Homeಮುಖಪುಟಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

ಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಆಗಿರುವ ವರದಿಗೆ ಸಂಬಂಧಿಸಿದಂತೆ ಬರಗೂರು ರಾಮಚಂದ್ರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

“ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಹೋಲಿಸಿದರೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ” ಎಂದು ಬಿಂಬಿಸುವ ವರದಿಯಾಗಿದ್ದು, ‘ಬಿಜೆಪಿ ಪರಿವಾರ ಹೀಗೇಕೆ ಸುಳ್ಳು ಹೇಳುತ್ತಿದೆ’ ಎಂಬ ಪ್ರಶ್ನೆ ಮೂಡಿದೆ.

‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ‘ಚಕ್ರತೀರ್ಥ ಸಮಿತಿ ಸಂಭಾವನೆ 5 ಸಾವಿರ’ ಎಂಬ ಹೆಡ್‌ಲೈನ್‌ನಲ್ಲಿ ವರದಿ ಪ್ರಕಟವಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಕ್ರತೀರ್ಥ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ ಎಂದು ಹೇಳುವ ವರದಿಯು ಏಕಪಕ್ಷೀಯವಾಗಿದೆ ಎಂಬ ಟೀಕೆಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ವಿಜಯ ಕರ್ನಾಟಕ’ ವರದಿಯಲ್ಲಿನ ಮುಖ್ಯಾಂಶಗಳು

  • ಚಕ್ರತೀರ್ಥ ಸಮಿತಿ ಪಡೆದ ಸಂಭಾವನೆ ಕೇವಲ 33 ಸಾವಿರ ರೂಪಾಯಿ. ಸರ್ಕಾರ 28,600 ರೂ. ಬಾಕಿ ಉಳಿಸಿಕೊಂಡಿದೆ. ಸಮಿತಿಗೆ ಸಿಕ್ಕಿರುವುದು ಕೇವಲ 5200 ರೂ. ಸಮಿತಿ ಮಾಡಿದ ಒಟ್ಟು ವೆಚ್ಚ 50 ಲಕ್ಷ ರೂ.
  • ಈ ಹಿಂದಿನ ಸಮಿತಿಗಳು ಪಡೆದ ಸಂಭಾವನೆಗಿಂತ ಐದಾರು ಪಟ್ಟು ಕಮ್ಮಿ ಸಂಭಾವನೆಯನ್ನು ಚಕ್ರತೀರ್ಥ ಸಮಿತಿ ಪಡೆದಿದೆ. ಉಳಿದ ಸಮಿತಿಗಳ ಸಂಭಾವನೆ 3.75 ಲಕ್ಷ ರೂ.ಗಳಿಂದ 5.45 ಲಕ್ಷ ರೂ.ಗಳಾಗಿದೆ.

ಮೇಲು ನೋಟಕ್ಕೆ ಚಕ್ರತೀರ್ಥ ಸಮಿತಿಯು ಕಡಿಮೆ ವೆಚ್ಚ ಮಾಡಿದೆ ಎಂದು ಅನಿಸಿದರೂ ಇದು ಅರ್ಧ ಸತ್ಯದಿಂದ ಕೂಡಿದೆ. ಈ ಕುರಿತು ಸ್ವತಃ ಪ್ರೊ.ಬರಗೂರು ರಾಮಚಂದ್ರಪ್ಪ ಅವರೇ ಸ್ಪಷ್ಟನೆ ನೀಡಿದ್ದು, “ಪಠ್ಯಪುಸ್ತಕಗಳ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಮಾಡಿರುವ ವರದಿಯಲ್ಲಿ ಏಕಪಕ್ಷೀಯವಾದ ವಿವರಗಳಿವೆ” ಎಂದು ಬರಗೂರರು ಸ್ಪಷ್ಟಪಡಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರ ಸ್ಪಷ್ಟನೆಗಳೇನು?

