Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...