Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...