Homeಕರ್ನಾಟಕದಕ್ಷಿಣ ಕನ್ನಡ ಡಿಸಿ ಸಿಂಧೂ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ್ದೇಕೆ?

ದಕ್ಷಿಣ ಕನ್ನಡ ಡಿಸಿ ಸಿಂಧೂ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ್ದೇಕೆ?

- Advertisement -
- Advertisement -

ದಕ್ಷಿಣ ಕನ್ನಡ ಯಾವ ಮೂಲೆಯಲ್ಲಿ ನಿಂತು ಎಂಥ ತಾಳೆಹಾಕಿ ಲೆಕ್ಕಮಾಡಿದರೂ ಇದೊಂದು ಸಂಘಪರಿವಾರದ ರಿಪಬ್ಲಿಕ್ ಎಂಬುದು ಪಕ್ಕಾ ಆಗುತ್ತದೆ! ಸಂಸ್ಕೃತಿ ಹಾಗೂ ಗೋರಕ್ಷಣೆ ಮುಖವಾಡ ಹೊದ್ದ ಕ್ರಿಮಿನಲ್‍ಗಳ – ಹಫ್ತಾ ವಸೂಲಿಗಾರ ಅನೈತಿಕ ಪೊಲೀಸ್ ಪಡೆಯ ಹಾವಳಿ ಜಿಲ್ಲೆಯಲ್ಲಿ ಮಿತಿಮೀರಿದೆ!

ಜಾನುವಾರು ಸಾಗಾಟಗಾರರನ್ನು ತಡೆದು ಹೊಡೆದು ಬಡಿದು ಲೂಟಿ ಮಾಡಿ ಆ ಜಾನುವಾರುಗಳನ್ನು ಗೋಶಾಲೆಗೆ ಸಾಗಿಸುವ ಪ್ರಹಸನ ನಡೆಸುತ್ತಲೇ ಗುಟ್ಟಾಗಿ ಕಸಾಯಿಖಾನೆಗೆ ಮಾರುವ ನಕಲಿ ಗೋರಕ್ಷಕರ ಆಟ ಕರಾವಳಿಯಲ್ಲಿ ಬಹಿರಂಗ ರಹಸ್ಯ. ತಮ್ಮ ಬೆನ್ನ ಹಿಂದೆ ಸಂಘಪರಿವಾರದ ಡಾನ್‍ಗಳು ಮತ್ತು ಪರಿವಾರದ ಮಂತ್ರಿ, ಎಂ.ಪಿ. ಎಮ್ಮೆಲ್ಲೆಗಳಂಥ ಬಲಾಢ್ಯರಿದ್ದಾರೆಂಬ ಸೊಕ್ಕಿನ ಅನೈತಿಕ ಪೊಲೀಸ್ ಬೆಟಾಲಿಯನ್ ಅಧಿಕೃತ ಪೊಲೀಸ್ ಇಲಾಖೆಯನ್ನೇ ನಿಯಂತ್ರಿಸುವಷ್ಟು ಭೀಭತ್ಸವಾಗಿ ಬೆಳೆದುಬಿಟ್ಟಿದೆ!

