Homeಮುಖಪುಟಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌?...

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

- Advertisement -
- Advertisement -

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಾವಿರಾರು ವಿಡಿಯೋ ಕ್ಲಿಪ್‌ಗಳು ಸೋರಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್‌ ರೇವಣ್ಣ, ಮತದಾನದ ಬೆನ್ನಲ್ಲೇ ದೇಶದಿಂದ ಪರಾರಿಯಾಗಿದ್ದರು.

ಕರ್ನಾಟಕ ಪೊಲೀಸರು ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಏಪ್ರಿಲ್ 29ರಂದು ಅವರ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ್ದರು.

ಇಂಟರ್‌ಪೋಲ್ ಹೇಗೆ ಕೆಲಸ ಮಾಡುತ್ತದೆ?

‘ಇಂಟರ್‌ನ್ಯಾಶನಲ್ ಕ್ರಿಮಿನಲ್ ಪೋಲೀಸ್ ಆರ್ಗನೈಸೇಶನ್’ ಅಥವಾ ‘ಇಂಟರ್‌ಪೋಲ್’ ಒಂದು ಅಂತರ-ಸರ್ಕಾರಿ ಕಾನೂನು ಜಾರಿ ಸಂಸ್ಥೆಯಾಗಿದ್ದು, ಇದು 196 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಸದಸ್ಯ ರಾಷ್ಟ್ರಗಳಲ್ಲಿ ಪರಸ್ಪರ ಪೊಲೀಸ್ ನೆರವು, ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಕಾರ ನೀಡುತ್ತದೆ.

ಇಂಟರ್‌ಪೋಲ್ ಸಂಸ್ಥೆಯು ಜಾಗತಿಕವಾಗಿ ಅಪರಾಧಗಳು ಮತ್ತು ಬೇಕಾಗಿರುವ ಅಪರಾಧಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಮತ್ತು ಪರಾರಿಯಾದವರನ್ನು ಪತ್ತೆಹಚ್ಚಲು ತಾಂತ್ರಿಕ ಸಹಾಯ, ಕಾರ್ಯಾಚರಣೆ ಮತ್ತು ಬೆಂಬಲವನ್ನು ಒದಗಿಸುತ್ತದೆ. ಇದು ವಾಂಟೆಡ್ ಕ್ರಿಮಿನಲ್‌ಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟಿರುತ್ತದೆ. ಇದು ಸದಸ್ಯ ರಾಷ್ಟ್ರಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಏಜೆನ್ಸಿಯು ಎಲ್ಲಾ ಸದಸ್ಯ ರಾಷ್ಟ್ರಗಳಲ್ಲಿ ಕೇಂದ್ರೀಯ ಬ್ಯೂರೋವನ್ನು ಹೊಂದಿದೆ, ಇದು ಆ ದೇಶದ ಕಾನೂನು ಜಾರಿ ಸಂಸ್ಥೆಗಳು ಮತ್ತು ಇಂಟರ್‌ಪೋಲ್ ನಡುವಿನ ಸಂಪರ್ಕದ ಏಕೈಕ ಬಿಂದುವಾಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಅಧಿಕೃತವಾಗಿ ಭಾರತದ ನೋಡಲ್ ಏಜೆನ್ಸಿ ಎಂದು ಗೊತ್ತುಪಡಿಸಲಾಗಿದೆ.

ಸದಸ್ಯ ರಾಷ್ಟ್ರಗಳಿಗೆ ಅಪರಾಧ-ಸಂಬಂಧಿತ ಮಾಹಿತಿಗಾಗಿ ಮತ್ತು ಎಚ್ಚರಿಕೆಯನ್ನು ನೀಡಲು ಇಂಟರ್‌ಪೋಲ್‌ ಸಂಸ್ಥೆಯು ‘ಕಲರ್‌ ಕೋಡೆಡ್‌ ಸಿಸ್ಟಮ್‌’ (‘colour-coded’ system) ವ್ಯವಸ್ಥೆಯನ್ನು ಬಳಸುತ್ತದೆ. ಬಣ್ಣ ಆಧಾರಿತವಾಗಿ ನೋಟೀಸ್‌ ನೀಡುತ್ತದೆ. 2020ರಲ್ಲಿ ಇಂಟರ್ಪೋಲ್ ಬ್ಲೂ ಕಾರ್ನ್‌ ನೋಟಿಸ್‌ ಜಾರಿ ಮಾಡಿತ್ತು. 2019ರಲ್ಲಿ ದೇಶಬಿಟ್ಟು ಪರಾರಿಯಾಗಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ಇಂಟರ್‌ಪೋಲ್‌ನ ನೋಟಿಸ್ ವ್ಯವಸ್ಥೆಯು ಪ್ರಸ್ತುತ ಎಂಟು ವಿಧದ ಸೂಚನೆಗಳನ್ನು ಹೊಂದಿದೆ.

ರೆಡ್ ನೋಟಿಸ್: ಪ್ರಾಸಿಕ್ಯೂಷನ್ ಅಥವಾ ಶಿಕ್ಷೆಗೆ ಗುರಿಪಡಿಸಲು ಬೇಕಾದ ಅರೋಪಿಗಳ ಸ್ಥಳ ಗುರುತಿಸಲು ಮತ್ತು ಅತನನ್ನು ಬಂಧಿಸಲು.

