Homeಮುಖಪುಟಒಂದು ಸಂಶೋಧನಾ ಪ್ರಬಂಧಕ್ಕೆ ಸರಕಾರ ಹೆದರಿತೇಕೆ?

ಒಂದು ಸಂಶೋಧನಾ ಪ್ರಬಂಧಕ್ಕೆ ಸರಕಾರ ಹೆದರಿತೇಕೆ?

- Advertisement -
- Advertisement -

15ನೇ ಆಗಸ್ಟ್‌ಗೆ ಒಂದು ದಿನ ಮುನ್ನ ಬಂದ ಈ ಸುದ್ದಿ ಸ್ವಾತಂತ್ರ್ಯದ ಪರವಿರುವ ಪ್ರತಿಯೊಬ್ಬ ಭಾರತೀಯಳಿ/ನಿಗೆ ಚಿಂತೆಗೆ ದೂಡುತ್ತಿದೆ. ಸುದ್ದಿ ಏನೆಂದರೆ, ಅಶೋಕ ಯುನಿವರ್ಸಿಟಿಯ ಅರ್ಥಶಾಸ್ತ್ರದ ಯುವ ಪ್ರೊಫೆಸರ್ ಸಬ್ಯಸಾಚಿ ದಾಸ್ ರಾಜೀನಾಮೆ ನೀಡಬೇಕಾಗಿ ಬಂದಿದೆ. ಅವರು ಮಾಡಿದ ಅಪರಾಧವೇನೆಂದರೆ ಅವರು 2019ರ ಚುನಾವಣೆಗಳ ಅಂಕಿಅಂಶಗಳ ವಿಶ್ಲೇಷಣೆ ಮಾಡಿ ಒಂದು ಅಕೆಡೆಮಿಕ್ ಪ್ರಬಂಧ ಬರೆದಿದ್ದರು. ಈ ಸುದ್ದಿ ದೇಶದ ವಿಶ್ವವಿದ್ಯಾಲಯಗಳು ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಉಳಿದುಕೊಂಡಿರುವ ಅಕೆಡೆಮಿಕ್ ಸ್ವಾತಂತ್ರದ ಮೇಲೆ ಘೋರ ಆಘಾತವಾಗಿದೆ.

ಅಂದಹಾಗೆ ಈ ಲೇಖಕರಿಗೆ ಹೆದರುವ ಯಾವ ಕಾರಣವೂ ಸರಕಾರಕ್ಕಿಲ್ಲ. ಸಬ್ಯಸಾಚಿ ದಾಸ್ ಇನ್ನೂ ಒಬ್ಬ ಪ್ರಸಿದ್ಧವಾದ ಅರ್ಥಶಾಸ್ತ್ರಜ್ಞರಲ್ಲ. ಅವರ ಹೆಚ್ಚಿನ ಲೇಖನಗಳು ಕಲ್ಯಾಣ ಯೋಜನೆಗಳ ಮೌಲ್ಯಮಾಪದಂತಹ ಪ್ರಶ್ನೆಗಳ ಮೇಲಿವೆ. ಯಾವುದೇ ರಾಜಕೀಯ ಸಂಘಟನೆ ಅಥವಾ ಸಿದ್ಧಾಂತದೊಂದಿಗೆ ಅವರ ಯಾವುದೇ ಸಂಬಂಧಗಳು ಕಂಡುಬಂದಿಲ್ಲ. ಹಾಗೂ ಸರಕಾರ ತನ್ನ ದಂಡ ಚಲಾಯಿಸಲು ಅಶೋಕ ಯುನಿವರ್ಸಿಟಿ ಯಾವುದೇ ಸರಕಾರಿ ಅನುದಾನದ ಮೇಲೆ ನಡೆಯುವ ಸಂಸ್ಥೆಯಂತೂ ಅಲ್ಲ.

