Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...