Homeಕರ್ನಾಟಕದಕ್ಷಿಣ ಕನ್ನಡ ಡಿಸಿ ಸಿಂಧೂ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ್ದೇಕೆ?

ದಕ್ಷಿಣ ಕನ್ನಡ ಡಿಸಿ ಸಿಂಧೂ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ್ದೇಕೆ?

- Advertisement -
- Advertisement -

ದಕ್ಷಿಣ ಕನ್ನಡ ಯಾವ ಮೂಲೆಯಲ್ಲಿ ನಿಂತು ಎಂಥ ತಾಳೆಹಾಕಿ ಲೆಕ್ಕಮಾಡಿದರೂ ಇದೊಂದು ಸಂಘಪರಿವಾರದ ರಿಪಬ್ಲಿಕ್ ಎಂಬುದು ಪಕ್ಕಾ ಆಗುತ್ತದೆ! ಸಂಸ್ಕೃತಿ ಹಾಗೂ ಗೋರಕ್ಷಣೆ ಮುಖವಾಡ ಹೊದ್ದ ಕ್ರಿಮಿನಲ್‍ಗಳ – ಹಫ್ತಾ ವಸೂಲಿಗಾರ ಅನೈತಿಕ ಪೊಲೀಸ್ ಪಡೆಯ ಹಾವಳಿ ಜಿಲ್ಲೆಯಲ್ಲಿ ಮಿತಿಮೀರಿದೆ!

ಜಾನುವಾರು ಸಾಗಾಟಗಾರರನ್ನು ತಡೆದು ಹೊಡೆದು ಬಡಿದು ಲೂಟಿ ಮಾಡಿ ಆ ಜಾನುವಾರುಗಳನ್ನು ಗೋಶಾಲೆಗೆ ಸಾಗಿಸುವ ಪ್ರಹಸನ ನಡೆಸುತ್ತಲೇ ಗುಟ್ಟಾಗಿ ಕಸಾಯಿಖಾನೆಗೆ ಮಾರುವ ನಕಲಿ ಗೋರಕ್ಷಕರ ಆಟ ಕರಾವಳಿಯಲ್ಲಿ ಬಹಿರಂಗ ರಹಸ್ಯ. ತಮ್ಮ ಬೆನ್ನ ಹಿಂದೆ ಸಂಘಪರಿವಾರದ ಡಾನ್‍ಗಳು ಮತ್ತು ಪರಿವಾರದ ಮಂತ್ರಿ, ಎಂ.ಪಿ. ಎಮ್ಮೆಲ್ಲೆಗಳಂಥ ಬಲಾಢ್ಯರಿದ್ದಾರೆಂಬ ಸೊಕ್ಕಿನ ಅನೈತಿಕ ಪೊಲೀಸ್ ಬೆಟಾಲಿಯನ್ ಅಧಿಕೃತ ಪೊಲೀಸ್ ಇಲಾಖೆಯನ್ನೇ ನಿಯಂತ್ರಿಸುವಷ್ಟು ಭೀಭತ್ಸವಾಗಿ ಬೆಳೆದುಬಿಟ್ಟಿದೆ!