ಯಾವ ಲೇಖನದ ಮೇಲೆ ಇಷ್ಟೊಂದು ವಿವಾದವಾಗಿದೆಯೋ, ಅದು ಈಗ ರಹಸ್ಯವಾಗಿ ಉಳಿದಿಲ್ಲ. ಈ ಲೇಖನವನ್ನು ಕೇವಲ ಒಂದೆರಡು ಕಾನ್ಫರೆನ್ಸ್‌ಗಳಲ್ಲಿ ಪ್ರಸ್ತುತಪಡಿಸಲಾಗಿದೆ ಹಾಗೂ ಪ್ರಕಟವಾಗುವುದಕ್ಕೂ ಮುಂಚೆ ಚರ್ಚೆಗೆ ಲಭ್ಯವಿದೆ. ಈ ಲೇಖನದಲ್ಲಿ ಸರಕಾರದ ಯಾವ ಟೀಕೆಯೂ ಇಲ್ಲ, ಬಿಜೆಪಿಯನ್ನು ನಿಂದಿಸಿಲ್ಲ, ಯಾವುದೇ ಆರೋಪ ಪ್ರತ್ಯಾರೋಪಗಳಿಲ್ಲ ಹಾಗೂ ಯಾವುದೇ ರಾಜಕೀಯ ವಾಗ್ದಾಳಿಯೂ ಇಲ್ಲ. “ಡೆಮಾಕ್ರಟಿಕ್ ಬ್ಯಾಕ್‌ಸ್ಲೈಡಿಂಗ್ ಇನ್ ವರ್ಲ್ಡ್‌ಸ್ ಲಾರ್ಜೆಸ್ಟ್ ಡೆಮಾಕ್ರಸಿ” (ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರಜಾಸತ್ತೆಯ ಹಿನ್ನಡೆ) ತಲೆಬರಹದ ಈ ಲೇಖನದಲ್ಲಿ 2019ರ ಲೋಕಸಭಾ ಚುನಾವಣೆಗಳ ಅಧಿಕೃತ ಪರಿಣಾಮಗಳನ್ನು ಸಂಖ್ಯಾಶಾಸ್ತ್ರದ ವಿಧಾನದ ಮೂಲಕ ವಿಶ್ಲೇಷಣೆ ಮಾಡಿದ್ದಾರೆ. ಒಂದು ಕಾಲದಲ್ಲಿ ನಾನೂ ಈ ವಿಷಯದ ಪರಿಣಿತನಾಗಿದ್ದರಿಂದ ವಿಶ್ವಾಸದಿಂದ ಇಷ್ಟು ಹೇಳಬಲ್ಲೆ; ಸಬ್ಯಸಾಚಿ ದಾಸ್‌ರ ಈ ಲೇಖನ ಭಾರತದ ಚುನಾವಣಾ ಅಂಕಿಅಂಶಗಳ ಮೇಲೆ ಬರೆಯಲಾಗಿರುವ ಅತ್ಯಂತ ಗಂಭೀರ ಹಾಗೂ ಗಹನವಾದ ಲೇಖನಗಳಲ್ಲಿ ಒಂದು ಎಂದು.