ಸ್ಪಷ್ಟನೆ 1: ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಗಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದೆ ಎಂದು ವರದಿ ಹೇಳುತ್ತದೆ. ವಾಸ್ತವವಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದ್ದು ಪಠ್ಯಪುಸ್ತಕಗಳ ರಚನೆ ಹಾಗೂ ಪರಿಷ್ಕರಣೆಗಾಗಿ ಅಲ್ಲ. ಸಂಕೀರ್ಣ ವಿಷಯಗಳ ಪರಿಶೀಲನೆ ಮಾಡಿ ಒಂದು ತಿಂಗಳಲ್ಲಿ ವರದಿಯನ್ನು ಕೊಡಬೇಕೆಂದು ಸಮಿತಿ ರಚನೆಯಾಯಿತು.

ಸ್ಪಷ್ಟನೆ 2: ಚಕ್ರತೀರ್ಥ ಸಮಿತಿಗೆ ಕೇವಲ ಐದು ಸಾವಿರ ರೂಪಾಯಿಗಳ ಸಂಭಾವನೆಯನ್ನು ಕೊಡಲಾಗಿದೆ ಎಂದು ದೊಡ್ಡ ಶೀರ್ಷಿಕೆಯನ್ನು ವರದಿಗೆ ನೀಡಲಾಗಿದೆ. ಆದರೆ ಅದೇ ವರದಿಯಲ್ಲಿ ಸಂಭಾವನೆ 33,800 ರೂಪಾಯಿ ಎಂದಿದೆ. 28,000 ಬಾಕಿ ಉಳಿದಿದೆ ಎಂದು ಬರೆಯಲಾಗಿದೆ. ಬಾಕಿ ಉಳಿಸಿಕೊಂಡು ಆನಂತರ ಹಣ ಜಮಾ ಮಾಡುವ ಪದ್ಧತಿಯು ನಮ್ಮ ಸರ್ಕಾರದಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ನಮ್ಮ ಸಮಿತಿಯಲ್ಲೂ ಅನೇಕರಿಗೆ ಬಾಕಿ ಉಳಿಸಿಕೊಂಡು ಆನಂತರದಲ್ಲಿ ಹಣ ನೀಡಲಾಯಿತು. ಹೀಗಾಗಿ ಚಕ್ರತೀರ್ಥ ಸಮಿತಿಗೆ ನೀಡಿರುವ ಸಂಭಾವನೆ 5,000 ರೂಪಾಯಿಯಲ್ಲ, 33,800 ರೂಪಾಯಿ ಎಂಬುದು ಸತ್ಯ ಸಂಗತಿ.

