Homeಮುಖಪುಟಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

ಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಆಗಿರುವ ವರದಿಗೆ ಸಂಬಂಧಿಸಿದಂತೆ ಬರಗೂರು ರಾಮಚಂದ್ರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

“ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಹೋಲಿಸಿದರೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ” ಎಂದು ಬಿಂಬಿಸುವ ವರದಿಯಾಗಿದ್ದು, ‘ಬಿಜೆಪಿ ಪರಿವಾರ ಹೀಗೇಕೆ ಸುಳ್ಳು ಹೇಳುತ್ತಿದೆ’ ಎಂಬ ಪ್ರಶ್ನೆ ಮೂಡಿದೆ.

‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ‘ಚಕ್ರತೀರ್ಥ ಸಮಿತಿ ಸಂಭಾವನೆ 5 ಸಾವಿರ’ ಎಂಬ ಹೆಡ್‌ಲೈನ್‌ನಲ್ಲಿ ವರದಿ ಪ್ರಕಟವಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಕ್ರತೀರ್ಥ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ ಎಂದು ಹೇಳುವ ವರದಿಯು ಏಕಪಕ್ಷೀಯವಾಗಿದೆ ಎಂಬ ಟೀಕೆಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ವಿಜಯ ಕರ್ನಾಟಕ’ ವರದಿಯಲ್ಲಿನ ಮುಖ್ಯಾಂಶಗಳು

  • ಚಕ್ರತೀರ್ಥ ಸಮಿತಿ ಪಡೆದ ಸಂಭಾವನೆ ಕೇವಲ 33 ಸಾವಿರ ರೂಪಾಯಿ. ಸರ್ಕಾರ 28,600 ರೂ. ಬಾಕಿ ಉಳಿಸಿಕೊಂಡಿದೆ. ಸಮಿತಿಗೆ ಸಿಕ್ಕಿರುವುದು ಕೇವಲ 5200 ರೂ. ಸಮಿತಿ ಮಾಡಿದ ಒಟ್ಟು ವೆಚ್ಚ 50 ಲಕ್ಷ ರೂ.
  • ಈ ಹಿಂದಿನ ಸಮಿತಿಗಳು ಪಡೆದ ಸಂಭಾವನೆಗಿಂತ ಐದಾರು ಪಟ್ಟು ಕಮ್ಮಿ ಸಂಭಾವನೆಯನ್ನು ಚಕ್ರತೀರ್ಥ ಸಮಿತಿ ಪಡೆದಿದೆ. ಉಳಿದ ಸಮಿತಿಗಳ ಸಂಭಾವನೆ 3.75 ಲಕ್ಷ ರೂ.ಗಳಿಂದ 5.45 ಲಕ್ಷ ರೂ.ಗಳಾಗಿದೆ.

ಮೇಲು ನೋಟಕ್ಕೆ ಚಕ್ರತೀರ್ಥ ಸಮಿತಿಯು ಕಡಿಮೆ ವೆಚ್ಚ ಮಾಡಿದೆ ಎಂದು ಅನಿಸಿದರೂ ಇದು ಅರ್ಧ ಸತ್ಯದಿಂದ ಕೂಡಿದೆ. ಈ ಕುರಿತು ಸ್ವತಃ ಪ್ರೊ.ಬರಗೂರು ರಾಮಚಂದ್ರಪ್ಪ ಅವರೇ ಸ್ಪಷ್ಟನೆ ನೀಡಿದ್ದು, “ಪಠ್ಯಪುಸ್ತಕಗಳ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಮಾಡಿರುವ ವರದಿಯಲ್ಲಿ ಏಕಪಕ್ಷೀಯವಾದ ವಿವರಗಳಿವೆ” ಎಂದು ಬರಗೂರರು ಸ್ಪಷ್ಟಪಡಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರ ಸ್ಪಷ್ಟನೆಗಳೇನು?

