Homeಮುಖಪುಟಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

ಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಆಗಿರುವ ವರದಿಗೆ ಸಂಬಂಧಿಸಿದಂತೆ ಬರಗೂರು ರಾಮಚಂದ್ರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

“ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಹೋಲಿಸಿದರೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ” ಎಂದು ಬಿಂಬಿಸುವ ವರದಿಯಾಗಿದ್ದು, ‘ಬಿಜೆಪಿ ಪರಿವಾರ ಹೀಗೇಕೆ ಸುಳ್ಳು ಹೇಳುತ್ತಿದೆ’ ಎಂಬ ಪ್ರಶ್ನೆ ಮೂಡಿದೆ.

‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ‘ಚಕ್ರತೀರ್ಥ ಸಮಿತಿ ಸಂಭಾವನೆ 5 ಸಾವಿರ’ ಎಂಬ ಹೆಡ್‌ಲೈನ್‌ನಲ್ಲಿ ವರದಿ ಪ್ರಕಟವಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಕ್ರತೀರ್ಥ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ ಎಂದು ಹೇಳುವ ವರದಿಯು ಏಕಪಕ್ಷೀಯವಾಗಿದೆ ಎಂಬ ಟೀಕೆಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ವಿಜಯ ಕರ್ನಾಟಕ’ ವರದಿಯಲ್ಲಿನ ಮುಖ್ಯಾಂಶಗಳು

  • ಚಕ್ರತೀರ್ಥ ಸಮಿತಿ ಪಡೆದ ಸಂಭಾವನೆ ಕೇವಲ 33 ಸಾವಿರ ರೂಪಾಯಿ. ಸರ್ಕಾರ 28,600 ರೂ. ಬಾಕಿ ಉಳಿಸಿಕೊಂಡಿದೆ. ಸಮಿತಿಗೆ ಸಿಕ್ಕಿರುವುದು ಕೇವಲ 5200 ರೂ. ಸಮಿತಿ ಮಾಡಿದ ಒಟ್ಟು ವೆಚ್ಚ 50 ಲಕ್ಷ ರೂ.
  • ಈ ಹಿಂದಿನ ಸಮಿತಿಗಳು ಪಡೆದ ಸಂಭಾವನೆಗಿಂತ ಐದಾರು ಪಟ್ಟು ಕಮ್ಮಿ ಸಂಭಾವನೆಯನ್ನು ಚಕ್ರತೀರ್ಥ ಸಮಿತಿ ಪಡೆದಿದೆ. ಉಳಿದ ಸಮಿತಿಗಳ ಸಂಭಾವನೆ 3.75 ಲಕ್ಷ ರೂ.ಗಳಿಂದ 5.45 ಲಕ್ಷ ರೂ.ಗಳಾಗಿದೆ.

ಮೇಲು ನೋಟಕ್ಕೆ ಚಕ್ರತೀರ್ಥ ಸಮಿತಿಯು ಕಡಿಮೆ ವೆಚ್ಚ ಮಾಡಿದೆ ಎಂದು ಅನಿಸಿದರೂ ಇದು ಅರ್ಧ ಸತ್ಯದಿಂದ ಕೂಡಿದೆ. ಈ ಕುರಿತು ಸ್ವತಃ ಪ್ರೊ.ಬರಗೂರು ರಾಮಚಂದ್ರಪ್ಪ ಅವರೇ ಸ್ಪಷ್ಟನೆ ನೀಡಿದ್ದು, “ಪಠ್ಯಪುಸ್ತಕಗಳ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಮಾಡಿರುವ ವರದಿಯಲ್ಲಿ ಏಕಪಕ್ಷೀಯವಾದ ವಿವರಗಳಿವೆ” ಎಂದು ಬರಗೂರರು ಸ್ಪಷ್ಟಪಡಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರ ಸ್ಪಷ್ಟನೆಗಳೇನು?