ಸ್ಪಷ್ಟನೆ- 3: ಮುಡಂಬಡಿತ್ತಾಯ ಸಮಿತಿಯು 3 ಕೋಟಿ 63 ಲಕ್ಷ ಖರ್ಚು ಮಾಡಿದೆ ಎಂದೂ, ನಮ್ಮ ಸಮಿತಿ 2 ಕೋಟಿ 59 ಲಕ್ಷ ಖರ್ಚು ಮಾಡಿದೆ ಎಂದೂ, ಚಕ್ರತೀರ್ಥ ಸಮಿತಿ 49 ಲಕ್ಷ 99 ಸಾವಿರ ರೂ. ಖರ್ಚು ಮಾಡಿದೆ ಎಂದೂ ವರದಿ ಹೇಳುತ್ತದೆ. ಇದು ನಿಜವೇ ಇರಬಹುದು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಮೇಲ್ನೋಟಕ್ಕೆ ನಮ್ಮ ಸಮಿತಿ ತುಂಬಾ ಖರ್ಚು ಮಾಡಿದೆ ಎಂದೂ ಚಕ್ರತೀರ್ಥ ಸಮಿತಿಯು ಕಡಿಮೆ ಖರ್ಚು ಮಾಡಿದೆ ಎಂದೂ ತೋರಿಸಲಾಗುತ್ತಿದೆ. ಅರ್ಥ ಮಾಡಿಕೊಳ್ಳಬೇಕಾದ ಸಂಗತಿ ಏನೆಂದರೆ- ನಮ್ಮ ಸಮಿತಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದೆ. ವಾಸ್ತವವಾಗಿ ಮೊದಲು 27 ಸಮಿತಿಗಳ ರಚನೆ ಮಾಡಲಾಯಿತು. ಆ ನಂತರ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಆ ಸಮಿತಿಗಳು ಎರಡೂವರೆ ವರ್ಷ ಕೆಲಸ ಮಾಡಿದವು. ನಾನು ಎರಡು ವರ್ಷ ಕೆಲಸ ಮಾಡಿದೆ. ಒಟ್ಟು ಸಮಿತಿಯಲ್ಲಿ 172 ಜನರಿದ್ದರು. ಅಧಿಕಾರಿಗಳನ್ನೂ ಒಳಗೊಂಡು ಚಕ್ರತೀರ್ಥ ಸಮಿತಿಯಲ್ಲಿದ್ದದ್ದು (ಸರ್ಕಾರದ ಆದೇಶದ ಪ್ರಕಾರ) ಕೇವಲ 16 ಜನ. ಇವರು ಕೆಲಸ ಮಾಡಿದ್ದು ಹೆಚ್ಚೆಂದರೆ ಎರಡು ಅಥವಾ ಮೂರು ತಿಂಗಳು ಮಾತ್ರ. ಇಲ್ಲಿ ವ್ಯತ್ಯಾಸ ಬಹಳ ಸ್ಪಷ್ಟವಾಗಿದೆ. ನಾನು ಸರ್ವಾಧ್ಯಕ್ಷನಾಗಿದ್ದಾಗ 27 ಸಮಿತಿಗಳು, 172 ಜನರು ಕೆಲಸ ಮಾಡಿದ್ದಾರೆ. ಅದರ ಜೊತೆಗೆ ಹೊರಗಿನ 30ಕ್ಕೂ ಹೆಚ್ಚು ತಜ್ಞರ ಜೊತೆಯಲ್ಲಿ, ಅಧ್ಯಾಪಕರ ಜೊತೆಯಲ್ಲಿ ಸಭೆ ಮಾಡಿದ್ದೇವೆ. ಒಟ್ಟಾರೆ ಹೇಳುವುದಾದರೆ ನೂರಾರು ಕಾರ್ಯಾಗಾರಗಳು ನಡೆದಿವೆ. ಇವರಿಗೆ ಪ್ರಯಾಣ  ಭತ್ಯೆ, ಸಭಾ ಭತ್ಯೆ ಇತ್ಯಾದಿಗಳನ್ನು ಭರಿಸಿದ್ದು ಪಠ್ಯಪುಸ್ತಕ ಸಂಘ. ಅದೆಲ್ಲವೂ ಈ ರಚನಾ ಪ್ರಕ್ರಿಯೆಯಲ್ಲಿ ಸೇರಿವೆ. ಇಷ್ಟು ಕಾಲ, ಇಷ್ಟು ಮಂದಿ ಮಾಡಿದ ರಚನೆಯ ಕುರಿತು ಆ ವರದಿಯಲ್ಲಿ ಉಲ್ಲೇಖ ಇಲ್ಲದೆ ಇರುವುದರಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡುತ್ತದೆ. ಕಾಲವಧಿಯ ವ್ಯತ್ಯಾಸ, ಕೆಲಸದ ರೀತಿಯ ವ್ಯತ್ಯಾಸ, ಸದಸ್ಯರ ಸಂಖ್ಯೆಯ ವ್ಯತ್ಯಾಸ ಈ ವಿವರಗಳೆಲ್ಲ ವರದಿಯಲ್ಲಿ ಇದ್ದಿದ್ದರೆ ಓದುಗರಿಗೆ ಸ್ಪಷ್ಟವಾಗುತ್ತಿತ್ತು.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಸ್ಪಷ್ಟನೆ – 4: ಪಠ್ಯಪುಸ್ತಕ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಡಿಟಿಪಿ ಮಾಡಿರುವ ಖರ್ಚುಗಳೂ ಸೇರಿರುತ್ತವೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಮೇಲೆ ನಿಯಮಗಳ ಪ್ರಕಾರ ಸರ್ಕಾರ ಕೊಡುವ ಭತ್ಯೆಗಳ ಜೊತೆಗೆ ಡಿಟಿಪಿ ಇತ್ಯಾದಿಗಳೆಲ್ಲವೂ ಸೇರಿರುತ್ತವೆ. ಸಮಿತಿಯ ಸದಸ್ಯರಿಗಾಗಲೀ, ಅಧ್ಯಕ್ಷರಿಗಾಗಿ ಹಣ ಕೊಟ್ಟು ಹಂಚಲಾಗುವುದಿಲ್ಲ. ಪಠ್ಯ ಪುಸ್ತಕ ಸಂಘ ಅಥವಾ ಇಲಾಖೆ ಆ ಹಣವನ್ನು ಹಂಚುತ್ತದೆ. ಇಡೀ ಹಣಕಾಸಿನ ವ್ಯವಹಾರವನ್ನು ನೋಡಿಕೊಳ್ಳುವುದು ನಿಯಮಾನುಸಾರ ಪಠ್ಯಪುಸ್ತಕ ಸಂಘವೇ ಹೊರತು ನಮ್ಮ ಸಮಿತಿಗಳೂ ಅಲ್ಲ, ಸದಸ್ಯರೂ ಅಲ್ಲ, ಅಧ್ಯಕ್ಷರೂ ಅಲ್ಲ. ಈ ವ್ಯತ್ಯಾಸವನ್ನು ಸಾರ್ವಜನಿಕರು ಗಮನಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ನೇಮಕಗೊಂಡ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ, ಸಂಕೀರ್ಣ ವಿಷಯಗಳ ಪರಿಶೀಲನೆಗಾಗಿ ನೇಮಕವಾದ ರೋಹಿತ್ ಚಕ್ರತೀರ್ಥ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ ವ್ಯತ್ಯಾಸ ಇದೆ; ಅದಕ್ಕಾಗಿ, ತೆಗೆದುಕೊಂಡ ಸಮಯ ಮತ್ತು ಮಾಡಿದ ಖರ್ಚು ಸಹಜವಾಗಿ ಬೇರೆ ಬೇರೆಯಾಗಿ ಇರುವುದು ಸಾಮಾನ್ಯ. ಒಬ್ಬ ವರದಿಗಾರನಿಗೆ ಈ ವ್ಯತ್ಯಾಸದ ಸಾಮಾನ್ಯ ಜ್ಞಾನ ಇರಬೇಕು. ಇಲ್ಲ ಎಂದಾದರೆ, ಈ ವರದಿ ದುರುದ್ದೇಶಪೂರಿತ ಎಂಬುದು ಸ್ಪಷ್ಟ! ಇಂತಹ ಕುಚೋದ್ಯ ಮಾಡಲು ಪತ್ರಿಕೆಯನ್ನು ಪ್ರತಿನಿಧಿಸುವವರಿಗೆ ನಾಚಿಕೆಯೂ ಆಗುವುದಿಲ್ಲವೆ?!?

