Homeಅಂಕಣಗಳುರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ರೈತ ಹೋರಾಟ- ದ.ಕ ಜಿಲ್ಲೆಯ ರೈತರು ಸೊಲ್ಲೆತ್ತಲಿಲ್ಲವೇಕೆ?: ಮಿಸ್ರಿಯಾ ಪಜೀರ್

ಒಂದು ಕಾಲಕ್ಕೆ ಮೇಲ್ವರ್ಗದ ಜಮೀನುದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಮಂದಿಗೆ ಭೂಸುಧಾರಣೆ ಕಾನೂನು, ಭೂಮಿಯ ಹಕ್ಕು ನೀಡಿತು. ಆ ಮೂಲಕ ಜಿಲ್ಲೆಯ ಸಹಸ್ರಾರು ಭೂರಹಿತ ರೈತರು ಸ್ವಾಭಿಮಾನದ ಬದುಕು ಕಂಡುಕೊಂಡರು. ಅದೇ ಸಮುದಾಯದ ಮಂದಿ ಇಂದು ಬದುಕಿಗಿಂತ ಧರ್ಮವನ್ನು ಮುಖ್ಯವಾಗಿಸಿಕೊಂಡು ರೈತ ಹೋರಾಟದ ವಿರುದ್ಧ ನಿಂತಿರುವುದು ವಿಪರ್ಯಾಸ.

- Advertisement -
- Advertisement -

ಕೇಂದ್ರ ಸರಕಾರ ಜಾರಿಗೊಳಿಸಲು ಹೊರಟಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಅತ್ತ ದೆಹಲಿಯಲ್ಲಿ ಲಕ್ಷಾಂತರ ಮಂದಿ ಮೂರು ತಿಂಗಳುಗಳಿಂದ ತೀವ್ರ ಪ್ರತಿರೋಧವೊಡ್ಡುತ್ತಿರುವಾಗ, ಜಾಗತಿಕ ಮಟ್ಟದಲ್ಲಿಯೂ ಮೋದಿ ಸರಕಾರದ ವಿರುದ್ಧ ವಿವಿಧ ಕ್ಷೇತ್ರದ ಗಣ್ಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಮ್ಮ ದ.ಕ ಜಿಲ್ಲೆಯಲ್ಲಿ ಕೆಲ ಹೋರಾಟಗಾರರ ಪ್ರತಿಭಟನೆ ಮತ್ತು ಬೆರಳೆಣಿಕೆಯ ರೈತರ ತೆಳುವಾದ ಅಸಹನೆ ಬಿಟ್ಟರೆ ಬಹುತೇಕ ರೈತರು ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲವೆಂಬಂತಿದ್ದಾರೆ. ಒಂದು ಕಾಲಕ್ಕೆ ಹಲವು ಹೋರಾಟ ಮತ್ತು ಸುಧಾರಣೆಗಳಿಗೆ ಭೂಮಿಕೆಯೊದಗಿಸಿದ್ದ ನಮ್ಮ ಜಿಲ್ಲೆ ಇಂದು ಹೋರಾಟವನ್ನೇ ಗೇಲಿ ಮಾಡುವಲ್ಲಿಗೆ ಬಂದು ನಿಂತಿದೆ. ಹಿಂದೆ ಪ್ರಭುತ್ವದ ಜನವಿರೋಧಿ ನಿಲುವುಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ (ಕೆಕೆಎಸ್‌ವಿ) ಹೋರಾಟಗಳನ್ನು ಅಜ್ಜ ಮೊಮ್ಮಗನ ಹೋರಾಟವೆಂದು ಅಪಹಾಸ್ಯ ಮಾಡಿದ್ದಿದೆ. ಇಲ್ಲಿನ ಜನತೆಗೆ ಬೆರಳೆಣಿಕೆಯ ಜನ ಸೇರಿ ನಡೆಸುವ ಪ್ರತಿಭಟನೆಗಳು ಬರಿ ತಮಾಷೆಯಾಗಿ ಕಂಡಿತೇ ಹೊರತು ಉದ್ದೇಶ ಮನದಟ್ಟಾಗಲಿಲ್ಲವೇನೋ. ಈ ಕಾರಣದಿಂದಾಗಿ ಕೆಕೆಎಸ್‌ವಿ ಸಂಘಟನೆಯು ನಮ್ಮ ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿತು.

