Homeಮುಖಪುಟಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

ಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಆಗಿರುವ ವರದಿಗೆ ಸಂಬಂಧಿಸಿದಂತೆ ಬರಗೂರು ರಾಮಚಂದ್ರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

“ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಹೋಲಿಸಿದರೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ” ಎಂದು ಬಿಂಬಿಸುವ ವರದಿಯಾಗಿದ್ದು, ‘ಬಿಜೆಪಿ ಪರಿವಾರ ಹೀಗೇಕೆ ಸುಳ್ಳು ಹೇಳುತ್ತಿದೆ’ ಎಂಬ ಪ್ರಶ್ನೆ ಮೂಡಿದೆ.

‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ‘ಚಕ್ರತೀರ್ಥ ಸಮಿತಿ ಸಂಭಾವನೆ 5 ಸಾವಿರ’ ಎಂಬ ಹೆಡ್‌ಲೈನ್‌ನಲ್ಲಿ ವರದಿ ಪ್ರಕಟವಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಕ್ರತೀರ್ಥ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ ಎಂದು ಹೇಳುವ ವರದಿಯು ಏಕಪಕ್ಷೀಯವಾಗಿದೆ ಎಂಬ ಟೀಕೆಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ವಿಜಯ ಕರ್ನಾಟಕ’ ವರದಿಯಲ್ಲಿನ ಮುಖ್ಯಾಂಶಗಳು

  • ಚಕ್ರತೀರ್ಥ ಸಮಿತಿ ಪಡೆದ ಸಂಭಾವನೆ ಕೇವಲ 33 ಸಾವಿರ ರೂಪಾಯಿ. ಸರ್ಕಾರ 28,600 ರೂ. ಬಾಕಿ ಉಳಿಸಿಕೊಂಡಿದೆ. ಸಮಿತಿಗೆ ಸಿಕ್ಕಿರುವುದು ಕೇವಲ 5200 ರೂ. ಸಮಿತಿ ಮಾಡಿದ ಒಟ್ಟು ವೆಚ್ಚ 50 ಲಕ್ಷ ರೂ.
  • ಈ ಹಿಂದಿನ ಸಮಿತಿಗಳು ಪಡೆದ ಸಂಭಾವನೆಗಿಂತ ಐದಾರು ಪಟ್ಟು ಕಮ್ಮಿ ಸಂಭಾವನೆಯನ್ನು ಚಕ್ರತೀರ್ಥ ಸಮಿತಿ ಪಡೆದಿದೆ. ಉಳಿದ ಸಮಿತಿಗಳ ಸಂಭಾವನೆ 3.75 ಲಕ್ಷ ರೂ.ಗಳಿಂದ 5.45 ಲಕ್ಷ ರೂ.ಗಳಾಗಿದೆ.

ಮೇಲು ನೋಟಕ್ಕೆ ಚಕ್ರತೀರ್ಥ ಸಮಿತಿಯು ಕಡಿಮೆ ವೆಚ್ಚ ಮಾಡಿದೆ ಎಂದು ಅನಿಸಿದರೂ ಇದು ಅರ್ಧ ಸತ್ಯದಿಂದ ಕೂಡಿದೆ. ಈ ಕುರಿತು ಸ್ವತಃ ಪ್ರೊ.ಬರಗೂರು ರಾಮಚಂದ್ರಪ್ಪ ಅವರೇ ಸ್ಪಷ್ಟನೆ ನೀಡಿದ್ದು, “ಪಠ್ಯಪುಸ್ತಕಗಳ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಮಾಡಿರುವ ವರದಿಯಲ್ಲಿ ಏಕಪಕ್ಷೀಯವಾದ ವಿವರಗಳಿವೆ” ಎಂದು ಬರಗೂರರು ಸ್ಪಷ್ಟಪಡಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರ ಸ್ಪಷ್ಟನೆಗಳೇನು?

