HomeಮುಖಪುಟCRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

- Advertisement -
- Advertisement -

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿದೆ.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದಿದ್ದು. ಅದಕ್ಕಾಗಿ ಅವನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೈಕಾಲಿಗೆ ಬೇಡಿ ಹಾಕುವ ಮಟ್ಟದಲ್ಲಿ ಸಿ.ಆರ್. ಪಿ.ಎಫ್. ಯೋದ ತಪ್ಪು ಮಾಡಿದ್ದಾನೆಯೇ? ಲಾಕ್ ಡೌನ್ ನೆಪದಲ್ಲಿ ದೇಶ ಪೊಲೀಸ್ ರಾಜ್ಯವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...