ಸ್ಪಷ್ಟನೆ 1: ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಗಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದೆ ಎಂದು ವರದಿ ಹೇಳುತ್ತದೆ. ವಾಸ್ತವವಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದ್ದು ಪಠ್ಯಪುಸ್ತಕಗಳ ರಚನೆ ಹಾಗೂ ಪರಿಷ್ಕರಣೆಗಾಗಿ ಅಲ್ಲ. ಸಂಕೀರ್ಣ ವಿಷಯಗಳ ಪರಿಶೀಲನೆ ಮಾಡಿ ಒಂದು ತಿಂಗಳಲ್ಲಿ ವರದಿಯನ್ನು ಕೊಡಬೇಕೆಂದು ಸಮಿತಿ ರಚನೆಯಾಯಿತು.

ಸ್ಪಷ್ಟನೆ 2: ಚಕ್ರತೀರ್ಥ ಸಮಿತಿಗೆ ಕೇವಲ ಐದು ಸಾವಿರ ರೂಪಾಯಿಗಳ ಸಂಭಾವನೆಯನ್ನು ಕೊಡಲಾಗಿದೆ ಎಂದು ದೊಡ್ಡ ಶೀರ್ಷಿಕೆಯನ್ನು ವರದಿಗೆ ನೀಡಲಾಗಿದೆ. ಆದರೆ ಅದೇ ವರದಿಯಲ್ಲಿ ಸಂಭಾವನೆ 33,800 ರೂಪಾಯಿ ಎಂದಿದೆ. 28,000 ಬಾಕಿ ಉಳಿದಿದೆ ಎಂದು ಬರೆಯಲಾಗಿದೆ. ಬಾಕಿ ಉಳಿಸಿಕೊಂಡು ಆನಂತರ ಹಣ ಜಮಾ ಮಾಡುವ ಪದ್ಧತಿಯು ನಮ್ಮ ಸರ್ಕಾರದಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ನಮ್ಮ ಸಮಿತಿಯಲ್ಲೂ ಅನೇಕರಿಗೆ ಬಾಕಿ ಉಳಿಸಿಕೊಂಡು ಆನಂತರದಲ್ಲಿ ಹಣ ನೀಡಲಾಯಿತು. ಹೀಗಾಗಿ ಚಕ್ರತೀರ್ಥ ಸಮಿತಿಗೆ ನೀಡಿರುವ ಸಂಭಾವನೆ 5,000 ರೂಪಾಯಿಯಲ್ಲ, 33,800 ರೂಪಾಯಿ ಎಂಬುದು ಸತ್ಯ ಸಂಗತಿ.