ಇಲ್ಲಿನ ಹೋರಾಟವನ್ನು ದಮನಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆಯಾದರೂ ಇಲ್ಲಿನ ಸೋಕಾಲ್ಡ್ ಬುದ್ಧಿವಂತರ ಪ್ರತಿರೋಧ ಮನೋಭಾವ ಎಲ್ಲಿ ಹೋಯಿತು? ನಾವೇನೇ ಮಾಡಿದರೂ ಅವರು ಮಾಡಬೇಕಾಗಿರುವುದನ್ನು ವ್ಯವಸ್ಥಿತವಾಗಿ ಮಾಡಿ ಮುಗಿಸುತ್ತಾರೆ, ಆದ್ದರಿಂದ ಈ ಹೋರಾಟವೆಲ್ಲಾ ವ್ಯರ್ಥವೆಂದೂ, ಸುಮ್ಮನೆ ಪ್ರಾಣವನ್ನೇಕೆ ಕಳೆದುಕೊಳ್ಳಬೇಕು ಎಂದು ದೂರ ನಿಂತು ಅಭಿಪ್ರಾಯಪಡುತ್ತಿದ್ದ ಇಲ್ಲಿನ ಅಲ್ಪಸಂಖ್ಯಾತರು ಬೀದಿಗಿಳಿದದ್ದೇ ಎನ್‌ಆರ್‌ಸಿ, ಸಿಎಎ ಎಂಬ ಕರಾಳ ಕಾನೂನುಗಳು ತಮ್ಮ ಕಾಲಬುಡಕ್ಕೆ ಬಂದು ನಿಂತಾಗ. ಹೋರಾಟವನ್ನು ಹತ್ತಿಕ್ಕಲು, ಎರಡು ಅಮಾಯಕ ಜೀವಗಳನ್ನು ಕ್ರೂರ ವ್ಯವಸ್ಥೆಯು ಬಲಿ ತೆಗೆದುಕೊಂಡದ್ದನ್ನು ಮರೆಯುವಂತೆಯೂ ಇಲ್ಲ. ಸಮಸ್ಯೆಗಳು ನಮ್ಮ ಮನೆ ಬಾಗಿಲಿಗೆ ಬರುವವರೆಗೂ ಕಾಯದೆ ಸರಕಾರದ ಜನವಿರೋಧಿ ನೀತಿಗಳನ್ನು ಪ್ರತಿಯೊಬ್ಬರೂ ಪ್ರತಿರೋಧಿಸಿದರೆ ಆಳುವವರೆದೆಯಲ್ಲಿ ಅದು ನಡುಕ ಉಂಟುಮಾಡಬಹುದು. ಇದುವೇ ಪ್ರಜಾಪ್ರಭುತ್ವದ ಗೆಲುವು ಎಂಬುದನ್ನು ಮರೆಯಬಾರದು.

ತುಳುನಾಡಿನ ಓರ್ವ ರೈತನ ಮಗಳಾಗಿ ಇಲ್ಲಿನ ಕೃಷಿಕರು ಹೋರಾಟ ನಿರತ ರೈತರ ಜೊತೆ ದನಿಗೂಡಿಸದಿರಲು ಕಾರಣವೇನೆಂಬುದನ್ನು ನನ್ನ ಸೀಮಿತ ದೃಷ್ಟಿಕೋನದಲ್ಲಿ ಚರ್ಚಿಸುತ್ತೇನೆ.

ದ.ಕ ಜಿಲ್ಲೆಯ ಅಡಿಕೆ ಕೃಷಿಕರನ್ನು ರೈತರು ಎನ್ನುವುದಕ್ಕಿಂತ ತೋಟಗಾರಿಕೆ ಕಸುಬಿನವರೆನ್ನುವುದು ಹೆಚ್ಚು ಸೂಕ್ತ. ಒಂದು ಕಾಲಕ್ಕೆ ಮೇಲ್ವರ್ಗದ ಜಮೀನುದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಮಂದಿಗೆ ಭೂ ಸುಧಾರಣೆ ಕಾನೂನು, ಭೂಮಿಯ ಹಕ್ಕು ನೀಡಿತು. ಆ ಮೂಲಕ ಜಿಲ್ಲೆಯ ಸಹಸ್ರಾರು ಭೂರಹಿತ ರೈತರು ಸ್ವಾಭಿಮಾನದ ಬದುಕು ಕಂಡುಕೊಂಡರು. ಅದೇ ಸಮುದಾಯದ ಮಂದಿ ಇಂದು ಬದುಕಿಗಿಂತ ಧರ್ಮವನ್ನು ಮುಖ್ಯವಾಗಿಸಿಕೊಂಡು ರೈತ ಹೋರಾಟದ ವಿರುದ್ಧ ನಿಂತಿರುವುದು ವಿಪರ್ಯಾಸ.

