Homeಮುಖಪುಟಒಂದು ಸಂಶೋಧನಾ ಪ್ರಬಂಧಕ್ಕೆ ಸರಕಾರ ಹೆದರಿತೇಕೆ?

ಒಂದು ಸಂಶೋಧನಾ ಪ್ರಬಂಧಕ್ಕೆ ಸರಕಾರ ಹೆದರಿತೇಕೆ?

- Advertisement -
- Advertisement -

15ನೇ ಆಗಸ್ಟ್‌ಗೆ ಒಂದು ದಿನ ಮುನ್ನ ಬಂದ ಈ ಸುದ್ದಿ ಸ್ವಾತಂತ್ರ್ಯದ ಪರವಿರುವ ಪ್ರತಿಯೊಬ್ಬ ಭಾರತೀಯಳಿ/ನಿಗೆ ಚಿಂತೆಗೆ ದೂಡುತ್ತಿದೆ. ಸುದ್ದಿ ಏನೆಂದರೆ, ಅಶೋಕ ಯುನಿವರ್ಸಿಟಿಯ ಅರ್ಥಶಾಸ್ತ್ರದ ಯುವ ಪ್ರೊಫೆಸರ್ ಸಬ್ಯಸಾಚಿ ದಾಸ್ ರಾಜೀನಾಮೆ ನೀಡಬೇಕಾಗಿ ಬಂದಿದೆ. ಅವರು ಮಾಡಿದ ಅಪರಾಧವೇನೆಂದರೆ ಅವರು 2019ರ ಚುನಾವಣೆಗಳ ಅಂಕಿಅಂಶಗಳ ವಿಶ್ಲೇಷಣೆ ಮಾಡಿ ಒಂದು ಅಕೆಡೆಮಿಕ್ ಪ್ರಬಂಧ ಬರೆದಿದ್ದರು. ಈ ಸುದ್ದಿ ದೇಶದ ವಿಶ್ವವಿದ್ಯಾಲಯಗಳು ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಉಳಿದುಕೊಂಡಿರುವ ಅಕೆಡೆಮಿಕ್ ಸ್ವಾತಂತ್ರದ ಮೇಲೆ ಘೋರ ಆಘಾತವಾಗಿದೆ.

ಅಂದಹಾಗೆ ಈ ಲೇಖಕರಿಗೆ ಹೆದರುವ ಯಾವ ಕಾರಣವೂ ಸರಕಾರಕ್ಕಿಲ್ಲ. ಸಬ್ಯಸಾಚಿ ದಾಸ್ ಇನ್ನೂ ಒಬ್ಬ ಪ್ರಸಿದ್ಧವಾದ ಅರ್ಥಶಾಸ್ತ್ರಜ್ಞರಲ್ಲ. ಅವರ ಹೆಚ್ಚಿನ ಲೇಖನಗಳು ಕಲ್ಯಾಣ ಯೋಜನೆಗಳ ಮೌಲ್ಯಮಾಪದಂತಹ ಪ್ರಶ್ನೆಗಳ ಮೇಲಿವೆ. ಯಾವುದೇ ರಾಜಕೀಯ ಸಂಘಟನೆ ಅಥವಾ ಸಿದ್ಧಾಂತದೊಂದಿಗೆ ಅವರ ಯಾವುದೇ ಸಂಬಂಧಗಳು ಕಂಡುಬಂದಿಲ್ಲ. ಹಾಗೂ ಸರಕಾರ ತನ್ನ ದಂಡ ಚಲಾಯಿಸಲು ಅಶೋಕ ಯುನಿವರ್ಸಿಟಿ ಯಾವುದೇ ಸರಕಾರಿ ಅನುದಾನದ ಮೇಲೆ ನಡೆಯುವ ಸಂಸ್ಥೆಯಂತೂ ಅಲ್ಲ.

