Homeಕರ್ನಾಟಕದಕ್ಷಿಣ ಕನ್ನಡ ಡಿಸಿ ಸಿಂಧೂ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ್ದೇಕೆ?

ದಕ್ಷಿಣ ಕನ್ನಡ ಡಿಸಿ ಸಿಂಧೂ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ್ದೇಕೆ?

- Advertisement -
- Advertisement -

ದಕ್ಷಿಣ ಕನ್ನಡ ಯಾವ ಮೂಲೆಯಲ್ಲಿ ನಿಂತು ಎಂಥ ತಾಳೆಹಾಕಿ ಲೆಕ್ಕಮಾಡಿದರೂ ಇದೊಂದು ಸಂಘಪರಿವಾರದ ರಿಪಬ್ಲಿಕ್ ಎಂಬುದು ಪಕ್ಕಾ ಆಗುತ್ತದೆ! ಸಂಸ್ಕೃತಿ ಹಾಗೂ ಗೋರಕ್ಷಣೆ ಮುಖವಾಡ ಹೊದ್ದ ಕ್ರಿಮಿನಲ್‍ಗಳ – ಹಫ್ತಾ ವಸೂಲಿಗಾರ ಅನೈತಿಕ ಪೊಲೀಸ್ ಪಡೆಯ ಹಾವಳಿ ಜಿಲ್ಲೆಯಲ್ಲಿ ಮಿತಿಮೀರಿದೆ!

ಜಾನುವಾರು ಸಾಗಾಟಗಾರರನ್ನು ತಡೆದು ಹೊಡೆದು ಬಡಿದು ಲೂಟಿ ಮಾಡಿ ಆ ಜಾನುವಾರುಗಳನ್ನು ಗೋಶಾಲೆಗೆ ಸಾಗಿಸುವ ಪ್ರಹಸನ ನಡೆಸುತ್ತಲೇ ಗುಟ್ಟಾಗಿ ಕಸಾಯಿಖಾನೆಗೆ ಮಾರುವ ನಕಲಿ ಗೋರಕ್ಷಕರ ಆಟ ಕರಾವಳಿಯಲ್ಲಿ ಬಹಿರಂಗ ರಹಸ್ಯ. ತಮ್ಮ ಬೆನ್ನ ಹಿಂದೆ ಸಂಘಪರಿವಾರದ ಡಾನ್‍ಗಳು ಮತ್ತು ಪರಿವಾರದ ಮಂತ್ರಿ, ಎಂ.ಪಿ. ಎಮ್ಮೆಲ್ಲೆಗಳಂಥ ಬಲಾಢ್ಯರಿದ್ದಾರೆಂಬ ಸೊಕ್ಕಿನ ಅನೈತಿಕ ಪೊಲೀಸ್ ಬೆಟಾಲಿಯನ್ ಅಧಿಕೃತ ಪೊಲೀಸ್ ಇಲಾಖೆಯನ್ನೇ ನಿಯಂತ್ರಿಸುವಷ್ಟು ಭೀಭತ್ಸವಾಗಿ ಬೆಳೆದುಬಿಟ್ಟಿದೆ!