ಸ್ಪಷ್ಟನೆ 1: ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಗಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದೆ ಎಂದು ವರದಿ ಹೇಳುತ್ತದೆ. ವಾಸ್ತವವಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದ್ದು ಪಠ್ಯಪುಸ್ತಕಗಳ ರಚನೆ ಹಾಗೂ ಪರಿಷ್ಕರಣೆಗಾಗಿ ಅಲ್ಲ. ಸಂಕೀರ್ಣ ವಿಷಯಗಳ ಪರಿಶೀಲನೆ ಮಾಡಿ ಒಂದು ತಿಂಗಳಲ್ಲಿ ವರದಿಯನ್ನು ಕೊಡಬೇಕೆಂದು ಸಮಿತಿ ರಚನೆಯಾಯಿತು.

ಸ್ಪಷ್ಟನೆ 2: ಚಕ್ರತೀರ್ಥ ಸಮಿತಿಗೆ ಕೇವಲ ಐದು ಸಾವಿರ ರೂಪಾಯಿಗಳ ಸಂಭಾವನೆಯನ್ನು ಕೊಡಲಾಗಿದೆ ಎಂದು ದೊಡ್ಡ ಶೀರ್ಷಿಕೆಯನ್ನು ವರದಿಗೆ ನೀಡಲಾಗಿದೆ. ಆದರೆ ಅದೇ ವರದಿಯಲ್ಲಿ ಸಂಭಾವನೆ 33,800 ರೂಪಾಯಿ ಎಂದಿದೆ. 28,000 ಬಾಕಿ ಉಳಿದಿದೆ ಎಂದು ಬರೆಯಲಾಗಿದೆ. ಬಾಕಿ ಉಳಿಸಿಕೊಂಡು ಆನಂತರ ಹಣ ಜಮಾ ಮಾಡುವ ಪದ್ಧತಿಯು ನಮ್ಮ ಸರ್ಕಾರದಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ನಮ್ಮ ಸಮಿತಿಯಲ್ಲೂ ಅನೇಕರಿಗೆ ಬಾಕಿ ಉಳಿಸಿಕೊಂಡು ಆನಂತರದಲ್ಲಿ ಹಣ ನೀಡಲಾಯಿತು. ಹೀಗಾಗಿ ಚಕ್ರತೀರ್ಥ ಸಮಿತಿಗೆ ನೀಡಿರುವ ಸಂಭಾವನೆ 5,000 ರೂಪಾಯಿಯಲ್ಲ, 33,800 ರೂಪಾಯಿ ಎಂಬುದು ಸತ್ಯ ಸಂಗತಿ.