ಸ್ಪಷ್ಟನೆ- 3: ಮುಡಂಬಡಿತ್ತಾಯ ಸಮಿತಿಯು 3 ಕೋಟಿ 63 ಲಕ್ಷ ಖರ್ಚು ಮಾಡಿದೆ ಎಂದೂ, ನಮ್ಮ ಸಮಿತಿ 2 ಕೋಟಿ 59 ಲಕ್ಷ ಖರ್ಚು ಮಾಡಿದೆ ಎಂದೂ, ಚಕ್ರತೀರ್ಥ ಸಮಿತಿ 49 ಲಕ್ಷ 99 ಸಾವಿರ ರೂ. ಖರ್ಚು ಮಾಡಿದೆ ಎಂದೂ ವರದಿ ಹೇಳುತ್ತದೆ. ಇದು ನಿಜವೇ ಇರಬಹುದು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಮೇಲ್ನೋಟಕ್ಕೆ ನಮ್ಮ ಸಮಿತಿ ತುಂಬಾ ಖರ್ಚು ಮಾಡಿದೆ ಎಂದೂ ಚಕ್ರತೀರ್ಥ ಸಮಿತಿಯು ಕಡಿಮೆ ಖರ್ಚು ಮಾಡಿದೆ ಎಂದೂ ತೋರಿಸಲಾಗುತ್ತಿದೆ. ಅರ್ಥ ಮಾಡಿಕೊಳ್ಳಬೇಕಾದ ಸಂಗತಿ ಏನೆಂದರೆ- ನಮ್ಮ ಸಮಿತಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದೆ. ವಾಸ್ತವವಾಗಿ ಮೊದಲು 27 ಸಮಿತಿಗಳ ರಚನೆ ಮಾಡಲಾಯಿತು. ಆ ನಂತರ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಆ ಸಮಿತಿಗಳು ಎರಡೂವರೆ ವರ್ಷ ಕೆಲಸ ಮಾಡಿದವು. ನಾನು ಎರಡು ವರ್ಷ ಕೆಲಸ ಮಾಡಿದೆ. ಒಟ್ಟು ಸಮಿತಿಯಲ್ಲಿ 172 ಜನರಿದ್ದರು. ಅಧಿಕಾರಿಗಳನ್ನೂ ಒಳಗೊಂಡು ಚಕ್ರತೀರ್ಥ ಸಮಿತಿಯಲ್ಲಿದ್ದದ್ದು (ಸರ್ಕಾರದ ಆದೇಶದ ಪ್ರಕಾರ) ಕೇವಲ 16 ಜನ. ಇವರು ಕೆಲಸ ಮಾಡಿದ್ದು ಹೆಚ್ಚೆಂದರೆ ಎರಡು ಅಥವಾ ಮೂರು ತಿಂಗಳು ಮಾತ್ರ. ಇಲ್ಲಿ ವ್ಯತ್ಯಾಸ ಬಹಳ ಸ್ಪಷ್ಟವಾಗಿದೆ. ನಾನು ಸರ್ವಾಧ್ಯಕ್ಷನಾಗಿದ್ದಾಗ 27 ಸಮಿತಿಗಳು, 172 ಜನರು ಕೆಲಸ ಮಾಡಿದ್ದಾರೆ. ಅದರ ಜೊತೆಗೆ ಹೊರಗಿನ 30ಕ್ಕೂ ಹೆಚ್ಚು ತಜ್ಞರ ಜೊತೆಯಲ್ಲಿ, ಅಧ್ಯಾಪಕರ ಜೊತೆಯಲ್ಲಿ ಸಭೆ ಮಾಡಿದ್ದೇವೆ. ಒಟ್ಟಾರೆ ಹೇಳುವುದಾದರೆ ನೂರಾರು ಕಾರ್ಯಾಗಾರಗಳು ನಡೆದಿವೆ. ಇವರಿಗೆ ಪ್ರಯಾಣ  ಭತ್ಯೆ, ಸಭಾ ಭತ್ಯೆ ಇತ್ಯಾದಿಗಳನ್ನು ಭರಿಸಿದ್ದು ಪಠ್ಯಪುಸ್ತಕ ಸಂಘ. ಅದೆಲ್ಲವೂ ಈ ರಚನಾ ಪ್ರಕ್ರಿಯೆಯಲ್ಲಿ ಸೇರಿವೆ. ಇಷ್ಟು ಕಾಲ, ಇಷ್ಟು ಮಂದಿ ಮಾಡಿದ ರಚನೆಯ ಕುರಿತು ಆ ವರದಿಯಲ್ಲಿ ಉಲ್ಲೇಖ ಇಲ್ಲದೆ ಇರುವುದರಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡುತ್ತದೆ. ಕಾಲವಧಿಯ ವ್ಯತ್ಯಾಸ, ಕೆಲಸದ ರೀತಿಯ ವ್ಯತ್ಯಾಸ, ಸದಸ್ಯರ ಸಂಖ್ಯೆಯ ವ್ಯತ್ಯಾಸ ಈ ವಿವರಗಳೆಲ್ಲ ವರದಿಯಲ್ಲಿ ಇದ್ದಿದ್ದರೆ ಓದುಗರಿಗೆ ಸ್ಪಷ್ಟವಾಗುತ್ತಿತ್ತು.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಸ್ಪಷ್ಟನೆ – 4: ಪಠ್ಯಪುಸ್ತಕ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಡಿಟಿಪಿ ಮಾಡಿರುವ ಖರ್ಚುಗಳೂ ಸೇರಿರುತ್ತವೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಮೇಲೆ ನಿಯಮಗಳ ಪ್ರಕಾರ ಸರ್ಕಾರ ಕೊಡುವ ಭತ್ಯೆಗಳ ಜೊತೆಗೆ ಡಿಟಿಪಿ ಇತ್ಯಾದಿಗಳೆಲ್ಲವೂ ಸೇರಿರುತ್ತವೆ. ಸಮಿತಿಯ ಸದಸ್ಯರಿಗಾಗಲೀ, ಅಧ್ಯಕ್ಷರಿಗಾಗಿ ಹಣ ಕೊಟ್ಟು ಹಂಚಲಾಗುವುದಿಲ್ಲ. ಪಠ್ಯ ಪುಸ್ತಕ ಸಂಘ ಅಥವಾ ಇಲಾಖೆ ಆ ಹಣವನ್ನು ಹಂಚುತ್ತದೆ. ಇಡೀ ಹಣಕಾಸಿನ ವ್ಯವಹಾರವನ್ನು ನೋಡಿಕೊಳ್ಳುವುದು ನಿಯಮಾನುಸಾರ ಪಠ್ಯಪುಸ್ತಕ ಸಂಘವೇ ಹೊರತು ನಮ್ಮ ಸಮಿತಿಗಳೂ ಅಲ್ಲ, ಸದಸ್ಯರೂ ಅಲ್ಲ, ಅಧ್ಯಕ್ಷರೂ ಅಲ್ಲ. ಈ ವ್ಯತ್ಯಾಸವನ್ನು ಸಾರ್ವಜನಿಕರು ಗಮನಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ನೇಮಕಗೊಂಡ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ, ಸಂಕೀರ್ಣ ವಿಷಯಗಳ ಪರಿಶೀಲನೆಗಾಗಿ ನೇಮಕವಾದ ರೋಹಿತ್ ಚಕ್ರತೀರ್ಥ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ ವ್ಯತ್ಯಾಸ ಇದೆ; ಅದಕ್ಕಾಗಿ, ತೆಗೆದುಕೊಂಡ ಸಮಯ ಮತ್ತು ಮಾಡಿದ ಖರ್ಚು ಸಹಜವಾಗಿ ಬೇರೆ ಬೇರೆಯಾಗಿ ಇರುವುದು ಸಾಮಾನ್ಯ. ಒಬ್ಬ ವರದಿಗಾರನಿಗೆ ಈ ವ್ಯತ್ಯಾಸದ ಸಾಮಾನ್ಯ ಜ್ಞಾನ ಇರಬೇಕು. ಇಲ್ಲ ಎಂದಾದರೆ, ಈ ವರದಿ ದುರುದ್ದೇಶಪೂರಿತ ಎಂಬುದು ಸ್ಪಷ್ಟ! ಇಂತಹ ಕುಚೋದ್ಯ ಮಾಡಲು ಪತ್ರಿಕೆಯನ್ನು ಪ್ರತಿನಿಧಿಸುವವರಿಗೆ ನಾಚಿಕೆಯೂ ಆಗುವುದಿಲ್ಲವೆ?!?