ಯಲ್ಲೋ ನೋಟಿಸ್: ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಈ ನೊಟೀಸ್‌ ನೀಡಲಾಗುತ್ತದೆ. ಸಾಮಾನ್ಯವಾಗಿ ಅಪ್ರಾಪ್ತ ವಯಸ್ಕರು, ಅಥವಾ ತಮ್ಮ ಗುರುತನ್ನೇ ಗುರುತಿಸಿಕೊಳ್ಳಲು ಸಾಧ್ಯವಾಗದ ವ್ಯಕ್ತಿಗಳನ್ನು ಹುಡುಕಲು ಬಳಸಲಾಗುತ್ತದೆ.

ಬ್ಲೂ ನೋಟಿಸ್‌: ಅಪರಾಧ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಈ ನೊಟೀಸ್ ನೀಡಲಾಗುತ್ತದೆ.

ಬ್ಲ್ಯಾಕ್‌ ನೋಟಿಸ್‌: ಅಪರಿಚಿತ ದೇಹಗಳ ಬಗ್ಗೆ ಮಾಹಿತಿ ಪಡೆಯಲು ಈ ನೊಟೀಸ್‌ನ್ನು ನೀಡಲಾಗುತ್ತದೆ.

ಗ್ರೀನ್‌ ನೋಟಿಸ್‌: ಈ ನೊಟೀಸ್‌ನ್ನು ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಲು, ಆತನಿಂದ ಸಾರ್ವಜನಿಕರಿಗೆ ಎದುರಾಗುವ ಸಂಭನೀಯ ಬೆದರಿಕೆಯ ಬಗ್ಗೆ ಮಾಹಿತಿ ನೀಡಲು ಬಳಸಲಾಗುತ್ತದೆ.

ಆರೆಂಜ್ ನೋಟಿಸ್: ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುವ ಘಟನೆ, ವ್ಯಕ್ತಿ, ವಸ್ತು ಅಥವಾ ಪ್ರಕ್ರಿಯೆಯ ಬಗ್ಗೆ ಎಚ್ಚರಿಕೆ ನೀಡಲು ಈ ನೊಟೀಸ್‌ ನೀಡಲಾಗುತ್ತದೆ.

ಪರ್ಪಲ್‌ ನೋಟಿಸ್: ಅಪರಾಧಿಗಳು ರೂಪಿಸುವ ತಂತ್ರ, ಬಳಸುವ ವಸ್ತುಗಳು, ಸಾಧನಗಳು ಮತ್ತು ತಪ್ಪಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ಹುಡುಕುವುದು ಅಥವಾ ಒದಗಿಸುವುದಕ್ಕೆ ಈ ನೊಟೀಸ್‌ ನೀಡಲಾಗುತ್ತದೆ.

ನಾಪತ್ತೆಯಾದ ವ್ಯಕ್ತಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯು ‘ಬ್ಲೂ ಕಾರ್ನರ್’ ನೋಟಿಸ್ ನೀಡುತ್ತದೆ. ಇದನ್ನು ವಿಚಾರಣಾ ಸೂಚನೆ ಎಂದೂ ಕರೆಯುತ್ತಾರೆ, ಅಂತಹ ಎಚ್ಚರಿಕೆಯನ್ನು ಒಬ್ಬ ವ್ಯಕ್ತಿಯ ಬಗ್ಗೆ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಗಾಗಿ, ಅವರ ಗುರುತು, ಸ್ಥಳ ಪತ್ತೆಗಾಗಿ ಮಾಹಿತಿ ನೀಡಲಾಗುತ್ತದೆ.

ಇಂಟರ್‌ಪೋಲ್‌ನ ಸದಸ್ಯ ರಾಷ್ಟ್ರದ ‘ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ’ದ ಕೋರಿಕೆಯ ಮೇರೆಗೆ ‘ಇಂಟರ್‌ಪೋಲ್‌ನ ಜನರಲ್ ಸೆಕ್ರೆಟರಿಯೇಟ್‌’ನಿಂದ ಈ ನೋಟಿಸ್‌ಗಳನ್ನು ನೀಡಲಾಗುತ್ತದೆ. ಎಲ್ಲ ಸದಸ್ಯ ರಾಷ್ಟ್ರಗಳಿಗೆ ನೋಟಿಸ್‌ ಲಭ್ಯವಾಗುವಂತೆ ಮಾಡಲಾಗುತ್ತದೆ. ಆರೋಪಿ ಗುರುತು ಪತ್ತೆ ಹಚ್ಚಲು, ವ್ಯಕ್ತಿಯ ಕ್ರಿಮಿನಲ್ ದಾಖಲೆಯ ವಿವರಗಳನ್ನು ಒದಗಿಸಲು ಮತ್ತು ಪಡೆಯಲು, ಕಾಣೆಯಾಗಿರುವ ಅಥವಾ ಗುರುತಿಸಲ್ಪಟ್ಟ ಅಥವಾ ಗುರುತಿಸಲಾಗದ ಅಂತರಾಷ್ಟ್ರೀಯ ಅಪರಾಧಿಯ ಬಂಧನ, ಸಾಮಾನ್ಯ ಕ್ರಿಮಿನಲ್ ಕಾನೂನಿನನ್ನು ಉಲ್ಲಂಘಿಸಿದ ಆರೋಪಿಯನ್ನು ಪತ್ತೆ ಹಚ್ಚಿಲು ಮತ್ತು ದೇಶಕ್ಕೆ ಹಸ್ತಾಂತರಿಸಲು ಈ ನೊಟೀಸ್‌ ಸಹಕಾರಿಯಾಗಿದೆ.

ಇದನ್ನು ಓದಿ: ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...