Homeಮುಖಪುಟಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌?...

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

- Advertisement -
- Advertisement -

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಾವಿರಾರು ವಿಡಿಯೋ ಕ್ಲಿಪ್‌ಗಳು ಸೋರಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್‌ ರೇವಣ್ಣ, ಮತದಾನದ ಬೆನ್ನಲ್ಲೇ ದೇಶದಿಂದ ಪರಾರಿಯಾಗಿದ್ದರು.

ಕರ್ನಾಟಕ ಪೊಲೀಸರು ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಏಪ್ರಿಲ್ 29ರಂದು ಅವರ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ್ದರು.

ಇಂಟರ್‌ಪೋಲ್ ಹೇಗೆ ಕೆಲಸ ಮಾಡುತ್ತದೆ?

‘ಇಂಟರ್‌ನ್ಯಾಶನಲ್ ಕ್ರಿಮಿನಲ್ ಪೋಲೀಸ್ ಆರ್ಗನೈಸೇಶನ್’ ಅಥವಾ ‘ಇಂಟರ್‌ಪೋಲ್’ ಒಂದು ಅಂತರ-ಸರ್ಕಾರಿ ಕಾನೂನು ಜಾರಿ ಸಂಸ್ಥೆಯಾಗಿದ್ದು, ಇದು 196 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಸದಸ್ಯ ರಾಷ್ಟ್ರಗಳಲ್ಲಿ ಪರಸ್ಪರ ಪೊಲೀಸ್ ನೆರವು, ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಕಾರ ನೀಡುತ್ತದೆ.

ಇಂಟರ್‌ಪೋಲ್ ಸಂಸ್ಥೆಯು ಜಾಗತಿಕವಾಗಿ ಅಪರಾಧಗಳು ಮತ್ತು ಬೇಕಾಗಿರುವ ಅಪರಾಧಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಮತ್ತು ಪರಾರಿಯಾದವರನ್ನು ಪತ್ತೆಹಚ್ಚಲು ತಾಂತ್ರಿಕ ಸಹಾಯ, ಕಾರ್ಯಾಚರಣೆ ಮತ್ತು ಬೆಂಬಲವನ್ನು ಒದಗಿಸುತ್ತದೆ. ಇದು ವಾಂಟೆಡ್ ಕ್ರಿಮಿನಲ್‌ಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟಿರುತ್ತದೆ. ಇದು ಸದಸ್ಯ ರಾಷ್ಟ್ರಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಏಜೆನ್ಸಿಯು ಎಲ್ಲಾ ಸದಸ್ಯ ರಾಷ್ಟ್ರಗಳಲ್ಲಿ ಕೇಂದ್ರೀಯ ಬ್ಯೂರೋವನ್ನು ಹೊಂದಿದೆ, ಇದು ಆ ದೇಶದ ಕಾನೂನು ಜಾರಿ ಸಂಸ್ಥೆಗಳು ಮತ್ತು ಇಂಟರ್‌ಪೋಲ್ ನಡುವಿನ ಸಂಪರ್ಕದ ಏಕೈಕ ಬಿಂದುವಾಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಅಧಿಕೃತವಾಗಿ ಭಾರತದ ನೋಡಲ್ ಏಜೆನ್ಸಿ ಎಂದು ಗೊತ್ತುಪಡಿಸಲಾಗಿದೆ.

ಸದಸ್ಯ ರಾಷ್ಟ್ರಗಳಿಗೆ ಅಪರಾಧ-ಸಂಬಂಧಿತ ಮಾಹಿತಿಗಾಗಿ ಮತ್ತು ಎಚ್ಚರಿಕೆಯನ್ನು ನೀಡಲು ಇಂಟರ್‌ಪೋಲ್‌ ಸಂಸ್ಥೆಯು ‘ಕಲರ್‌ ಕೋಡೆಡ್‌ ಸಿಸ್ಟಮ್‌’ (‘colour-coded’ system) ವ್ಯವಸ್ಥೆಯನ್ನು ಬಳಸುತ್ತದೆ. ಬಣ್ಣ ಆಧಾರಿತವಾಗಿ ನೋಟೀಸ್‌ ನೀಡುತ್ತದೆ. 2020ರಲ್ಲಿ ಇಂಟರ್ಪೋಲ್ ಬ್ಲೂ ಕಾರ್ನ್‌ ನೋಟಿಸ್‌ ಜಾರಿ ಮಾಡಿತ್ತು. 2019ರಲ್ಲಿ ದೇಶಬಿಟ್ಟು ಪರಾರಿಯಾಗಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ಇಂಟರ್‌ಪೋಲ್‌ನ ನೋಟಿಸ್ ವ್ಯವಸ್ಥೆಯು ಪ್ರಸ್ತುತ ಎಂಟು ವಿಧದ ಸೂಚನೆಗಳನ್ನು ಹೊಂದಿದೆ.

ರೆಡ್ ನೋಟಿಸ್: ಪ್ರಾಸಿಕ್ಯೂಷನ್ ಅಥವಾ ಶಿಕ್ಷೆಗೆ ಗುರಿಪಡಿಸಲು ಬೇಕಾದ ಅರೋಪಿಗಳ ಸ್ಥಳ ಗುರುತಿಸಲು ಮತ್ತು ಅತನನ್ನು ಬಂಧಿಸಲು.