ನಿಶಿಕಾಂತ್ ದುಬೆ

ಈ ಅಂಕಿಅಂಶಗಳ ಅಥವಾ ವಿಧಾನದಲ್ಲಿ ಯಾವುದೇ ವಿವಾದವಿಲ್ಲ, ವಿವಾದವಿರುವುದು ಈ ಲೇಖನದ ನಿಷ್ಕರ್ಷದಲ್ಲಿ. 2019ರ ಚುನಾವಣೆಗಳ ಮತಗಟ್ಟೆಯಿಂದ ಹಿಡಿದು ಸೀಟುಗಳ ತನಕ ಅಂಕಿಅಂಶಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ ನಂತರ ಏನೋ ಸಮಸ್ಯೆ ಇದೆ ಎಂಬ ನಿಷ್ಕರ್ಷಕ್ಕೆ ಲೇಖಕರು ಬರುತ್ತಾರೆ. ಯಾವ 59 ಕ್ಷೇತ್ರಗಳಲ್ಲಿ ಸೋಲುಗೆಲುವಿನ ತೀರ್ಮಾನ ಶೇ.5ಕ್ಕಿಂತ ಕಡಿಮೆ ಆಗಿದೆಯೋ, ಅವುಗಳಲ್ಲಿ 41 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಗಣಿತದ ಸಾಮಾನ್ಯ ನಿಯಮಗಳ ಅನುಗುಣವಾಗಿ ಹಾಗೂ ದೇಶ ಮತ್ತು ಜಗತ್ತಿನ ಚುನಾವಣೆಗಳ ಹಳೆಯ ದಾಖಲೆಗಳನ್ನು ನೋಡಿದರೆ, ಇದು ಅತ್ಯಂತ ಅಸಾಮಾನ್ಯವಾದ ಪ್ರವೃತ್ತಿಯಾಗಿ ಕಂಡುಬರುತ್ತದೆ. ಈ ಇಡೀ ಲೇಖನ ಅಸಾಮಾನ್ಯ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ನೋಡುತ್ತದೆ. ಬಿಜೆಪಿಯು ಅತ್ಯುತ್ತಮವಾಗಿ ಊಹೆಮಾಡಿರಬಹುದಾದ ಮುನ್ಸೂಚನೆ ಮತ್ತು ಉತ್ತಮವಾದ ಚುನಾವಣಾ ಪ್ರಚಾರದ ಕಾರಣದಿಂದ ಹೀಗೆ ಆಗಿರಬಹುದು ಎಂಬ ಸಾಧ್ಯತೆಯನ್ನು ಈ ಲೇಖನವು ಪರಿಶೀಲಿಸಿ ಅದನ್ನು ತಳ್ಳಿಹಾಕುತ್ತದೆ. ನಂತರ ಒಂದೊಂದು ವಿಷಯಕ್ಕೆ ಸಾಕ್ಷ್ಯ ಒದಗಿಸುತ್ತ ಈ ಲೇಖನವು ಕೆಲವು ಕ್ಷೇತ್ರಗಳಲ್ಲಿ ಅಕ್ರಮ ಆಗಿದೆ ಎಂಬುದನ್ನು ಸೂಚಿಸುತ್ತದೆ. ಲೇಖಕರ ಪ್ರಕಾರ, ಇದು ಕೆಲವು ಆಯ್ದ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಅಥವಾ ಮತದಾನದ ಅಥವಾ ಮತ ಎಣಿಕೆಯಲ್ಲಿ ಅಕ್ರಮ ಮಾಡುವುದರ ಮೂಲಕ ಆಗಿದೆ. ಈ ಲೇಖನ ಸಂಖ್ಯಾಶಾಸ್ತ್ರೀಯ ಪದ್ಧತಿಯ ಮೇಲೆ ಆಧಾರಿತವಾಗಿರುವುದರಿಂದ ಮೋಸದಾಟದ ಸಾಧ್ಯತೆಯನ್ನು ಸೂಚಿಸಬಲ್ಲದು; ಆದರೆ ಅದಕ್ಕೆ ಸಾಕ್ಷ್ಯ ಒದಗಿಸಲಾರದು. ಯಾವುದೇ ಸೆನ್ಸೇಷನಲ್ ಆರೋಪ ಹೊರಿಸುವ ಕೆಲಸ ಮಾಡದೇ ಲೇಖಕರು ಸ್ಪಷ್ಟಪಡಿಸುವುದೇನೆಂದರೆ, ಹೀಗೆ ಮಾಡಿದ್ದರೂ ಕೂಡ ಇದರಿಂದ ಬಿಜೆಪಿಗೆ ಗರಿಷ್ಠ 9ರಿಂದ 18 ಸೀಟುಗಳ ನಷ್ಟವಾಗುತ್ತಿತ್ತು. ಅದರಿಂದ ಬಿಜೆಪಿಯ ಬಹುಮತದ ಮೇಲೆ ಯಾವ ಪರಿಣಾಮವೂ ಬೀರುತ್ತಿರಲಿಲ್ಲ. ಹಾಗಾಗಿ ಲೇಖಕರು ಸ್ಪಷ್ಟಪಡಿಸುವುದೇನೆಂದರೆ, 2019ರಲ್ಲಿ ಬಿಜೆಪಿಯು ಮೋಸದಿಂದ ಚುನಾವಣೆ ಗೆದ್ದಿತ್ತು ಎಂಬ ನಿಷ್ಕರ್ಷವು ಖಂಡಿತವಾಗಿಯೂ ತಪ್ಪಾಗುತ್ತದೆ.

