Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...