ಅಧಿಕಾರಸ್ಥರ ಕೃಪಾಶೀರ್ವಾದದ ಕೌಬ್ರಿಗೇಡ್ ಡಿಸಿ, ಎಸ್ಪಿಯಂಥ ಉನ್ನತ ಅಧಿಕಾರಿಗಳಿಗೂ ಕೇರ್ ಮಾಡದೆ ಕಾನೂನು ಕೈಗೆತ್ತಿಕೊಳ್ಳುವಷ್ಟು ಕೊಬ್ಬಿದ್ದಾರೆಂಬುದಕ್ಕೆ ಕಳೆದ ವಾರ ನಡೆದ ‘ಕೊಲೆಬೆದರಿಕೆ’ ಪ್ರಕರಣ ನಿಸ್ಸಂಶಯವಾಗಿ ಸಾಬೀತುಪಡಿಸಿದೆ. ಬಕ್ರೀದ್ ಹೊತ್ತಲ್ಲಿ ಅಕ್ರಮ ಗೋಸಾಗಾಟ-ಅನಧಿಕೃತ ಕಸಾಯಿಖಾನೆ ನಡೆಯದಂತೆ ನೋಡಿಕೊಳ್ಳಿ; ಅಕ್ರಮ ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡುವವರನ್ನು ಕಠಿಣವಾಗಿ ನಿಭಾಯಿಸಿ ಎಂಬ ಎರಡು ಆದೇಶ ಜಿಲ್ಲಾಧಿಕಾರಿಣಿ ಸಿಂಧೂ ರೂಪೇಶ್ ಪೊಲೀಸ್ ಅಧಿಕಾರಿಗಳಿಗೆ ನೀಡಿದ್ದರು.

ಇದರಲ್ಲಿ ಎರಡನೇ ನಿರ್ದೇಶನ ಕೌಬಾಯ್‍ಗಳ ಕೆರಳಿಸಿದೆ. ಸಂಘಪರಿವಾರದ ವಾಟ್ಸಾಪ್ ಗ್ರೂಪ್‍ಗಳಲ್ಲಿ ಜಿಲ್ಲಾಧಿಕಾರಿಣಿಯನ್ನು ಟೀಕಿಸುವ, ನಿಂದಿಸುವ, ಕೊಂದೇಹಾಕುವ ಸಂದೇಶಗಳ ವಿನಿಮಯ ಬಿರುಸಾಗಿ ನಡೆದಿದೆ!

ದಕಿಣ ಕನ್ನಡದಲ್ಲಿ ದಿನಗಳೆದಂತೆ ಜಾನುವಾರು ದಂಧೆ ಮಾಡುವ ಮುಸ್ಲಿಮರನ್ನು ಅಟ್ಟಾಡಿಸಿ ಹಿಂಸಿಸುವ, ದರೋಡೆ ಮಾಡಿ ದಾಂಧಲೆ ಎಬ್ಬಿಸುವ ‘ಸಂಸ್ಕೃತಿವಂತರ’ ಉಪಟಳ ಜೋರಾಗುತ್ತಿರುವುದು ಸಹಜವಾಗೇ ಕರ್ತವ್ಯನಿಷ್ಠ ಜಿಲ್ಲಾಧಿಕಾರಿ ಸಿಂಧೂ ಅವರ ತಲೆಬಿಸಿ ಮಾಡಿತ್ತು.

ಇದು ಬಕ್ರೀದ್ ಹಬ್ಬದ ಹೊತ್ತಲ್ಲಿ ಹೆಚ್ಚಾಗುವ ಆತಂಕವೂ ಆಕೆಯಲ್ಲಿತ್ತು. ಹಾಗಾಗಿ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದ ಸಿಂಧೂ ಮೇಡಮ್ ‘ಅಕ್ರಮ ಗೋಸಾಗಾಟಗಾರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕು; ಪೊಲೀಸರೇ ಅಂಥವರ ವಿರುದ್ಧ ಕೇಸು ಹಾಕುತ್ತಾರೆ; ಗೋಸಾಗಾಟಗಾರರ ಮೇಲೆ ಗೂಂಡಾಗಿರಿ, ಥಳಿತ ನಡೆಸಿದರೆ ಅಂಥವರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲಾಗುತ್ತದೆ..’ ಎಂದು ಎಚ್ಚರಿಕೆ ನೀಡಿದ್ದರು.