ಯಾವ ಲೇಖನದ ಮೇಲೆ ಇಷ್ಟೊಂದು ವಿವಾದವಾಗಿದೆಯೋ, ಅದು ಈಗ ರಹಸ್ಯವಾಗಿ ಉಳಿದಿಲ್ಲ. ಈ ಲೇಖನವನ್ನು ಕೇವಲ ಒಂದೆರಡು ಕಾನ್ಫರೆನ್ಸ್‌ಗಳಲ್ಲಿ ಪ್ರಸ್ತುತಪಡಿಸಲಾಗಿದೆ ಹಾಗೂ ಪ್ರಕಟವಾಗುವುದಕ್ಕೂ ಮುಂಚೆ ಚರ್ಚೆಗೆ ಲಭ್ಯವಿದೆ. ಈ ಲೇಖನದಲ್ಲಿ ಸರಕಾರದ ಯಾವ ಟೀಕೆಯೂ ಇಲ್ಲ, ಬಿಜೆಪಿಯನ್ನು ನಿಂದಿಸಿಲ್ಲ, ಯಾವುದೇ ಆರೋಪ ಪ್ರತ್ಯಾರೋಪಗಳಿಲ್ಲ ಹಾಗೂ ಯಾವುದೇ ರಾಜಕೀಯ ವಾಗ್ದಾಳಿಯೂ ಇಲ್ಲ. “ಡೆಮಾಕ್ರಟಿಕ್ ಬ್ಯಾಕ್‌ಸ್ಲೈಡಿಂಗ್ ಇನ್ ವರ್ಲ್ಡ್‌ಸ್ ಲಾರ್ಜೆಸ್ಟ್ ಡೆಮಾಕ್ರಸಿ” (ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರಜಾಸತ್ತೆಯ ಹಿನ್ನಡೆ) ತಲೆಬರಹದ ಈ ಲೇಖನದಲ್ಲಿ 2019ರ ಲೋಕಸಭಾ ಚುನಾವಣೆಗಳ ಅಧಿಕೃತ ಪರಿಣಾಮಗಳನ್ನು ಸಂಖ್ಯಾಶಾಸ್ತ್ರದ ವಿಧಾನದ ಮೂಲಕ ವಿಶ್ಲೇಷಣೆ ಮಾಡಿದ್ದಾರೆ. ಒಂದು ಕಾಲದಲ್ಲಿ ನಾನೂ ಈ ವಿಷಯದ ಪರಿಣಿತನಾಗಿದ್ದರಿಂದ ವಿಶ್ವಾಸದಿಂದ ಇಷ್ಟು ಹೇಳಬಲ್ಲೆ; ಸಬ್ಯಸಾಚಿ ದಾಸ್‌ರ ಈ ಲೇಖನ ಭಾರತದ ಚುನಾವಣಾ ಅಂಕಿಅಂಶಗಳ ಮೇಲೆ ಬರೆಯಲಾಗಿರುವ ಅತ್ಯಂತ ಗಂಭೀರ ಹಾಗೂ ಗಹನವಾದ ಲೇಖನಗಳಲ್ಲಿ ಒಂದು ಎಂದು.

