HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...