ಅಧಿಕಾರಸ್ಥರ ಕೃಪಾಶೀರ್ವಾದದ ಕೌಬ್ರಿಗೇಡ್ ಡಿಸಿ, ಎಸ್ಪಿಯಂಥ ಉನ್ನತ ಅಧಿಕಾರಿಗಳಿಗೂ ಕೇರ್ ಮಾಡದೆ ಕಾನೂನು ಕೈಗೆತ್ತಿಕೊಳ್ಳುವಷ್ಟು ಕೊಬ್ಬಿದ್ದಾರೆಂಬುದಕ್ಕೆ ಕಳೆದ ವಾರ ನಡೆದ ‘ಕೊಲೆಬೆದರಿಕೆ’ ಪ್ರಕರಣ ನಿಸ್ಸಂಶಯವಾಗಿ ಸಾಬೀತುಪಡಿಸಿದೆ. ಬಕ್ರೀದ್ ಹೊತ್ತಲ್ಲಿ ಅಕ್ರಮ ಗೋಸಾಗಾಟ-ಅನಧಿಕೃತ ಕಸಾಯಿಖಾನೆ ನಡೆಯದಂತೆ ನೋಡಿಕೊಳ್ಳಿ; ಅಕ್ರಮ ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡುವವರನ್ನು ಕಠಿಣವಾಗಿ ನಿಭಾಯಿಸಿ ಎಂಬ ಎರಡು ಆದೇಶ ಜಿಲ್ಲಾಧಿಕಾರಿಣಿ ಸಿಂಧೂ ರೂಪೇಶ್ ಪೊಲೀಸ್ ಅಧಿಕಾರಿಗಳಿಗೆ ನೀಡಿದ್ದರು.

ಇದರಲ್ಲಿ ಎರಡನೇ ನಿರ್ದೇಶನ ಕೌಬಾಯ್‍ಗಳ ಕೆರಳಿಸಿದೆ. ಸಂಘಪರಿವಾರದ ವಾಟ್ಸಾಪ್ ಗ್ರೂಪ್‍ಗಳಲ್ಲಿ ಜಿಲ್ಲಾಧಿಕಾರಿಣಿಯನ್ನು ಟೀಕಿಸುವ, ನಿಂದಿಸುವ, ಕೊಂದೇಹಾಕುವ ಸಂದೇಶಗಳ ವಿನಿಮಯ ಬಿರುಸಾಗಿ ನಡೆದಿದೆ!

ದಕಿಣ ಕನ್ನಡದಲ್ಲಿ ದಿನಗಳೆದಂತೆ ಜಾನುವಾರು ದಂಧೆ ಮಾಡುವ ಮುಸ್ಲಿಮರನ್ನು ಅಟ್ಟಾಡಿಸಿ ಹಿಂಸಿಸುವ, ದರೋಡೆ ಮಾಡಿ ದಾಂಧಲೆ ಎಬ್ಬಿಸುವ ‘ಸಂಸ್ಕೃತಿವಂತರ’ ಉಪಟಳ ಜೋರಾಗುತ್ತಿರುವುದು ಸಹಜವಾಗೇ ಕರ್ತವ್ಯನಿಷ್ಠ ಜಿಲ್ಲಾಧಿಕಾರಿ ಸಿಂಧೂ ಅವರ ತಲೆಬಿಸಿ ಮಾಡಿತ್ತು.

ಇದು ಬಕ್ರೀದ್ ಹಬ್ಬದ ಹೊತ್ತಲ್ಲಿ ಹೆಚ್ಚಾಗುವ ಆತಂಕವೂ ಆಕೆಯಲ್ಲಿತ್ತು. ಹಾಗಾಗಿ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದ ಸಿಂಧೂ ಮೇಡಮ್ ‘ಅಕ್ರಮ ಗೋಸಾಗಾಟಗಾರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕು; ಪೊಲೀಸರೇ ಅಂಥವರ ವಿರುದ್ಧ ಕೇಸು ಹಾಕುತ್ತಾರೆ; ಗೋಸಾಗಾಟಗಾರರ ಮೇಲೆ ಗೂಂಡಾಗಿರಿ, ಥಳಿತ ನಡೆಸಿದರೆ ಅಂಥವರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲಾಗುತ್ತದೆ..’ ಎಂದು ಎಚ್ಚರಿಕೆ ನೀಡಿದ್ದರು.