ಅಂದು ಭೂಮಿಯ ಹಕ್ಕು ಪಡಕೊಂಡವರ ಭೂಮಿ ತಲೆಮಾರುಗಳು ದಾಟಿ ಹೋಗುವಾಗ ಮತ್ತಷ್ಟು ತುಂಡುಗಳಾಗಿ ಹರಿದು ಹಂಚಿ ಹೋಯಿತು. ತುಂಡು ಭೂಮಿಯಲ್ಲಿ ಆಹಾರ ಬೆಳೆ ಲಾಭದಾಯಕವಲ್ಲ ಎನ್ನುವ ವಾಸ್ತವ ಅವರನ್ನು ಆಹಾರದ ಕೃಷಿಯಿಂದ ವಿಮುಖಗೊಳಿಸಿತು. ಸಹಜವಾಗಿಯೇ ಅವರು ಅದರಲ್ಲಿ ಆಹಾರದ ಬೆಳೆಗಿಂತ ಕಡಿಮೆ ಶ್ರಮ ಬಯಸುವ ವಾಣಿಜ್ಯ ಬೆಳೆಗಳಾದ ಅಡಿಕೆ, ತೆಂಗುಗಳನ್ನು ಇಟ್ಟರು.

1998-2000ದ ಸುಮಾರಿಗೆ 40-50 ರೂಪಾಯಿಯ ಮಧ್ಯೆ ಅಡ್ಡಾಡುತ್ತಿದ್ದ ಅಡಿಕೆಯ ಬೆಲೆ ಏಕಾಏಕಿ ಏರುತ್ತಾ ರೂ. 280ರವರೆಗೂ ತಲುಪಿತು. ಆದರೆ ಈ ಬದಲಾವಣೆ ಹೆಚ್ಚು ಕಾಲ ಉಳಿಯಲಿಲ್ಲ. 280ರಿಂದ ಮತ್ತೆ ಕುಸಿಯುತ್ತಾ ಬಂದ ಬೆಲೆ ಮತ್ತೆ ನಲ್ವತ್ತು ರೂಪಾಯಿಯವರೆಗೂ ಇಳಿಯಿತು. ಬೆಲೆ ಕುಸಿದರೂ ಇಂದಲ್ಲ ನಾಳೆ ಮತ್ತೆ ಅಡಿಕೆಗೆ ಬೆಲೆ ಬರಬಹುದೆಂದು ಆಸೆಯಿಂದ ರೈತರು ಭತ್ತ ಬೆಳೆಯುತ್ತಿದ್ದ ಗದ್ದೆಗಳಲ್ಲೆಲ್ಲಾ ಅಡಿಕೆ ಇಟ್ಟರು. ಅಲ್ಲಿಗೆ ದ.ಕ ಜಿಲ್ಲೆಯ ಭತ್ತದ ಬೆಳೆ ನಿರ್ನಾಮದ ಹಂತ ತಲುಪಿತು. ಆ ಬಳಿಕ ಬಂದ ವಿಶೇಷ ಆರ್ಥಿಕ ವಲಯಕ್ಕೆ ಪ್ರಭುತ್ವವು ಇಲ್ಲಿನ ಫಲವತ್ತಾದ ಕೃಷಿ ಭೂಮಿಗಳನ್ನು ಧಾರೆಯೆರೆದು ಕೊಟ್ಟಿತು. ಆ ಮೂಲಕ ಅಳಿದುಳಿದ ಆಹಾರ ಕೃಷಿ ಸಂಪೂರ್ಣವಾಗಿ ಪತನದಂಚಿಗೆ ತಳ್ಳಲ್ಪಟ್ಟಿತು.

