HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...