HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...