ನಿಶಿಕಾಂತ್ ದುಬೆ

ಈ ಅಂಕಿಅಂಶಗಳ ಅಥವಾ ವಿಧಾನದಲ್ಲಿ ಯಾವುದೇ ವಿವಾದವಿಲ್ಲ, ವಿವಾದವಿರುವುದು ಈ ಲೇಖನದ ನಿಷ್ಕರ್ಷದಲ್ಲಿ. 2019ರ ಚುನಾವಣೆಗಳ ಮತಗಟ್ಟೆಯಿಂದ ಹಿಡಿದು ಸೀಟುಗಳ ತನಕ ಅಂಕಿಅಂಶಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ ನಂತರ ಏನೋ ಸಮಸ್ಯೆ ಇದೆ ಎಂಬ ನಿಷ್ಕರ್ಷಕ್ಕೆ ಲೇಖಕರು ಬರುತ್ತಾರೆ. ಯಾವ 59 ಕ್ಷೇತ್ರಗಳಲ್ಲಿ ಸೋಲುಗೆಲುವಿನ ತೀರ್ಮಾನ ಶೇ.5ಕ್ಕಿಂತ ಕಡಿಮೆ ಆಗಿದೆಯೋ, ಅವುಗಳಲ್ಲಿ 41 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಗಣಿತದ ಸಾಮಾನ್ಯ ನಿಯಮಗಳ ಅನುಗುಣವಾಗಿ ಹಾಗೂ ದೇಶ ಮತ್ತು ಜಗತ್ತಿನ ಚುನಾವಣೆಗಳ ಹಳೆಯ ದಾಖಲೆಗಳನ್ನು ನೋಡಿದರೆ, ಇದು ಅತ್ಯಂತ ಅಸಾಮಾನ್ಯವಾದ ಪ್ರವೃತ್ತಿಯಾಗಿ ಕಂಡುಬರುತ್ತದೆ. ಈ ಇಡೀ ಲೇಖನ ಅಸಾಮಾನ್ಯ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ನೋಡುತ್ತದೆ. ಬಿಜೆಪಿಯು ಅತ್ಯುತ್ತಮವಾಗಿ ಊಹೆಮಾಡಿರಬಹುದಾದ ಮುನ್ಸೂಚನೆ ಮತ್ತು ಉತ್ತಮವಾದ ಚುನಾವಣಾ ಪ್ರಚಾರದ ಕಾರಣದಿಂದ ಹೀಗೆ ಆಗಿರಬಹುದು ಎಂಬ ಸಾಧ್ಯತೆಯನ್ನು ಈ ಲೇಖನವು ಪರಿಶೀಲಿಸಿ ಅದನ್ನು ತಳ್ಳಿಹಾಕುತ್ತದೆ. ನಂತರ ಒಂದೊಂದು ವಿಷಯಕ್ಕೆ ಸಾಕ್ಷ್ಯ ಒದಗಿಸುತ್ತ ಈ ಲೇಖನವು ಕೆಲವು ಕ್ಷೇತ್ರಗಳಲ್ಲಿ ಅಕ್ರಮ ಆಗಿದೆ ಎಂಬುದನ್ನು ಸೂಚಿಸುತ್ತದೆ. ಲೇಖಕರ ಪ್ರಕಾರ, ಇದು ಕೆಲವು ಆಯ್ದ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಅಥವಾ ಮತದಾನದ ಅಥವಾ ಮತ ಎಣಿಕೆಯಲ್ಲಿ ಅಕ್ರಮ ಮಾಡುವುದರ ಮೂಲಕ ಆಗಿದೆ. ಈ ಲೇಖನ ಸಂಖ್ಯಾಶಾಸ್ತ್ರೀಯ ಪದ್ಧತಿಯ ಮೇಲೆ ಆಧಾರಿತವಾಗಿರುವುದರಿಂದ ಮೋಸದಾಟದ ಸಾಧ್ಯತೆಯನ್ನು ಸೂಚಿಸಬಲ್ಲದು; ಆದರೆ ಅದಕ್ಕೆ ಸಾಕ್ಷ್ಯ ಒದಗಿಸಲಾರದು. ಯಾವುದೇ ಸೆನ್ಸೇಷನಲ್ ಆರೋಪ ಹೊರಿಸುವ ಕೆಲಸ ಮಾಡದೇ ಲೇಖಕರು ಸ್ಪಷ್ಟಪಡಿಸುವುದೇನೆಂದರೆ, ಹೀಗೆ ಮಾಡಿದ್ದರೂ ಕೂಡ ಇದರಿಂದ ಬಿಜೆಪಿಗೆ ಗರಿಷ್ಠ 9ರಿಂದ 18 ಸೀಟುಗಳ ನಷ್ಟವಾಗುತ್ತಿತ್ತು. ಅದರಿಂದ ಬಿಜೆಪಿಯ ಬಹುಮತದ ಮೇಲೆ ಯಾವ ಪರಿಣಾಮವೂ ಬೀರುತ್ತಿರಲಿಲ್ಲ. ಹಾಗಾಗಿ ಲೇಖಕರು ಸ್ಪಷ್ಟಪಡಿಸುವುದೇನೆಂದರೆ, 2019ರಲ್ಲಿ ಬಿಜೆಪಿಯು ಮೋಸದಿಂದ ಚುನಾವಣೆ ಗೆದ್ದಿತ್ತು ಎಂಬ ನಿಷ್ಕರ್ಷವು ಖಂಡಿತವಾಗಿಯೂ ತಪ್ಪಾಗುತ್ತದೆ.

