Homeಕರ್ನಾಟಕಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

ಕರ್ನಾಟಕದ ಗೋಡಂಬಿ ರಫ್ತು ಕುಸಿದಿದ್ದೇಕೆ?

- Advertisement -
- Advertisement -

ಜಿಂಬಾಬ್ವೆಯಂತಹ ಇತರ ದೇಶಗಳಿಂದ ಆಮದು ಮಾಡಿಕೊಳ್ಳುವ ಗೋಡಂಬಿ ಬೀಜಗಳ ಕಳಪೆ ಗುಣಮಟ್ಟದ ಕಾರಣದಿಂದಾಗಿ ಕರ್ನಾಟಕ ರಾಜ್ಯವು ತನ್ನ ಗೋಡಂಬಿ ರಫ್ತಿನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ ಎಂದು ‘ದಿ ಹಿಂದೂಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ದೇಶದ ಐದನೇ ಅತಿದೊಡ್ಡ ಗೋಡಂಬಿ ರಫ್ತುದಾರನಾಗಿರುವ ಕರ್ನಾಟಕ 2020-21 ರಲ್ಲಿ ಗೋಡಂಬಿ ರಫ್ತು ಮಾಡುವ ಮೂಲಕ ಕೇವಲ 90.29 ಮಿಲಿಯನ್ ಡಾಲರ್ ಗಳಿಸಿತು. ಆದರೆ 2017-18ರಲ್ಲಿ 188.42 ಮಿಲಿಯನ್ ಡಾಲರ್‌ಗಳನ್ನು ಗಳಿಸಿತ್ತು ಎಂದು ಸರ್ಕಾರಿ ಅಂಕಿಅಂಶಗಳು ಹೇಳುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಡಿಮೆ ಪ್ರಮಾಣದ ಗೋಡಂಬಿ ಫಸಲು ನೀಡುವ ಕಳಪೆ ಗುಣಮಟ್ಟದ ಬೀಜಗಳನ್ನು ಬಳಸುವುದರಿಂದ ರಫ್ತು ಕುಸಿತವಾಗಿದೆ. ರೈತರು ಗೋಡಂಬಿಯನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಿದರು? ಅವುಗಳ ಗಾತ್ರವೇನು? ಗುಣಮಟ್ಟವೇನು? ಮುಂತಾದ ಅನೇಕ ಅಂಶಗಳನ್ನು ಖರೀದಿದಾರರು ಗಮನಿಸುತ್ತಿದ್ದು, ಬೇಡಿಕೆಯ ಕುಸಿತ ಕಂಡಿದೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ವಿಧಿಸಲಾಯಿತು. ಆಮದು ಮತ್ತು ರಫ್ತಿನಲ್ಲಿ ಮತ್ತಷ್ಟು ಇಳಿಕೆಯಾಯಿತು. ನೆದರ್ಲ್ಯಾಂಡ್ಸ್, ಯುಎಸ್ ಮತ್ತು ಕೆಲವೊಮ್ಮೆ ವಿಯೆಟ್ನಾಂ, ನಾರ್ವೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಮಲೇಷ್ಯಾಗಳಿಗೂ ಭಾರತದಿಂದ ಗೋಡಂಬಿಯನ್ನು ರಫ್ತು ಮಾಡಲಾಗುತ್ತಿತ್ತು.

ರಫ್ತು ಕುಸಿತದಿಂದಾಗಿ ಕರ್ನಾಟಕದ ಗೋಡಂಬಿ ರೈತರು ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗೋಡಂಬಿಯ ಗುಲಾಬಿ ಪದರವನ್ನು ಔಷಧಗಳ ತಯಾರಿಕೆಯಲ್ಲಿ ಬಳಸುವುದರಿಂದ ಅದನ್ನು ಫಾರ್ಮಾ ಕಂಪನಿಗಳಿಗೆ ಮಾರಾಟ ಮಾಡುತ್ತಾರೆ. ವರದಿಯೊಂದರ ಪ್ರಕಾರ, 2018-19ರ ಅವಧಿಯಲ್ಲಿ ಕಚ್ಚಾ ವಸ್ತುಗಳ ಬೆಲೆಯಲ್ಲಿ ಭಾರಿ ಹೆಚ್ಚಳದಿಂದಾಗಿ ಅನೇಕ ಗೋಡಂಬಿ ಉದ್ಯಮಗಳು ಭಾರಿ ನಷ್ಟವನ್ನು ಅನುಭವಿಸಿವೆ.

