Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...