಿ ಲಕ್ಷಾಂತರ ಮಂದಿ ಮೂರು ತಿಂಗಳುಗಳಿಂದ ತೀವ್ರ ಪ್ರತಿರೋಧವೊಡ್ಡುತ್ತಿರುವಾಗ, ಜಾಗತಿಕ ಮಟ್ಟದಲ್ಲಿಯೂ ಮೋದಿ ಸರಕಾರದ ವಿರುದ್ಧ ವಿವಿಧ ಕ್ಷೇತ್ರದ ಗಣ್ಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಮ್ಮ ದ.ಕ ಜಿಲ್ಲೆಯಲ್ಲಿ ಕೆಲ ಹೋರಾಟಗಾರರ ಪ್ರತಿಭಟನೆ ಮತ್ತು ಬೆರಳೆಣಿಕೆಯ ರೈತರ ತೆಳುವಾದ ಅಸಹನೆ ಬಿಟ್ಟರೆ ಬಹುತೇಕ ರೈತರು ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೆಂಬಂತಿದ್ದಾರೆ. ಒಂದು ಕಾಲಕ್ಕೆ ಹಲವು ಹೋರಾಟ ಮತ್ತು ಸುಧಾರಣೆಗಳಿಗೆ ಭೂಮಿಕೆಯೊದಗಿಸಿದ್ದ ನಮ್ಮ ಜಿಲ್ಲೆ ಇಂದು ಹೋರಾಟವನ್ನೇ ಗೇಲಿ ಮಾಡುವಲ್ಲಿಗೆ ಬಂದು ನಿಂತಿದೆ. ಹಿಂದೆ ಪ್ರಭುತ್ವದ ಜನವಿರೋಧಿ ನಿಲುವುಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ (ಕೆಕೆಎಸ್‌ವಿ) ಹೋರಾಟಗಳನ್ನು ಅಜ್ಜ ಮೊಮ್ಮಗನ ಹೋರಾಟವೆಂದು ಅಪಹಾಸ್ಯ ಮಾಡಿದ್ದಿದೆ. ಇಲ್ಲಿನ ಜನತೆಗೆ ಬೆರಳೆಣಿಕೆಯ ಜನ ಸೇರಿ ನಡೆಸುವ ಪ್ರತಿಭಟನೆಗಳು ಬರಿ ತಮಾಷೆಯಾಗಿ ಕಂಡಿತೇ ಹೊರತು ಉದ್ದೇಶ ಮನದಟ್ಟಾಗಲಿಲ್ಲವೇನೋ. ಈ ಕಾರಣದಿಂದಾಗಿ ಕೆಕೆಎಸ್‌ವಿ ಸಂಘಟನೆಯು ನಮ್ಮ ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿತು.

