Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...