Homeಮುಖಪುಟಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್‌ ಅಧ್ಯಕ್ಷರು ಹೇಳಿದ್ದೇನು?

- Advertisement -
- Advertisement -

“ಕಾಂಗ್ರೆಸಿಗರ ವೀರೋಚಿತ ಹೋರಾಟದ ಪರಿಯಿದು. ಇ.ಡಿ. ವಿರುದ್ಧ ಪ್ರತಿಭಟನೆಯ ಪೋಸು ಕೊಡಲು ಬಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ. ಪಲಾಯವಾದವೇ ಇವರ ಬಂಡವಾಳ!” ಎಂಬ ಪ್ರತಿಪಾದನೆಯೊಂದಿಗೆ ಬಿಜೆಪಿ ಕರ್ನಾಟಕ ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌ ಅವರು ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವ ವಿಡಿಯೊವನ್ನು ಟ್ರೋಲ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಅಣಕಿಸುತ್ತಿದ್ದಾರೆ. ಆದರೆ ಬಿ.ವಿ.ಶ್ರೀನಿವಾಸ್ ಈ ವಿಡಿಯೊ ಹಿಂದಿನ ಅಸಲಿ ಕಥೆಯನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌, “ಪೊಲೀಸರ ಉದ್ದೇಶ ಸರಿ ಇದ್ದರೆ ಖಂಡಿತವಾಗಿಯೂ ನಾನು ಅವರ ಜೊತೆಯಲ್ಲಿ ಹೋಗಲು ತಯಾರಿದ್ದೆ. ಅವರ ಉದ್ದೇಶ ಬೇರೆಯಾಗಿತ್ತು. ಪ್ರತಿಭಟನೆಗೂ ಮುಂಚಿತವಾಗಿಯೇ ಅರೆಸ್ಟ್‌ ಮಾಡಲು ಯೋಜಿಸಿದ್ದರು. ಬಿಜೆಪಿಯವರಿಗೆ ಕಾಮನ್‌ ಸೆನ್ಸ್‌ ಇಲ್ಲ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬೆಳಿಗ್ಗೆ ಏಳು ಗಂಟೆಯ ಸಮಯದಲ್ಲಿ ಪೊಲೀಸರು ನನ್ನನ್ನು ಅರೆಸ್ಟ್ ಮಾಡಲು ಪ್ರಯತ್ನಪಟ್ಟರು. ರಾತ್ರಿ ಎರಡು ಸಲ ಪ್ರಯತ್ನಪಟ್ಟರು. ಬೆಳಿಗ್ಗೆ ಎಂಟು ಗಂಟೆಗೆ ಮತ್ತೊಮ್ಮೆ ಪೊಲೀಸರು ಯತ್ನಿಸಿದಾಗ ನಾನು ಗೆರಿಲ್ಲಾ ಮಾದರಿಯಲ್ಲಿ ಎಸ್ಕೇಪ್‌ ಆದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಹುಲ್‌ ಗಾಂಧಿಯವರಿಗೆ ಇ.ಡಿ. ಸಮನ್ಸ್ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಇ.ಡಿ. ಕಚೇರಿ ಬಳಿಗೆ ತೆರಳಿ ಕಾರ್ಯಕರ್ತರೊಂದಿಗೆ ನಾನು ಸೇರಿಕೊಳ್ಳಬೇಕಿತ್ತು. ಹೀಗಾಗಿ ತಪ್ಪಿಸಿಕೊಂಡು ಓಡಿದೆ. ನಂತರದ ಪ್ರತಿಭಟನೆಯಲ್ಲಿ ನನ್ನ ಹಾಜರಿ ಮಾಧ್ಯಮಗಳಲ್ಲಿ ವರದಿಯಾಗಿದೆ. ನ್ಯಾಷನಲ್‌ ಟಿ.ವಿ. ಚಾನೆಲ್‌ಗಳಲ್ಲೂ ಇದು ಲೈವ್ ಆಗಿದೆ. ಈ ಬಿಜೆಪಿವರು ಸುಳ್ಳಿನ ಫ್ಯಾಕ್ಟರಿ ಗಿರಾಕಿಗಳು. ಈ ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಏನು ಎಂಬುದು ನ್ಯೂಯಾರ್ಕ್ ಟೈಮ್ಸ್‌ನವರು ಬರೆದಿದ್ದಾರೆ. ಸಂವಿಧಾನದ ಉಳಿವಿವಾಗಿ ಹೋರಾಡಿ 130 ಕೇಸು ಹಾಕಿಸ್ಕೊಂಡಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

“ಸಿ.ಟಿ.ರವಿ ನನ್ನ ಬಗ್ಗೆ ಮಾತನಾಡಿದ್ದಾರಂತೆ. ನಾನು ಓ.ಟಿ. ಹಾಕಿಕೊಂಡು ಕಾರು ಅಪಘಾತ ಮಾಡಿ ಓಡಿ ಹೋಗಿಲ್ಲ. ಓಡಿ ಹೋಗುವವರು ಬಿಜೆಪಿ ನಾಯಕರು ಮಾತ್ರ” ಎಂದು ಕುಟುಕಿದರು.

“ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದ ಸ್ಥಳಕ್ಕೆ ಐದಾರು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದೇ ರೀತಿಯಲ್ಲಿ ದೊಡ್ಡ ಮಟ್ಟದ ಪೊಲೀಸರನ್ನು ಅರುಣಾಚಲಪ್ರದೇಶಕ್ಕೆ ನಿಯೋಜಿಸಿದ್ದರೆ ಚೈನಾದವರು ನಮ್ಮ ದೇಶದ ಒಳಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಹಿಂದೂಗಳು ಎನ್ನುತ್ತಾರೆ. ಆದರೆ ಜಮ್ಮು ಕಾಶ್ಮೀರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೊಲೀಸರನ್ನು ನಿಯೋಜಿಸಿದ್ದರೆ ಹಿಂದೂಗಳು ಸಾಯುತ್ತಿರಲಿಲ್ಲ. ಸರ್ಕಾರ ಇವರದ್ದೇ ಅಲ್ಲವೇ?” ಎಂದು ಪ್ರಶ್ನಿಸಿದರು.

“ನನ್ನ ಹಿನ್ನಲೆ ಏನೆಂಬುದು ದೇಶಕ್ಕೆ ಗೊತ್ತಿದೆ. ಈ ಸಿ.ಟಿ.ರವಿಯಂಥವರಿಂದ ಪಾಠ ಕಲಿಯುವ ಅವಶ್ಯಕತೆ  ನನಗಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಜ ಹೇಳಿದ್ದಾರೆ ಶ್ರೀನಿವಾಸ್ ರವರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು,, ಅವರು ಹೇಳಿದ ಹಾಗೆ ಬಿಜೆಪಿ ಯವರು ಸುಳ್ಳು ಸೃಷ್ಟಿಸುವ ಕಾರ್ಖಾನೆಗಳಾಗಿವೆ,, ಕೆಲವೊಂದು ಬಾಲ್ ಗಳು ಆದೆ ಸತ್ಯ ಅಂತ ಬೊಬ್ಬೆ ಹೊಡೀತಾವೆ ಅವಿವೇಕಿಗಳು 😂😂😂

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...