Homeಮುಖಪುಟಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌?...

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

- Advertisement -
- Advertisement -

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಾವಿರಾರು ವಿಡಿಯೋ ಕ್ಲಿಪ್‌ಗಳು ಸೋರಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್‌ ರೇವಣ್ಣ, ಮತದಾನದ ಬೆನ್ನಲ್ಲೇ ದೇಶದಿಂದ ಪರಾರಿಯಾಗಿದ್ದರು.

ಕರ್ನಾಟಕ ಪೊಲೀಸರು ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಏಪ್ರಿಲ್ 29ರಂದು ಅವರ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ್ದರು.

ಇಂಟರ್‌ಪೋಲ್ ಹೇಗೆ ಕೆಲಸ ಮಾಡುತ್ತದೆ?

‘ಇಂಟರ್‌ನ್ಯಾಶನಲ್ ಕ್ರಿಮಿನಲ್ ಪೋಲೀಸ್ ಆರ್ಗನೈಸೇಶನ್’ ಅಥವಾ ‘ಇಂಟರ್‌ಪೋಲ್’ ಒಂದು ಅಂತರ-ಸರ್ಕಾರಿ ಕಾನೂನು ಜಾರಿ ಸಂಸ್ಥೆಯಾಗಿದ್ದು, ಇದು 196 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಸದಸ್ಯ ರಾಷ್ಟ್ರಗಳಲ್ಲಿ ಪರಸ್ಪರ ಪೊಲೀಸ್ ನೆರವು, ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಕಾರ ನೀಡುತ್ತದೆ.

ಇಂಟರ್‌ಪೋಲ್ ಸಂಸ್ಥೆಯು ಜಾಗತಿಕವಾಗಿ ಅಪರಾಧಗಳು ಮತ್ತು ಬೇಕಾಗಿರುವ ಅಪರಾಧಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಮತ್ತು ಪರಾರಿಯಾದವರನ್ನು ಪತ್ತೆಹಚ್ಚಲು ತಾಂತ್ರಿಕ ಸಹಾಯ, ಕಾರ್ಯಾಚರಣೆ ಮತ್ತು ಬೆಂಬಲವನ್ನು ಒದಗಿಸುತ್ತದೆ. ಇದು ವಾಂಟೆಡ್ ಕ್ರಿಮಿನಲ್‌ಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟಿರುತ್ತದೆ. ಇದು ಸದಸ್ಯ ರಾಷ್ಟ್ರಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಏಜೆನ್ಸಿಯು ಎಲ್ಲಾ ಸದಸ್ಯ ರಾಷ್ಟ್ರಗಳಲ್ಲಿ ಕೇಂದ್ರೀಯ ಬ್ಯೂರೋವನ್ನು ಹೊಂದಿದೆ, ಇದು ಆ ದೇಶದ ಕಾನೂನು ಜಾರಿ ಸಂಸ್ಥೆಗಳು ಮತ್ತು ಇಂಟರ್‌ಪೋಲ್ ನಡುವಿನ ಸಂಪರ್ಕದ ಏಕೈಕ ಬಿಂದುವಾಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಅಧಿಕೃತವಾಗಿ ಭಾರತದ ನೋಡಲ್ ಏಜೆನ್ಸಿ ಎಂದು ಗೊತ್ತುಪಡಿಸಲಾಗಿದೆ.

ಸದಸ್ಯ ರಾಷ್ಟ್ರಗಳಿಗೆ ಅಪರಾಧ-ಸಂಬಂಧಿತ ಮಾಹಿತಿಗಾಗಿ ಮತ್ತು ಎಚ್ಚರಿಕೆಯನ್ನು ನೀಡಲು ಇಂಟರ್‌ಪೋಲ್‌ ಸಂಸ್ಥೆಯು ‘ಕಲರ್‌ ಕೋಡೆಡ್‌ ಸಿಸ್ಟಮ್‌’ (‘colour-coded’ system) ವ್ಯವಸ್ಥೆಯನ್ನು ಬಳಸುತ್ತದೆ. ಬಣ್ಣ ಆಧಾರಿತವಾಗಿ ನೋಟೀಸ್‌ ನೀಡುತ್ತದೆ. 2020ರಲ್ಲಿ ಇಂಟರ್ಪೋಲ್ ಬ್ಲೂ ಕಾರ್ನ್‌ ನೋಟಿಸ್‌ ಜಾರಿ ಮಾಡಿತ್ತು. 2019ರಲ್ಲಿ ದೇಶಬಿಟ್ಟು ಪರಾರಿಯಾಗಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ಇಂಟರ್‌ಪೋಲ್‌ನ ನೋಟಿಸ್ ವ್ಯವಸ್ಥೆಯು ಪ್ರಸ್ತುತ ಎಂಟು ವಿಧದ ಸೂಚನೆಗಳನ್ನು ಹೊಂದಿದೆ.

ರೆಡ್ ನೋಟಿಸ್: ಪ್ರಾಸಿಕ್ಯೂಷನ್ ಅಥವಾ ಶಿಕ್ಷೆಗೆ ಗುರಿಪಡಿಸಲು ಬೇಕಾದ ಅರೋಪಿಗಳ ಸ್ಥಳ ಗುರುತಿಸಲು ಮತ್ತು ಅತನನ್ನು ಬಂಧಿಸಲು.

