Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...