ಮಾಧ್ಯಮದಲ್ಲಿ ಬಂದಿದ್ದ ಈ ಹೇಳಿಕೆ ಸಂಘಪರಿವಾರದ ‘ರಾಮ್‍ಸೇನಾ ಅಭಿಯಾನ್’ ಎಂಬ ವಾಟ್ಸಾಪ್ ಗ್ರೂಪಿನಲ್ಲಿ ಪೋಸ್ಟ್ ಆಗಿದೆ. ಇದರ ಸುತ್ತ ಚರ್ಚೆ ನಡೆದು ಡಿಸಿ ಸಿಂಧೂ ಅವರನ್ನ ಮೂದಲಿಸಲಾಗಿದೆ. +919632188546 ಮೊಬೈಲ್ ಸಂಖ್ಯೆಯ ತೆಂಕಮಿಜಾರಿನ ರಂಜಿತ್ ಎಂಬ ಹರೆಯದ ಹುಡುಗ ‘ಫಸ್ಟ್ ಮೊಲೆನ್ ಕರ್ತೆ ಕೆರೊಡು’ ಎಂದು ತುಳು ಭಾಷೆಯ ಸಂದೇಶ ಪೋಸ್ಟ್ ಮಾಡಿದ್ದಾನೆ. ಇದರರ್ಥ ‘ಮೊದಲು ಇವಳನ್ನು (ಡಿಸಿಯನ್ನು) ಕಡಿದು ಕೊಲ್ಲಬೇಕು’ ಎಂಬುದಾಗಿದೆ.

ಈ ಕೊಲ್ಲುವ ಕ್ರೌರ್ಯದ ಚರ್ಚೆ ದಕ್ಷಿಣ ಕನ್ನಡದ ಮಾನವೀಯ ಮಂದಿಯನ್ನು ಬೆಚ್ಚಿಬೀಳಿಸಿದೆ. ಡಿಸಿಯನ್ನೇ ಬಿಡದವರು ಸಾಮಾನ್ಯರನ್ನು ಬಿಡುವರಾ? ಇಂಥವರ ಮೇಲೆ ಕಾನೂನು ಕ್ರಮ ತಕ್ಷಣ ಜರುಗಬೇಕೆಂಬ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಡೆದಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ರಂಜಿತ್‍ನನ್ನು ಬಂಧಿಸಿದ್ದಾರೆ.

ಇಷ್ಟು ದೊಡ್ಡ ಗಲಾಟೆಯಾದರೂ ದಕ್ಷಿಣ ಕನ್ನಡದಲ್ಲಿ ತುಂಬಿ ತುಳುಕುವ ಬಿಜೆಪಿ ಎಂಪಿ, ಎಮ್ಮೆಲ್ಲೆ, ಎಮ್ಮೆಲ್ಸಿಗಳಲ್ಲಿ ಒಬ್ಬೇ ಒಬ್ಬ ಪ್ರತಿಕ್ರಿಯಿಸುವುದಿಲ್ಲ; ಶಾಂತಿ ಸುವ್ಯವಸ್ಥೆ ಕಾಪಾಡುವ ಕರ್ತವ್ಯ ಬದ್ಧತೆ ತೋರಿದ ಜಿಲ್ಲಾಧಿಕಾರಿ ಸಿಂಧೂಗೆ ನೈತಿಕ ಬೆಂಬಲ ನೀಡಬೇಕಿದ್ದ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ, ಉಳಿದ ಶಾಸಕ, ಸಂಸದರು ಬುದ್ಧಿಪೂರ್ವಕವಾಗೇ ಸುಮ್ಮನಿದ್ದರು.

ಜಿಲ್ಲೆಯ ನೆಮ್ಮದಿ ಕಾಪಾಡುವುದು ತಮ್ಮದೂ ಕರ್ತವ್ಯವೆಂಬುದು ಈ ಹೊಣೆಗೇಡಿ ರಾಜಕಾರಣಿಗಳಿಗೆ ಅನ್ನಿಸಲಿಲ್ಲ. ಮೌನ ಪ್ರದರ್ಶಿಸಿ ಗೂಂಡಾಗಳಿಗೆ ‘ಧೈರ್ಯ’ ತುಂಬಿದ್ದಾರೆ. ಇದಾದ ಎರಡೇ ದಿನಕ್ಕೆ ಮುಖ್ಯಮಂತ್ರಿ ಯಡ್ಡಿಯೂರಪ್ಪ ಸರ್ಕಾರ ಸಿಂಧೂ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ ಖೋಟಾ ಗೋ ಸಂರಕ್ಷಕರ ತಂಟೆಗೆ ಹೋದವರಿಗೆ ದಕ್ಷಿಣ ಕನ್ನಡದಲ್ಲಿ ಉಳಿಗಾಲವಿಲ್ಲ ಎಂಬುದು ಖಾತ್ರಿಗೊಳಿಸಿದ್ದಾರೆ!

ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕಿದ್ದ ಪೊಲೀಸ್ ಇಲಾಖೆ, ಅದನ್ನು ಸಂಘ ಪರಿವಾರದ ತರಹೇವಾರಿ ತಂಡಗಳ ಪುಂಡರ ಕೈಗೊಪ್ಪಿಸಿ ಆ ಗ್ಯಾಂಗುಗಳು ಹೇಳಿದಂತೆ ಕೇಳುತ್ತಿದೆಯೇನೋ ಎಂಬ ಅನುಮಾನ ಬಲವಾಗಲು ಕಾರಣವಿದೆ. ಜಾನುವಾರು ವ್ಯಾಪಾರಿ ಮುಸ್ಲಿಮರ ರಕ್ತ ಹರಿಸಿ ಅವರ ಮೊಬೈಲ್, ಹಣ ಕೊಳ್ಳೆಹೊಡೆಯುವ ನಕಲಿ ಗೋರಕ್ಷಕರು ನಂತರ ‘ಆರೋಪಿ’ಗಳನ್ನು ಠಾಣೆಗೊಯ್ದು ತಾವು ಹೇಳಿದಂತೆ ಪೊಲೀಸರಿಂದ ಎಫ್‍ಐಆರ್ ಬರೆಸುತ್ತಾರೆ. ಹೀಗಾಗಿ ಅಧಿಕೃತ ಪರವಾನಗಿಯೊಂದಿಗೆ ದನ, ಎಮ್ಮೆ ಸಾಗಿಸಿದರೂ ಜಾಮೀನುರಹಿತ ಕೇಸು ಬೀಳುತ್ತದೆ.

ಮಾರಣಾಂತಿಕ ದಾಳಿ ಮಾಡಿದ ಸಂಘ ಸದಸ್ಯರ ಮೇಲೆ ಪೆಟ್ಟಿಕೇಸ್ ಹಾಕಿ ಗೌರವದೊಂದಿಗೆ ಬೀಳ್ಕೊಡಲಾಗುತ್ತದೆ. ಅನೈತಿಕ ಪೊಲೀಸರು ಧರ್ಮ, ಸಂಸ್ಕೃತಿ ದೇವರು ತೋರಿಸಿ ಬ್ಲಾಕ್‍ಮೇಲ್ ಮಾಡಿ ಪಾರಾಗುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ. ಪೊಲೀಸರು ಮತ್ತು ಗೋಗೂಂಡಾಗಳ ಅನೈತಿಕ ಮೈತ್ರಿಯಿಂದಾಗಿ ರೌಡಿಗಳೆಂದು ಸಮಾಜದಿಂದ ತಿರಸ್ಕರಿಸಲ್ಪಟ್ಟವರು ಇಂದು ಧರ್ಮರಕ್ಷಕ ಗೆಟಪ್ಪಿನಲ್ಲಿ ಮೆರೆದಾಡುತ್ತಿದ್ದಾರೆ.

