Homeಮುಖಪುಟಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಶಿವಸೇನೆಯಿಂದ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆಗೆ ಗುರುವಾಗುವ ಕನಸು ಕಂಡಿದ್ದ ದೇವೇಂದ್ರ ಫಡ್ನವೀಸ್ ಕಡೆಗೆ ತಾವೇ ಅವರ ಜೂನಿಯರ್ ಆಗಿ ಕೆಲಸ ಮಾಡಬೇಕಾದ ಸ್ಥಿತಿಗೆ ಬಂದು ನಿಂತಿದ್ದಾರೆ!

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳು ಅಚ್ಚರಿಯ ಬದಲಾವಣೆಗಳಿಗೆ ಕಾರಣವಾಗಿವೆ. ಮಹಾರಾಷ್ಟ್ರದ ಆಪರೇಷನ್ ಕಮಲದ ರೂವಾರಿ ಎಂದು ಬಿಂಬಿಸಿಕೊಳ್ಳುತ್ತಿದ್ದ ಮಾಜಿ ಸಿಎಂ, ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಏಕಾಏಕಿ ಮೂಲೆಗೆ ತಳ್ಳಲ್ಪಟ್ಟರು. ಗುರವಾರದ ಬೆಳಿಗ್ಗೆಯವರೆಗೂ ತಾನೇ ಸಿಎಂ ಎಂದು ಬೀಗುತ್ತಿದ್ದ ಅವರು ಮಧ್ಯಾಹ್ನದ ವೇಳೆಗೆ ಸಿಎಂ ಸ್ಥಾನ ಸಿಗುವುದಿಲ್ಲ ಎಂದು ಅರಿತರು. ನಂತರ ನನಗೆ ನೂತನ ಸರ್ಕಾರದಲ್ಲಿ ಯಾವುದೇ ಹುದ್ದೆ ಬೇಡ, ಸರ್ಕಾರ ಸುಗಮ ರೀತಿಯಲ್ಲಿ ನಡೆದುಕೊಂಡು ಹೋಗಲು ಸಹಕರಿಸುವುದಾಗಿ ಹೇಳಿದರು. ಒಂದು ರೀತಿಯಲ್ಲಿ ತಮ್ಮ ಮುನಿಸನ್ನು ಹೊರಹಾಕಿದರು. ಆದರೆ ಸಂಜೆ ವೇಳೆಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾದ ಪರಿಸ್ಥಿತಿ ಅವರದ್ದಾಗಿತ್ತು. ಆ ಮೂಲಕ ಬಿಜೆಪಿ ಹೈಕಮಾಂಡ್‌ ತನ್ನ ಹಂಗಿಲ್ಲದೆ ಯಾರೂ ಮುಂದುವರೆಯಲು ಸಾಧ್ಯವಿಲ್ಲ ಎಂಬ ಸಂದೇಶ ಸಾರಿತು.

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ (ಎರಡನೇ ಬಾರಿ ಕೇವಲ 4 ದಿನಗಳು ಮಾತ್ರ) ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಶಿವಸೇನೆಯಿಂದ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆಗೆ ಗುರುವಾಗುವ ಕನಸು ಕಂಡಿದ್ದರು. ಆದರೆ ತಾವೇ ಅವರ ಜೂನಿಯರ್ ಆಗಿ ಕೆಲಸ ಮಾಡಬೇಕಾದ ಸ್ಥಿತಿಗೆ ಬಿಜೆಪಿ ಹೈಕಮಾಂಡ್ ಅವರನ್ನು ನೂಕಿತು. ಅದರ ವಿರುದ್ಧ ಬಂಡಾಯವೇಳುವ ಶಕ್ತಿ, ಸ್ವಾಭಿಮಾನ ಯಾವುದು ಸಹ ಅವರಿಗಿಲ್ಲ ಎನ್ನುವುದು ಹೈಕಮಾಂಡ್‌ಗೆ ಗೊತ್ತಿದ್ದರಿಂದಲೇ ಅದು ಆ ದಾಳ ಉರುಳಿಸಿತು ಅನ್ನುತ್ತಾರೆ ರಾಜಕೀಯ ವಿಶ್ಲೇಷಕರು.

“ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ, ಫಡ್ನವೀಸ್ ಉಪಮುಖ್ಯಮಂತ್ರಿಯಾಗಬೇಕು. ನಾನು ಅವರನ್ನು ವೈಯಕ್ತಿಕವಾಗಿ ವಿನಂತಿಸುತ್ತೇನೆ” ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದರು. ಅದರ ಬೆನ್ನಲ್ಲೆ “ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರ ಆದೇಶದ ಮೇರೆಗೆ ಫಡ್ನವೀಸ್ ಅವರು ವಿಶಾಲ ಹೃದಯ ಮೆರೆದಿದ್ದಾರೆ ಮತ್ತು ಮಹಾರಾಷ್ಟ್ರದ ರಾಜ್ಯ ಮತ್ತು ಸಾರ್ವಜನಿಕರ ಹಿತಾಸಕ್ತಿಯಿಂದ ಸರ್ಕಾರಕ್ಕೆ ಸೇರಲು ನಿರ್ಧರಿಸಿದ್ದಾರೆ. ಈ ನಿರ್ಧಾರವು ಮಹಾರಾಷ್ಟ್ರದ ಬಗ್ಗೆ ಅವರ ನಿಜವಾದ ನಿಷ್ಠೆ ಮತ್ತು ಸೇವೆಯ ಸಂಕೇತವಾಗಿದೆ. ಇದಕ್ಕಾಗಿ ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ” ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದರು. ಆಗ ಅನಿವಾರ್ಯವಾಗಿ ಫಡ್ನವೀಸ್ ಪತ್ರಿಕಾಗೋಷ್ಟಿಯಲ್ಲಿ ಏಕನಾಥ್ ಶಿಂಧೆಯವರನ್ನು ಸಿಎಂ ಎಂದು ಘೋಷಿಸಿದರು. “ಒಬ್ಬ ಅಪ್ಪಟ ಕಾರ್ಯಕರ್ತನಾಗಿ ಪಕ್ಷದ ಆದೇಶ ಪಾಲಿಸುತ್ತೇನೆ. ನನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿದ ಪಕ್ಷದ ಆದೇಶವೇ ನನಗೆ ಬಹುಮುಖ್ಯ” ಎಂದು ಟ್ವೀಟ್ ಮಾಡಿದರು. ನಂತರ ಕೊನೆಯಲ್ಲಿ ಪ್ರಧಾನಿ ಮೋದಿ ಉಪಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದರು!.

ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್‌ರವರನ್ನು ಬೆಳೆಸಿದ್ದು ಇದೇ ಬಿಜೆಪಿ ಹೈಕಮಾಂಡ್. ಏಕೆಂದರೆ ಯಾವುದೇ ರಾಜ್ಯದಲ್ಲಿ ಜನನಾಯಕರಾಗಿರುವವರು (ಮಾಸ್ ಲೀಡರ್) ಸಿಎಂ ಆಗುವುದು ಬಿಜೆಪಿ ಹೈಕಮಾಂಡ್‌ಗೆ ಬೇಕಾಗಿಲ್ಲ. ತಾವು ಹೇಳಿದಂತೆ ಕೇಳುವ, ಎಲ್ಲಾ ನಿರ್ಧಾರಗಳಿಗೆ ತಲೆಯಾಡಿಸುವವರು ಬೇಕು. ಹಾಗಾಗಿ ಜಾತಿಯಲ್ಲೂ, ವರ್ಚಸ್ಸಿನಲ್ಲಿಯೂ ಭಾರೀ ಪ್ರಭಾವ ಹೊಂದಿರದ, ಹೇಳಿದಂತೆ ಕೇಳುವ ಫಡ್ನವೀಸ್ ಹೈಕಮಾಂಡ್‌ನ ಆಯ್ಕೆಯಾಗಿತ್ತು. ಅದು ಮಹಾರಾಷ್ಟ್ರ ಮಾತ್ರವಲ್ಲದೆ ಕರ್ನಾಟಕದಲ್ಲಿ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದು, ಗುಜರಾತ್‌ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಅದನ್ನೆ ಮಾಡಿದೆ.

