Homeಮುಖಪುಟಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

ಜನತಾ ಕಫ್ರ್ಯೂ ಶುರುವಾದದ್ದು ಯಾಕೆ? ದುರ್ಬಳಕೆಯಾದೀತು ಜೋಕೆ!!

- Advertisement -
- Advertisement -

ಪೀಪಲ್ಸ್ ಕಫ್ರ್ಯೂ ಕಾನ್ಸೆಪ್ಟನ್ನು ಮೊಟ್ಟಮೊದಲ ಬಾರಿಗೆ ಕೊಟ್ಟವರು ಅಸ್ಸಾಮಿನ ವಿದ್ಯಾರ್ಥಿ ಗಣಪರಿಷತ್ ನಾಯಕರು. ಅಸ್ಸಾಮಿಗಳಿಗೆ ವಂಚನೆ ಮಾಡಿ ಬೆಂಗಾಳಿ ಬಾಬುಗಳಿಗೆ ಅಸ್ಸಾಂ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟುದುದರ ವಿರುದ್ಧ ಮೊದಲ ಬಾರಿಗೆ ಸೆಟೆದು ನಿಂತದ್ದು ಅಸ್ಸಾಂ ವಿದ್ಯಾರ್ಥಿ ಗಣಪರಿಷತ್. ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಬಂತು. ಯಾವ ಅಸ್ಸಾಮಿ ಪ್ರಜೆಯೂ ಈ ಚುನಾವಣೆಯಲ್ಲಿ ಮತಹಾಕಲು ಮತಗಟ್ಟೆಗೆ ಹೋಗಬಾರದೆಂದು ಕರೆನೀಡಿ Peoples Curfew ಘೋಷಿಸಿತು.

Peoples Curfew ಒಂದು ಹೊಸ ಪ್ರಯೋಗ. ಸರ್ಕಾರ ಕಫ್ರ್ಯೂ ಹಾಕುವುದು ಬ್ರಿಟಿಷರ ಕಾಲದಿಂದ ಜಾರಿಯಲ್ಲಿರುವ ಕರಾಳ ಶಾಸನ. ಹೋರಾಟಗಾರರು ಐದು ಜನ ಒಟ್ಟಿಗೆ ಸೇರಿದರೆ ಅವರ ಮೇಲೆ ಗುಂಡು ಹಾರಿಸಲು ಪೊಲೀಸರಿಗೆ ಅನುಮತಿ ನೀಡುವ ಶಾಸನ ಅದು.

ಅಸ್ಸಾಂ ವಿದ್ಯಾರ್ಥಿ ಗಣಪರಿಷತ್ತಿನ Peoples curgfew ಸರ್ಕಾರ ಹಾಕುವ ಕಫ್ರ್ಯೂ ಅಲ್ಲ. ಜನತೆ ಹಾಕುವ ಕಫ್ರ್ಯೂ. ಆಶ್ಚರ್ಯವೆಂದರೆ ಜನತೆ, ತಮ್ಮ ಮೇಲೆ ತಾವೇ ಹಾಕಿಕೊಳ್ಳುವ ಪ್ರತಿಬಂಧಕ. ಆ ಆಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ ಜನ ಮನೆಬಿಟ್ಟು ಹೊರಬೀಳಲೇ ಇಲ್ಲ. ಚುನಾವಣೆ ಪ್ರಕ್ರಿಯೆಯಲ್ಲಿ ಅಸ್ಸಾಮಿನ ಜನ ಭಾಗವಹಿಸಲಿಲ್ಲ. ಶೇ.10ರಷ್ಟು ಮಾತ್ರ ಮತದಾನ ನಡೆಯಿತು. ಆದರೂ ಆಡಳಿತ ಪಕ್ಷ ಆ ಚುನಾವಣೆಯ ಫಲಿತಾಂಶವನ್ನು ಘೋಷಿಸಿತು.

ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದುಬಂದಿದ್ದು, ಕಾಂಗ್ರೆಸ್ ಪಕ್ಷ ಸರ್ಕಾರವನ್ನು ರಚಿಸಿತು. ಆದರೆ ಆ ಸರ್ಕಾರ ಬಹಳ ದಿನ ಉಳಿಯಲಿಲ್ಲ. ರಾಷ್ಟ್ರಾಧ್ಯಕ್ಷರ ಆಳ್ವಿಕೆಯನ್ನು ಅಸ್ಸಾಮಿನ ಮೇಲೆ ಹೇರಲಾಯಿತು. ಆರು ತಿಂಗಳೊಳಗೆ ಮತ್ತೆ ಚುನಾವಣೆ ನಡೆದು ವಿದ್ಯಾರ್ಥಿ ಗಣಪರಿಷತ್ ಅಭೂತಪೂರ್ವ ಜಯಗಳಿಸಿ ಆಡಳಿತಕ್ಕೆ ಬಂತು. ಜನ ಮನಸ್ಸು ಮಾಡಿದರೆ ಜನರೇ ಕಫ್ರ್ಯೂ ಹಾಕುವುದು ಸಾಧ್ಯ. ಅದು ಯಶಸ್ವಿಯಾಗಿ ಜಾರಿಗೆ ಬರುವುದೂ ಸಾಧ್ಯ.