ಇದನ್ನೂ ಓದಿ: ಸಬ್ಯಸಾಚಿ ದಾಸ್ ಗೆ ಬೆಂಬಲಿಸಿ ಅಶೋಕ ವಿವಿಯ ಮತ್ತೋರ್ವ ಪ್ರಾಧ್ಯಾಪಕ ರಾಜೀನಾಮೆ

ಇಷ್ಟು ಸೀಮಿತವಾದ ಮಾತು ಹೇಳಿದ್ದಕ್ಕೆ ಇಷ್ಟೊಂದು ವಿವಾದ ಸೃಷ್ಟಿಯಾಗಿದೆ. ಬಿಜೆಪಿಯ ಸಮರ್ಥಕರು ಲೇಖಕರ ಮೇಲೆ ಎಲ್ಲಾ ಬಗೆಯ ಅಕೆಡೆಮಿಕ್ ಮತ್ತು ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ. ಇಂತಹ ಲೇಖನ ಬರೆಯುವುದಕ್ಕೆ ನೀವು ಹೇಗೆ ಅನುಮತಿ ನೀಡಿದಿರಿ ಎಂದು ಬಿಜೆಪಿ ಎಂಪಿ ನಿಶಿಕಾಂತ್ ದುಬೆ (ಇವರ ಡಿಗ್ರಿ ಬಗ್ಗೆ ವಿವಾದವಿದೆ) ಅಶೋಕ ಯುನಿವರ್ಸಿಟಿಗೆ ಕೇಳಿದರು. ತಮ್ಮ ಅಧ್ಯಾಪಕರ ಪರವಾಗಿ ನಿಲ್ಲುವುದರ ಬದಲಾಗಿ ಅಶೋಕ ಯುನಿವರ್ಸಿಟಿಯು ಒಂದು ಹೇಳಿಕೆ ನೀಡಿ ಲೇಖನ ಮತ್ತು ಲೇಖಕರಿಂದ ಅಂತರ ಕಾಪಾಡಿಕೊಂಡಿತು. ಈಗ ಗೊತ್ತಾಗಿದ್ದೇನೆಂದರೆ, ಪ್ರೊ ದಾಸ್ ಅವರು ವಿಶ್ವವಿದ್ಯಾಲಯಕ್ಕೆ ರಾಜೀನಾಮೆ ನೀಡಿದ್ದಾರೆ (ಅವರನ್ನು ವಿಶ್ವವಿದ್ಯಾಲಯವು ಕೆಲಸದಿಂದ ತೆಗೆದುಹಾಕಿಲ್ಲ); ಆದರೆ ಇಂತಹ ಪರಿಸ್ಥಿತಿಯಲ್ಲಿ ನೀಡಿದ ರಾಜೀನಾಮೆಯನ್ನು ಐಚ್ಛಿಕ ಸೇವಾನಿವೃತ್ತಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ನಿಸ್ಸಂಶಯವಾಗಿ ಲೇಖಕರ ಮೇಲೆ ಒತ್ತಡ ಹಾಕಲಾಗಿ, ಆ ಕಾರಣದಿಂದ ರಾಜೀನಾಮೆ ನೀಡಬೇಕಾಗಿ ಬಂದಿರುವುದು ಸ್ವಾಭಾವಿಕ.

