Homeಮುಖಪುಟಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌?...

ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

- Advertisement -
- Advertisement -

ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಾವಿರಾರು ವಿಡಿಯೋ ಕ್ಲಿಪ್‌ಗಳು ಸೋರಿಕೆಯಾಗಿತ್ತು. ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್‌ ರೇವಣ್ಣ, ಮತದಾನದ ಬೆನ್ನಲ್ಲೇ ದೇಶದಿಂದ ಪರಾರಿಯಾಗಿದ್ದರು.

ಕರ್ನಾಟಕ ಪೊಲೀಸರು ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಏಪ್ರಿಲ್ 29ರಂದು ಅವರ ಪುತ್ರನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ್ದರು.

ಇಂಟರ್‌ಪೋಲ್ ಹೇಗೆ ಕೆಲಸ ಮಾಡುತ್ತದೆ?

‘ಇಂಟರ್‌ನ್ಯಾಶನಲ್ ಕ್ರಿಮಿನಲ್ ಪೋಲೀಸ್ ಆರ್ಗನೈಸೇಶನ್’ ಅಥವಾ ‘ಇಂಟರ್‌ಪೋಲ್’ ಒಂದು ಅಂತರ-ಸರ್ಕಾರಿ ಕಾನೂನು ಜಾರಿ ಸಂಸ್ಥೆಯಾಗಿದ್ದು, ಇದು 196 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ. ಇದು ಸದಸ್ಯ ರಾಷ್ಟ್ರಗಳಲ್ಲಿ ಪರಸ್ಪರ ಪೊಲೀಸ್ ನೆರವು, ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಕಾರ ನೀಡುತ್ತದೆ.

ಇಂಟರ್‌ಪೋಲ್ ಸಂಸ್ಥೆಯು ಜಾಗತಿಕವಾಗಿ ಅಪರಾಧಗಳು ಮತ್ತು ಬೇಕಾಗಿರುವ ಅಪರಾಧಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಮತ್ತು ಪರಾರಿಯಾದವರನ್ನು ಪತ್ತೆಹಚ್ಚಲು ತಾಂತ್ರಿಕ ಸಹಾಯ, ಕಾರ್ಯಾಚರಣೆ ಮತ್ತು ಬೆಂಬಲವನ್ನು ಒದಗಿಸುತ್ತದೆ. ಇದು ವಾಂಟೆಡ್ ಕ್ರಿಮಿನಲ್‌ಗಳ ಕುರಿತು ದಾಖಲೆಗಳನ್ನು ಶೇಖರಿಸಿಟ್ಟಿರುತ್ತದೆ. ಇದು ಸದಸ್ಯ ರಾಷ್ಟ್ರಗಳಿಗೆ ಅಪರಾಧಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಏಜೆನ್ಸಿಯು ಎಲ್ಲಾ ಸದಸ್ಯ ರಾಷ್ಟ್ರಗಳಲ್ಲಿ ಕೇಂದ್ರೀಯ ಬ್ಯೂರೋವನ್ನು ಹೊಂದಿದೆ, ಇದು ಆ ದೇಶದ ಕಾನೂನು ಜಾರಿ ಸಂಸ್ಥೆಗಳು ಮತ್ತು ಇಂಟರ್‌ಪೋಲ್ ನಡುವಿನ ಸಂಪರ್ಕದ ಏಕೈಕ ಬಿಂದುವಾಗಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಸಿಬಿಐ) ಅಧಿಕೃತವಾಗಿ ಭಾರತದ ನೋಡಲ್ ಏಜೆನ್ಸಿ ಎಂದು ಗೊತ್ತುಪಡಿಸಲಾಗಿದೆ.

