Homeಕರ್ನಾಟಕತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

ತಮ್ಮ ವಿರುದ್ಧ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್‌ಗೆ ಹೋಗಿದ್ದೇಕೆ?: ಸಚಿವ ಸುಧಾಕರ್ ಸ್ಪಷ್ಟನೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ಪ್ರಕರಣದ ವಿಡಿಯೊ ಬಿಡುಗಡೆಯಾದ ಬೆನ್ನಿಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. ಅತ್ತ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರೆ ಇತ್ತ ಡಾ.ಕೆ. ಸುಧಾಕರ್, ಬಿ.ಸಿ. ಪಾಟಿಲ್, ಭೈರತಿ ಬಸವರಾಜ್‌, ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್‌, ನಾರಾಯಣ ಗೌಡ ಸೇರಿದಂತೆ ಒಟ್ಟು 6 ಸಚಿವರು ಮಾಧ್ಯಮಗಳಲ್ಲಿ ತಮ್ಮ ವಿರುದ್ದ ಯಾವುದೇ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ. ಸುಧಾಕರ್‌, “ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ” ಎಂದು ಹೇಳಿದ್ದಾರೆ.

“ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ” ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

“ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ” ಎಂದು ಸುಧಾಕರ್‌ ಹೇಳಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಪ್ರಸ್ತುತ ತಮ್ಮ ವಿರುದ್ದ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದ ಮೊರೆ ಹೋಗಿರುವ ಆರು ಸಚಿವರು ಕೂಡಾ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಮಯದಲ್ಲಿ ರಾಜೀನಾಮೆ ನೀಡಿ ಸರ್ಕಾರ ಉರುಳಲು ಕಾರಣವಾಗಿದ್ದರು. ನಂತೆರ ಅವರೆಲ್ಲ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಇವರು ಕೋರ್ಟ್ ಮೊರೆ ಹೋಗಿರುವುದು ಭಾರಿ ಚರ್ಚೆಗೀಡಾಗಿದೆ.

ಆಪರೇಷನ್ ಕಮಲದ ಸಮಯದಲ್ಲಿ ಈ ಎಲ್ಲಾ ಸಚಿವರು ಮುಂಬೈಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಇವರ ವಿರುದ್ದವು ಸಿಡಿಗಳು ತಯಾರಾಗಿದೆ, ಹಾಗಾಗಿ ತಮ್ಮ ವಿರುದ್ದ ಸುದ್ದಿಗಳು ಪ್ರಕಟಿಸಬಾರದು ಎಂದು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. “ಕುಂಬಳಕಾಯಿ ಕಳ್ಳ” ಎಂದರೆ, ಈ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....