Homeಕರ್ನಾಟಕತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

ತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ಪ್ರಕರಣದ ವಿಡಿಯೊ ಬಿಡುಗಡೆಯಾದ ಬೆನ್ನಿಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಅತ್ತ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರೆ ಇತ್ತ ಡಾ.ಕೆ. ಸುಧಾಕರ್, ಬಿ.ಸಿ. ಪಾಟಿಲ್, ಭೈರತಿ ಬಸವರಾಜ್‌, ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್‌, ನಾರಾಯಣ ಗೌಡ ಸೇರಿದಂತೆ ಒಟ್ಟು 6 ಸಚಿವರು ಮಾಧ್ಯಮಗಳಲ್ಲಿ ತಮ್ಮ ವಿರುದ್ದ ಯಾವುದೇ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ. ಸುಧಾಕರ್‌, “ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ” ಎಂದು ಹೇಳಿದ್ದಾರೆ.

“ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ” ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

“ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ” ಎಂದು ಸುಧಾಕರ್‌ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಪ್ರಸ್ತುತ ತಮ್ಮ ವಿರುದ್ದ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದ ಮೊರೆ ಹೋಗಿರುವ ಆರು ಸಚಿವರು ಕೂಡಾ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಮಯದಲ್ಲಿ ರಾಜೀನಾಮೆ ನೀಡಿ ಸರ್ಕಾರ ಉರುಳಲು ಕಾರಣವಾಗಿದ್ದರು. ನಂತೆರ ಅವರೆಲ್ಲ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಇವರು ಕೋರ್ಟ್ ಮೊರೆ ಹೋಗಿರುವುದು ಭಾರಿ ಚರ್ಚೆಗೀಡಾಗಿದೆ.

ಆಪರೇಷನ್ ಕಮಲದ ಸಮಯದಲ್ಲಿ ಈ ಎಲ್ಲಾ ಸಚಿವರು ಮುಂಬೈಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಇವರ ವಿರುದ್ದವು ಸಿಡಿಗಳು ತಯಾರಾಗಿದೆ, ಹಾಗಾಗಿ ತಮ್ಮ ವಿರುದ್ದ ಸುದ್ದಿಗಳು ಪ್ರಕಟಿಸಬಾರದು ಎಂದು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಕುಂಬಳಕಾಯಿ ಕಳ್ಳ” ಎಂದರೆ, ಈ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ?

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...