Homeಕರ್ನಾಟಕಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

ಗಾಂಧಿಯನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ?- ಸಿದ್ದರಾಮಯ್ಯ ಪ್ರಶ್ನೆ

ಹೆಡ್ಗೇವಾರ್, ಗೊಲ್ವಾಲ್ಕರ್‌‌ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರೆಸ್ಸೆಸ್ ಮತ್ತು ಬಿಜೆಪಿಯೇ ಕಾರಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರಿಗೆ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

“ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ತ್ಯಾಗ, ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾನೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

“ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮ ಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ ಇಲ್ಲ. ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ?’’ ಎಂದು ಕೇಳಿದ್ದಾರೆ.

“ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...