ಮಾಧ್ಯಮದಲ್ಲಿ ಬಂದಿದ್ದ ಈ ಹೇಳಿಕೆ ಸಂಘಪರಿವಾರದ ‘ರಾಮ್‍ಸೇನಾ ಅಭಿಯಾನ್’ ಎಂಬ ವಾಟ್ಸಾಪ್ ಗ್ರೂಪಿನಲ್ಲಿ ಪೋಸ್ಟ್ ಆಗಿದೆ. ಇದರ ಸುತ್ತ ಚರ್ಚೆ ನಡೆದು ಡಿಸಿ ಸಿಂಧೂ ಅವರನ್ನ ಮೂದಲಿಸಲಾಗಿದೆ. +919632188546 ಮೊಬೈಲ್ ಸಂಖ್ಯೆಯ ತೆಂಕಮಿಜಾರಿನ ರಂಜಿತ್ ಎಂಬ ಹರೆಯದ ಹುಡುಗ ‘ಫಸ್ಟ್ ಮೊಲೆನ್ ಕರ್ತೆ ಕೆರೊಡು’ ಎಂದು ತುಳು ಭಾಷೆಯ ಸಂದೇಶ ಪೋಸ್ಟ್ ಮಾಡಿದ್ದಾನೆ. ಇದರರ್ಥ ‘ಮೊದಲು ಇವಳನ್ನು (ಡಿಸಿಯನ್ನು) ಕಡಿದು ಕೊಲ್ಲಬೇಕು’ ಎಂಬುದಾಗಿದೆ.

ಈ ಕೊಲ್ಲುವ ಕ್ರೌರ್ಯದ ಚರ್ಚೆ ದಕ್ಷಿಣ ಕನ್ನಡದ ಮಾನವೀಯ ಮಂದಿಯನ್ನು ಬೆಚ್ಚಿಬೀಳಿಸಿದೆ. ಡಿಸಿಯನ್ನೇ ಬಿಡದವರು ಸಾಮಾನ್ಯರನ್ನು ಬಿಡುವರಾ? ಇಂಥವರ ಮೇಲೆ ಕಾನೂನು ಕ್ರಮ ತಕ್ಷಣ ಜರುಗಬೇಕೆಂಬ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಡೆದಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ರಂಜಿತ್‍ನನ್ನು ಬಂಧಿಸಿದ್ದಾರೆ.

ಇಷ್ಟು ದೊಡ್ಡ ಗಲಾಟೆಯಾದರೂ ದಕ್ಷಿಣ ಕನ್ನಡದಲ್ಲಿ ತುಂಬಿ ತುಳುಕುವ ಬಿಜೆಪಿ ಎಂಪಿ, ಎಮ್ಮೆಲ್ಲೆ, ಎಮ್ಮೆಲ್ಸಿಗಳಲ್ಲಿ ಒಬ್ಬೇ ಒಬ್ಬ ಪ್ರತಿಕ್ರಿಯಿಸುವುದಿಲ್ಲ; ಶಾಂತಿ ಸುವ್ಯವಸ್ಥೆ ಕಾಪಾಡುವ ಕರ್ತವ್ಯ ಬದ್ಧತೆ ತೋರಿದ ಜಿಲ್ಲಾಧಿಕಾರಿ ಸಿಂಧೂಗೆ ನೈತಿಕ ಬೆಂಬಲ ನೀಡಬೇಕಿದ್ದ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ, ಉಳಿದ ಶಾಸಕ, ಸಂಸದರು ಬುದ್ಧಿಪೂರ್ವಕವಾಗೇ ಸುಮ್ಮನಿದ್ದರು.

ಜಿಲ್ಲೆಯ ನೆಮ್ಮದಿ ಕಾಪಾಡುವುದು ತಮ್ಮದೂ ಕರ್ತವ್ಯವೆಂಬುದು ಈ ಹೊಣೆಗೇಡಿ ರಾಜಕಾರಣಿಗಳಿಗೆ ಅನ್ನಿಸಲಿಲ್ಲ. ಮೌನ ಪ್ರದರ್ಶಿಸಿ ಗೂಂಡಾಗಳಿಗೆ ‘ಧೈರ್ಯ’ ತುಂಬಿದ್ದಾರೆ. ಇದಾದ ಎರಡೇ ದಿನಕ್ಕೆ ಮುಖ್ಯಮಂತ್ರಿ ಯಡ್ಡಿಯೂರಪ್ಪ ಸರ್ಕಾರ ಸಿಂಧೂ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ ಖೋಟಾ ಗೋ ಸಂರಕ್ಷಕರ ತಂಟೆಗೆ ಹೋದವರಿಗೆ ದಕ್ಷಿಣ ಕನ್ನಡದಲ್ಲಿ ಉಳಿಗಾಲವಿಲ್ಲ ಎಂಬುದು ಖಾತ್ರಿಗೊಳಿಸಿದ್ದಾರೆ!

ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕಿದ್ದ ಪೊಲೀಸ್ ಇಲಾಖೆ, ಅದನ್ನು ಸಂಘ ಪರಿವಾರದ ತರಹೇವಾರಿ ತಂಡಗಳ ಪುಂಡರ ಕೈಗೊಪ್ಪಿಸಿ ಆ ಗ್ಯಾಂಗುಗಳು ಹೇಳಿದಂತೆ ಕೇಳುತ್ತಿದೆಯೇನೋ ಎಂಬ ಅನುಮಾನ ಬಲವಾಗಲು ಕಾರಣವಿದೆ. ಜಾನುವಾರು ವ್ಯಾಪಾರಿ ಮುಸ್ಲಿಮರ ರಕ್ತ ಹರಿಸಿ ಅವರ ಮೊಬೈಲ್, ಹಣ ಕೊಳ್ಳೆಹೊಡೆಯುವ ನಕಲಿ ಗೋರಕ್ಷಕರು ನಂತರ ‘ಆರೋಪಿ’ಗಳನ್ನು ಠಾಣೆಗೊಯ್ದು ತಾವು ಹೇಳಿದಂತೆ ಪೊಲೀಸರಿಂದ ಎಫ್‍ಐಆರ್ ಬರೆಸುತ್ತಾರೆ. ಹೀಗಾಗಿ ಅಧಿಕೃತ ಪರವಾನಗಿಯೊಂದಿಗೆ ದನ, ಎಮ್ಮೆ ಸಾಗಿಸಿದರೂ ಜಾಮೀನುರಹಿತ ಕೇಸು ಬೀಳುತ್ತದೆ.

ಮಾರಣಾಂತಿಕ ದಾಳಿ ಮಾಡಿದ ಸಂಘ ಸದಸ್ಯರ ಮೇಲೆ ಪೆಟ್ಟಿಕೇಸ್ ಹಾಕಿ ಗೌರವದೊಂದಿಗೆ ಬೀಳ್ಕೊಡಲಾಗುತ್ತದೆ. ಅನೈತಿಕ ಪೊಲೀಸರು ಧರ್ಮ, ಸಂಸ್ಕೃತಿ ದೇವರು ತೋರಿಸಿ ಬ್ಲಾಕ್‍ಮೇಲ್ ಮಾಡಿ ಪಾರಾಗುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ. ಪೊಲೀಸರು ಮತ್ತು ಗೋಗೂಂಡಾಗಳ ಅನೈತಿಕ ಮೈತ್ರಿಯಿಂದಾಗಿ ರೌಡಿಗಳೆಂದು ಸಮಾಜದಿಂದ ತಿರಸ್ಕರಿಸಲ್ಪಟ್ಟವರು ಇಂದು ಧರ್ಮರಕ್ಷಕ ಗೆಟಪ್ಪಿನಲ್ಲಿ ಮೆರೆದಾಡುತ್ತಿದ್ದಾರೆ.