ಅಧಿಕಾರಸ್ಥರ ಕೃಪಾಶೀರ್ವಾದದ ಕೌಬ್ರಿಗೇಡ್ ಡಿಸಿ, ಎಸ್ಪಿಯಂಥ ಉನ್ನತ ಅಧಿಕಾರಿಗಳಿಗೂ ಕೇರ್ ಮಾಡದೆ ಕಾನೂನು ಕೈಗೆತ್ತಿಕೊಳ್ಳುವಷ್ಟು ಕೊಬ್ಬಿದ್ದಾರೆಂಬುದಕ್ಕೆ ಕಳೆದ ವಾರ ನಡೆದ ‘ಕೊಲೆಬೆದರಿಕೆ’ ಪ್ರಕರಣ ನಿಸ್ಸಂಶಯವಾಗಿ ಸಾಬೀತುಪಡಿಸಿದೆ. ಬಕ್ರೀದ್ ಹೊತ್ತಲ್ಲಿ ಅಕ್ರಮ ಗೋಸಾಗಾಟ-ಅನಧಿಕೃತ ಕಸಾಯಿಖಾನೆ ನಡೆಯದಂತೆ ನೋಡಿಕೊಳ್ಳಿ; ಅಕ್ರಮ ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡುವವರನ್ನು ಕಠಿಣವಾಗಿ ನಿಭಾಯಿಸಿ ಎಂಬ ಎರಡು ಆದೇಶ ಜಿಲ್ಲಾಧಿಕಾರಿಣಿ ಸಿಂಧೂ ರೂಪೇಶ್ ಪೊಲೀಸ್ ಅಧಿಕಾರಿಗಳಿಗೆ ನೀಡಿದ್ದರು.

ಇದರಲ್ಲಿ ಎರಡನೇ ನಿರ್ದೇಶನ ಕೌಬಾಯ್‍ಗಳ ಕೆರಳಿಸಿದೆ. ಸಂಘಪರಿವಾರದ ವಾಟ್ಸಾಪ್ ಗ್ರೂಪ್‍ಗಳಲ್ಲಿ ಜಿಲ್ಲಾಧಿಕಾರಿಣಿಯನ್ನು ಟೀಕಿಸುವ, ನಿಂದಿಸುವ, ಕೊಂದೇಹಾಕುವ ಸಂದೇಶಗಳ ವಿನಿಮಯ ಬಿರುಸಾಗಿ ನಡೆದಿದೆ!

ದಕಿಣ ಕನ್ನಡದಲ್ಲಿ ದಿನಗಳೆದಂತೆ ಜಾನುವಾರು ದಂಧೆ ಮಾಡುವ ಮುಸ್ಲಿಮರನ್ನು ಅಟ್ಟಾಡಿಸಿ ಹಿಂಸಿಸುವ, ದರೋಡೆ ಮಾಡಿ ದಾಂಧಲೆ ಎಬ್ಬಿಸುವ ‘ಸಂಸ್ಕೃತಿವಂತರ’ ಉಪಟಳ ಜೋರಾಗುತ್ತಿರುವುದು ಸಹಜವಾಗೇ ಕರ್ತವ್ಯನಿಷ್ಠ ಜಿಲ್ಲಾಧಿಕಾರಿ ಸಿಂಧೂ ಅವರ ತಲೆಬಿಸಿ ಮಾಡಿತ್ತು.

ಇದು ಬಕ್ರೀದ್ ಹಬ್ಬದ ಹೊತ್ತಲ್ಲಿ ಹೆಚ್ಚಾಗುವ ಆತಂಕವೂ ಆಕೆಯಲ್ಲಿತ್ತು. ಹಾಗಾಗಿ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದ ಸಿಂಧೂ ಮೇಡಮ್ ‘ಅಕ್ರಮ ಗೋಸಾಗಾಟಗಾರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕು; ಪೊಲೀಸರೇ ಅಂಥವರ ವಿರುದ್ಧ ಕೇಸು ಹಾಕುತ್ತಾರೆ; ಗೋಸಾಗಾಟಗಾರರ ಮೇಲೆ ಗೂಂಡಾಗಿರಿ, ಥಳಿತ ನಡೆಸಿದರೆ ಅಂಥವರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಲಾಗುತ್ತದೆ..’ ಎಂದು ಎಚ್ಚರಿಕೆ ನೀಡಿದ್ದರು.