ಹಾಗೆಯೇ ಯಾವುದಾದರೂ ಪ್ರಬಲ ಸಮುದಾಯದ ನಾಯಕರಿಗಿಂತ ಸಣ್ಣ ಸಮುದಾಯದ, ಹೈಕಮಾಂಡ್ ಹಂಗಿನಲ್ಲಿರುವವರು ಸಿಎಂ ಆಗಿ ಇರಬೇಕೆಂದು ಮೋದಿ, ಶಾ ಬಯಸುತ್ತಾರೆ ಎಂಬುದಕ್ಕೆ ಹಲವಾರು ಉದಾಹರಣೆಗಳಿವೆ. ಆ ಮೂಲಕ ಕೇಂದ್ರ ಬಿಜೆಪಿ ನಾಯಕರ ವರ್ಚಸ್ಸು ಮತ್ತು ಹಿಂದುತ್ವದ ಮೂಲಕ ಚುನಾವಣೆಗಳನ್ನು ಗೆಲ್ಲಬೇಕೆಂದು ಬಿಜೆಪಿ ಬಯಸುತ್ತದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಅದನ್ನು ಸಾಧಿಸಲಾಗಿದೆ. ಅದರ ಭಾಗವಾಗಿ ಕರ್ನಾಟಕದಲ್ಲಿಯೂ ಸಹ ಲಿಂಗಾಯತ ಸಮುದಾಯವೊಂದನ್ನೇ ಅವಲಂಬಿಸುವುದನ್ನು ಬಿಟ್ಟು ಹಿಂದುತ್ವದ ಮೂಲಕ ಅಧಿಕಾರಕ್ಕೇರಲು ಯಡಿಯೂರಪ್ಪನವರನ್ನು ಕೆಳಗೆ ಇಳಿಸಲಾಯ್ತು. ಅದರ ಬದಲು ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಲಾಗಿದೆ. ಅವರೊ ಬಗ್ಗಿ ಎಂದರೆ ಸಾಕು ತೆವಳಲು ಸಹ ಸಿದ್ದರಿದ್ದಾರೆ.

ಈ ಹಿಂದೆ ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗಿದ್ದಾಗ ಕೊರೊನಾ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಿದ್ದಾಗ ಅದನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದರು. ಮಾಧ್ಯಮಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದರು. ಪ್ರಧಾನಿ ಇದ್ದ ವೇದಿಕೆಯಲ್ಲಿಯೇ ಜಿಎಸ್‌ಟಿ ಬಾಕಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಅವರನ್ನು ಕೆಳಗೆ ಇಳಿಸಿ ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಲಾಗಿದೆ. ಅವರು ಸಂಘಪರಿವಾರಕ್ಕಿಂತಲೂ ಅಪಾಯಕಾರಿಯಾಗಿ ಆಡಳಿತ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಮಹಾರಾಷ್ಟ್ರದಲ್ಲಿಯೂ ಅದೇ ಸಂದೇಶ ನೀಡಲು ಬಿಜೆಪಿ ಹೈಕಮಾಂಡ್ ಬಯಸುತ್ತಿದೆ. ಯಾರಾದರೂ ತಮ್ಮ ಅಂಕೆ ಮೀರಿ ಬೆಳೆದುಬಿಟ್ಟರೆ ಎಂಬ ಭಯ ಅವರದು. ಹಾಗಾಗಿ ಸಿಎಂ ಸ್ಥಾನದಿಂದ ವಂಚಿತರಾದ ದೇವೇಂದ್ರ ಫಡ್ನವೀಸ್‌ರನ್ನು ತಮ್ಮ ಅಂಕೆಯಲ್ಲಿಟ್ಟುಕೊಳ್ಳುವ ಭಾಗವಾಗಿ ಅವರಿಗೆ ಒಪ್ಪಿಗೆ ಇಲ್ಲದಿದ್ದರೂ ಡಿಸಿಎಂ ಮಾಡಲಾಗಿದೆ. ಹೈಕಮಾಂಡ್ ಹೇಳಿದ ಮೇಲೆ ಮುಗಿಯಿತು. ಕೇಳಲೇಬೇಕು, ಅದನ್ನು ಮೀರಿ ಬಂಡಾಯವೆದ್ದರೆ ಅವರನ್ನು ನೋಡಿಕೊಳ್ಳಲು ಹೇಗಿದ್ದರೂ ಇಡಿ, ಸಿಬಿಐ ಇದ್ದೆ ಇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...