ಅಶೋಕ ವಿಶ್ವವಿದ್ಯಾಲಯದಲ್ಲಿ ಈ ಘಟನೆ ಆಗಿರುವುದು ದೇಶಕ್ಕೆ ಒಂದು ಅಶುಭ ಸಂಕೇತ ನೀಡಿದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಮುನ್ನ ಪ್ರೊ ಪ್ರತಾಪ್ ಭಾನು ಮೆಹ್ತಾ ಮತ್ತು ರಾಜೇಂದ್ರನ್ ನಾರಾಯಣರಿಗೂ ಸರಕಾರೀ ಒತ್ತಡದ ಅನುಮಾನದ ಕಾರಣದಿಂದ ಇದೇ ಅಶೋಕ ವಿಶ್ವವಿದ್ಯಾಲಯ ತೊರೆಯಬೇಕಾಗಿ ಬಂದಿತ್ತು. ಈ ವಿಶ್ವವಿದ್ಯಾಲಯವು ಸಮಾಜ ವಿಜ್ಞಾನ ಮತ್ತು ಮಾನವಿಕ ವಿಷಯಗಳಲ್ಲಿ ದೇಶದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆಯಾಗಿ ತನ್ನ ಗುರುತು ದಾಖಲಿಸಿಕೊಂಡಿದೆ; ಇದು ಹಣಕಾಸಿನ ವಿಷಯದಲ್ಲೂ ಸರಕಾರಿ ನಿಯಂತ್ರಣದಿಂದ ಸ್ವತಂತ್ರವಾಗಿದೆ. ತಾನು ಅಕೆಡೆಮಿಕ್ ಸ್ವಾತಂತ್ರ್ಯಕ್ಕೆ ಬದ್ಧವಾಗಿರುವುದಾಗಿ ವಿಶ್ವವಿದ್ಯಾಲಯ ಹೇಳಿಕೊಳ್ಳುತ್ತದೆ.