ಯಲ್ಲೋ ನೋಟಿಸ್: ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಈ ನೊಟೀಸ್‌ ನೀಡಲಾಗುತ್ತದೆ. ಸಾಮಾನ್ಯವಾಗಿ ಅಪ್ರಾಪ್ತ ವಯಸ್ಕರು, ಅಥವಾ ತಮ್ಮ ಗುರುತನ್ನೇ ಗುರುತಿಸಿಕೊಳ್ಳಲು ಸಾಧ್ಯವಾಗದ ವ್ಯಕ್ತಿಗಳನ್ನು ಹುಡುಕಲು ಬಳಸಲಾಗುತ್ತದೆ.

ಬ್ಲೂ ನೋಟಿಸ್‌: ಅಪರಾಧ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಈ ನೊಟೀಸ್ ನೀಡಲಾಗುತ್ತದೆ.

ಬ್ಲ್ಯಾಕ್‌ ನೋಟಿಸ್‌: ಅಪರಿಚಿತ ದೇಹಗಳ ಬಗ್ಗೆ ಮಾಹಿತಿ ಪಡೆಯಲು ಈ ನೊಟೀಸ್‌ನ್ನು ನೀಡಲಾಗುತ್ತದೆ.

ಗ್ರೀನ್‌ ನೋಟಿಸ್‌: ಈ ನೊಟೀಸ್‌ನ್ನು ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಲು, ಆತನಿಂದ ಸಾರ್ವಜನಿಕರಿಗೆ ಎದುರಾಗುವ ಸಂಭನೀಯ ಬೆದರಿಕೆಯ ಬಗ್ಗೆ ಮಾಹಿತಿ ನೀಡಲು ಬಳಸಲಾಗುತ್ತದೆ.

ಆರೆಂಜ್ ನೋಟಿಸ್: ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುವ ಘಟನೆ, ವ್ಯಕ್ತಿ, ವಸ್ತು ಅಥವಾ ಪ್ರಕ್ರಿಯೆಯ ಬಗ್ಗೆ ಎಚ್ಚರಿಕೆ ನೀಡಲು ಈ ನೊಟೀಸ್‌ ನೀಡಲಾಗುತ್ತದೆ.

ಪರ್ಪಲ್‌ ನೋಟಿಸ್: ಅಪರಾಧಿಗಳು ರೂಪಿಸುವ ತಂತ್ರ, ಬಳಸುವ ವಸ್ತುಗಳು, ಸಾಧನಗಳು ಮತ್ತು ತಪ್ಪಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ಹುಡುಕುವುದು ಅಥವಾ ಒದಗಿಸುವುದಕ್ಕೆ ಈ ನೊಟೀಸ್‌ ನೀಡಲಾಗುತ್ತದೆ.

ನಾಪತ್ತೆಯಾದ ವ್ಯಕ್ತಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯು ‘ಬ್ಲೂ ಕಾರ್ನರ್’ ನೋಟಿಸ್ ನೀಡುತ್ತದೆ. ಇದನ್ನು ವಿಚಾರಣಾ ಸೂಚನೆ ಎಂದೂ ಕರೆಯುತ್ತಾರೆ, ಅಂತಹ ಎಚ್ಚರಿಕೆಯನ್ನು ಒಬ್ಬ ವ್ಯಕ್ತಿಯ ಬಗ್ಗೆ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಗಾಗಿ, ಅವರ ಗುರುತು, ಸ್ಥಳ ಪತ್ತೆಗಾಗಿ ಮಾಹಿತಿ ನೀಡಲಾಗುತ್ತದೆ.

ಇಂಟರ್‌ಪೋಲ್‌ನ ಸದಸ್ಯ ರಾಷ್ಟ್ರದ ‘ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ’ದ ಕೋರಿಕೆಯ ಮೇರೆಗೆ ‘ಇಂಟರ್‌ಪೋಲ್‌ನ ಜನರಲ್ ಸೆಕ್ರೆಟರಿಯೇಟ್‌’ನಿಂದ ಈ ನೋಟಿಸ್‌ಗಳನ್ನು ನೀಡಲಾಗುತ್ತದೆ. ಎಲ್ಲ ಸದಸ್ಯ ರಾಷ್ಟ್ರಗಳಿಗೆ ನೋಟಿಸ್‌ ಲಭ್ಯವಾಗುವಂತೆ ಮಾಡಲಾಗುತ್ತದೆ. ಆರೋಪಿ ಗುರುತು ಪತ್ತೆ ಹಚ್ಚಲು, ವ್ಯಕ್ತಿಯ ಕ್ರಿಮಿನಲ್ ದಾಖಲೆಯ ವಿವರಗಳನ್ನು ಒದಗಿಸಲು ಮತ್ತು ಪಡೆಯಲು, ಕಾಣೆಯಾಗಿರುವ ಅಥವಾ ಗುರುತಿಸಲ್ಪಟ್ಟ ಅಥವಾ ಗುರುತಿಸಲಾಗದ ಅಂತರಾಷ್ಟ್ರೀಯ ಅಪರಾಧಿಯ ಬಂಧನ, ಸಾಮಾನ್ಯ ಕ್ರಿಮಿನಲ್ ಕಾನೂನಿನನ್ನು ಉಲ್ಲಂಘಿಸಿದ ಆರೋಪಿಯನ್ನು ಪತ್ತೆ ಹಚ್ಚಿಲು ಮತ್ತು ದೇಶಕ್ಕೆ ಹಸ್ತಾಂತರಿಸಲು ಈ ನೊಟೀಸ್‌ ಸಹಕಾರಿಯಾಗಿದೆ.

ಇದನ್ನು ಓದಿ: ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...