ಮಾಧ್ಯಮದಲ್ಲಿ ಬಂದಿದ್ದ ಈ ಹೇಳಿಕೆ ಸಂಘಪರಿವಾರದ ‘ರಾಮ್‍ಸೇನಾ ಅಭಿಯಾನ್’ ಎಂಬ ವಾಟ್ಸಾಪ್ ಗ್ರೂಪಿನಲ್ಲಿ ಪೋಸ್ಟ್ ಆಗಿದೆ. ಇದರ ಸುತ್ತ ಚರ್ಚೆ ನಡೆದು ಡಿಸಿ ಸಿಂಧೂ ಅವರನ್ನ ಮೂದಲಿಸಲಾಗಿದೆ. +919632188546 ಮೊಬೈಲ್ ಸಂಖ್ಯೆಯ ತೆಂಕಮಿಜಾರಿನ ರಂಜಿತ್ ಎಂಬ ಹರೆಯದ ಹುಡುಗ ‘ಫಸ್ಟ್ ಮೊಲೆನ್ ಕರ್ತೆ ಕೆರೊಡು’ ಎಂದು ತುಳು ಭಾಷೆಯ ಸಂದೇಶ ಪೋಸ್ಟ್ ಮಾಡಿದ್ದಾನೆ. ಇದರರ್ಥ ‘ಮೊದಲು ಇವಳನ್ನು (ಡಿಸಿಯನ್ನು) ಕಡಿದು ಕೊಲ್ಲಬೇಕು’ ಎಂಬುದಾಗಿದೆ.

ಈ ಕೊಲ್ಲುವ ಕ್ರೌರ್ಯದ ಚರ್ಚೆ ದಕ್ಷಿಣ ಕನ್ನಡದ ಮಾನವೀಯ ಮಂದಿಯನ್ನು ಬೆಚ್ಚಿಬೀಳಿಸಿದೆ. ಡಿಸಿಯನ್ನೇ ಬಿಡದವರು ಸಾಮಾನ್ಯರನ್ನು ಬಿಡುವರಾ? ಇಂಥವರ ಮೇಲೆ ಕಾನೂನು ಕ್ರಮ ತಕ್ಷಣ ಜರುಗಬೇಕೆಂಬ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ನಡೆದಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ರಂಜಿತ್‍ನನ್ನು ಬಂಧಿಸಿದ್ದಾರೆ.

ಇಷ್ಟು ದೊಡ್ಡ ಗಲಾಟೆಯಾದರೂ ದಕ್ಷಿಣ ಕನ್ನಡದಲ್ಲಿ ತುಂಬಿ ತುಳುಕುವ ಬಿಜೆಪಿ ಎಂಪಿ, ಎಮ್ಮೆಲ್ಲೆ, ಎಮ್ಮೆಲ್ಸಿಗಳಲ್ಲಿ ಒಬ್ಬೇ ಒಬ್ಬ ಪ್ರತಿಕ್ರಿಯಿಸುವುದಿಲ್ಲ; ಶಾಂತಿ ಸುವ್ಯವಸ್ಥೆ ಕಾಪಾಡುವ ಕರ್ತವ್ಯ ಬದ್ಧತೆ ತೋರಿದ ಜಿಲ್ಲಾಧಿಕಾರಿ ಸಿಂಧೂಗೆ ನೈತಿಕ ಬೆಂಬಲ ನೀಡಬೇಕಿದ್ದ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ, ಉಳಿದ ಶಾಸಕ, ಸಂಸದರು ಬುದ್ಧಿಪೂರ್ವಕವಾಗೇ ಸುಮ್ಮನಿದ್ದರು.

ಜಿಲ್ಲೆಯ ನೆಮ್ಮದಿ ಕಾಪಾಡುವುದು ತಮ್ಮದೂ ಕರ್ತವ್ಯವೆಂಬುದು ಈ ಹೊಣೆಗೇಡಿ ರಾಜಕಾರಣಿಗಳಿಗೆ ಅನ್ನಿಸಲಿಲ್ಲ. ಮೌನ ಪ್ರದರ್ಶಿಸಿ ಗೂಂಡಾಗಳಿಗೆ ‘ಧೈರ್ಯ’ ತುಂಬಿದ್ದಾರೆ. ಇದಾದ ಎರಡೇ ದಿನಕ್ಕೆ ಮುಖ್ಯಮಂತ್ರಿ ಯಡ್ಡಿಯೂರಪ್ಪ ಸರ್ಕಾರ ಸಿಂಧೂ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ ಖೋಟಾ ಗೋ ಸಂರಕ್ಷಕರ ತಂಟೆಗೆ ಹೋದವರಿಗೆ ದಕ್ಷಿಣ ಕನ್ನಡದಲ್ಲಿ ಉಳಿಗಾಲವಿಲ್ಲ ಎಂಬುದು ಖಾತ್ರಿಗೊಳಿಸಿದ್ದಾರೆ!

ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕಿದ್ದ ಪೊಲೀಸ್ ಇಲಾಖೆ, ಅದನ್ನು ಸಂಘ ಪರಿವಾರದ ತರಹೇವಾರಿ ತಂಡಗಳ ಪುಂಡರ ಕೈಗೊಪ್ಪಿಸಿ ಆ ಗ್ಯಾಂಗುಗಳು ಹೇಳಿದಂತೆ ಕೇಳುತ್ತಿದೆಯೇನೋ ಎಂಬ ಅನುಮಾನ ಬಲವಾಗಲು ಕಾರಣವಿದೆ. ಜಾನುವಾರು ವ್ಯಾಪಾರಿ ಮುಸ್ಲಿಮರ ರಕ್ತ ಹರಿಸಿ ಅವರ ಮೊಬೈಲ್, ಹಣ ಕೊಳ್ಳೆಹೊಡೆಯುವ ನಕಲಿ ಗೋರಕ್ಷಕರು ನಂತರ ‘ಆರೋಪಿ’ಗಳನ್ನು ಠಾಣೆಗೊಯ್ದು ತಾವು ಹೇಳಿದಂತೆ ಪೊಲೀಸರಿಂದ ಎಫ್‍ಐಆರ್ ಬರೆಸುತ್ತಾರೆ. ಹೀಗಾಗಿ ಅಧಿಕೃತ ಪರವಾನಗಿಯೊಂದಿಗೆ ದನ, ಎಮ್ಮೆ ಸಾಗಿಸಿದರೂ ಜಾಮೀನುರಹಿತ ಕೇಸು ಬೀಳುತ್ತದೆ.

ಮಾರಣಾಂತಿಕ ದಾಳಿ ಮಾಡಿದ ಸಂಘ ಸದಸ್ಯರ ಮೇಲೆ ಪೆಟ್ಟಿಕೇಸ್ ಹಾಕಿ ಗೌರವದೊಂದಿಗೆ ಬೀಳ್ಕೊಡಲಾಗುತ್ತದೆ. ಅನೈತಿಕ ಪೊಲೀಸರು ಧರ್ಮ, ಸಂಸ್ಕೃತಿ ದೇವರು ತೋರಿಸಿ ಬ್ಲಾಕ್‍ಮೇಲ್ ಮಾಡಿ ಪಾರಾಗುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ. ಪೊಲೀಸರು ಮತ್ತು ಗೋಗೂಂಡಾಗಳ ಅನೈತಿಕ ಮೈತ್ರಿಯಿಂದಾಗಿ ರೌಡಿಗಳೆಂದು ಸಮಾಜದಿಂದ ತಿರಸ್ಕರಿಸಲ್ಪಟ್ಟವರು ಇಂದು ಧರ್ಮರಕ್ಷಕ ಗೆಟಪ್ಪಿನಲ್ಲಿ ಮೆರೆದಾಡುತ್ತಿದ್ದಾರೆ.

