HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...