ಇದನ್ನೂ ಓದಿ: ಸಬ್ಯಸಾಚಿ ದಾಸ್ ಗೆ ಬೆಂಬಲಿಸಿ ಅಶೋಕ ವಿವಿಯ ಮತ್ತೋರ್ವ ಪ್ರಾಧ್ಯಾಪಕ ರಾಜೀನಾಮೆ

ಇಷ್ಟು ಸೀಮಿತವಾದ ಮಾತು ಹೇಳಿದ್ದಕ್ಕೆ ಇಷ್ಟೊಂದು ವಿವಾದ ಸೃಷ್ಟಿಯಾಗಿದೆ. ಬಿಜೆಪಿಯ ಸಮರ್ಥಕರು ಲೇಖಕರ ಮೇಲೆ ಎಲ್ಲಾ ಬಗೆಯ ಅಕೆಡೆಮಿಕ್ ಮತ್ತು ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ. ಇಂತಹ ಲೇಖನ ಬರೆಯುವುದಕ್ಕೆ ನೀವು ಹೇಗೆ ಅನುಮತಿ ನೀಡಿದಿರಿ ಎಂದು ಬಿಜೆಪಿ ಎಂಪಿ ನಿಶಿಕಾಂತ್ ದುಬೆ (ಇವರ ಡಿಗ್ರಿ ಬಗ್ಗೆ ವಿವಾದವಿದೆ) ಅಶೋಕ ಯುನಿವರ್ಸಿಟಿಗೆ ಕೇಳಿದರು. ತಮ್ಮ ಅಧ್ಯಾಪಕರ ಪರವಾಗಿ ನಿಲ್ಲುವುದರ ಬದಲಾಗಿ ಅಶೋಕ ಯುನಿವರ್ಸಿಟಿಯು ಒಂದು ಹೇಳಿಕೆ ನೀಡಿ ಲೇಖನ ಮತ್ತು ಲೇಖಕರಿಂದ ಅಂತರ ಕಾಪಾಡಿಕೊಂಡಿತು. ಈಗ ಗೊತ್ತಾಗಿದ್ದೇನೆಂದರೆ, ಪ್ರೊ ದಾಸ್ ಅವರು ವಿಶ್ವವಿದ್ಯಾಲಯಕ್ಕೆ ರಾಜೀನಾಮೆ ನೀಡಿದ್ದಾರೆ (ಅವರನ್ನು ವಿಶ್ವವಿದ್ಯಾಲಯವು ಕೆಲಸದಿಂದ ತೆಗೆದುಹಾಕಿಲ್ಲ); ಆದರೆ ಇಂತಹ ಪರಿಸ್ಥಿತಿಯಲ್ಲಿ ನೀಡಿದ ರಾಜೀನಾಮೆಯನ್ನು ಐಚ್ಛಿಕ ಸೇವಾನಿವೃತ್ತಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ನಿಸ್ಸಂಶಯವಾಗಿ ಲೇಖಕರ ಮೇಲೆ ಒತ್ತಡ ಹಾಕಲಾಗಿ, ಆ ಕಾರಣದಿಂದ ರಾಜೀನಾಮೆ ನೀಡಬೇಕಾಗಿ ಬಂದಿರುವುದು ಸ್ವಾಭಾವಿಕ.