  2. ಜೀ ಹುಜೂರ್‌ ಎನ್ನುವ ಗುಲಾಮ ವರದಿಗಾರ ಮಾತ್ರ ಈ ರೀತಿ ಸುಳ್ಳು ವರದಿ ನೀಡಲು ಸಾಧ್ಯ. ದೇವರಾಜ್‌ ಕನಕಪುರ ತಲೆಯು ಸಾಮಾನ್ಯರಂತೆ ಇಲ್ಲದಿರುವುದು ಆಶ್ಚರ್ಯ. ಇವನು ಹೊಟ್ಟೆಗೆ ಎಲ್ಲರ ತರಹ ಹೊಟ್ಟೆಗೆ ಅನ್ನ ತಿನ್ನುತ್ತಾನೋ? ಇಲ್ಲ ಇನ್ನೇನಾದರೂ ತಿನ್ನುತ್ತಾನೋ? ಗೊತ್ತಿಲ್ಲ. ಇಂತಹ ಭ್ರಷ್ಟ ವರದಿಗಾರು ಸುಳ್ಳು ಮಾಹಿತಿಯನ್ನು ದುರದ್ದೇಶಪೂರಿತವಾಗಿ ನೀಡಲು ಕಾರಣವೇನಿಬಹುದು ಎಂದು ಬಹಿರಂಗ ಪಡಿಸಲಿ. ಇಲ್ಲದಿದ್ದರೆ ಸಾರ್ವಜಿಕವಾಗಿ ಕನ್ನಡ ಜನತೆಯ ಕ್ಷಮೆ ಕೇಳಲಿ.

LEAVE A REPLY

Please enter your comment!
Please enter your name here

- Advertisment -

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....