Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...