ದಕ್ಷಿಣಕನ್ನಡದ ಕಾನೂನು ಮತ್ತು ಸುವ್ಯವಸ್ಥೆ ಅದೆಂಥ ಮಟ್ಟಕ್ಕೆ ತಲುಪಿದೆಯೆಂದರೆ ಬಿಜೆಪಿ ಶಾಸಕರು ಕರೆಯುವ ಅಧಿಕಾರಿಗಳ ಸಭೆಯಲ್ಲಿ ಹತ್ತಾರು ಕ್ರಿಮಿನಲ್ ಕೇಸ್ ರೂವಾರಿಗಳು ಪೊಲೀಸರಿಗೆ, ಅಧಿಕಾರಿಗಳಿಗೆ ಸಲಹೆ, ಸೂಚನೆ ಕೊಡುತ್ತಿದ್ದಾರೆ. ಡಿಸಿ ಸಿಂಧೂ ಮೇಡಮ್‍ಗೆ ಬಂದ ಕೊಲೆ ಬೆದರಿಕೆ ಪ್ರಕರಣದ ಬೆನ್ನಲ್ಲೇ ಬೆಳ್ತಗಂಡಿ ಶಾಸಕ ಹರೀಶ್‍ಪೂಂಜಾ ಕರೆದಿದ್ದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ಸರಿಸಮನಾಗಿ ಗೋ-ಗೂಂಡಾಗಳು ಕುಳಿತಿದ್ದರು.

ಅಕ್ರಮ ಗೋಸಾಗಾಟ ತಡೆಯುವ ಕುರಿತು ಶಾಸಕ ಪೂಂಜಾ ನಡೆಸಿದ್ದ ಮೀಟಿಂಗ್ ಇದು. ಇಲ್ಲಿ ಸಂಘಪರಿವಾರದ ಗೋ-ಗೂಂಡಾಗಳು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ವಾಣಿಯಲ್ಲಿ ‘ಸಲಹೆ, ಮಾರ್ಗದರ್ಶನ’ ಕೊಡುತ್ತಿದ್ದರು. ಪೊಲೀಸರ ನೈತಿಕ ಸ್ಥೈರ್ಯವನ್ನೇ ಕುಗ್ಗಿಸುವ ಸಭೆಗಳನ್ನು ನಡೆಸುವ ಶಾಸಕ ಪೂಂಜಾರಿಂದ ಬೆಳ್ತಗಂಡಿಯಲ್ಲಿ ನೆಮ್ಮದಿ ನಿರೀಕ್ಷಿಸಲು ಸಾಧ್ಯವಾ?

‘ದಕ್ಷಿಣ ಕನ್ನಡಕ್ಕೆ ಬೆಂಕಿ ಹಾಕೋದು ಹೇಗೆಂದು ನಂಗೆ ಗೊತ್ತಿದೆ’ ಎಂದು ಬಹಿರಂಗವಾಗೇ ಹೇಳುವ ಸಂಸದ ನಳಿನ್ ಕುಮಾರ್ ಕಟೀಲ್ ಈಗ ಆಳುವ ಬಿಜೆಪಿಯ ರಾಜ್ಯಾಧ್ಯಕ್ಷ. ಗೋರಕ್ಷಕ ತಂಡಗಳ ಅನಭಿಷಕ್ತ ದೊರೆಯಂತಿರುವ ನಳಿನ್‍ನ ಮನದಿಚ್ಛೆಯಂತೆ ಜಿಲ್ಲಾಡಳಿತ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ “ಪಾಪ ಪೂಜಾರಿ” ಅನ್ನಿಸಿಕೊಳ್ಳುತ್ತಿದ್ದಾರೆ ಬಿಜೆಪಿ ಕಾರ್ಯಕರ್ತರಿಂದ! ಇಂಥ ಕಾನೂನು ಸುವ್ಯವಸ್ಥೆಯ ಸಮಸ್ಯೆಯ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಡಾ|| ರಾಜೇಂದ್ರ ಬಂದಿದ್ದಾರೆ. ಹೊಸ ಡಿಸಿ ಸಾಹೇಬರಿಂದ ಜಿಲ್ಲೆಯ ಜನರು ನೆಮ್ಮದಿಯ ನಾಳೆಗಳ ನಿರೀಕ್ಷಿಸುತ್ತಿದ್ದಾರಷ್ಟೇ!!

-ಶುದ್ದೋಧನ


ಇದನ್ನು ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...