ದಕ್ಷಿಣಕನ್ನಡದ ಕಾನೂನು ಮತ್ತು ಸುವ್ಯವಸ್ಥೆ ಅದೆಂಥ ಮಟ್ಟಕ್ಕೆ ತಲುಪಿದೆಯೆಂದರೆ ಬಿಜೆಪಿ ಶಾಸಕರು ಕರೆಯುವ ಅಧಿಕಾರಿಗಳ ಸಭೆಯಲ್ಲಿ ಹತ್ತಾರು ಕ್ರಿಮಿನಲ್ ಕೇಸ್ ರೂವಾರಿಗಳು ಪೊಲೀಸರಿಗೆ, ಅಧಿಕಾರಿಗಳಿಗೆ ಸಲಹೆ, ಸೂಚನೆ ಕೊಡುತ್ತಿದ್ದಾರೆ. ಡಿಸಿ ಸಿಂಧೂ ಮೇಡಮ್‍ಗೆ ಬಂದ ಕೊಲೆ ಬೆದರಿಕೆ ಪ್ರಕರಣದ ಬೆನ್ನಲ್ಲೇ ಬೆಳ್ತಗಂಡಿ ಶಾಸಕ ಹರೀಶ್‍ಪೂಂಜಾ ಕರೆದಿದ್ದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ಸರಿಸಮನಾಗಿ ಗೋ-ಗೂಂಡಾಗಳು ಕುಳಿತಿದ್ದರು.

ಅಕ್ರಮ ಗೋಸಾಗಾಟ ತಡೆಯುವ ಕುರಿತು ಶಾಸಕ ಪೂಂಜಾ ನಡೆಸಿದ್ದ ಮೀಟಿಂಗ್ ಇದು. ಇಲ್ಲಿ ಸಂಘಪರಿವಾರದ ಗೋ-ಗೂಂಡಾಗಳು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ವಾಣಿಯಲ್ಲಿ ‘ಸಲಹೆ, ಮಾರ್ಗದರ್ಶನ’ ಕೊಡುತ್ತಿದ್ದರು. ಪೊಲೀಸರ ನೈತಿಕ ಸ್ಥೈರ್ಯವನ್ನೇ ಕುಗ್ಗಿಸುವ ಸಭೆಗಳನ್ನು ನಡೆಸುವ ಶಾಸಕ ಪೂಂಜಾರಿಂದ ಬೆಳ್ತಗಂಡಿಯಲ್ಲಿ ನೆಮ್ಮದಿ ನಿರೀಕ್ಷಿಸಲು ಸಾಧ್ಯವಾ?

‘ದಕ್ಷಿಣ ಕನ್ನಡಕ್ಕೆ ಬೆಂಕಿ ಹಾಕೋದು ಹೇಗೆಂದು ನಂಗೆ ಗೊತ್ತಿದೆ’ ಎಂದು ಬಹಿರಂಗವಾಗೇ ಹೇಳುವ ಸಂಸದ ನಳಿನ್ ಕುಮಾರ್ ಕಟೀಲ್ ಈಗ ಆಳುವ ಬಿಜೆಪಿಯ ರಾಜ್ಯಾಧ್ಯಕ್ಷ. ಗೋರಕ್ಷಕ ತಂಡಗಳ ಅನಭಿಷಕ್ತ ದೊರೆಯಂತಿರುವ ನಳಿನ್‍ನ ಮನದಿಚ್ಛೆಯಂತೆ ಜಿಲ್ಲಾಡಳಿತ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ “ಪಾಪ ಪೂಜಾರಿ” ಅನ್ನಿಸಿಕೊಳ್ಳುತ್ತಿದ್ದಾರೆ ಬಿಜೆಪಿ ಕಾರ್ಯಕರ್ತರಿಂದ! ಇಂಥ ಕಾನೂನು ಸುವ್ಯವಸ್ಥೆಯ ಸಮಸ್ಯೆಯ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಡಾ|| ರಾಜೇಂದ್ರ ಬಂದಿದ್ದಾರೆ. ಹೊಸ ಡಿಸಿ ಸಾಹೇಬರಿಂದ ಜಿಲ್ಲೆಯ ಜನರು ನೆಮ್ಮದಿಯ ನಾಳೆಗಳ ನಿರೀಕ್ಷಿಸುತ್ತಿದ್ದಾರಷ್ಟೇ!!

-ಶುದ್ದೋಧನ


ಇದನ್ನು ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...