ಇಲ್ಲಿನ ಹೋರಾಟವನ್ನು ದಮನಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆಯಾದರೂ ಇಲ್ಲಿನ ಸೋಕಾಲ್ಡ್ ಬುದ್ಧಿವಂತರ ಪ್ರತಿರೋಧ ಮನೋಭಾವ ಎಲ್ಲಿ ಹೋಯಿತು? ನಾವೇನೇ ಮಾಡಿದರೂ ಅವರು ಮಾಡಬೇಕಾಗಿರುವುದನ್ನು ವ್ಯವಸ್ಥಿತವಾಗಿ ಮಾಡಿ ಮುಗಿಸುತ್ತಾರೆ, ಆದ್ದರಿಂದ ಈ ಹೋರಾಟವೆಲ್ಲಾ ವ್ಯರ್ಥವೆಂದೂ, ಸುಮ್ಮನೆ ಪ್ರಾಣವನ್ನೇಕೆ ಕಳೆದುಕೊಳ್ಳಬೇಕು ಎಂದು ದೂರ ನಿಂತು ಅಭಿಪ್ರಾಯಪಡುತ್ತಿದ್ದ ಇಲ್ಲಿನ ಅಲ್ಪಸಂಖ್ಯಾತರು ಬೀದಿಗಿಳಿದದ್ದೇ ಎನ್‌ಆರ್‌ಸಿ, ಸಿಎಎ ಎಂಬ ಕರಾಳ ಕಾನೂನುಗಳು ತಮ್ಮ ಕಾಲಬುಡಕ್ಕೆ ಬಂದು ನಿಂತಾಗ. ಹೋರಾಟವನ್ನು ಹತ್ತಿಕ್ಕಲು, ಎರಡು ಅಮಾಯಕ ಜೀವಗಳನ್ನು ಕ್ರೂರ ವ್ಯವಸ್ಥೆಯು ಬಲಿ ತೆಗೆದುಕೊಂಡದ್ದನ್ನು ಮರೆಯುವಂತೆಯೂ ಇಲ್ಲ. ಸಮಸ್ಯೆಗಳು ನಮ್ಮ ಮನೆ ಬಾಗಿಲಿಗೆ ಬರುವವರೆಗೂ ಕಾಯದೆ ಸರಕಾರದ ಜನವಿರೋಧಿ ನೀತಿಗಳನ್ನು ಪ್ರತಿಯೊಬ್ಬರೂ ಪ್ರತಿರೋಧಿಸಿದರೆ ಆಳುವವರೆದೆಯಲ್ಲಿ ಅದು ನಡುಕ ಉಂಟುಮಾಡಬಹುದು. ಇದುವೇ ಪ್ರಜಾಪ್ರಭುತ್ವದ ಗೆಲುವು ಎಂಬುದನ್ನು ಮರೆಯಬಾರದು.

ತುಳುನಾಡಿನ ಓರ್ವ ರೈತನ ಮಗಳಾಗಿ ಇಲ್ಲಿನ ಕೃಷಿಕರು ಹೋರಾಟ ನಿರತ ರೈತರ ಜೊತೆ ದನಿಗೂಡಿಸದಿರಲು ಕಾರಣವೇನೆಂಬುದನ್ನು ನನ್ನ ಸೀಮಿತ ದೃಷ್ಟಿಕೋನದಲ್ಲಿ ಚರ್ಚಿಸುತ್ತೇನೆ.

ದ.ಕ ಜಿಲ್ಲೆಯ ಅಡಿಕೆ ಕೃಷಿಕರನ್ನು ರೈತರು ಎನ್ನುವುದಕ್ಕಿಂತ ತೋಟಗಾರಿಕೆ ಕಸುಬಿನವರೆನ್ನುವುದು ಹೆಚ್ಚು ಸೂಕ್ತ. ಒಂದು ಕಾಲಕ್ಕೆ ಮೇಲ್ವರ್ಗದ ಜಮೀನುದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಮಂದಿಗೆ ಭೂ ಸುಧಾರಣೆ ಕಾನೂನು, ಭೂಮಿಯ ಹಕ್ಕು ನೀಡಿತು. ಆ ಮೂಲಕ ಜಿಲ್ಲೆಯ ಸಹಸ್ರಾರು ಭೂರಹಿತ ರೈತರು ಸ್ವಾಭಿಮಾನದ ಬದುಕು ಕಂಡುಕೊಂಡರು. ಅದೇ ಸಮುದಾಯದ ಮಂದಿ ಇಂದು ಬದುಕಿಗಿಂತ ಧರ್ಮವನ್ನು ಮುಖ್ಯವಾಗಿಸಿಕೊಂಡು ರೈತ ಹೋರಾಟದ ವಿರುದ್ಧ ನಿಂತಿರುವುದು ವಿಪರ್ಯಾಸ.