ಆದರೆ ಇಂದು ಜನತಾ ಕಫ್ರ್ಯೂ ಹೇರಿರುವುದು ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರ! ಇದೊಂದು ವಿರೋಧಾಭಾಸವೇ ಸರಿ. ಮೋದಿಗೆ ಶಾಸನಾನುಸಾರ ಸರ್ಕಾರದಿಂದ ಜಾರಿಯಾಗುವ ಕಫ್ರ್ಯೂ ಹಾಕುವ ಅಧಿಕಾರವಿದೆ. ಜನತಾ ಕಫ್ರ್ಯೂ ಹಾಕುವ ಅಧಿಕಾರವಿಲ್ಲ. ಅದು ಇರುವುದು ಜನರಿಗೆ ಮತ್ತು ಜನರನ್ನು ಪ್ರತಿನಿಧಿಸುವ ಪ್ರಭುತ್ವೇತರ ವೇದಿಕೆಗೆ. ಸರ್ಕಾರಿ ಕಾಯಿದೆ ಪ್ರಕಾರ ಕಫ್ರ್ಯೂ ಹೇರಿದರೆ ಜನ ಎದುರುಬಿದ್ದಾರೆಂದು ಮೋದಿಯವರು ಜನತಾ ಕಫ್ರ್ಯೂ ಹೇರಿದ್ದಾರೆ.

ಅಸ್ಸಾಂನಲ್ಲಿ ವಿದ್ಯಾರ್ಥಿ ಗಣಪರಿಷತ್ ಕಫ್ರ್ಯೂವನ್ನು ಜನತೆ ಮಾತ್ರ ಪಾಲನೆ ಮಾಡಿತು. ಸರ್ಕಾರ ಜನತಾ ಕಫ್ರ್ಯೂವನ್ನು ಮನ್ನಣೆ ಮಾಡಲಿಲ್ಲ. ಈಗ ಮೋದಿ ಸರ್ಕಾರ ಜನತಾ ಕಫ್ರ್ಯೂ ಹೇರಿ ಈ ಜನತಾ ಕಫ್ರ್ಯೂವನ್ನು ಸರ್ಕಾರವೂ ಪಾಲಿಸಬೇಕು, ಪ್ರಜೆಗಳೂ ಪಾಲಿಸಬೇಕು ಎಂದು ಫರ್ಮಾನ್ ನೀಡಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ?

ಏಕೆಂದರೆ ಸರ್ಕಾರಕ್ಕೆ ಜನತಾ ಕಫ್ರ್ಯೂ ಹಾಕಲು ಬರುವುದಿಲ್ಲ. ಅದು ಜನತೆಯ ಹಕ್ಕು. ಜನತೆಯ ಹಕ್ಕನ್ನು ಸರ್ಕಾರ ಕಿತ್ತುಕೊಂಡು ಆ ಹಕ್ಕನ್ನು ಸರ್ಕಾರ ಚಲಾಯಿಸುವುದು ವಿಪರ್ಯಾಸ.

ಕೊರೊನಾ ಭೂತ ನಮ್ಮನ್ನು ಕಾಡುತ್ತಿರುವಾಗ, ಜನರು ಯಾರೂ ಒಂದು ಭಾನುವಾರ ದಯವಿಟ್ಟು ಮನೆಬಿಟ್ಟು ಬರಬೇಡಿ ಎಂದು ಹೇಳುವ ಮತ್ತು ಅದಕ್ಕಾಗಿ ಸರ್ಕಾರಿ ಕಫ್ರ್ಯೂ ಹೇರುವ ಅಧಿಕಾರ ಮೋದಿ ಸರ್ಕಾರಕ್ಕೆ ಇದೆ. ಇದರ ಅವಶ್ಯಕತೆಯನ್ನು ಅರಿತು ಸರ್ಕಾರದೊಡನೆ ಜನ ಸಹಕರಿಸುವುದೂ ಅಗತ್ಯ. ಆದರೆ ಜನತೆಯ ಕಫ್ರ್ಯೂವನ್ನು ಮೋದಿ ಸರ್ಕಾರ ಜಾರಿ ಮಾಡಲು ಹೊರಟಿರುವುದು ವಿರೋಧಾಭಾಸ ಎಂದು ಹೇಳಬೇಕಾಗುತ್ತದೆ. ಇದರ ಬಗೆಗೆ ಮೋದಿಯವರು ಒಂದು ವಿವರಣೆ ನೀಡಬೇಕೆಂದು ಕೇಳಬಯಸುತ್ತೇನೆ. ಸರ್ಕಾರ ತನಗಿಲ್ಲದ ಅಧಿಕಾರ ಬಳಸಿಕೊಂಡು ಜನತಾ ಕಫ್ರ್ಯೂ ಹಾಕಿತು. ಜನ ಇದಕ್ಕೆ ಚೆನ್ನಾಗಿ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಕಾರಣ ಜನಕ್ಕಿರುವ ಪ್ರಾಣಭಯ. ಜನತಾ ಕಫ್ರ್ಯೂವನ್ನು ಒಳ್ಳೇಕಾರಣಕ್ಕೆ ಈಗ ಮೋದಿ ಬಳಸಿದ್ದಾರೆ. ಜನ ಚೆನ್ನಾಗಿಯೂ ಸ್ಪಂದಿಸಿದ್ದಾರೆ. ಮೋದಿಯವರ ಸರ್ಕಾರ ಮುಂದೆ ಜನತಾ ಕಫ್ರ್ಯೂವನ್ನು ಸ್ವಾರ್ಥಕ್ಕೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಅದರ ಬಗೆಗೆ ಜನ ಎಚ್ಚರಿಕೆಯಿಂದಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...