ಕರ್ನಾಟಕ ರಾಜ್ಯದಲ್ಲಿ ಶೇಕಡ 70ರಷ್ಟು ಗೋಡಂಬಿ ಬೆಳೆ ಕರಾವಳಿಯಲ್ಲಿ ಭಾಗದಲ್ಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಡಂಬಿ ಕೃಷಿಗೆ ಹೆಚ್ಚಿನ ಕೃಷಿ ಭೂಮಿ ಇದ್ದರೆ, ಮಂಗಳೂರಿನಲ್ಲಿ ದೊಡ್ಡ ಪ್ರಮಾಣದ ಗೋಡಂಬಿ ಸಂಸ್ಕರಣಾ ಘಟಕಗಳಿವೆ. ಆದ್ದರಿಂದ ಪಶ್ಚಿಮ ಕರಾವಳಿಯ ಗ್ರಾಮೀಣ ಘಟಕಗಳು ಸುಮಾರು 1,00,000 ಮೆಟ್ರಿಕ್ ಟನ್ ಗೋಡಂಬಿಯನ್ನು ಉತ್ಪಾದಿಸುತ್ತವೆ.

ಸ್ವಲ್ಪ ಪರಿಹಾರದ ರೂಪದಲ್ಲಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸುಮಾರು 20 ಹೊಸ ಬಗೆಯ ಗೋಡಂಬಿಗಳನ್ನು ಸ್ಥಳೀಯವಾಗಿ ಬೆಳೆಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ. ಗೋಡಂಬಿಯ ಆಮದು ಮತ್ತು ರಫ್ತಿನಲ್ಲಿ ಕರ್ನಾಟಕ ರಾಜ್ಯ ಸ್ಪರ್ಧಾತ್ಮಕವಾಗಿ ಉಳಿಯಬೇಕೆಂದು ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಶ್ರಮಿಸುತ್ತಿದೆ.

ಇದನ್ನೂ ಓದಿರಿ: ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶ

ದೇಶವು ಪ್ರಪಂಚದ 60 ದೇಶಗಳಿಗೆ ಬೆಳೆಯನ್ನು ರಫ್ತು ಮಾಡುತ್ತಿತ್ತು ಮತ್ತು ಈಗ ಸುಮಾರು 45 ದೇಶಗಳಿಗೆ ರಫ್ತು ಮಾಡುತ್ತಿದೆ. ಒಟ್ಟು 3940 ಗೋಡಂಬಿ ಸಂಸ್ಕರಣಾ ಸೌಲಭ್ಯಗಳಿವೆ. ಏಳು ವರ್ಷಗಳ ಹಿಂದೆ ದೇಶದ ಒಟ್ಟು ಗೋಡಂಬಿ ರಫ್ತು ಸುಮಾರು 1,40,000 ಟನ್‌ಗಳಷ್ಟಿತ್ತು ಎಂದು ವರದಿಯೊಂದು ಹೇಳಿದೆ. ಭಾರತವು ವಿಯೆಟ್ನಾಂ ಮತ್ತು ಪಶ್ಚಿಮ ಆಫ್ರಿಕಾದ ಕೋಟ್ ಡಿ ಐವೊರ್‌ನಂತಹ ದೇಶಗಳಿಗಿಂತ ಹಿಂದೆ ಉಳಿದಿದೆ. ವ್ಯಾಪಾರದಲ್ಲಿನ ವೆಚ್ಚವು ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಹೆಚ್ಚಾಗಿರುವುದೇ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.

ಪೂರ್ವ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳು ಈಗ 60,000 ಟನ್‌ಗಳಷ್ಟು ಗೋಡಂಬಿಯನ್ನು ರಫ್ತು ಮಾಡುತ್ತಿವೆ. ಇದರ ನಡುವೆ ಭಾರತದಲ್ಲಿ ಸ್ಥಳೀಯ ಬಳಕೆ ಕೂಡ ಹೆ‌ಚ್ಚಾಗುತ್ತಿದೆ. ಪ್ರಾದೇಶಿಕವಾಗಿ ಗೋಡಂಬಿ ಬಳಕೆ ಹೆಚ್ಚಾಗುತ್ತಿರುತ್ತಿರುವುದರಿಂದ ರಫ್ತಿನಲ್ಲಿಯೂ ಕಸಿತ ಕಂಡಿದೆ ಎನ್ನಲಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

0
ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಗೆ ಉತ್ತರಿಸಲು ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಇನ್ನೂ ಒಂದು ವಾರ ಕಾಲಾವಕಾಶ ನೀಡಿದೆ. ನ್ಯಾಯಾಲಯವು ಪ್ರಕರಣದ ಮುಂದಿನ...