Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...