Homeಮುಖಪುಟರಾಜ್ಯಪಾಲರು ಮೂರು ವರ್ಷಗಳಿಂದ ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದೇಕೆ? ವಿವರಣೆ ಕೇಳಿದ ಸುಪ್ರೀಂ ಕೋರ್ಟ್

ರಾಜ್ಯಪಾಲರು ಮೂರು ವರ್ಷಗಳಿಂದ ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದೇಕೆ? ವಿವರಣೆ ಕೇಳಿದ ಸುಪ್ರೀಂ ಕೋರ್ಟ್

ನ್ಯಾಯಾಲಯದ ಅಂಗಳದಲ್ಲಿ ತಮಿಳುನಾಡಿನ ರಾಜ್ಯಪಾಲ VS ಸರ್ಕಾರದ ತಿಕ್ಕಾಟ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ಒಪ್ಪಿಗೆ ನೀಡದೆ, ಅವುಗಳಲ್ಲಿ ಕೆಲವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸುವುದಾಗಿ ಘೋಷಿಸಿದ್ದೇಕೆ? ಎಂದು ಸುಪ್ರೀಂ ಕೋರ್ಟ್ ಗುರುವಾರ(ಫೆ.6) ಪ್ರಶ್ನಿಸಿದೆ.

ಮಸೂದೆಗಳ ಕುರಿತು ನಿರ್ಧರಿಸಲು ರಾಜ್ಯಪಾಲರು “ತಮ್ಮದೇ ಕಾರ್ಯವಿಧಾನ ಅಳವಡಿಸಿಕೊಂಡಂತೆ ಕಾಣುತ್ತಿದೆ” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಟೀಕಿಸಿದ್ದಾರೆ.

2020 ಮತ್ತು 2023ರ ನಡುವೆ ಅಂಗೀಕರಿಸಲಾದ 10 ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದೆ ಹಾಗೆಯೇ ಉಳಿಸಿಕೊಂಡಿರುವ ಹಿನ್ನೆಲೆ, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಎರಡು ರಿಟ್ ಅರ್ಜಿಗಳ ವಿಚಾರಣೆಯನ್ನು ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ನಡೆಸುತ್ತಿದೆ.

“ರಾಜ್ಯಪಾಲರು ಮೂರು ವರ್ಷಗಳನ್ನು ತೆಗೆದುಕೊಂಡು ಕಂಡುಕೊಂಡ ಮಸೂದೆಗಳಲ್ಲಿನ ಅಂತಹ ಅಸಹ್ಯಕರವಾದ ವಿಷಯ ಯಾವುದು?” ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಮತ್ತು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದು ಹಾಕುವ ನಿಬಂಧನೆಗಳನ್ನು ಒಳಗೊಂಡ 10 ಪುನರ್-ಜಾರಿಗೊಳಿಸಲಾದ ಮಸೂದೆಗಳನ್ನು ನವೆಂಬರ್ 18, 2023 ರಂದು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ. ರಾಷ್ಟ್ರಪತಿಗಳು ಒಂದನ್ನು ಅನುಮೋದಿಸಿದ್ದು, ಏಳನ್ನು ತಿರಸ್ಕರಿಸಿದ್ದಾರೆ ಮತ್ತು ಎರಡನ್ನು ಹಾಗೆಯೇ ಇಟ್ಟಿದ್ದಾರೆ.