  2. ಜೀ ಹುಜೂರ್‌ ಎನ್ನುವ ಗುಲಾಮ ವರದಿಗಾರ ಮಾತ್ರ ಈ ರೀತಿ ಸುಳ್ಳು ವರದಿ ನೀಡಲು ಸಾಧ್ಯ. ದೇವರಾಜ್‌ ಕನಕಪುರ ತಲೆಯು ಸಾಮಾನ್ಯರಂತೆ ಇಲ್ಲದಿರುವುದು ಆಶ್ಚರ್ಯ. ಇವನು ಹೊಟ್ಟೆಗೆ ಎಲ್ಲರ ತರಹ ಹೊಟ್ಟೆಗೆ ಅನ್ನ ತಿನ್ನುತ್ತಾನೋ? ಇಲ್ಲ ಇನ್ನೇನಾದರೂ ತಿನ್ನುತ್ತಾನೋ? ಗೊತ್ತಿಲ್ಲ. ಇಂತಹ ಭ್ರಷ್ಟ ವರದಿಗಾರು ಸುಳ್ಳು ಮಾಹಿತಿಯನ್ನು ದುರದ್ದೇಶಪೂರಿತವಾಗಿ ನೀಡಲು ಕಾರಣವೇನಿಬಹುದು ಎಂದು ಬಹಿರಂಗ ಪಡಿಸಲಿ. ಇಲ್ಲದಿದ್ದರೆ ಸಾರ್ವಜಿಕವಾಗಿ ಕನ್ನಡ ಜನತೆಯ ಕ್ಷಮೆ ಕೇಳಲಿ.

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...