ಸ್ಪಷ್ಟನೆ- 3: ಮುಡಂಬಡಿತ್ತಾಯ ಸಮಿತಿಯು 3 ಕೋಟಿ 63 ಲಕ್ಷ ಖರ್ಚು ಮಾಡಿದೆ ಎಂದೂ, ನಮ್ಮ ಸಮಿತಿ 2 ಕೋಟಿ 59 ಲಕ್ಷ ಖರ್ಚು ಮಾಡಿದೆ ಎಂದೂ, ಚಕ್ರತೀರ್ಥ ಸಮಿತಿ 49 ಲಕ್ಷ 99 ಸಾವಿರ ರೂ. ಖರ್ಚು ಮಾಡಿದೆ ಎಂದೂ ವರದಿ ಹೇಳುತ್ತದೆ. ಇದು ನಿಜವೇ ಇರಬಹುದು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಮೇಲ್ನೋಟಕ್ಕೆ ನಮ್ಮ ಸಮಿತಿ ತುಂಬಾ ಖರ್ಚು ಮಾಡಿದೆ ಎಂದೂ ಚಕ್ರತೀರ್ಥ ಸಮಿತಿಯು ಕಡಿಮೆ ಖರ್ಚು ಮಾಡಿದೆ ಎಂದೂ ತೋರಿಸಲಾಗುತ್ತಿದೆ. ಅರ್ಥ ಮಾಡಿಕೊಳ್ಳಬೇಕಾದ ಸಂಗತಿ ಏನೆಂದರೆ- ನಮ್ಮ ಸಮಿತಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದೆ. ವಾಸ್ತವವಾಗಿ ಮೊದಲು 27 ಸಮಿತಿಗಳ ರಚನೆ ಮಾಡಲಾಯಿತು. ಆ ನಂತರ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಆ ಸಮಿತಿಗಳು ಎರಡೂವರೆ ವರ್ಷ ಕೆಲಸ ಮಾಡಿದವು. ನಾನು ಎರಡು ವರ್ಷ ಕೆಲಸ ಮಾಡಿದೆ. ಒಟ್ಟು ಸಮಿತಿಯಲ್ಲಿ 172 ಜನರಿದ್ದರು. ಅಧಿಕಾರಿಗಳನ್ನೂ ಒಳಗೊಂಡು ಚಕ್ರತೀರ್ಥ ಸಮಿತಿಯಲ್ಲಿದ್ದದ್ದು (ಸರ್ಕಾರದ ಆದೇಶದ ಪ್ರಕಾರ) ಕೇವಲ 16 ಜನ. ಇವರು ಕೆಲಸ ಮಾಡಿದ್ದು ಹೆಚ್ಚೆಂದರೆ ಎರಡು ಅಥವಾ ಮೂರು ತಿಂಗಳು ಮಾತ್ರ. ಇಲ್ಲಿ ವ್ಯತ್ಯಾಸ ಬಹಳ ಸ್ಪಷ್ಟವಾಗಿದೆ. ನಾನು ಸರ್ವಾಧ್ಯಕ್ಷನಾಗಿದ್ದಾಗ 27 ಸಮಿತಿಗಳು, 172 ಜನರು ಕೆಲಸ ಮಾಡಿದ್ದಾರೆ. ಅದರ ಜೊತೆಗೆ ಹೊರಗಿನ 30ಕ್ಕೂ ಹೆಚ್ಚು ತಜ್ಞರ ಜೊತೆಯಲ್ಲಿ, ಅಧ್ಯಾಪಕರ ಜೊತೆಯಲ್ಲಿ ಸಭೆ ಮಾಡಿದ್ದೇವೆ. ಒಟ್ಟಾರೆ ಹೇಳುವುದಾದರೆ ನೂರಾರು ಕಾರ್ಯಾಗಾರಗಳು ನಡೆದಿವೆ. ಇವರಿಗೆ ಪ್ರಯಾಣ  ಭತ್ಯೆ, ಸಭಾ ಭತ್ಯೆ ಇತ್ಯಾದಿಗಳನ್ನು ಭರಿಸಿದ್ದು ಪಠ್ಯಪುಸ್ತಕ ಸಂಘ. ಅದೆಲ್ಲವೂ ಈ ರಚನಾ ಪ್ರಕ್ರಿಯೆಯಲ್ಲಿ ಸೇರಿವೆ. ಇಷ್ಟು ಕಾಲ, ಇಷ್ಟು ಮಂದಿ ಮಾಡಿದ ರಚನೆಯ ಕುರಿತು ಆ ವರದಿಯಲ್ಲಿ ಉಲ್ಲೇಖ ಇಲ್ಲದೆ ಇರುವುದರಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡುತ್ತದೆ. ಕಾಲವಧಿಯ ವ್ಯತ್ಯಾಸ, ಕೆಲಸದ ರೀತಿಯ ವ್ಯತ್ಯಾಸ, ಸದಸ್ಯರ ಸಂಖ್ಯೆಯ ವ್ಯತ್ಯಾಸ ಈ ವಿವರಗಳೆಲ್ಲ ವರದಿಯಲ್ಲಿ ಇದ್ದಿದ್ದರೆ ಓದುಗರಿಗೆ ಸ್ಪಷ್ಟವಾಗುತ್ತಿತ್ತು.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಸ್ಪಷ್ಟನೆ – 4: ಪಠ್ಯಪುಸ್ತಕ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಡಿಟಿಪಿ ಮಾಡಿರುವ ಖರ್ಚುಗಳೂ ಸೇರಿರುತ್ತವೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಮೇಲೆ ನಿಯಮಗಳ ಪ್ರಕಾರ ಸರ್ಕಾರ ಕೊಡುವ ಭತ್ಯೆಗಳ ಜೊತೆಗೆ ಡಿಟಿಪಿ ಇತ್ಯಾದಿಗಳೆಲ್ಲವೂ ಸೇರಿರುತ್ತವೆ. ಸಮಿತಿಯ ಸದಸ್ಯರಿಗಾಗಲೀ, ಅಧ್ಯಕ್ಷರಿಗಾಗಿ ಹಣ ಕೊಟ್ಟು ಹಂಚಲಾಗುವುದಿಲ್ಲ. ಪಠ್ಯ ಪುಸ್ತಕ ಸಂಘ ಅಥವಾ ಇಲಾಖೆ ಆ ಹಣವನ್ನು ಹಂಚುತ್ತದೆ. ಇಡೀ ಹಣಕಾಸಿನ ವ್ಯವಹಾರವನ್ನು ನೋಡಿಕೊಳ್ಳುವುದು ನಿಯಮಾನುಸಾರ ಪಠ್ಯಪುಸ್ತಕ ಸಂಘವೇ ಹೊರತು ನಮ್ಮ ಸಮಿತಿಗಳೂ ಅಲ್ಲ, ಸದಸ್ಯರೂ ಅಲ್ಲ, ಅಧ್ಯಕ್ಷರೂ ಅಲ್ಲ. ಈ ವ್ಯತ್ಯಾಸವನ್ನು ಸಾರ್ವಜನಿಕರು ಗಮನಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ನೇಮಕಗೊಂಡ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ, ಸಂಕೀರ್ಣ ವಿಷಯಗಳ ಪರಿಶೀಲನೆಗಾಗಿ ನೇಮಕವಾದ ರೋಹಿತ್ ಚಕ್ರತೀರ್ಥ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ ವ್ಯತ್ಯಾಸ ಇದೆ; ಅದಕ್ಕಾಗಿ, ತೆಗೆದುಕೊಂಡ ಸಮಯ ಮತ್ತು ಮಾಡಿದ ಖರ್ಚು ಸಹಜವಾಗಿ ಬೇರೆ ಬೇರೆಯಾಗಿ ಇರುವುದು ಸಾಮಾನ್ಯ. ಒಬ್ಬ ವರದಿಗಾರನಿಗೆ ಈ ವ್ಯತ್ಯಾಸದ ಸಾಮಾನ್ಯ ಜ್ಞಾನ ಇರಬೇಕು. ಇಲ್ಲ ಎಂದಾದರೆ, ಈ ವರದಿ ದುರುದ್ದೇಶಪೂರಿತ ಎಂಬುದು ಸ್ಪಷ್ಟ! ಇಂತಹ ಕುಚೋದ್ಯ ಮಾಡಲು ಪತ್ರಿಕೆಯನ್ನು ಪ್ರತಿನಿಧಿಸುವವರಿಗೆ ನಾಚಿಕೆಯೂ ಆಗುವುದಿಲ್ಲವೆ?!?