ಸದಸ್ಯ ರಾಷ್ಟ್ರಗಳಿಗೆ ಅಪರಾಧ-ಸಂಬಂಧಿತ ಮಾಹಿತಿಗಾಗಿ ಮತ್ತು ಎಚ್ಚರಿಕೆಯನ್ನು ನೀಡಲು ಇಂಟರ್‌ಪೋಲ್‌ ಸಂಸ್ಥೆಯು ‘ಕಲರ್‌ ಕೋಡೆಡ್‌ ಸಿಸ್ಟಮ್‌’ (‘colour-coded’ system) ವ್ಯವಸ್ಥೆಯನ್ನು ಬಳಸುತ್ತದೆ. ಬಣ್ಣ ಆಧಾರಿತವಾಗಿ ನೋಟೀಸ್‌ ನೀಡುತ್ತದೆ. 2020ರಲ್ಲಿ ಇಂಟರ್ಪೋಲ್ ಬ್ಲೂ ಕಾರ್ನ್‌ ನೋಟಿಸ್‌ ಜಾರಿ ಮಾಡಿತ್ತು. 2019ರಲ್ಲಿ ದೇಶಬಿಟ್ಟು ಪರಾರಿಯಾಗಿದ್ದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಬಂಧನಕ್ಕಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ, ಆತನನ್ನು ಇನ್ನೂ ಬಂಧಿಸಲಾಗಿಲ್ಲ.

ಇಂಟರ್‌ಪೋಲ್‌ನ ನೋಟಿಸ್ ವ್ಯವಸ್ಥೆಯು ಪ್ರಸ್ತುತ ಎಂಟು ವಿಧದ ಸೂಚನೆಗಳನ್ನು ಹೊಂದಿದೆ.

ರೆಡ್ ನೋಟಿಸ್: ಪ್ರಾಸಿಕ್ಯೂಷನ್ ಅಥವಾ ಶಿಕ್ಷೆಗೆ ಗುರಿಪಡಿಸಲು ಬೇಕಾದ ಅರೋಪಿಗಳ ಸ್ಥಳ ಗುರುತಿಸಲು ಮತ್ತು ಅತನನ್ನು ಬಂಧಿಸಲು.

ಯಲ್ಲೋ ನೋಟಿಸ್: ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಈ ನೊಟೀಸ್‌ ನೀಡಲಾಗುತ್ತದೆ. ಸಾಮಾನ್ಯವಾಗಿ ಅಪ್ರಾಪ್ತ ವಯಸ್ಕರು, ಅಥವಾ ತಮ್ಮ ಗುರುತನ್ನೇ ಗುರುತಿಸಿಕೊಳ್ಳಲು ಸಾಧ್ಯವಾಗದ ವ್ಯಕ್ತಿಗಳನ್ನು ಹುಡುಕಲು ಬಳಸಲಾಗುತ್ತದೆ.

ಬ್ಲೂ ನೋಟಿಸ್‌: ಅಪರಾಧ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಈ ನೊಟೀಸ್ ನೀಡಲಾಗುತ್ತದೆ.

ಬ್ಲ್ಯಾಕ್‌ ನೋಟಿಸ್‌: ಅಪರಿಚಿತ ದೇಹಗಳ ಬಗ್ಗೆ ಮಾಹಿತಿ ಪಡೆಯಲು ಈ ನೊಟೀಸ್‌ನ್ನು ನೀಡಲಾಗುತ್ತದೆ.

ಗ್ರೀನ್‌ ನೋಟಿಸ್‌: ಈ ನೊಟೀಸ್‌ನ್ನು ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಲು, ಆತನಿಂದ ಸಾರ್ವಜನಿಕರಿಗೆ ಎದುರಾಗುವ ಸಂಭನೀಯ ಬೆದರಿಕೆಯ ಬಗ್ಗೆ ಮಾಹಿತಿ ನೀಡಲು ಬಳಸಲಾಗುತ್ತದೆ.

ಆರೆಂಜ್ ನೋಟಿಸ್: ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಪ್ರತಿನಿಧಿಸುವ ಘಟನೆ, ವ್ಯಕ್ತಿ, ವಸ್ತು ಅಥವಾ ಪ್ರಕ್ರಿಯೆಯ ಬಗ್ಗೆ ಎಚ್ಚರಿಕೆ ನೀಡಲು ಈ ನೊಟೀಸ್‌ ನೀಡಲಾಗುತ್ತದೆ.