ಸ್ಪಷ್ಟನೆ 1: ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಗಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದೆ ಎಂದು ವರದಿ ಹೇಳುತ್ತದೆ. ವಾಸ್ತವವಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದ್ದು ಪಠ್ಯಪುಸ್ತಕಗಳ ರಚನೆ ಹಾಗೂ ಪರಿಷ್ಕರಣೆಗಾಗಿ ಅಲ್ಲ. ಸಂಕೀರ್ಣ ವಿಷಯಗಳ ಪರಿಶೀಲನೆ ಮಾಡಿ ಒಂದು ತಿಂಗಳಲ್ಲಿ ವರದಿಯನ್ನು ಕೊಡಬೇಕೆಂದು ಸಮಿತಿ ರಚನೆಯಾಯಿತು.

ಸ್ಪಷ್ಟನೆ 2: ಚಕ್ರತೀರ್ಥ ಸಮಿತಿಗೆ ಕೇವಲ ಐದು ಸಾವಿರ ರೂಪಾಯಿಗಳ ಸಂಭಾವನೆಯನ್ನು ಕೊಡಲಾಗಿದೆ ಎಂದು ದೊಡ್ಡ ಶೀರ್ಷಿಕೆಯನ್ನು ವರದಿಗೆ ನೀಡಲಾಗಿದೆ. ಆದರೆ ಅದೇ ವರದಿಯಲ್ಲಿ ಸಂಭಾವನೆ 33,800 ರೂಪಾಯಿ ಎಂದಿದೆ. 28,000 ಬಾಕಿ ಉಳಿದಿದೆ ಎಂದು ಬರೆಯಲಾಗಿದೆ. ಬಾಕಿ ಉಳಿಸಿಕೊಂಡು ಆನಂತರ ಹಣ ಜಮಾ ಮಾಡುವ ಪದ್ಧತಿಯು ನಮ್ಮ ಸರ್ಕಾರದಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ನಮ್ಮ ಸಮಿತಿಯಲ್ಲೂ ಅನೇಕರಿಗೆ ಬಾಕಿ ಉಳಿಸಿಕೊಂಡು ಆನಂತರದಲ್ಲಿ ಹಣ ನೀಡಲಾಯಿತು. ಹೀಗಾಗಿ ಚಕ್ರತೀರ್ಥ ಸಮಿತಿಗೆ ನೀಡಿರುವ ಸಂಭಾವನೆ 5,000 ರೂಪಾಯಿಯಲ್ಲ, 33,800 ರೂಪಾಯಿ ಎಂಬುದು ಸತ್ಯ ಸಂಗತಿ.