ಅಂದು ಭೂಮಿಯ ಹಕ್ಕು ಪಡಕೊಂಡವರ ಭೂಮಿ ತಲೆಮಾರುಗಳು ದಾಟಿ ಹೋಗುವಾಗ ಮತ್ತಷ್ಟು ತುಂಡುಗಳಾಗಿ ಹರಿದು ಹಂಚಿ ಹೋಯಿತು. ತುಂಡು ಭೂಮಿಯಲ್ಲಿ ಆಹಾರ ಬೆಳೆ ಲಾಭದಾಯಕವಲ್ಲ ಎನ್ನುವ ವಾಸ್ತವ ಅವರನ್ನು ಆಹಾರದ ಕೃಷಿಯಿಂದ ವಿಮುಖಗೊಳಿಸಿತು. ಸಹಜವಾಗಿಯೇ ಅವರು ಅದರಲ್ಲಿ ಆಹಾರದ ಬೆಳೆಗಿಂತ ಕಡಿಮೆ ಶ್ರಮ ಬಯಸುವ ವಾಣಿಜ್ಯ ಬೆಳೆಗಳಾದ ಅಡಿಕೆ, ತೆಂಗುಗಳನ್ನು ಇಟ್ಟರು.

1998-2000ದ ಸುಮಾರಿಗೆ 40-50 ರೂಪಾಯಿಯ ಮಧ್ಯೆ ಅಡ್ಡಾಡುತ್ತಿದ್ದ ಅಡಿಕೆಯ ಬೆಲೆ ಏಕಾಏಕಿ ಏರುತ್ತಾ ರೂ. 280ರವರೆಗೂ ತಲುಪಿತು. ಆದರೆ ಈ ಬದಲಾವಣೆ ಹೆಚ್ಚು ಕಾಲ ಉಳಿಯಲಿಲ್ಲ. 280ರಿಂದ ಮತ್ತೆ ಕುಸಿಯುತ್ತಾ ಬಂದ ಬೆಲೆ ಮತ್ತೆ ನಲ್ವತ್ತು ರೂಪಾಯಿಯವರೆಗೂ ಇಳಿಯಿತು. ಬೆಲೆ ಕುಸಿದರೂ ಇಂದಲ್ಲ ನಾಳೆ ಮತ್ತೆ ಅಡಿಕೆಗೆ ಬೆಲೆ ಬರಬಹುದೆಂದು ಆಸೆಯಿಂದ ರೈತರು ಭತ್ತ ಬೆಳೆಯುತ್ತಿದ್ದ ಗದ್ದೆಗಳಲ್ಲೆಲ್ಲಾ ಅಡಿಕೆ ಇಟ್ಟರು. ಅಲ್ಲಿಗೆ ದ.ಕ ಜಿಲ್ಲೆಯ ಭತ್ತದ ಬೆಳೆ ನಿರ್ನಾಮದ ಹಂತ ತಲುಪಿತು. ಆ ಬಳಿಕ ಬಂದ ವಿಶೇಷ ಆರ್ಥಿಕ ವಲಯಕ್ಕೆ ಪ್ರಭುತ್ವವು ಇಲ್ಲಿನ ಫಲವತ್ತಾದ ಕೃಷಿ ಭೂಮಿಗಳನ್ನು ಧಾರೆಯೆರೆದು ಕೊಟ್ಟಿತು. ಆ ಮೂಲಕ ಅಳಿದುಳಿದ ಆಹಾರ ಕೃಷಿ ಸಂಪೂರ್ಣವಾಗಿ ಪತನದಂಚಿಗೆ ತಳ್ಳಲ್ಪಟ್ಟಿತು.

ಒಂದು ಕಾಲಕ್ಕೆ ಜಿಲ್ಲೆಯ ನಗರ ಪ್ರದೇಶಗಳಲ್ಲೂ ಧಾರಾಳವಾಗಿ ಭತ್ತದ ಗದ್ದೆಗಳಿದ್ದವು. ಅಲ್ಲಿನ ಕೃಷಿಕರು ಅದರ ಜಾಗದಲ್ಲಿ ಇಂದು ಕಾಂಕ್ರೀಟ್ ಕಾಡು ಕಟ್ಟಿ ಕೂತಲ್ಲೇ ದುಡ್ಡು ಎಣಿಸುತ್ತಿದ್ದಾರೆ.