ಅಶೋಕ ವಿಶ್ವವಿದ್ಯಾಲಯದಲ್ಲಿ ಈ ಘಟನೆ ಆಗಿರುವುದು ದೇಶಕ್ಕೆ ಒಂದು ಅಶುಭ ಸಂಕೇತ ನೀಡಿದೆ. ಗಮನಿಸಬೇಕಾದ ಅಂಶವೇನೆಂದರೆ, ಈ ಮುನ್ನ ಪ್ರೊ ಪ್ರತಾಪ್ ಭಾನು ಮೆಹ್ತಾ ಮತ್ತು ರಾಜೇಂದ್ರನ್ ನಾರಾಯಣರಿಗೂ ಸರಕಾರೀ ಒತ್ತಡದ ಅನುಮಾನದ ಕಾರಣದಿಂದ ಇದೇ ಅಶೋಕ ವಿಶ್ವವಿದ್ಯಾಲಯ ತೊರೆಯಬೇಕಾಗಿ ಬಂದಿತ್ತು. ಈ ವಿಶ್ವವಿದ್ಯಾಲಯವು ಸಮಾಜ ವಿಜ್ಞಾನ ಮತ್ತು ಮಾನವಿಕ ವಿಷಯಗಳಲ್ಲಿ ದೇಶದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆಯಾಗಿ ತನ್ನ ಗುರುತು ದಾಖಲಿಸಿಕೊಂಡಿದೆ; ಇದು ಹಣಕಾಸಿನ ವಿಷಯದಲ್ಲೂ ಸರಕಾರಿ ನಿಯಂತ್ರಣದಿಂದ ಸ್ವತಂತ್ರವಾಗಿದೆ. ತಾನು ಅಕೆಡೆಮಿಕ್ ಸ್ವಾತಂತ್ರ್ಯಕ್ಕೆ ಬದ್ಧವಾಗಿರುವುದಾಗಿ ವಿಶ್ವವಿದ್ಯಾಲಯ ಹೇಳಿಕೊಳ್ಳುತ್ತದೆ.

