Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...