ಸ್ಪಷ್ಟನೆ- 3: ಮುಡಂಬಡಿತ್ತಾಯ ಸಮಿತಿಯು 3 ಕೋಟಿ 63 ಲಕ್ಷ ಖರ್ಚು ಮಾಡಿದೆ ಎಂದೂ, ನಮ್ಮ ಸಮಿತಿ 2 ಕೋಟಿ 59 ಲಕ್ಷ ಖರ್ಚು ಮಾಡಿದೆ ಎಂದೂ, ಚಕ್ರತೀರ್ಥ ಸಮಿತಿ 49 ಲಕ್ಷ 99 ಸಾವಿರ ರೂ. ಖರ್ಚು ಮಾಡಿದೆ ಎಂದೂ ವರದಿ ಹೇಳುತ್ತದೆ. ಇದು ನಿಜವೇ ಇರಬಹುದು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಮೇಲ್ನೋಟಕ್ಕೆ ನಮ್ಮ ಸಮಿತಿ ತುಂಬಾ ಖರ್ಚು ಮಾಡಿದೆ ಎಂದೂ ಚಕ್ರತೀರ್ಥ ಸಮಿತಿಯು ಕಡಿಮೆ ಖರ್ಚು ಮಾಡಿದೆ ಎಂದೂ ತೋರಿಸಲಾಗುತ್ತಿದೆ. ಅರ್ಥ ಮಾಡಿಕೊಳ್ಳಬೇಕಾದ ಸಂಗತಿ ಏನೆಂದರೆ- ನಮ್ಮ ಸಮಿತಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದೆ. ವಾಸ್ತವವಾಗಿ ಮೊದಲು 27 ಸಮಿತಿಗಳ ರಚನೆ ಮಾಡಲಾಯಿತು. ಆ ನಂತರ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಆ ಸಮಿತಿಗಳು ಎರಡೂವರೆ ವರ್ಷ ಕೆಲಸ ಮಾಡಿದವು. ನಾನು ಎರಡು ವರ್ಷ ಕೆಲಸ ಮಾಡಿದೆ. ಒಟ್ಟು ಸಮಿತಿಯಲ್ಲಿ 172 ಜನರಿದ್ದರು. ಅಧಿಕಾರಿಗಳನ್ನೂ ಒಳಗೊಂಡು ಚಕ್ರತೀರ್ಥ ಸಮಿತಿಯಲ್ಲಿದ್ದದ್ದು (ಸರ್ಕಾರದ ಆದೇಶದ ಪ್ರಕಾರ) ಕೇವಲ 16 ಜನ. ಇವರು ಕೆಲಸ ಮಾಡಿದ್ದು ಹೆಚ್ಚೆಂದರೆ ಎರಡು ಅಥವಾ ಮೂರು ತಿಂಗಳು ಮಾತ್ರ. ಇಲ್ಲಿ ವ್ಯತ್ಯಾಸ ಬಹಳ ಸ್ಪಷ್ಟವಾಗಿದೆ. ನಾನು ಸರ್ವಾಧ್ಯಕ್ಷನಾಗಿದ್ದಾಗ 27 ಸಮಿತಿಗಳು, 172 ಜನರು ಕೆಲಸ ಮಾಡಿದ್ದಾರೆ. ಅದರ ಜೊತೆಗೆ ಹೊರಗಿನ 30ಕ್ಕೂ ಹೆಚ್ಚು ತಜ್ಞರ ಜೊತೆಯಲ್ಲಿ, ಅಧ್ಯಾಪಕರ ಜೊತೆಯಲ್ಲಿ ಸಭೆ ಮಾಡಿದ್ದೇವೆ. ಒಟ್ಟಾರೆ ಹೇಳುವುದಾದರೆ ನೂರಾರು ಕಾರ್ಯಾಗಾರಗಳು ನಡೆದಿವೆ. ಇವರಿಗೆ ಪ್ರಯಾಣ  ಭತ್ಯೆ, ಸಭಾ ಭತ್ಯೆ ಇತ್ಯಾದಿಗಳನ್ನು ಭರಿಸಿದ್ದು ಪಠ್ಯಪುಸ್ತಕ ಸಂಘ. ಅದೆಲ್ಲವೂ ಈ ರಚನಾ ಪ್ರಕ್ರಿಯೆಯಲ್ಲಿ ಸೇರಿವೆ. ಇಷ್ಟು ಕಾಲ, ಇಷ್ಟು ಮಂದಿ ಮಾಡಿದ ರಚನೆಯ ಕುರಿತು ಆ ವರದಿಯಲ್ಲಿ ಉಲ್ಲೇಖ ಇಲ್ಲದೆ ಇರುವುದರಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡುತ್ತದೆ. ಕಾಲವಧಿಯ ವ್ಯತ್ಯಾಸ, ಕೆಲಸದ ರೀತಿಯ ವ್ಯತ್ಯಾಸ, ಸದಸ್ಯರ ಸಂಖ್ಯೆಯ ವ್ಯತ್ಯಾಸ ಈ ವಿವರಗಳೆಲ್ಲ ವರದಿಯಲ್ಲಿ ಇದ್ದಿದ್ದರೆ ಓದುಗರಿಗೆ ಸ್ಪಷ್ಟವಾಗುತ್ತಿತ್ತು.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಸ್ಪಷ್ಟನೆ – 4: ಪಠ್ಯಪುಸ್ತಕ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಡಿಟಿಪಿ ಮಾಡಿರುವ ಖರ್ಚುಗಳೂ ಸೇರಿರುತ್ತವೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಮೇಲೆ ನಿಯಮಗಳ ಪ್ರಕಾರ ಸರ್ಕಾರ ಕೊಡುವ ಭತ್ಯೆಗಳ ಜೊತೆಗೆ ಡಿಟಿಪಿ ಇತ್ಯಾದಿಗಳೆಲ್ಲವೂ ಸೇರಿರುತ್ತವೆ. ಸಮಿತಿಯ ಸದಸ್ಯರಿಗಾಗಲೀ, ಅಧ್ಯಕ್ಷರಿಗಾಗಿ ಹಣ ಕೊಟ್ಟು ಹಂಚಲಾಗುವುದಿಲ್ಲ. ಪಠ್ಯ ಪುಸ್ತಕ ಸಂಘ ಅಥವಾ ಇಲಾಖೆ ಆ ಹಣವನ್ನು ಹಂಚುತ್ತದೆ. ಇಡೀ ಹಣಕಾಸಿನ ವ್ಯವಹಾರವನ್ನು ನೋಡಿಕೊಳ್ಳುವುದು ನಿಯಮಾನುಸಾರ ಪಠ್ಯಪುಸ್ತಕ ಸಂಘವೇ ಹೊರತು ನಮ್ಮ ಸಮಿತಿಗಳೂ ಅಲ್ಲ, ಸದಸ್ಯರೂ ಅಲ್ಲ, ಅಧ್ಯಕ್ಷರೂ ಅಲ್ಲ. ಈ ವ್ಯತ್ಯಾಸವನ್ನು ಸಾರ್ವಜನಿಕರು ಗಮನಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ನೇಮಕಗೊಂಡ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ, ಸಂಕೀರ್ಣ ವಿಷಯಗಳ ಪರಿಶೀಲನೆಗಾಗಿ ನೇಮಕವಾದ ರೋಹಿತ್ ಚಕ್ರತೀರ್ಥ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ ವ್ಯತ್ಯಾಸ ಇದೆ; ಅದಕ್ಕಾಗಿ, ತೆಗೆದುಕೊಂಡ ಸಮಯ ಮತ್ತು ಮಾಡಿದ ಖರ್ಚು ಸಹಜವಾಗಿ ಬೇರೆ ಬೇರೆಯಾಗಿ ಇರುವುದು ಸಾಮಾನ್ಯ. ಒಬ್ಬ ವರದಿಗಾರನಿಗೆ ಈ ವ್ಯತ್ಯಾಸದ ಸಾಮಾನ್ಯ ಜ್ಞಾನ ಇರಬೇಕು. ಇಲ್ಲ ಎಂದಾದರೆ, ಈ ವರದಿ ದುರುದ್ದೇಶಪೂರಿತ ಎಂಬುದು ಸ್ಪಷ್ಟ! ಇಂತಹ ಕುಚೋದ್ಯ ಮಾಡಲು ಪತ್ರಿಕೆಯನ್ನು ಪ್ರತಿನಿಧಿಸುವವರಿಗೆ ನಾಚಿಕೆಯೂ ಆಗುವುದಿಲ್ಲವೆ?!?