ಒಂದು ಕಾಲಕ್ಕೆ ಜಿಲ್ಲೆಯ ನಗರ ಪ್ರದೇಶಗಳಲ್ಲೂ ಧಾರಾಳವಾಗಿ ಭತ್ತದ ಗದ್ದೆಗಳಿದ್ದವು. ಅಲ್ಲಿನ ಕೃಷಿಕರು ಅದರ ಜಾಗದಲ್ಲಿ ಇಂದು ಕಾಂಕ್ರೀಟ್ ಕಾಡು ಕಟ್ಟಿ ಕೂತಲ್ಲೇ ದುಡ್ಡು ಎಣಿಸುತ್ತಿದ್ದಾರೆ.

ಇನ್ನು ಜಿಲ್ಲೆಯ ತರಕಾರಿ ಬೆಳೆಗಾರರನ್ನು ತೆಗೆದುಕೊಂಡರೆ ಮನೆಯಂಗಳದ ಹತ್ತು ಸೆಂಟ್ಸ್ ಜಮೀನಿನಲ್ಲಿ ತರಕಾರಿ ಬೆಳೆಯುವ ಜನ ದಿನ- ದಿನ ಕೊಯ್ಲು ಮಾಡಿದ ತರಕಾರಿಗಳನ್ನು ಅಂದಂದು ಮಾರಿ ದಿನ ದೂಡುತ್ತಾರೆಯೇ ವಿನಾ ಮಂಡಿಗೆ ಹಾಕುವುದಿಲ್ಲ. ಈ ಜನಕ್ಕೆಲ್ಲಾ ಪ್ರಸ್ತುತ ರೈತ ಹೋರಾಟ ಪಂಜಾಬ್-ಹರಿಯಾಣದ ರೈತರ ಸಮಸ್ಯೆಯಷ್ಟೇ. ಪಂಜಾಬ್-ಹರಿಯಾಣದ ರೈತರು ಬೀದಿಗೆ ಬಿದ್ದರೆ ನಾವಿಲ್ಲಿ ಅಕ್ಕಿಗೆ ಕಿಲೋಗೆ ಐನೂರು ರೂಪಾಯಿ ಕೊಡುವ ಕಾಲ ಬಂದೀತೆಂಬ ಪ್ರಜ್ಞೆಯೂ ಇವರಿಗಿಲ್ಲ. ಇಲ್ಲಿನ ಜನಸಾಮಾನ್ಯರು ಹೆಚ್ಚು ನಕಲಿ ಸುದ್ದಿಗಳನ್ನು ಉಣಬಡಿಸುವ ಉದಯವಾಣಿ, ಹೊಸ ದಿಗಂತ, ವಿಜಯವಾಣಿ ಪತ್ರಿಕೆಗಳನ್ನು ಓದುವಾಗ, ಸದಾ ಸುಳ್ಳು ಬೊಗಳುತ್ತಲೇ ಜನರ ದಿಕ್ಕು ತಪ್ಪಿಸುವ ಕನ್ನಡದ ನ್ಯೂಸ್ ಚಾನೆಲ್‌ಗಳನ್ನು ವೀಕ್ಷಿಸುವಾಗ ಅಂತಹ ಪ್ರಜ್ಞೆ ಬೆಳೆಯುವುದಾದರೂ ಹೇಗೆ?

ಇಲ್ಲಿನ ಜನರ ಮನಸ್ಥಿತಿ ಹೇಗಿದೆ ಎಂಬುದಕ್ಕೆ ಒಂದು ಉದಾಹರಣೆಯನ್ನು ಕೊಡುತ್ತೇನೆ.

ಮೊನ್ನೆ ತುಳು ರಂಗಭೂಮಿ ಕಲಾವಿದ ಶೋಭರಾಜ್ ಪಾವೂರು ಇಂಧನ ಬೆಲೆಯೇರಿಕೆಯನ್ನು ಟೀಕಿಸಿ ಎಫ್‌ಬಿಯಲ್ಲಿ ಬರೆದಾಗ ಇಲ್ಲಿನ ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಮೇಲೆ ದಾಳಿ ನಡೆಸಿದರು. ಆ ಮಂದಿಗೆ ತಮ್ಮ ಬದುಕಿಗಿಂತ, ತಮ್ಮ ಧರ್ಮವೆಂದೇ ನಂಬಿರುವ ಬಿಜೆಪಿ ಪಕ್ಷದ ಹಿತಾಸಕ್ತಿಯೇ ಹೆಚ್ಚಾಯಿತು.

