HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...