  2. ಜೀ ಹುಜೂರ್‌ ಎನ್ನುವ ಗುಲಾಮ ವರದಿಗಾರ ಮಾತ್ರ ಈ ರೀತಿ ಸುಳ್ಳು ವರದಿ ನೀಡಲು ಸಾಧ್ಯ. ದೇವರಾಜ್‌ ಕನಕಪುರ ತಲೆಯು ಸಾಮಾನ್ಯರಂತೆ ಇಲ್ಲದಿರುವುದು ಆಶ್ಚರ್ಯ. ಇವನು ಹೊಟ್ಟೆಗೆ ಎಲ್ಲರ ತರಹ ಹೊಟ್ಟೆಗೆ ಅನ್ನ ತಿನ್ನುತ್ತಾನೋ? ಇಲ್ಲ ಇನ್ನೇನಾದರೂ ತಿನ್ನುತ್ತಾನೋ? ಗೊತ್ತಿಲ್ಲ. ಇಂತಹ ಭ್ರಷ್ಟ ವರದಿಗಾರು ಸುಳ್ಳು ಮಾಹಿತಿಯನ್ನು ದುರದ್ದೇಶಪೂರಿತವಾಗಿ ನೀಡಲು ಕಾರಣವೇನಿಬಹುದು ಎಂದು ಬಹಿರಂಗ ಪಡಿಸಲಿ. ಇಲ್ಲದಿದ್ದರೆ ಸಾರ್ವಜಿಕವಾಗಿ ಕನ್ನಡ ಜನತೆಯ ಕ್ಷಮೆ ಕೇಳಲಿ.

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...