ದಕ್ಷಿಣಕನ್ನಡದ ಕಾನೂನು ಮತ್ತು ಸುವ್ಯವಸ್ಥೆ ಅದೆಂಥ ಮಟ್ಟಕ್ಕೆ ತಲುಪಿದೆಯೆಂದರೆ ಬಿಜೆಪಿ ಶಾಸಕರು ಕರೆಯುವ ಅಧಿಕಾರಿಗಳ ಸಭೆಯಲ್ಲಿ ಹತ್ತಾರು ಕ್ರಿಮಿನಲ್ ಕೇಸ್ ರೂವಾರಿಗಳು ಪೊಲೀಸರಿಗೆ, ಅಧಿಕಾರಿಗಳಿಗೆ ಸಲಹೆ, ಸೂಚನೆ ಕೊಡುತ್ತಿದ್ದಾರೆ. ಡಿಸಿ ಸಿಂಧೂ ಮೇಡಮ್‍ಗೆ ಬಂದ ಕೊಲೆ ಬೆದರಿಕೆ ಪ್ರಕರಣದ ಬೆನ್ನಲ್ಲೇ ಬೆಳ್ತಗಂಡಿ ಶಾಸಕ ಹರೀಶ್‍ಪೂಂಜಾ ಕರೆದಿದ್ದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ಸರಿಸಮನಾಗಿ ಗೋ-ಗೂಂಡಾಗಳು ಕುಳಿತಿದ್ದರು.

ಅಕ್ರಮ ಗೋಸಾಗಾಟ ತಡೆಯುವ ಕುರಿತು ಶಾಸಕ ಪೂಂಜಾ ನಡೆಸಿದ್ದ ಮೀಟಿಂಗ್ ಇದು. ಇಲ್ಲಿ ಸಂಘಪರಿವಾರದ ಗೋ-ಗೂಂಡಾಗಳು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ವಾಣಿಯಲ್ಲಿ ‘ಸಲಹೆ, ಮಾರ್ಗದರ್ಶನ’ ಕೊಡುತ್ತಿದ್ದರು. ಪೊಲೀಸರ ನೈತಿಕ ಸ್ಥೈರ್ಯವನ್ನೇ ಕುಗ್ಗಿಸುವ ಸಭೆಗಳನ್ನು ನಡೆಸುವ ಶಾಸಕ ಪೂಂಜಾರಿಂದ ಬೆಳ್ತಗಂಡಿಯಲ್ಲಿ ನೆಮ್ಮದಿ ನಿರೀಕ್ಷಿಸಲು ಸಾಧ್ಯವಾ?

‘ದಕ್ಷಿಣ ಕನ್ನಡಕ್ಕೆ ಬೆಂಕಿ ಹಾಕೋದು ಹೇಗೆಂದು ನಂಗೆ ಗೊತ್ತಿದೆ’ ಎಂದು ಬಹಿರಂಗವಾಗೇ ಹೇಳುವ ಸಂಸದ ನಳಿನ್ ಕುಮಾರ್ ಕಟೀಲ್ ಈಗ ಆಳುವ ಬಿಜೆಪಿಯ ರಾಜ್ಯಾಧ್ಯಕ್ಷ. ಗೋರಕ್ಷಕ ತಂಡಗಳ ಅನಭಿಷಕ್ತ ದೊರೆಯಂತಿರುವ ನಳಿನ್‍ನ ಮನದಿಚ್ಛೆಯಂತೆ ಜಿಲ್ಲಾಡಳಿತ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ “ಪಾಪ ಪೂಜಾರಿ” ಅನ್ನಿಸಿಕೊಳ್ಳುತ್ತಿದ್ದಾರೆ ಬಿಜೆಪಿ ಕಾರ್ಯಕರ್ತರಿಂದ! ಇಂಥ ಕಾನೂನು ಸುವ್ಯವಸ್ಥೆಯ ಸಮಸ್ಯೆಯ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಡಾ|| ರಾಜೇಂದ್ರ ಬಂದಿದ್ದಾರೆ. ಹೊಸ ಡಿಸಿ ಸಾಹೇಬರಿಂದ ಜಿಲ್ಲೆಯ ಜನರು ನೆಮ್ಮದಿಯ ನಾಳೆಗಳ ನಿರೀಕ್ಷಿಸುತ್ತಿದ್ದಾರಷ್ಟೇ!!

-ಶುದ್ದೋಧನ


ಇದನ್ನು ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...