Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...