ಒಂದು ವೇಳೆ ಇಂತಹ ವಿಶ್ವವಿದ್ಯಾಲಯದ ಯಾವುದೇ ಅಧ್ಯಾಪಕನಿ/ಳಿಗೆ ತನ್ನ ಸಂಶೋಧನೆಗೆ ಇಂತಹ ಪರಿಣಾಮ ಎದುರಿಸಬೇಕಾಗುತ್ತದೆ ಎಂದರೆ ದೇಶದ ಉಳಿದೆಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಅಕೆಡೆಮಿಕ್ ಸಂಸ್ಥೆಗಳ ಪರಿಸ್ಥಿತಿ ಹೇಗಿರಬಹುದು ಎಂಬುದು ಸ್ಪಷ್ಟವಾಗುತ್ತದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ವಕಾಲತ್ತು ಮಾಡುತ್ತ ಜಾನ್ ಸ್ಟುವರ್ಟ್ ಮಿಲ್ ಹೇಳಿದ್ದೇನೆಂದರೆ, ’ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಕೇವಲ ಸತ್ಯ ಮತ್ತು ಪ್ರಾಮಾಣಿಕ ಮಾತುಗಳನ್ನು ಹೇಳುವ ಸ್ವಾತಂತ್ರ್ಯವಲ್ಲ. ಕೆಲವು ಅಪವಾದಗಳನ್ನು ಹೊರತುಪಡಿಸಿ, ಯಾವುದನ್ನು ನಾವು ಅಸತ್ಯ ಎಂದುಕೊಳ್ಳುತ್ತೇವೋ, ಅದನ್ನು ಸಾರ್ವಜನಿಕವಾಗಿ ಹೇಳುವ ಸ್ವಾತಂತ್ರ್ಯ ಇರಬೇಕು, ಆಗ ಅದರ ಸಾರ್ವಜನಿಕ ಖಂಡನೆ, ನಿರಾಕರಣೆ ಆಗಿ, ನಾವೆಲ್ಲ ಸತ್ಯದ ದಿಕ್ಕಿನಲ್ಲಿ ಮುಂದೆಹೋಗಬಹುದು’ ಎಂದು. ಹಾಗಾಗಿ, ಸಬ್ಯಸಾಚಿ ದಾಸ್‌ರ ಲೇಖನ ದೋಷಪೂರ್ಣವಾಗಿದೆ ಹಾಗೂ ಅವರ ನಿಷ್ಕರ್ಷ ಪೊಳ್ಳಾಗಿದೆ ಎಂದು ವಾದಕ್ಕಾಗಿ ಒಂದು ಕ್ಷಣ ಒಪ್ಪಿಕೊಂಡರೂ ಸಹ ಆಗಲೂ ಅವರ ಧ್ವನಿ ಹತ್ತಿಕ್ಕುವುದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಅವರ ಅಂಕಿಅಂಶಗಳು, ವಿಧಾನ ಮತ್ತು ನಿಷ್ಕರ್ಷದ ನಿರಾಕರಣೆ ಮಾಡಲು, ಖಂಡಿಸಲು ಅಧಿಕಾರವಿದೆ; ಆ ಪ್ರಯತ್ನವನ್ನು ಬಿಜೆಪಿ ಸಮರ್ಥಕರು ಕಳೆದ ಎರಡು ವಾರಗಳಿಂದ ಮಾಡಿದ್ದಾರೆ. ಆದರೆ ಅಧಿಕಾದ ಬಲದಿಂದ ಇಂತಹ ಧ್ವನಿಯನ್ನು ಮುಚ್ಚಿಹಾಕುವುದು ನಮ್ಮ ಪ್ರಜಾಪ್ರಭುತ್ವದ ದೌರ್ಬಲ್ಯದ ಸೂಚನೆ ನೀಡುತ್ತದೆ. ಇದರಿಂದ ಸಬ್ಯಸಾಚಿ ದಾಸ್ ಅವರು ಆಡಳಿತ ಪಕ್ಷದ ದೌರ್ಬಲ್ಯದ ಮೇಲೆಯೇ ದಾಳಿ ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತೆ ಹಾಗೂ ಏನೋ ಅಕ್ರಮ ನಡೆದಿದೆ ಎಂಬ ಅನುಮಾನಕ್ಕೆ ಪುಷ್ಟಿನೀಡುತ್ತದೆ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು ಮತ್ತು ಸ್ವರಾಜ್ ಇಂಡಿಯಾದ ರಾಷ್ಟ್ರಾಧ್ಯಕ್ಷರು. ರೈತ ಸಮಸ್ಯೆಗಳನ್ನು ಒಳಗೊಂಡಂತೆ ಪ್ರಸಕ್ತ ದೇಶದ ಸಮಸ್ಯೆಗಳ ಬಗ್ಗೆ ಆಳವಾಗಿ ಅಧ್ಯಯನ ನಡೆಸಿರುವ ಯೋಗೇಂದ್ರ ಅವರು ಜನಪರ ಹೋರಾಟಗಳಲ್ಲಿ ಭಾಗಿಯಾಗುವಂತೆಯೇ ಅವುಗಳ ವಿಚಾರಗಳನ್ನು ಸಾಮಾನ್ಯರಿಗೆ ತಿಳಿಸಲು ಜನಪ್ರಿಯ ಪತ್ರಿಕೆಗಳಿಗೆ ಸಕ್ರಿಯವಾಗಿ ಲೇಖನಗಳನ್ನು ಬರೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...