Homeಕರ್ನಾಟಕಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡುವಲ್ಲಿ ವಿಫಲರಾದ ರಾಜ್ಯ ಸರಕಾರ, ಮುಖ್ಯಮಂತ್ರಿ ಮತ್ತು ನಿಗಮ ತಡೆಗೆ ಕಾರಣರಾದವರ ವಿರುದ್ಧ ತುಮಕೂರಿನಲ್ಲಿ ಶೀಘ್ರವೇ ರಾಜ್ಯ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಯುವ ಸೇನೆಯ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

- Advertisement -
- Advertisement -

ಶಿರಾ ಉಪಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಕಾಡು ಗೊಲ್ಲ ಅಬಿವೃದ್ಧಿ ನಿಗಮವನ್ನು ಸೆಪ್ಟೆಂಬರ್ 28 ರಂದು ಬೆಳಗ್ಗೆ ಘೋಷಣೆ ಮಾಡಿದರು. ಸಂಜೆ ವೇಳೆಗೆ ಅದು ಗೊಲ್ಲ ಅಭಿವೃದ್ಧಿ ನಿಗಮವಾಗಿ ದಿಢೀರ್ ಬದಲಾವಣೆ ಮಾಡಿದ್ದೂ ಆಯಿತು. ಊರುಗೊಲ್ಲ ಸಮುದಾಯಕ್ಕೆ ಸೇರಿದ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಕಾಡುಗೊಲ್ಲ ಎಂಬುದನ್ನು ಸಂಜೆ ವೇಳೆಗೆ ಬದಲಾಗುವಂತೆ ಮಾಡಿದರು ಎನ್ನಲಾಗಿದೆ. ಇದಕ್ಕೆ ಕಾಡುಗೊಲ್ಲ ಸಮುದಾಯ ಸಿಡಿದೆದ್ದು ನಿಂತಿದೆ.

ಮೊದಲಿನಂತೆ ಮುಖ್ಯಮಂತ್ರಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಬದಲಾವಣೆ ಮಾಡದಿದ್ದರೆ ಸರ್ಕಾರದ ವಿರುದ್ಧ ಸಮುದಾಯ ಬೀದಿಗೆ ಇಳಿಯಲಿದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ರಾಜ್ಯದ ಚಿತ್ರದುರ್ಗ, ತುಮಕೂರು, ಹಾಸನ, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯ ಅಧಿಕ ಸಂಖ್ಯೆಯಲ್ಲಿದೆ. ಅಲೆಮಾರಿಗಳಂತೆ ಜೀವನ ನಡೆಸುತ್ತಿದ್ದಾರೆ. ಕುರಿ, ಮೇಕೆ ಸಾಕಾಣಿಕೆ, ಪಶುಪಾಲನೆ ಕಾಡುಗೊಲ್ಲರ ಮುಖ್ಯ ಕಸುಬು. ಇದೇ ಜೀವನ ಎನ್ನುತ್ತಾರೆ ಸಮುದಾಯದ ಮುಖಂಡರು.

ಇದನ್ನೂ ಓದಿ: ತುಮಕೂರು ಜಿ.ಪಂ ಅಧ್ಯಕ್ಷ ಸ್ಥಾನ: ಇದ್ದಕ್ಕಿದ್ದಂತೆ ಗೊಲ್ಲರ ಮೇಲೆ ಪ್ರೀತಿ ಉಕ್ಕಿದ್ದೇಕೆ?

ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದಿದ್ದಾರೆ. ಇದುವರೆಗೂ ರಾಜಕೀಯದಲ್ಲಿ ಸಮರ್ಥ ನಾಯಕರೇ ಬಂದಿಲ್ಲ. ಇಂದಿಗೂ ಕಾಡುಗೊಲ್ಲ ಸಮುದಾಯ ಮುಖ್ಯವಾಹಿನಿಗೆ ಬಂದಿಲ್ಲ. ಮುಟ್ಟುಚಟ್ಟು, ಋತುಸ್ರಾವ ಕಾಲದಲ್ಲಿ, ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ವಾರೊಂಭತ್ತು ದಿನಗಳು ಊರ ಹೊರಗೇ ಕಾಲ ಕಳೆಯುವಂತಹ ಮೂಢನಂಬಿಕೆಯುಳ್ಳ ಜನಾಂಗವಾಗಿದೆ. ಹಟ್ಟಿಗಳು ಕಂದಾಯ ಗ್ರಾಮಗಳಾಗಿಲ್ಲ. ಊರುಗೊಲ್ಲರು ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲರಾಗಿದ್ದು ಬುಡಕಟ್ಟು ಅಲೆಮಾರಿ ಸಮುದಾಯವಾಗಿರುವ ಕಾಡುಗೊಲ್ಲರ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದು ಆರೋಪಿಸುತ್ತಾರೆ ಮುಖಂಡರು.

ಮುಖ್ಯಮಂತ್ರಿಗಳು ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುತ್ತಿದ್ದಂತೆಯೇ ಶಾಸಕಿ ಪೂರ್ಣಿಮ ಶ್ರೀನಿವಾಸ್ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆಂದು ಹೇಳಲಾಗುತ್ತಿದೆ. ಪೂರ್ಣಿಮಾ ಶಾಸಕಿಯಾಗಿದ್ದರೂ ಕಾಡುಗೊಲ್ಲರಿಗೆ ಅವರಿಂದೇನೂ ಪ್ರಯೋಜನವಾಗಿಲ್ಲ. ಅಕ್ಷರ ಜ್ಞಾನ ಇಲ್ಲದ ಸಮುದಾಯವನ್ನು ತುಳಿಯುವ ಪ್ರಯತ್ನವನ್ನು ಬಿಜೆಪಿ ಸರಕಾರ ಮಾಡಿದೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಮಾಡುವಲ್ಲಿ ವಿಫಲರಾದ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ನಿಗಮ ತಡೆಗೆ ಕಾರಣರಾದವರ ವಿರುದ್ಧ ತುಮಕೂರಿನಲ್ಲಿ ಶೀಘ್ರವೇ ರಾಜ್ಯ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಯುವ ಸೇನೆಯ ಜಿಲ್ಲಾಧ್ಯಕ್ಷ ಜಯಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲರಿಗೆ ದ್ರೋಹ ಮಾಡುತ್ತಿದ್ದಾರೆ. ಹಿರಿಯೂರಿನಲ್ಲಿ ಅಧಿಕ ಸಂಖ್ಯೆಯಲ್ಲಿರುವ ಕಾಡುಗೊಲ್ಲರ ಓಟುಗಳನ್ನು ಪಡೆದು ಗೆದ್ದು ಬಂದಿರುವ ಪೂರ್ಣಿಮಾ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ಕಾಡುಗೊಲ್ಲರ ಮುಖಂಡರು ಮುಖ್ಯಮಂತ್ರಿಗಳ ಮೇಲೆ ಒತ್ಡ ಹೇರಿದ್ದು ಕಾಡುಗೊಲ್ಲ ಅಭಿವೃದ್ದಿ ನಿಗಮ ಎಂದೇ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದು ಶಿರಾ ಚುನಾವಣೆಯಲ್ಲಿ ಕಾಡುಗೊಲ್ಲರ ಮತಗಳನ್ನು ಪಡೆಯಲು ಮಾಡಿರುವ ತಂತ್ರ. ನಿಗಮ ಘೋಷಿಸಿದ್ದರೂ ಹಣ ಘೋಷಿಸಿಲ್ಲ ಎಂಬ ಬಗ್ಗೆ ಚರ್ಚೆ ಸಾರ್ವಜನಿಕರೆಡೆಯಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...