ಒಂದು ವೇಳೆ ಇಂತಹ ವಿಶ್ವವಿದ್ಯಾಲಯದ ಯಾವುದೇ ಅಧ್ಯಾಪಕನಿ/ಳಿಗೆ ತನ್ನ ಸಂಶೋಧನೆಗೆ ಇಂತಹ ಪರಿಣಾಮ ಎದುರಿಸಬೇಕಾಗುತ್ತದೆ ಎಂದರೆ ದೇಶದ ಉಳಿದೆಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಅಕೆಡೆಮಿಕ್ ಸಂಸ್ಥೆಗಳ ಪರಿಸ್ಥಿತಿ ಹೇಗಿರಬಹುದು ಎಂಬುದು ಸ್ಪಷ್ಟವಾಗುತ್ತದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ವಕಾಲತ್ತು ಮಾಡುತ್ತ ಜಾನ್ ಸ್ಟುವರ್ಟ್ ಮಿಲ್ ಹೇಳಿದ್ದೇನೆಂದರೆ, ’ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಕೇವಲ ಸತ್ಯ ಮತ್ತು ಪ್ರಾಮಾಣಿಕ ಮಾತುಗಳನ್ನು ಹೇಳುವ ಸ್ವಾತಂತ್ರ್ಯವಲ್ಲ. ಕೆಲವು ಅಪವಾದಗಳನ್ನು ಹೊರತುಪಡಿಸಿ, ಯಾವುದನ್ನು ನಾವು ಅಸತ್ಯ ಎಂದುಕೊಳ್ಳುತ್ತೇವೋ, ಅದನ್ನು ಸಾರ್ವಜನಿಕವಾಗಿ ಹೇಳುವ ಸ್ವಾತಂತ್ರ್ಯ ಇರಬೇಕು, ಆಗ ಅದರ ಸಾರ್ವಜನಿಕ ಖಂಡನೆ, ನಿರಾಕರಣೆ ಆಗಿ, ನಾವೆಲ್ಲ ಸತ್ಯದ ದಿಕ್ಕಿನಲ್ಲಿ ಮುಂದೆಹೋಗಬಹುದು’ ಎಂದು. ಹಾಗಾಗಿ, ಸಬ್ಯಸಾಚಿ ದಾಸ್‌ರ ಲೇಖನ ದೋಷಪೂರ್ಣವಾಗಿದೆ ಹಾಗೂ ಅವರ ನಿಷ್ಕರ್ಷ ಪೊಳ್ಳಾಗಿದೆ ಎಂದು ವಾದಕ್ಕಾಗಿ ಒಂದು ಕ್ಷಣ ಒಪ್ಪಿಕೊಂಡರೂ ಸಹ ಆಗಲೂ ಅವರ ಧ್ವನಿ ಹತ್ತಿಕ್ಕುವುದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಅವರ ಅಂಕಿಅಂಶಗಳು, ವಿಧಾನ ಮತ್ತು ನಿಷ್ಕರ್ಷದ ನಿರಾಕರಣೆ ಮಾಡಲು, ಖಂಡಿಸಲು ಅಧಿಕಾರವಿದೆ; ಆ ಪ್ರಯತ್ನವನ್ನು ಬಿಜೆಪಿ ಸಮರ್ಥಕರು ಕಳೆದ ಎರಡು ವಾರಗಳಿಂದ ಮಾಡಿದ್ದಾರೆ. ಆದರೆ ಅಧಿಕಾದ ಬಲದಿಂದ ಇಂತಹ ಧ್ವನಿಯನ್ನು ಮುಚ್ಚಿಹಾಕುವುದು ನಮ್ಮ ಪ್ರಜಾಪ್ರಭುತ್ವದ ದೌರ್ಬಲ್ಯದ ಸೂಚನೆ ನೀಡುತ್ತದೆ. ಇದರಿಂದ ಸಬ್ಯಸಾಚಿ ದಾಸ್ ಅವರು ಆಡಳಿತ ಪಕ್ಷದ ದೌರ್ಬಲ್ಯದ ಮೇಲೆಯೇ ದಾಳಿ ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತೆ ಹಾಗೂ ಏನೋ ಅಕ್ರಮ ನಡೆದಿದೆ ಎಂಬ ಅನುಮಾನಕ್ಕೆ ಪುಷ್ಟಿನೀಡುತ್ತದೆ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು ಮತ್ತು ಸ್ವರಾಜ್ ಇಂಡಿಯಾದ ರಾಷ್ಟ್ರಾಧ್ಯಕ್ಷರು. ರೈತ ಸಮಸ್ಯೆಗಳನ್ನು ಒಳಗೊಂಡಂತೆ ಪ್ರಸಕ್ತ ದೇಶದ ಸಮಸ್ಯೆಗಳ ಬಗ್ಗೆ ಆಳವಾಗಿ ಅಧ್ಯಯನ ನಡೆಸಿರುವ ಯೋಗೇಂದ್ರ ಅವರು ಜನಪರ ಹೋರಾಟಗಳಲ್ಲಿ ಭಾಗಿಯಾಗುವಂತೆಯೇ ಅವುಗಳ ವಿಚಾರಗಳನ್ನು ಸಾಮಾನ್ಯರಿಗೆ ತಿಳಿಸಲು ಜನಪ್ರಿಯ ಪತ್ರಿಕೆಗಳಿಗೆ ಸಕ್ರಿಯವಾಗಿ ಲೇಖನಗಳನ್ನು ಬರೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...