ರಾಜ್ಯಪಾಲರು ಅತ್ತ ಮಸೂದೆಗಳಿಗೆ ಒಪ್ಪಿಗೆ ನೀಡದೆ, ಇತ್ತ ವಿಧಾನಸಭೆಗೆ ಹಿಂದಿರುಗಿಸದೆ
ಸಂವಿಧಾನದ 200ನೇ ವಿಧಿಯ ವಿರುದ್ದ ನಡೆದುಕೊಂಡಿದ್ದಾರೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವ ಅಥವಾ ತಿರಸ್ಕರಿಸುವ ರಾಜ್ಯಪಾಲರ ಅಧಿಕಾರವು ಸಾಂವಿಧಾನಿಕ ನಿಬಂಧನೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ರಾಜ್ಯಪಾಲರು ಮಸೂದೆಗಳಿಗೆ ಏಕೆ ಅಂಕಿತ ಹಾಕಿಲ್ಲ ಎಂಬುವುದನ್ನು ವಾಸ್ತವಿಕವಾಗಿ ಅಥವಾ ನಿರ್ಧಿಷ್ಟವಾಗಿ ತೋರಿಸಬೇಕು ಎಂದು ರಾಜ್ಯಪಾಲ ರವಿ ಅವರನ್ನು ಪ್ರತಿನಿಧಿಸಿದ್ದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ನ್ಯಾಯಮೂರ್ತಿ ಪರ್ದಿವಾಲಾ ಅವರು ಸೂಚಿಸಿದ್ದಾರೆ.

“ಕೆಲವು ಮೂಲ ಕಡತಗಳಿಂದ ಅಥವಾ ಇತರ ಕೆಲವು ದಾಖಲೆಗಳಿಂದ, ರಾಜ್ಯಪಾಲರ ಕಚೇರಿಯಲ್ಲಿ ಲಭ್ಯವಿರುವ ಕೆಲವು ಸಮಕಾಲೀನ ದಾಖಲೆಗಳಿಂದ ಏನನ್ನು ಪರಿಶೀಲಿಸಲಾಗಿದೆ, ಏನು ಚರ್ಚಿಸಲಾಗಿದೆ, ಏನೆಲ್ಲಾ ಲೋಪಗಳಿವೆ ಎಂಬುವುದರ ಕುರಿತು ನಮಗೆ ತೋರಿಸಿ” ಎಂದು ನ್ಯಾಯಾಧೀಶರು ಎಜಿಗೆ ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.

ಪಂಜಾಬ್‌ ರಾಜ್ಯಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ, ಮಸೂದೆಗಳನ್ನು ತಡೆ ಹಿಡಿಯುವ ಮೂಲಕ ವಿಧಾನಸಭೆಯನ್ನು ವೀಟೋ ಮಾಡಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ, ತಮಿಳುನಾಡು ರಾಜ್ಯಪಾಲರು ಮಸೂದೆಗಳನ್ನು ತಡೆ ಹಿಡಿದಿದ್ದಾರೆ ಎಂಬುವುದನ್ನು ನ್ಯಾಯಮೂರ್ತಿ ಪರ್ದಿವಾಲಾ ಗಮನಿಸಿದ್ದಾರೆ.

ನವೆಂಬರ್ 2023ರಲ್ಲಿ ಸುಪ್ರೀಂ ಕೋರ್ಟ್ ಆಗಿನ ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ತಮ್ಮ ಮುಂದೆ ಬಾಕಿ ಇರುವ ನಾಲ್ಕು ಮಸೂದೆಗಳ ಬಗ್ಗೆ ನಿರ್ಧರಿಸುವಂತೆ ನಿರ್ದೇಶಿಸಿತ್ತು. ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಿಜವಾದ ಅಧಿಕಾರ ಚುನಾಯಿತ ಪ್ರತಿನಿಧಿಗಳ ಕೈಯಲ್ಲಿ ಇರುತ್ತದೆ. ರಾಜ್ಯಪಾಲರು ರಾಜ್ಯದ ನಾಮಮಾತ್ರ ಮುಖ್ಯಸ್ಥರು ಎಂದಿತ್ತು.

ರಾಜ್ಯಪಾಲರು ಮಸೂದೆಗಳಿಗೆ ಅನಿರ್ದಿಷ್ಟಾವಧಿಗೆ ಒಪ್ಪಿಗೆ ನೀಡದೆ ತಡೆಹಿಡಿಯುವ ಮೂಲಕ ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದು ತಮಿಳುನಾಡು ರಾಜ್ಯ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ ಮುಂದೆ ವಾದಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್-ಹೈಕೋರ್ಟ್ ನ್ಯಾಯಾಧೀಶರ ವೇತನ ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....