HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...