  2. ಜೀ ಹುಜೂರ್‌ ಎನ್ನುವ ಗುಲಾಮ ವರದಿಗಾರ ಮಾತ್ರ ಈ ರೀತಿ ಸುಳ್ಳು ವರದಿ ನೀಡಲು ಸಾಧ್ಯ. ದೇವರಾಜ್‌ ಕನಕಪುರ ತಲೆಯು ಸಾಮಾನ್ಯರಂತೆ ಇಲ್ಲದಿರುವುದು ಆಶ್ಚರ್ಯ. ಇವನು ಹೊಟ್ಟೆಗೆ ಎಲ್ಲರ ತರಹ ಹೊಟ್ಟೆಗೆ ಅನ್ನ ತಿನ್ನುತ್ತಾನೋ? ಇಲ್ಲ ಇನ್ನೇನಾದರೂ ತಿನ್ನುತ್ತಾನೋ? ಗೊತ್ತಿಲ್ಲ. ಇಂತಹ ಭ್ರಷ್ಟ ವರದಿಗಾರು ಸುಳ್ಳು ಮಾಹಿತಿಯನ್ನು ದುರದ್ದೇಶಪೂರಿತವಾಗಿ ನೀಡಲು ಕಾರಣವೇನಿಬಹುದು ಎಂದು ಬಹಿರಂಗ ಪಡಿಸಲಿ. ಇಲ್ಲದಿದ್ದರೆ ಸಾರ್ವಜಿಕವಾಗಿ ಕನ್ನಡ ಜನತೆಯ ಕ್ಷಮೆ ಕೇಳಲಿ.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...