ಪರ್ಪಲ್‌ ನೋಟಿಸ್: ಅಪರಾಧಿಗಳು ರೂಪಿಸುವ ತಂತ್ರ, ಬಳಸುವ ವಸ್ತುಗಳು, ಸಾಧನಗಳು ಮತ್ತು ತಪ್ಪಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ಹುಡುಕುವುದು ಅಥವಾ ಒದಗಿಸುವುದಕ್ಕೆ ಈ ನೊಟೀಸ್‌ ನೀಡಲಾಗುತ್ತದೆ.

ನಾಪತ್ತೆಯಾದ ವ್ಯಕ್ತಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸಂಸ್ಥೆಯು ‘ಬ್ಲೂ ಕಾರ್ನರ್’ ನೋಟಿಸ್ ನೀಡುತ್ತದೆ. ಇದನ್ನು ವಿಚಾರಣಾ ಸೂಚನೆ ಎಂದೂ ಕರೆಯುತ್ತಾರೆ, ಅಂತಹ ಎಚ್ಚರಿಕೆಯನ್ನು ಒಬ್ಬ ವ್ಯಕ್ತಿಯ ಬಗ್ಗೆ ಸದಸ್ಯ ರಾಷ್ಟ್ರಗಳಿಂದ ಹೆಚ್ಚುವರಿ ಮಾಹಿತಿಗಾಗಿ, ಅವರ ಗುರುತು, ಸ್ಥಳ ಪತ್ತೆಗಾಗಿ ಮಾಹಿತಿ ನೀಡಲಾಗುತ್ತದೆ.

ಇಂಟರ್‌ಪೋಲ್‌ನ ಸದಸ್ಯ ರಾಷ್ಟ್ರದ ‘ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ’ದ ಕೋರಿಕೆಯ ಮೇರೆಗೆ ‘ಇಂಟರ್‌ಪೋಲ್‌ನ ಜನರಲ್ ಸೆಕ್ರೆಟರಿಯೇಟ್‌’ನಿಂದ ಈ ನೋಟಿಸ್‌ಗಳನ್ನು ನೀಡಲಾಗುತ್ತದೆ. ಎಲ್ಲ ಸದಸ್ಯ ರಾಷ್ಟ್ರಗಳಿಗೆ ನೋಟಿಸ್‌ ಲಭ್ಯವಾಗುವಂತೆ ಮಾಡಲಾಗುತ್ತದೆ. ಆರೋಪಿ ಗುರುತು ಪತ್ತೆ ಹಚ್ಚಲು, ವ್ಯಕ್ತಿಯ ಕ್ರಿಮಿನಲ್ ದಾಖಲೆಯ ವಿವರಗಳನ್ನು ಒದಗಿಸಲು ಮತ್ತು ಪಡೆಯಲು, ಕಾಣೆಯಾಗಿರುವ ಅಥವಾ ಗುರುತಿಸಲ್ಪಟ್ಟ ಅಥವಾ ಗುರುತಿಸಲಾಗದ ಅಂತರಾಷ್ಟ್ರೀಯ ಅಪರಾಧಿಯ ಬಂಧನ, ಸಾಮಾನ್ಯ ಕ್ರಿಮಿನಲ್ ಕಾನೂನಿನನ್ನು ಉಲ್ಲಂಘಿಸಿದ ಆರೋಪಿಯನ್ನು ಪತ್ತೆ ಹಚ್ಚಿಲು ಮತ್ತು ದೇಶಕ್ಕೆ ಹಸ್ತಾಂತರಿಸಲು ಈ ನೊಟೀಸ್‌ ಸಹಕಾರಿಯಾಗಿದೆ.

ಇದನ್ನು ಓದಿ: ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...