ಇನ್ನು ಜಿಲ್ಲೆಯ ತರಕಾರಿ ಬೆಳೆಗಾರರನ್ನು ತೆಗೆದುಕೊಂಡರೆ ಮನೆಯಂಗಳದ ಹತ್ತು ಸೆಂಟ್ಸ್ ಜಮೀನಿನಲ್ಲಿ ತರಕಾರಿ ಬೆಳೆಯುವ ಜನ ದಿನ- ದಿನ ಕೊಯ್ಲು ಮಾಡಿದ ತರಕಾರಿಗಳನ್ನು ಅಂದಂದು ಮಾರಿ ದಿನ ದೂಡುತ್ತಾರೆಯೇ ವಿನಾ ಮಂಡಿಗೆ ಹಾಕುವುದಿಲ್ಲ. ಈ ಜನಕ್ಕೆಲ್ಲಾ ಪ್ರಸ್ತುತ ರೈತ ಹೋರಾಟ ಪಂಜಾಬ್-ಹರಿಯಾಣದ ರೈತರ ಸಮಸ್ಯೆಯಷ್ಟೇ. ಪಂಜಾಬ್-ಹರಿಯಾಣದ ರೈತರು ಬೀದಿಗೆ ಬಿದ್ದರೆ ನಾವಿಲ್ಲಿ ಅಕ್ಕಿಗೆ ಕಿಲೋಗೆ ಐನೂರು ರೂಪಾಯಿ ಕೊಡುವ ಕಾಲ ಬಂದೀತೆಂಬ ಪ್ರಜ್ಞೆಯೂ ಇವರಿಗಿಲ್ಲ. ಇಲ್ಲಿನ ಜನಸಾಮಾನ್ಯರು ಹೆಚ್ಚು ನಕಲಿ ಸುದ್ದಿಗಳನ್ನು ಉಣಬಡಿಸುವ ಉದಯವಾಣಿ, ಹೊಸ ದಿಗಂತ, ವಿಜಯವಾಣಿ ಪತ್ರಿಕೆಗಳನ್ನು ಓದುವಾಗ, ಸದಾ ಸುಳ್ಳು ಬೊಗಳುತ್ತಲೇ ಜನರ ದಿಕ್ಕು ತಪ್ಪಿಸುವ ಕನ್ನಡದ ನ್ಯೂಸ್ ಚಾನೆಲ್‌ಗಳನ್ನು ವೀಕ್ಷಿಸುವಾಗ ಅಂತಹ ಪ್ರಜ್ಞೆ ಬೆಳೆಯುವುದಾದರೂ ಹೇಗೆ?

ಇಲ್ಲಿನ ಜನರ ಮನಸ್ಥಿತಿ ಹೇಗಿದೆ ಎಂಬುದಕ್ಕೆ ಒಂದು ಉದಾಹರಣೆಯನ್ನು ಕೊಡುತ್ತೇನೆ.

ಮೊನ್ನೆ ತುಳು ರಂಗಭೂಮಿ ಕಲಾವಿದ ಶೋಭರಾಜ್ ಪಾವೂರು ಇಂಧನ ಬೆಲೆಯೇರಿಕೆಯನ್ನು ಟೀಕಿಸಿ ಎಫ್‌ಬಿಯಲ್ಲಿ ಬರೆದಾಗ ಇಲ್ಲಿನ ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಮೇಲೆ ದಾಳಿ ನಡೆಸಿದರು. ಆ ಮಂದಿಗೆ ತಮ್ಮ ಬದುಕಿಗಿಂತ, ತಮ್ಮ ಧರ್ಮವೆಂದೇ ನಂಬಿರುವ ಬಿಜೆಪಿ ಪಕ್ಷದ ಹಿತಾಸಕ್ತಿಯೇ ಹೆಚ್ಚಾಯಿತು.