ಉದ್ಯೋಗ ಸೃಷ್ಟಿಯ ನೆಪವೊಡ್ಡಿ ರೈತರಿಂದ ಕೃಷಿ ಭೂಮಿಯನ್ನು ಕಬಳಿಸಿಕೊಂಡ ಎಮ್‌ಆರ್‌ಪಿಎಲ್ (ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಒಂದೆರಡು ವರ್ಷಗಳ ಹಿಂದೆ ಖಾಲಿ ಹುದ್ದೆಗಳನ್ನು ಭರ್ತಿಮಾಡುವಾಗ ಜಿಲ್ಲೆಯ ಒಳಗಿನವರಿಗೆ ಅವಕಾಶವನ್ನು ನೀಡಲಿಲ್ಲ. ನಮ್ಮದೇ ನೆಲ, ನಮ್ಮದೇ ಜಲ. ಆದರೆ ಇದರ ವಿರುದ್ಧ ಯಾವೊಬ್ಬನೂ ತಗಾದೆ ಎತ್ತಲಿಲ್ಲ. ಧರ್ಮ ರಕ್ಷಣೆಯ ದೊಡ್ಡ ಜವಾಬ್ದಾರಿ ಹೊತ್ತ ಬುದ್ಧಿವಂತರಿಗೆ ಇವೆಲ್ಲಾ ಅರ್ಥವಾಗುವುದೂ ಇಲ್ಲ. ಹೀಗಿರುವಾಗ ಅವರು ರೈತರ ಪರವಾಗಿ ನಿಲ್ಲಲು ಹೇಗೆ ಸಾಧ್ಯ?

2014ರ ಸಾರ್ವತ್ರಿಕ ಚುನಾವಣೆಯ ಪ್ರಚಾರಕ್ಕಾಗಿ ಮೋದಿ ಮಂಗಳೂರಿಗೆ ಬಂದಾಗ ನನ್ನ ಪುಟ್ಟ ಹಳ್ಳಿಯ ಅಡಿಕೆ ಕೃಷಿಕರು ಆಡಿಕೊಳ್ಳುತ್ತಿದ್ದ ಮಾತು ನನಗೆ ಸ್ಪಷ್ಟವಾಗಿ ನೆನಪಿದೆ. “ಯಾನ್ ನಿಕ್ಲೆನ ಕೈ ಬುಡ್ಪುಜಿ, ಬಜ್ಜಾಯಿಗ್ ಎಡ್ಡೆ ಕ್ರಯ ಕೊಪೆಂದ್ ಮೋದಿ ಪಂತೇರ್ (ನಾನು ನಿಮ್ಮ ಕೈ ಬಿಡುವುದಿಲ್ಲ, ಅಡಿಕೆಗೆ ಒಳ್ಳೆಯ ಬೆಲೆ ಕೊಡುತ್ತೇನೆಂದಿದ್ದಾರೆ). ಆ ಗುಂಗಿನಿಂದ ಹೊರಬರದ ನನ್ನ ಜಿಲ್ಲೆಯ ಜನತೆಗೆ ಇತ್ತ ಮೋದಿ ತಮ್ಮ ಅನ್ನದ ಬಟ್ಟಲನ್ನು ಕಿತ್ತು ಅದಾನಿಯ ಕೈಗಿಡುತ್ತಿರುವಾಗ ಅನ್ನಕ್ಕೆ ಪರ್ಯಾಯವಾಗಿ ಅಡಿಕೆ ತಿಂದು ಬದುಕಲಾಗದು ಎಂಬ ವಾಸ್ತವ ಅರ್ಥವಾಗಲೇ ಇಲ್ಲ.


ಇದನ್ನೂ ಓದಿ: ಹೋರಾಟನಿರತ ಕಿಸಾನ್‌ಗೆ ಆದ ಅವಮಾನ ಗಡಿಯಲ್ಲಿರುವ ಜವಾನ್‌ರಿಗೆ ನೋವು ತರಿಸುತ್ತದೆ: ಪ್ರತಿ ಸೈನಿಕನೂ ಸಮವಸ್ತ್ರದಲ್ಲಿರುವ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...