ಯಲ್ಲೋ ನೋಟಿಸ್: ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಈ ನೊಟೀಸ್‌ ನೀಡಲಾಗುತ್ತದೆ. ಸಾಮಾನ್ಯವಾಗಿ ಅಪ್ರಾಪ್ತ ವಯಸ್ಕರು, ಅಥವಾ ತಮ್ಮ ಗುರುತನ್ನೇ ಗುರುತಿಸಿಕೊಳ್ಳಲು ಸಾಧ್ಯವಾಗದ ವ್ಯಕ್ತಿಗಳನ್ನು ಹುಡುಕಲು ಬಳಸಲಾಗುತ್ತದೆ.

ಬ್ಲೂ ನೋಟಿಸ್‌: ಅಪರಾಧ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಈ ನೊಟೀಸ್ ನೀಡಲಾಗುತ್ತದೆ.

ಬ್ಲ್ಯಾಕ್‌ ನೋಟಿಸ್‌: ಅಪರಿಚಿತ ದೇಹಗಳ ಬಗ್ಗೆ ಮಾಹಿತಿ ಪಡೆಯಲು ಈ ನೊಟೀಸ್‌ನ್ನು ನೀಡಲಾಗುತ್ತದೆ.

ಗ್ರೀನ್‌ ನೋಟಿಸ್‌: ಈ ನೊಟೀಸ್‌ನ್ನು ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಲು, ಆತನಿಂದ ಸಾರ್ವಜನಿಕರಿಗೆ ಎದುರಾಗುವ ಸಂಭನೀಯ ಬೆದರಿಕೆಯ ಬಗ್ಗೆ ಮಾಹಿತಿ ನೀಡಲು ಬಳಸಲಾಗುತ್ತದೆ.

ಆರೆಂಜ್ ನೋಟಿಸ್: ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುವ ಘಟನೆ, ವ್ಯಕ್ತಿ, ವಸ್ತು ಅಥವಾ ಪ್ರಕ್ರಿಯೆಯ ಬಗ್ಗೆ ಎಚ್ಚರಿಕೆ ನೀಡಲು ಈ ನೊಟೀಸ್‌ ನೀಡಲಾಗುತ್ತದೆ.

ಪರ್ಪಲ್‌ ನೋಟಿಸ್: ಅಪರಾಧಿಗಳು ರೂಪಿಸುವ ತಂತ್ರ, ಬಳಸುವ ವಸ್ತುಗಳು, ಸಾಧನಗಳು ಮತ್ತು ತಪ್ಪಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ಹುಡುಕುವುದು ಅಥವಾ ಒದಗಿಸುವುದಕ್ಕೆ ಈ ನೊಟೀಸ್‌ ನೀಡಲಾಗುತ್ತದೆ.

ನಾಪತ್ತೆಯಾದ ವ್ಯಕ್ತಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯು ‘ಬ್ಲೂ ಕಾರ್ನರ್’ ನೋಟಿಸ್ ನೀಡುತ್ತದೆ. ಇದನ್ನು ವಿಚಾರಣಾ ಸೂಚನೆ ಎಂದೂ ಕರೆಯುತ್ತಾರೆ, ಅಂತಹ ಎಚ್ಚರಿಕೆಯನ್ನು ಒಬ್ಬ ವ್ಯಕ್ತಿಯ ಬಗ್ಗೆ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಗಾಗಿ, ಅವರ ಗುರುತು, ಸ್ಥಳ ಪತ್ತೆಗಾಗಿ ಮಾಹಿತಿ ನೀಡಲಾಗುತ್ತದೆ.

ಇಂಟರ್‌ಪೋಲ್‌ನ ಸದಸ್ಯ ರಾಷ್ಟ್ರದ ‘ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ’ದ ಕೋರಿಕೆಯ ಮೇರೆಗೆ ‘ಇಂಟರ್‌ಪೋಲ್‌ನ ಜನರಲ್ ಸೆಕ್ರೆಟರಿಯೇಟ್‌’ನಿಂದ ಈ ನೋಟಿಸ್‌ಗಳನ್ನು ನೀಡಲಾಗುತ್ತದೆ. ಎಲ್ಲ ಸದಸ್ಯ ರಾಷ್ಟ್ರಗಳಿಗೆ ನೋಟಿಸ್‌ ಲಭ್ಯವಾಗುವಂತೆ ಮಾಡಲಾಗುತ್ತದೆ. ಆರೋಪಿ ಗುರುತು ಪತ್ತೆ ಹಚ್ಚಲು, ವ್ಯಕ್ತಿಯ ಕ್ರಿಮಿನಲ್ ದಾಖಲೆಯ ವಿವರಗಳನ್ನು ಒದಗಿಸಲು ಮತ್ತು ಪಡೆಯಲು, ಕಾಣೆಯಾಗಿರುವ ಅಥವಾ ಗುರುತಿಸಲ್ಪಟ್ಟ ಅಥವಾ ಗುರುತಿಸಲಾಗದ ಅಂತರಾಷ್ಟ್ರೀಯ ಅಪರಾಧಿಯ ಬಂಧನ, ಸಾಮಾನ್ಯ ಕ್ರಿಮಿನಲ್ ಕಾನೂನಿನನ್ನು ಉಲ್ಲಂಘಿಸಿದ ಆರೋಪಿಯನ್ನು ಪತ್ತೆ ಹಚ್ಚಿಲು ಮತ್ತು ದೇಶಕ್ಕೆ ಹಸ್ತಾಂತರಿಸಲು ಈ ನೊಟೀಸ್‌ ಸಹಕಾರಿಯಾಗಿದೆ.

ಇದನ್ನು ಓದಿ: ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...