ಉದ್ಯೋಗ ಸೃಷ್ಟಿಯ ನೆಪವೊಡ್ಡಿ ರೈತರಿಂದ ಕೃಷಿ ಭೂಮಿಯನ್ನು ಕಬಳಿಸಿಕೊಂಡ ಎಮ್‌ಆರ್‌ಪಿಎಲ್ (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಒಂದೆರಡು ವರ್ಷಗಳ ಹಿಂದೆ ಖಾಲಿ ಹುದ್ದೆಗಳನ್ನು ಭರ್ತಿಮಾಡುವಾಗ ಜಿಲ್ಲೆಯ ಒಳಗಿನವರಿಗೆ ಅವಕಾಶವನ್ನು ನೀಡಲಿಲ್ಲ. ನಮ್ಮದೇ ನೆಲ, ನಮ್ಮದೇ ಜಲ. ಆದರೆ ಇದರ ವಿರುದ್ಧ ಯಾವೊಬ್ಬನೂ ತಗಾದೆ ಎತ್ತಲಿಲ್ಲ. ಧರ್ಮ ರಕ್ಷಣೆಯ ದೊಡ್ಡ ಜವಾಬ್ದಾರಿ ಹೊತ್ತ ಬುದ್ಧಿವಂತರಿಗೆ ಇವೆಲ್ಲಾ ಅರ್ಥವಾಗುವುದೂ ಇಲ್ಲ. ಹೀಗಿರುವಾಗ ಅವರು ರೈತರ ಪರವಾಗಿ ನಿಲ್ಲಲು ಹೇಗೆ ಸಾಧ್ಯ?

2014ರ ಸಾರ್ವತ್ರಿಕ ಚುನಾವಣೆಯ ಪ್ರಚಾರಕ್ಕಾಗಿ ಮೋದಿ ಮಂಗಳೂರಿಗೆ ಬಂದಾಗ ನನ್ನ ಪುಟ್ಟ ಹಳ್ಳಿಯ ಅಡಿಕೆ ಕೃಷಿಕರು ಆಡಿಕೊಳ್ಳುತ್ತಿದ್ದ ಮಾತು ನನಗೆ ಸ್ಪಷ್ಟವಾಗಿ ನೆನಪಿದೆ. “ಯಾನ್ ನಿಕ್ಲೆನ ಕೈ ಬುಡ್ಪುಜಿ, ಬಜ್ಜಾಯಿಗ್ ಎಡ್ಡೆ ಕ್ರಯ ಕೊಪೆಂದ್ ಮೋದಿ ಪಂತೇರ್ (ನಾನು ನಿಮ್ಮ ಕೈ ಬಿಡುವುದಿಲ್ಲ, ಅಡಿಕೆಗೆ ಒಳ್ಳೆಯ ಬೆಲೆ ಕೊಡುತ್ತೇನೆಂದಿದ್ದಾರೆ). ಆ ಗುಂಗಿನಿಂದ ಹೊರಬರದ ನನ್ನ ಜಿಲ್ಲೆಯ ಜನತೆಗೆ ಇತ್ತ ಮೋದಿ ತಮ್ಮ ಅನ್ನದ ಬಟ್ಟಲನ್ನು ಕಿತ್ತು ಅದಾನಿಯ ಕೈಗಿಡುತ್ತಿರುವಾಗ ಅನ್ನಕ್ಕೆ ಪರ್ಯಾಯವಾಗಿ ಅಡಿಕೆ ತಿಂದು ಬದುಕಲಾಗದು ಎಂಬ ವಾಸ್ತವ ಅರ್ಥವಾಗಲೇ ಇಲ್ಲ.


ಇದನ್ನೂ ಓದಿ: ಹೋರಾಟನಿರತ ಕಿಸಾನ್‌ಗೆ ಆದ ಅವಮಾನ ಗಡಿಯಲ್ಲಿರುವ ಜವಾನ್‌ರಿಗೆ ನೋವು ತರಿಸುತ್ತದೆ: ಪ್ರತಿ ಸೈನಿಕನೂ ಸಮವಸ್ತ್ರದಲ್ಲಿರುವ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...